Homeಕರ್ನಾಟಕಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

ಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಚಿಕ್ಕಮಗಳೂರು: ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು. ಎಲೆ ಚುಕ್ಕಿ, ಹಳದಿ ಎಲೆರೋಗದ ಸಂಶೋಧನೆಗಾಗಿ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು ಹಾಗೂ ರೈತರಿಗೆ ಮಾರಕವಾಗಿರುವ ಅರಣ್ಯ ಕಾಯ್ದೆಯ ಸೆಕ್ಷನ್‌ 4(1) ರದ್ದು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಶಕ್ತಿ ಸಂಘಟನೆ ನೇತೃತ್ವದಲ್ಲಿ ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಶೃಂಗೇರಿ ಬಸ್‌ಸ್ಟಾಂಡ್‌ನಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಗಿದ್ದು, “ನಮ್ಮನ್ನಾಳುವ ಸರ್ಕಾರಗಳು ನಿರಂತರವಾಗಿ ಕೃಷಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿವೆ. ಸಂಕಷ್ಟದಿಂದ ನರಳುತ್ತಿರುವ ರೈತಾಪಿ ಜನ, ಕೂಲಿಕಾರ್ಮಿಕರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಇದರ ಪರಿಣಾಮಗಳು ಎಲ್ಲ ಜನವರ್ಗಕ್ಕೂ ತಟ್ಟುತ್ತದೆ. ಈ ಜನವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕು” ಎಂದು ಆಗ್ರಹಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಲೆನಾಡಿನ ಜನರ ಕೈಯಲ್ಲಿ ಒಂದಷ್ಟು ಹಣ ಓಡಾಡುತ್ತಿದೆ ಎಂದರೆ ಅದಕ್ಕೆ ಕಾರಣ ಅಡಿಕೆ ಎಂಬ ವಾಣಿಜ್ಯ ಬೆಳೆ. ಇದಕ್ಕೆ ಎಷ್ಟು ಮೌಲ್ಯವಿತ್ತೋ ಅಷ್ಟೇ ಕಂಟಕ ಮೊದಲಿನಿಂದಲೂ ಎದುರಾಗಿದೆ. ಈಗ ಎದುರಾಗಿರುವ ಎಲೆ ಚುಕ್ಕಿ ರೋಗ ಬೆಳೆಗಾರರನ್ನು ಸಂಪೂರ್ಣ ನಿರ್ನಾಮ ಮಾಡಲು ಹೊರಟಿದೆ. ಅದರ ಜೊತೆಗೆ ಆಮದು ನೀತಿಯನ್ನು ರೂಪಿಸಿ ಸಂಕಷ್ಟಕ್ಕೆ ಸಿಲುಕಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

“ಎಲೆ ಚುಕ್ಕಿ, ಹಳದಿ ಎಲೆ ರೋಗದ ಸಂಶೋಧನೆಗಾಗಿ ತಕ್ಷಣವೇ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯು ರೈತರ ಭೂಮಿಯ ಮಣ್ಣು ಪರೀಕ್ಷೆ ಸೇರಿದಂತೆ ವೈಜ್ಞಾನಿಕ ಪರಿಹಾರಗಳ ಮತ್ತು ಉಪಯೋಗದ ಬಗ್ಗೆ ರೈತರಿಗೆ ಮಾಹಿತಿ ಕೊಡಬೇಕು” ಎಂದು ಒತ್ತಾಯಿಸಲಾಯಿತು.

ಕೊಳೆ ರೋಗ, ಎಲೆ ಚುಕ್ಕಿ ರೋಗದಿಂದ ಬಾಧಿತರಾದ ಎಲ್ಲಾ ರೈತರಿಗೂ ಪರಿಹಾರ ಕೊಡಬೇಕು. ಹಾಗೂ ಕಾರ್ಮಿಕ ಮತ್ತು ಬಡ ಕುಟುಂಬಕ್ಕೆ ವಿವಿಧ ಪ್ಯಾಕೇಟ್ ಘೋಷಿಸಬೇಕು. ಎಲ್ಲಾ ಮಂಜೂರಾತಿ ಹಾಗೂ ಅಭಿವೃದ್ಧಿ ಕೆಲಸಕ್ಕೆ ಮಾರಕವಾದ ಅರಣ್ಯ ಕಾಯ್ದೆಯ ಸೆಕ್ಷನ್ 4(1) ಹಾಗೂ ಇತರೆ ಅರಣ್ಯ ಕಾಯ್ದೆಗಳು ರದ್ದಾಗಬೇಕು. ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಲಾಯಿತು.

ಅರ್ಹ ಫಲಾನುಭವಿಗಳಿಗೆ ಭೂಮಿ ಮಂಜೂರಾತಿ ಮಾಡಬೇಕು. ಎಲ್ಲಾ ಹಳ್ಳಿಗಳ ರಸ್ತೆಗಳನ್ನು (ವೈಜ್ಞಾನಿಕವಾಗಿ, ಪರಿಸರಕ್ಕೆ ಪೂರಕವಾಗಿ) ದುರಸ್ಥಿಗೊಳಸಬೇಕು. ರೈತರ ಖಾತೆಗೆ ಜಮಾ ಆಗಬೇಕಿದ್ದ ಪಸಲ್ ಭೀಮಾ ವಿಮಾ ಯೋಜನೆಯ ಹಣವನ್ನು ಪೂರ್ಣ ಪ್ರಮಾಣದಲ್ಲಿ ತಕ್ಷಣವೇ ಬಿಡುಗಡೆ ಮಾಡಿ ಸರ್ಕಾರವೇ ನೇರವಾಗಿ ರೈತರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಸಂಘಟನೆ ತಿಳಿಸಿದೆ.

ಪ್ರತಿಭಟನೆಯಲ್ಲಿ ಆದಿವಾಸಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ಕಲ್ಕುಳಿ ವಿಠಲ್ ಹೆಗ್ಡೆ, ಜನಶಕ್ತಿ ರಾಜ್ಯ ಕಾರ್ಯದರ್ಶಿ ಸುರೇಶ್, ಕರ್ನಾಟಕ ಜನಶಕ್ತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್ ಅಶೋಕ್, ಜಿಲ್ಲಾ ಸಮಿತಿ ಗೌರವ ಅಧ್ಯಕ್ಷರಾದ ರಾಧಾ, ಕೌಳಿ ರಾಮು, ಹಾಗಲಾಗಂಚಿ ವೆಂಕಟೇಶ್, ಸರೋಜಾ, ಆನಂದ್, ರೈತ ಮುಖಂಡರಾದ ಕಂಬಳಗೆರೆ ರಾಜೇಂದ್ರ, ನವೀನ್ ಕರ್ವಾಲೆ ಇತರರು ಹಾಜರಿದ್ದರು.

ಏತಕ್ಕಾಗಿ ಈ ಹೋರಾಟ? ಸಂಘಟನೆ ಹೇಳುವುದೇನು?

ಕೊಳೆರೋಗವು ನಿನ್ನೆ ಮೊನ್ನೆ ಜನ್ಮ ತಾಳಿದವುಗಳಲ್ಲ. ಇದಕ್ಕೆ ಕಾರಣ ತೇವಾಂಶ ಜಾಸ್ತಿಯಾಗುವಿಕೆ. ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಗೆ ಮನುಷ್ಯರಂತೆ ಸಕಲ ಜಲಚರ ಸಸ್ಯಗಳಿಗೂ ಮಾರಕ ರೋಗಗಳು ಬಾಧಿಸುತ್ತಲೇ ಇರುತ್ತವೆ.

ನಮ್ಮನ್ನಾಳುವ ಸರ್ಕಾರಗಳು ಈ ರೋಗದ ಬಗ್ಗೆ ನಿರಂತರವಾದ ಸಂಶೋಧನೆ ನಡೆಸಿ, ಬಾಧೆಗೊಳಗಾದ ಜನರಿಗೆ ಅವಶ್ಯಕ ಸಲಹೆ ಸೂಚನೆ, ಔಷಧಿ, ಪರಿಹಾರಗಳನ್ನು ನೀಡಬೇಕಿತ್ತು. ಅದನ್ನು ಬಿಟ್ಟು, ರೈತರ ಬಗ್ಗೆ ಒಂದಿನಿತೂ ಕಾಳಜಿಯಿಲ್ಲದ ಸರ್ಕಾರಗಳು ಇನ್ನಷ್ಟು ಕೃಷಿ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಉತ್ಸುಕವಾಗಿದೆ. ತೊಂಡೆರೋಗ, ಎಲೆ ಚುಕ್ಕಿ ರೋಗ, ಕೊಳೆ ರೋಗದ ಸಮಸ್ಯೆ ತಾಂಡವವಾಡುತ್ತಿದೆ. ಈಗ ಕೇಂದ್ರ ಸರ್ಕಾರ ಭೂತನ್ ಅಡಿಕೆಯನ್ನು ಸುಂಕರಹಿತವಾಗಿ ಆಮದು ಮಾಡಿಕೊಳ್ಳಲು ತಯಾರಿ ನಡೆಸಿದೆ. ಇದು ಇಲ್ಲಿನ ರೈತರ ಬದುಕಿಗೆ ಹಾಗೂ ಮಲೆನಾಡಿನ ಆರ್ಥಿಕ ಚಟುವಟಿಕೆಗೆ ಕೊಡಲಿ ಪೆಟ್ಟು ಕೊಡಲಿದೆ. 17,000 ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಹುನ್ನಾರದ ಹಿಂದೆ ಅಮಿತ್‌ ಶಾ ಮಗ ಜೈ ಶಾ, ಹಾಗೂ ಕ್ಯಾಂಪ್ಪೋ ಅಧ್ಯಕ್ಷರ ಮಗನ ಸಹಯೋಗದಲ್ಲಿ ನಡೆಯುತ್ತಿರುವ “ಗಣೇಶ್ ಟ್ರೇಡಿಂಗ್” ಎಂಬ ಕಂಪನಿಯ ಕೈಗಳಿವೆ, ಎನ್ನುವ ಆರೋಪವೂ ಕೇಳಿ ಬರುತ್ತಿದೆ.

ನಮ್ಮ ದೇಶದಲ್ಲಿ ಲಕ್ಷಾಂತರ ಎಕರೆ ಅಡಿಕೆ ತೋಟಗಳಿವೆ. 70 ಲಕ್ಷಕ್ಕೂ ಹೆಚ್ಚು ಅಡಿಕೆ ಕೃಷಿ ಕುಟುಂಬಗಳಿವೆ. ಹಾಗೆ ಇದನ್ನು ನಂಬಿ ತಮ್ಮ ಬದುಕನ್ನು ಕಟ್ಟಿಕೊಂಡ ಕೋಟ್ಯಂತರ ಕೂಲಿ ಕಾರ್ಮಿಕರಿದ್ದಾರೆ. ಸರ್ಕಾರ ಈ ಸುಂಕರಹಿತ ಆಮದು ನೀತಿಯಿಂದ ಹತ್ತಾರು ಕೋಟಿ ಕುಟುಂಬಗಳನ್ನು ಬೀದಿಗೆ ತಳ್ಳಲಿದೆ. ಮಲೆನಾಡ ಹಾಗೂ ಇತರೆ ಪ್ರದೇಶದ ಬೀದಿ ವ್ಯಾಪಾರಿಗಳು, ದಲ್ಲಾಳಿ ವ್ಯಾಪಾರಿಗಳು, ದಿನಸಿ ಅಂಗಡಿ ವ್ಯಾಪಾರಸ್ಥರಿಗೂ ಈ ನೀತಿ ದೊಡ್ಡ ಹೊಡೆತ ಕೊಡಲಿದೆ. ಅಷ್ಟೇ ಅಲ್ಲದೇ, ಮಿತ್ರರಾಷ್ಟ್ರವಾದ ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳುವ ನೆಪದಲ್ಲಿ ಹಿಂಬಾಗಿಲಿನಿಂದ ಬರ್ಮಾ ದೇಶದ ಅಡಿಕೆ ತರಿಸುವ ಸಾಧ್ಯತೆಯೇ ಹೆಚ್ಚು.

ಇದನ್ನೂ ಓದಿರಿ: ‘ಹಿಂದೂ’ ಪದ ವಿವಾದ: ಬಹಿರಂಗ ಚರ್ಚೆಗೆ ಸತೀಶ್‌ ಜಾರಕಿಹೊಳಿ ಪಂಥಾಹ್ವಾನ- ಏನಂದರು ಜನ?

ಭೂತಾನ್ ನಿಂದ ಭಾರತಕ್ಕೆ ಸಮುದ್ರ ಮಾರ್ಗವಿಲ್ಲ. ಬರ್ಮಾದಿಂದ ಕೊಲ್ಕತ್ತಾಗೆ ಸಮುದ್ರ ಮಾರ್ಗವಿದೆ ಮತ್ತು ಈ ಬಂದರಿನಲ್ಲಿ ಸುಂಕವಿಲ್ಲ. ಅಂದ್ರೆ ಭೂತಾನ್ ಅಡಿಕೆಯ ಹೆಸರಿನಲ್ಲಿ ಬರ್ಮಾ ದೇಶದ ಅಡಿಕೆ ನಮ್ಮ ದೇಶಕ್ಕೆ ಕಳ್ಳ ಮಾರ್ಗದಲ್ಲಿ ಬರುವುದರಲ್ಲಿ ಸಂಶಯವಿಲ್ಲ. ಅದರ ಪ್ರಮಾಣ ಕೂಡ 17,000 ಟನ್‌ಗೆ ಬದಲಾಗಿ ಲಕ್ಷಾಂತರ ಟನ್ ಭಾರತದ ಮಾರುಕಟ್ಟೆಯನ್ನು ಆವರಿಸುವ ಎಲ್ಲಾ ಸಾಧ್ಯತೆಗಳಿವೆ. ಈ ಸುಳ್ಳಿನ ಕವಚದೊಳಗೆ ರೈತರ ಮತ್ತು ಆರ್ಥಿಕ ವಹಿವಾಟಿನ ನೋವಿನ ಬದುಕಿದೆ. ಇದನ್ನು ಪ್ರಜ್ಞಾವಂತ ಜನರು ಬೀದಿಗಿಳಿದು ವಿರೋಧಿಸಬೇಕಲ್ಲವೇ?

ಹಾಗೆಯೇ ಮಲೆನಾಡಿನ ಜನರನ್ನು ಬಿಟ್ಟುಬಿಡದೆ ಬಾಧಿಸುತ್ತಿರುವ ಸಮಸ್ಯೆಗಳಲ್ಲಿ ಮತ್ತೊಂದು ಅರಣ್ಯ ಕಾಯ್ದೆಗಳು. ಇದರ ಭಾಗವಾಗಿ ಎಲ್ಲೆಡೆಯು ಜನರನ್ನ ಬಾಧಿಸುತ್ತಿರುವುದು ಸೆಕ್ಷನ್ 4(1). ಕಂದಾಯ ಭೂಮಿಯನ್ನು ಕರಾಳ ಸೆಕ್ಷನ್‌ಗಳ ಅಡಿಯಲ್ಲಿ ಮೀಸಲು ಅರಣ್ಯ ಮಾಡುವ ಹುನ್ನಾರವಿದೆ. ಈ ಕಾಡನ್ನು ನಂಬಿ ಬದುಕು ಕಟ್ಟಿಕೊಂಡವರು ಸಾವಿರಾರು ಜನ ಇವತ್ತಿಗೂ ನೂರಾರು ವರ್ಷಗಳಿಂದ ಅಲ್ಲಿ ಬದುಕುತ್ತಿದ್ದರೂ, ತಾನು ನಿಂತ ನೆಲ ನನ್ನದೇ ಎಂದು ಹೇಳಲು ಸಾಧ್ಯವಿಲ್ಲ ಅನ್ನುವ ಸ್ಥಿತಿ ಉಂಟಾಗಿದೆ. ಜೀವ ಭದ್ರತೆಗಾಗಿ ಒಂದು ಅಧಿಕೃತ ದಾಖಲಾತಿ ಇಲ್ಲವಾಗಿದೆ. 94ಸಿ, 94ಸಿಸಿ, 5 ಮಂಜೂರಾತಿಗಾಗಿ ವಿವಿಧ ಫಾರಂ ಹಾಕಿಕೊಂಡು ಆದೇಶಕ್ಕಾಗಿ ಭರವಸೆಯ ಕಣ್ಣುಗಳಿಂದ ನೋಡುತ್ತಿದ್ದಾರೆ. ಎಲ್ಲದಕ್ಕೂ ಈ ಕಾಯ್ದೆಗಳನ್ನು ನೆಪವಾಗಿಟ್ಟುಕೊಂಡು, ಜನರ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ. ಈ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....