Homeಕರ್ನಾಟಕವಿಜಯೇಂದ್ರ, ಸಚಿವರ ಹೆಸರಿನಲ್ಲಿ ವಂಚನೆ: ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ

ವಿಜಯೇಂದ್ರ, ಸಚಿವರ ಹೆಸರಿನಲ್ಲಿ ವಂಚನೆ: ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಹೆಸರು ಹೇಳಿಕೊಂಡು, ಸಚಿವರ ಹೆಸರು ಹೇಳಿಕೊಂಡು ಜನರನ್ನು ವಂಚಿಸಿದ ಆರೋಪದಡಿ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ಪಿ.ಎ.ರಾಜಣ್ಣ ಎಂಬುವವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ 35 ವರ್ಷದ ರಾಜು ಅಲಿಯಾಸ್ ರಾಜಣ್ಣ ವಿರುದ್ಧ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿರುವ ಬಗ್ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಸಿಬಿಗೆ ದೂರು ನೀಡಿದ್ದರು.

ಬಿ.ವೈ.ವಿಜಯೇಂದ್ರ ಅವರ ದೂರ ಆಧರಿಸಿ ಸಾಕ್ಷಿಗಳನ್ನು ಕಲೆ ಹಾಕಿ ಸಿಸಿಬಿ ಪೊಲೀಸರು ಗುರುವಾರ ಆರೋಪಿಯನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರು ಪಡಿಸಿ ಕಸ್ಟಡಿಗೆ ತೆಗೆದುಕೊಳ್ಳುವುದಾಗಿ ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ಬಿ ವೈ ವಿಜಯೇಂದ್ರ, ಸಿಟಿ ಸೈಬರ್ ಕ್ರೈಂ ಪೊಲೀಸ್ ಇಲಾಖೆಯಲ್ಲಿ ರಾಜಣ್ಣ ವಿರುದ್ಧ ವಂಚನೆ ದೂರನ್ನು ದಾಖಲಿಸಿದ್ದರು. ಜನರಿಗೆ ಸರ್ಕಾರಿ ಕೆಲಸ ಕೊಡಿಸುವ, ವರ್ಗಾವಣೆ ಮಾಡಿಸುವ ಆಮಿಷವೊಡ್ಡಿ ತಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ನನ್ನ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂದು ದೂರು ನೀಡಿದ್ದರು.

ಪ್ರಮುಖ ಆರೋಪಿ ರಾಜಣ್ಣ ಮತ್ತು ಇತರ ಕೆಲವು ಮಂದಿ ವಿರುದ್ಧ ವಂಚನೆ ಹಾಗೂ ಐಟಿ ಕಾಯ್ದೆಯಡಿ ಸಿಸಿಬಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ದೂರಿನ ಆಧಾರದಲ್ಲಿ ಸಾಕ್ಷಿ ಕಲೆ ಹಾಕಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

’ರಾಜು ನನ್ನ ಬಳಿ ಬಳ್ಳಾರಿಯಲ್ಲಿರುವಾಗಿನಿಂದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಆತ ಅಧಿಕೃತವಾಗಿ ನನ್ನ ಕಚೇರಿಯ ಸಿಬ್ಬಂದಿಯಲ್ಲ. ನನಗೆ ಗೊತ್ತಿರುವ ಹುಡುಗ ಅಷ್ಟೇ. ಸಿಎಂ ಪುತ್ರ ವಿಜಯೇಂದ್ರ ಜೊತೆಗೆ ಚರ್ಚೆ ಮಾಡುತ್ತೇನೆ. ಕೇಸು ದಾಖಲಿಸಿದ್ದ ಕಾರಣ ಅದರ ವಿವರ ಪಡೆಯಬೇಕಾಗಿದೆ. ಅವರ ಮೇಲೆ ಕೇಸ್ ದಾಖಲಾಗಿದೆ. ದೊಡ್ಡವರಾದ್ರೂ, ಸಣ್ಣವರಾದರೂ ಕಾನೂನು ಎಲ್ಲರಿಗೂ ಒಂದೆ. ರಾಜು ವಂಚಿಸಿದ್ದರೇ, ಕಾನೂನು ಪ್ರಕಾರ ಆತನ ವಿರುದ್ಧ ಕ್ರಮ ಕೈಗೊಳ್ಳಲಿ” ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ’ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ. ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ. ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ’ ಎಂದಿದ್ದಾರೆ.


ಇದನ್ನೂ ಓದಿ: ಮಠಾಧೀಶರನ್ನು ಖರೀದಿಸಿ ಅಧಿಕಾರ ಹಿಡಿದವರು ಹೆಚ್ಚು ದಿನ ಇರಲ್ಲ: ಬಿಎಸ್‌ವೈ ವಿರುದ್ಧ ಯತ್ನಾಳ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....