Homeಮುಖಪುಟಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ...

ಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ ಮೊರೆ ಹೋದ ತೆಲಂಗಾಣ ಸರ್ಕಾರ

- Advertisement -
- Advertisement -

ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗದ ಒಂದು ಭಾಗ ಶನಿವಾರ (ಫೆ.22) ಕುಸಿದು ಬಿದ್ದಿದ್ದು, ಅದರಲ್ಲಿ ಸಿಲುಕಿರುವ ಎಂಟು ಮಂದಿ ಕಾರ್ಮಿಕರನ್ನು ರಕ್ಷಿಸುವ ಬಗ್ಗೆ ಮುಂದಿನ ದಾರಿಯನ್ನು ಸೂಚಿಸಲು ತೆಲಂಗಾಣ ಸರ್ಕಾರ ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಮೊರೆ ಹೋಗಿದೆ.

ಎಂಟು ಮಂದಿ ಕಾರ್ಮಿಕರು ನಾಲ್ಕು ದಿನ ಕಳೆದರೂ ಸುರಂಗದೊಳಗಡೆಯೇ ಸಿಲುಕಿಕೊಂಡಿದ್ದು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಮತ್ತು ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆ (ಎನ್‌ಜಿಆರ್‌ಐ)ಯ ತಜ್ಞರನ್ನು ರಕ್ಷಣಾ ಕಾರ್ಯಗಳಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ (ಫೆ.25) ತಿಳಿಸಿದ್ದಾರೆ.

ನಾಗರಕುರ್ನೂಲ್ ಜಿಲ್ಲಾಧಿಕಾರಿ ಬಿ ಸಂತೋಷ್ ಮಂಗಳವಾರ ಮಾತನಾಡಿ, “ಯಾವುದೇ ಹೆಜ್ಜೆ ಮುಂದಿಡುವ ಮುನ್ನ ಸುರಂಗದ ಸ್ಥಿರತೆಯನ್ನು ಪರಿಗಣಿಸಿ ಮುಂದುವರಿಯಲಾಗುತ್ತಿದೆ. ಪ್ರಸ್ತುತ ಸುರಂಗದ ನಿರ್ಜಲೀಕರಣ (ನೀರು ಇಂಗಿಸುವುದು) ಕಾರ್ಯ ನಡೆಯುತ್ತಿದೆ” ಎಂದಿದ್ದಾರೆ.

“ಸದ್ಯಕ್ಕೆ ಕಾರ್ಮಿಕರೊಂದಿಗೆ ಯಾವುದೇ ಸಂವಹನ ನಡೆಸಲು ಸಾಧ್ಯವಾಗುತ್ತಿಲ್ಲ. ನಾವು ಜಿಎಸ್‌ಐ ತಜ್ಞರು ಮತ್ತು ಇತರ ಕೆಲವು ಜನರ ಸಲಹೆಯನ್ನು ಪಡೆಯುತ್ತಿದ್ದೇವೆ. ಪ್ರಸ್ತುತ ನೀರು ಇಂಗಿಸುವ ಕಾರ್ಯ ನಡೆಯುತ್ತಿದೆ. ಸುರಂಗದ ಕೊನೆಯ 40-50 ಮೀಟರ್‌ಗಳವರೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಸಲಹೆಯನ್ನು ಪಡೆಯುತ್ತಿದ್ದೇವೆ. ಎಲ್‌& ಟಿ ಸಂಸ್ಥೆಯ ತಜ್ಞರು ಕೂಡ ಸ್ಥಳಕ್ಕೆ ಬಂದಿದ್ದಾರೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

“ಎಂಟು ಜನರು ಸಿಲುಕಿಕೊಂಡಿರುವ ಕೊನೆಯ ಐವತ್ತು ಮೀಟರ್‌ ಒಳಗೆ ಹೋಗಲು ರಕ್ಷಣಾ ತಂಡಗಳಿಗೆ ಸಾಧ್ಯವಾಗಿಲ್ಲ. ಅಲ್ಲಿ ಮಣ್ಣು ಮತ್ತು ಅವಶೇಷಗಳು ತುಂಬಿಕೊಂಡಿದೆ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಜೊತೆಗೆ, ಸುರಂಗ ಸಂಬಂಧಿತ ಕಾರ್ಯಾಚರಣೆಗಳಲ್ಲಿ ಅಪಾರ ಅನುಭವ ಹೊಂದಿರುವ ಎಲ್ & ಟಿ ಜೊತೆ ಸಂಬಂಧ ಇರುವ ಆಸ್ಟ್ರೇಲಿಯಾದ ತಜ್ಞರನ್ನು ಅವಘಡ ನಡೆದ ಸ್ಥಳದಲ್ಲಿ ಎಸ್‌ಎಲ್‌ಬಿಸಿ ಸುರಂಗದ ಸ್ಥಿರತೆಯನ್ನು ನಿರ್ಣಯಿಸಲು ನೇಮಿಸಲಾಗಿದೆ ಎಂದು ವರದಿಯಾಗಿದೆ.

ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ನೀರಾವರಿ ಸಚಿವ ಉತ್ತಮ್ ಕುಮಾರ್ ರೆಡ್ಡಿ ಇಂದು ಅವಘಡ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸಿ ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನೆ, ನೌಕಾಪಡೆ, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳ ನಿರಂತರ ಪ್ರಯತ್ನಗಳ ಹೊರತಾಗಿಯೂ ರಕ್ಷಣಾ ಕಾರ್ಯಾಚರಣೆಯಲ್ಲಿ ಇದುವರೆಗೆ ಯಾವುದೇ ಪ್ರಗತಿ ಕಂಡು ಬಂದಿಲ್ಲ. ಕಾರ್ಮಿಕರು ಸಿಲುಕೊಂಡಿರುವ ಜಾಗದಲ್ಲಿ ಸಿಮೆಂಟ್, ಕಂಬಿ, ಮಣ್ಣು ಮತ್ತು ಇತರ ಅವಶೇಷಗಳು ಸಿಲುಕೊಂಡಿದೆ. ಅದನ್ನು ದಾಟಿ ಕಾರ್ಮಿಕರನ್ನು ತಲುಪುವುದು ಸವಾಲಾಗಿದೆ.

ಭೂಸೇನೆ, ನೌಕಾಪಡೆ, ಸಿಂಗರೇಣಿ ಕಲ್ಲಿದ್ದಲು ಗಣಿ ಮತ್ತು ಇತರ ಸಂಸ್ಥೆಗಳ 584 ನುರಿತ ಸಿಬ್ಬಂದಿಯ ತಂಡವು ಕೇಂದ್ರ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳೊಂದಿಗೆ ಏಳು ಬಾರಿ ಸುರಂಗ ಪರಿಶೀಲನೆ ನಡೆಸಿದ್ದು, ಲೋಹದ ರಾಡ್ ಕತ್ತರಿಸಲು ಗ್ಯಾಸ್ ಕಟ್ಟರ್‌ಗಳನ್ನು ಬಳಸುವ ಮೂಲಕ ನಿರಂತರ ಪ್ರಯತ್ನ ಪಡುತ್ತಿದೆ ಎಂದು ವರದಿಗಳು ತಿಳಿಸಿವೆ.

“ದುರಂತ ಸ್ಥಳವು ಕೆಸರು ಮತ್ತು ಅವಶೇಷಗಳಿಂದ ತುಂಬಿರುವುದರಿಂದ ಸುರಂಗದೊಳಗಡೆ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಇನ್ನೂ ಕನಿಷ್ಠ ಮೂರರಿಂದ ನಾಲ್ಕು ದಿನಗಳು ಬೇಕಾಗಬಹುದು” ಎಂದು ತೆಲಂಗಾಣ ಸಚಿವ ಜೂಪಲ್ಲಿ ಕೃಷ್ಣ ರಾವ್ ಸೋಮವಾರ (ಫೆ.24) ಹೇಳಿದ್ದಾರೆ.

2023ರಲ್ಲಿ ಉತ್ತರಾಖಂಡದ ಸಿಲ್ಕ್ಯಾರಾ ಬೆಂಡ್-ಬಾರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ನಿರ್ಮಾಣ ಕಾರ್ಮಿಕರನ್ನು ರಕ್ಷಿಸಿದ್ದ ಇಲಿ ಗಣಿಗಾರರ ತಂಡವು, ಕಾರ್ಮಿಕರನ್ನು ಹೊರತರಲು ರಕ್ಷಣಾ ತಂಡಗಳೊಂದಿಗೆ ಸೇರಿಕೊಂಡಿವೆ ಎಂದು ಕೃಷ್ಣ ರಾವ್ ತಿಳಿಸಿದ್ದಾರೆ.

ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...