Homeಕರ್ನಾಟಕಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

ಶೃಂಗೇರಿ: ಅಡಿಕೆ ಆಮದು ನೀತಿ, ಅರಣ್ಯ ಕಾಯ್ದೆಯ ಕಿರುಕುಳ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಚಿಕ್ಕಮಗಳೂರು: ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು. ಎಲೆ ಚುಕ್ಕಿ, ಹಳದಿ ಎಲೆರೋಗದ ಸಂಶೋಧನೆಗಾಗಿ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು ಹಾಗೂ ರೈತರಿಗೆ ಮಾರಕವಾಗಿರುವ ಅರಣ್ಯ ಕಾಯ್ದೆಯ ಸೆಕ್ಷನ್‌ 4(1) ರದ್ದು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಶಕ್ತಿ ಸಂಘಟನೆ ನೇತೃತ್ವದಲ್ಲಿ ಶೃಂಗೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಶೃಂಗೇರಿ ಬಸ್‌ಸ್ಟಾಂಡ್‌ನಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಗಿದ್ದು, “ನಮ್ಮನ್ನಾಳುವ ಸರ್ಕಾರಗಳು ನಿರಂತರವಾಗಿ ಕೃಷಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿವೆ. ಸಂಕಷ್ಟದಿಂದ ನರಳುತ್ತಿರುವ ರೈತಾಪಿ ಜನ, ಕೂಲಿಕಾರ್ಮಿಕರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಇದರ ಪರಿಣಾಮಗಳು ಎಲ್ಲ ಜನವರ್ಗಕ್ಕೂ ತಟ್ಟುತ್ತದೆ. ಈ ಜನವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕು” ಎಂದು ಆಗ್ರಹಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಲೆನಾಡಿನ ಜನರ ಕೈಯಲ್ಲಿ ಒಂದಷ್ಟು ಹಣ ಓಡಾಡುತ್ತಿದೆ ಎಂದರೆ ಅದಕ್ಕೆ ಕಾರಣ ಅಡಿಕೆ ಎಂಬ ವಾಣಿಜ್ಯ ಬೆಳೆ. ಇದಕ್ಕೆ ಎಷ್ಟು ಮೌಲ್ಯವಿತ್ತೋ ಅಷ್ಟೇ ಕಂಟಕ ಮೊದಲಿನಿಂದಲೂ ಎದುರಾಗಿದೆ. ಈಗ ಎದುರಾಗಿರುವ ಎಲೆ ಚುಕ್ಕಿ ರೋಗ ಬೆಳೆಗಾರರನ್ನು ಸಂಪೂರ್ಣ ನಿರ್ನಾಮ ಮಾಡಲು ಹೊರಟಿದೆ. ಅದರ ಜೊತೆಗೆ ಆಮದು ನೀತಿಯನ್ನು ರೂಪಿಸಿ ಸಂಕಷ್ಟಕ್ಕೆ ಸಿಲುಕಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

“ಎಲೆ ಚುಕ್ಕಿ, ಹಳದಿ ಎಲೆ ರೋಗದ ಸಂಶೋಧನೆಗಾಗಿ ತಕ್ಷಣವೇ ಸರ್ಕಾರ ವಿಜ್ಞಾನಿಗಳ ಕಾರ್ಯಪಡೆ ರಚಿಸಬೇಕು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯು ರೈತರ ಭೂಮಿಯ ಮಣ್ಣು ಪರೀಕ್ಷೆ ಸೇರಿದಂತೆ ವೈಜ್ಞಾನಿಕ ಪರಿಹಾರಗಳ ಮತ್ತು ಉಪಯೋಗದ ಬಗ್ಗೆ ರೈತರಿಗೆ ಮಾಹಿತಿ ಕೊಡಬೇಕು” ಎಂದು ಒತ್ತಾಯಿಸಲಾಯಿತು.

ಕೊಳೆ ರೋಗ, ಎಲೆ ಚುಕ್ಕಿ ರೋಗದಿಂದ ಬಾಧಿತರಾದ ಎಲ್ಲಾ ರೈತರಿಗೂ ಪರಿಹಾರ ಕೊಡಬೇಕು. ಹಾಗೂ ಕಾರ್ಮಿಕ ಮತ್ತು ಬಡ ಕುಟುಂಬಕ್ಕೆ ವಿವಿಧ ಪ್ಯಾಕೇಟ್ ಘೋಷಿಸಬೇಕು. ಎಲ್ಲಾ ಮಂಜೂರಾತಿ ಹಾಗೂ ಅಭಿವೃದ್ಧಿ ಕೆಲಸಕ್ಕೆ ಮಾರಕವಾದ ಅರಣ್ಯ ಕಾಯ್ದೆಯ ಸೆಕ್ಷನ್ 4(1) ಹಾಗೂ ಇತರೆ ಅರಣ್ಯ ಕಾಯ್ದೆಗಳು ರದ್ದಾಗಬೇಕು. ಸುಂಕರಹಿತ ಭೂತಾನ್ ಅಡಿಕೆ ಆಮದು ನೀತಿಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಲಾಯಿತು.

ಅರ್ಹ ಫಲಾನುಭವಿಗಳಿಗೆ ಭೂಮಿ ಮಂಜೂರಾತಿ ಮಾಡಬೇಕು. ಎಲ್ಲಾ ಹಳ್ಳಿಗಳ ರಸ್ತೆಗಳನ್ನು (ವೈಜ್ಞಾನಿಕವಾಗಿ, ಪರಿಸರಕ್ಕೆ ಪೂರಕವಾಗಿ) ದುರಸ್ಥಿಗೊಳಸಬೇಕು. ರೈತರ ಖಾತೆಗೆ ಜಮಾ ಆಗಬೇಕಿದ್ದ ಪಸಲ್ ಭೀಮಾ ವಿಮಾ ಯೋಜನೆಯ ಹಣವನ್ನು ಪೂರ್ಣ ಪ್ರಮಾಣದಲ್ಲಿ ತಕ್ಷಣವೇ ಬಿಡುಗಡೆ ಮಾಡಿ ಸರ್ಕಾರವೇ ನೇರವಾಗಿ ರೈತರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಸಂಘಟನೆ ತಿಳಿಸಿದೆ.

ಪ್ರತಿಭಟನೆಯಲ್ಲಿ ಆದಿವಾಸಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ಕಲ್ಕುಳಿ ವಿಠಲ್ ಹೆಗ್ಡೆ, ಜನಶಕ್ತಿ ರಾಜ್ಯ ಕಾರ್ಯದರ್ಶಿ ಸುರೇಶ್, ಕರ್ನಾಟಕ ಜನಶಕ್ತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್ ಅಶೋಕ್, ಜಿಲ್ಲಾ ಸಮಿತಿ ಗೌರವ ಅಧ್ಯಕ್ಷರಾದ ರಾಧಾ, ಕೌಳಿ ರಾಮು, ಹಾಗಲಾಗಂಚಿ ವೆಂಕಟೇಶ್, ಸರೋಜಾ, ಆನಂದ್, ರೈತ ಮುಖಂಡರಾದ ಕಂಬಳಗೆರೆ ರಾಜೇಂದ್ರ, ನವೀನ್ ಕರ್ವಾಲೆ ಇತರರು ಹಾಜರಿದ್ದರು.

ಏತಕ್ಕಾಗಿ ಈ ಹೋರಾಟ? ಸಂಘಟನೆ ಹೇಳುವುದೇನು?

ಕೊಳೆರೋಗವು ನಿನ್ನೆ ಮೊನ್ನೆ ಜನ್ಮ ತಾಳಿದವುಗಳಲ್ಲ. ಇದಕ್ಕೆ ಕಾರಣ ತೇವಾಂಶ ಜಾಸ್ತಿಯಾಗುವಿಕೆ. ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಗೆ ಮನುಷ್ಯರಂತೆ ಸಕಲ ಜಲಚರ ಸಸ್ಯಗಳಿಗೂ ಮಾರಕ ರೋಗಗಳು ಬಾಧಿಸುತ್ತಲೇ ಇರುತ್ತವೆ.

ನಮ್ಮನ್ನಾಳುವ ಸರ್ಕಾರಗಳು ಈ ರೋಗದ ಬಗ್ಗೆ ನಿರಂತರವಾದ ಸಂಶೋಧನೆ ನಡೆಸಿ, ಬಾಧೆಗೊಳಗಾದ ಜನರಿಗೆ ಅವಶ್ಯಕ ಸಲಹೆ ಸೂಚನೆ, ಔಷಧಿ, ಪರಿಹಾರಗಳನ್ನು ನೀಡಬೇಕಿತ್ತು. ಅದನ್ನು ಬಿಟ್ಟು, ರೈತರ ಬಗ್ಗೆ ಒಂದಿನಿತೂ ಕಾಳಜಿಯಿಲ್ಲದ ಸರ್ಕಾರಗಳು ಇನ್ನಷ್ಟು ಕೃಷಿ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಉತ್ಸುಕವಾಗಿದೆ. ತೊಂಡೆರೋಗ, ಎಲೆ ಚುಕ್ಕಿ ರೋಗ, ಕೊಳೆ ರೋಗದ ಸಮಸ್ಯೆ ತಾಂಡವವಾಡುತ್ತಿದೆ. ಈಗ ಕೇಂದ್ರ ಸರ್ಕಾರ ಭೂತನ್ ಅಡಿಕೆಯನ್ನು ಸುಂಕರಹಿತವಾಗಿ ಆಮದು ಮಾಡಿಕೊಳ್ಳಲು ತಯಾರಿ ನಡೆಸಿದೆ. ಇದು ಇಲ್ಲಿನ ರೈತರ ಬದುಕಿಗೆ ಹಾಗೂ ಮಲೆನಾಡಿನ ಆರ್ಥಿಕ ಚಟುವಟಿಕೆಗೆ ಕೊಡಲಿ ಪೆಟ್ಟು ಕೊಡಲಿದೆ. 17,000 ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಹುನ್ನಾರದ ಹಿಂದೆ ಅಮಿತ್‌ ಶಾ ಮಗ ಜೈ ಶಾ, ಹಾಗೂ ಕ್ಯಾಂಪ್ಪೋ ಅಧ್ಯಕ್ಷರ ಮಗನ ಸಹಯೋಗದಲ್ಲಿ ನಡೆಯುತ್ತಿರುವ “ಗಣೇಶ್ ಟ್ರೇಡಿಂಗ್” ಎಂಬ ಕಂಪನಿಯ ಕೈಗಳಿವೆ, ಎನ್ನುವ ಆರೋಪವೂ ಕೇಳಿ ಬರುತ್ತಿದೆ.

ನಮ್ಮ ದೇಶದಲ್ಲಿ ಲಕ್ಷಾಂತರ ಎಕರೆ ಅಡಿಕೆ ತೋಟಗಳಿವೆ. 70 ಲಕ್ಷಕ್ಕೂ ಹೆಚ್ಚು ಅಡಿಕೆ ಕೃಷಿ ಕುಟುಂಬಗಳಿವೆ. ಹಾಗೆ ಇದನ್ನು ನಂಬಿ ತಮ್ಮ ಬದುಕನ್ನು ಕಟ್ಟಿಕೊಂಡ ಕೋಟ್ಯಂತರ ಕೂಲಿ ಕಾರ್ಮಿಕರಿದ್ದಾರೆ. ಸರ್ಕಾರ ಈ ಸುಂಕರಹಿತ ಆಮದು ನೀತಿಯಿಂದ ಹತ್ತಾರು ಕೋಟಿ ಕುಟುಂಬಗಳನ್ನು ಬೀದಿಗೆ ತಳ್ಳಲಿದೆ. ಮಲೆನಾಡ ಹಾಗೂ ಇತರೆ ಪ್ರದೇಶದ ಬೀದಿ ವ್ಯಾಪಾರಿಗಳು, ದಲ್ಲಾಳಿ ವ್ಯಾಪಾರಿಗಳು, ದಿನಸಿ ಅಂಗಡಿ ವ್ಯಾಪಾರಸ್ಥರಿಗೂ ಈ ನೀತಿ ದೊಡ್ಡ ಹೊಡೆತ ಕೊಡಲಿದೆ. ಅಷ್ಟೇ ಅಲ್ಲದೇ, ಮಿತ್ರರಾಷ್ಟ್ರವಾದ ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳುವ ನೆಪದಲ್ಲಿ ಹಿಂಬಾಗಿಲಿನಿಂದ ಬರ್ಮಾ ದೇಶದ ಅಡಿಕೆ ತರಿಸುವ ಸಾಧ್ಯತೆಯೇ ಹೆಚ್ಚು.

ಇದನ್ನೂ ಓದಿರಿ: ‘ಹಿಂದೂ’ ಪದ ವಿವಾದ: ಬಹಿರಂಗ ಚರ್ಚೆಗೆ ಸತೀಶ್‌ ಜಾರಕಿಹೊಳಿ ಪಂಥಾಹ್ವಾನ- ಏನಂದರು ಜನ?

ಭೂತಾನ್ ನಿಂದ ಭಾರತಕ್ಕೆ ಸಮುದ್ರ ಮಾರ್ಗವಿಲ್ಲ. ಬರ್ಮಾದಿಂದ ಕೊಲ್ಕತ್ತಾಗೆ ಸಮುದ್ರ ಮಾರ್ಗವಿದೆ ಮತ್ತು ಈ ಬಂದರಿನಲ್ಲಿ ಸುಂಕವಿಲ್ಲ. ಅಂದ್ರೆ ಭೂತಾನ್ ಅಡಿಕೆಯ ಹೆಸರಿನಲ್ಲಿ ಬರ್ಮಾ ದೇಶದ ಅಡಿಕೆ ನಮ್ಮ ದೇಶಕ್ಕೆ ಕಳ್ಳ ಮಾರ್ಗದಲ್ಲಿ ಬರುವುದರಲ್ಲಿ ಸಂಶಯವಿಲ್ಲ. ಅದರ ಪ್ರಮಾಣ ಕೂಡ 17,000 ಟನ್‌ಗೆ ಬದಲಾಗಿ ಲಕ್ಷಾಂತರ ಟನ್ ಭಾರತದ ಮಾರುಕಟ್ಟೆಯನ್ನು ಆವರಿಸುವ ಎಲ್ಲಾ ಸಾಧ್ಯತೆಗಳಿವೆ. ಈ ಸುಳ್ಳಿನ ಕವಚದೊಳಗೆ ರೈತರ ಮತ್ತು ಆರ್ಥಿಕ ವಹಿವಾಟಿನ ನೋವಿನ ಬದುಕಿದೆ. ಇದನ್ನು ಪ್ರಜ್ಞಾವಂತ ಜನರು ಬೀದಿಗಿಳಿದು ವಿರೋಧಿಸಬೇಕಲ್ಲವೇ?

ಹಾಗೆಯೇ ಮಲೆನಾಡಿನ ಜನರನ್ನು ಬಿಟ್ಟುಬಿಡದೆ ಬಾಧಿಸುತ್ತಿರುವ ಸಮಸ್ಯೆಗಳಲ್ಲಿ ಮತ್ತೊಂದು ಅರಣ್ಯ ಕಾಯ್ದೆಗಳು. ಇದರ ಭಾಗವಾಗಿ ಎಲ್ಲೆಡೆಯು ಜನರನ್ನ ಬಾಧಿಸುತ್ತಿರುವುದು ಸೆಕ್ಷನ್ 4(1). ಕಂದಾಯ ಭೂಮಿಯನ್ನು ಕರಾಳ ಸೆಕ್ಷನ್‌ಗಳ ಅಡಿಯಲ್ಲಿ ಮೀಸಲು ಅರಣ್ಯ ಮಾಡುವ ಹುನ್ನಾರವಿದೆ. ಈ ಕಾಡನ್ನು ನಂಬಿ ಬದುಕು ಕಟ್ಟಿಕೊಂಡವರು ಸಾವಿರಾರು ಜನ ಇವತ್ತಿಗೂ ನೂರಾರು ವರ್ಷಗಳಿಂದ ಅಲ್ಲಿ ಬದುಕುತ್ತಿದ್ದರೂ, ತಾನು ನಿಂತ ನೆಲ ನನ್ನದೇ ಎಂದು ಹೇಳಲು ಸಾಧ್ಯವಿಲ್ಲ ಅನ್ನುವ ಸ್ಥಿತಿ ಉಂಟಾಗಿದೆ. ಜೀವ ಭದ್ರತೆಗಾಗಿ ಒಂದು ಅಧಿಕೃತ ದಾಖಲಾತಿ ಇಲ್ಲವಾಗಿದೆ. 94ಸಿ, 94ಸಿಸಿ, 5 ಮಂಜೂರಾತಿಗಾಗಿ ವಿವಿಧ ಫಾರಂ ಹಾಕಿಕೊಂಡು ಆದೇಶಕ್ಕಾಗಿ ಭರವಸೆಯ ಕಣ್ಣುಗಳಿಂದ ನೋಡುತ್ತಿದ್ದಾರೆ. ಎಲ್ಲದಕ್ಕೂ ಈ ಕಾಯ್ದೆಗಳನ್ನು ನೆಪವಾಗಿಟ್ಟುಕೊಂಡು, ಜನರ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ. ಈ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...