Homeಮುಖಪುಟಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ...

ಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ ಮೊರೆ ಹೋದ ತೆಲಂಗಾಣ ಸರ್ಕಾರ

- Advertisement -
- Advertisement -

ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗದ ಒಂದು ಭಾಗ ಶನಿವಾರ (ಫೆ.22) ಕುಸಿದು ಬಿದ್ದಿದ್ದು, ಅದರಲ್ಲಿ ಸಿಲುಕಿರುವ ಎಂಟು ಮಂದಿ ಕಾರ್ಮಿಕರನ್ನು ರಕ್ಷಿಸುವ ಬಗ್ಗೆ ಮುಂದಿನ ದಾರಿಯನ್ನು ಸೂಚಿಸಲು ತೆಲಂಗಾಣ ಸರ್ಕಾರ ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಮೊರೆ ಹೋಗಿದೆ.

ಎಂಟು ಮಂದಿ ಕಾರ್ಮಿಕರು ನಾಲ್ಕು ದಿನ ಕಳೆದರೂ ಸುರಂಗದೊಳಗಡೆಯೇ ಸಿಲುಕಿಕೊಂಡಿದ್ದು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಮತ್ತು ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆ (ಎನ್‌ಜಿಆರ್‌ಐ)ಯ ತಜ್ಞರನ್ನು ರಕ್ಷಣಾ ಕಾರ್ಯಗಳಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ (ಫೆ.25) ತಿಳಿಸಿದ್ದಾರೆ.

ನಾಗರಕುರ್ನೂಲ್ ಜಿಲ್ಲಾಧಿಕಾರಿ ಬಿ ಸಂತೋಷ್ ಮಂಗಳವಾರ ಮಾತನಾಡಿ, “ಯಾವುದೇ ಹೆಜ್ಜೆ ಮುಂದಿಡುವ ಮುನ್ನ ಸುರಂಗದ ಸ್ಥಿರತೆಯನ್ನು ಪರಿಗಣಿಸಿ ಮುಂದುವರಿಯಲಾಗುತ್ತಿದೆ. ಪ್ರಸ್ತುತ ಸುರಂಗದ ನಿರ್ಜಲೀಕರಣ (ನೀರು ಇಂಗಿಸುವುದು) ಕಾರ್ಯ ನಡೆಯುತ್ತಿದೆ” ಎಂದಿದ್ದಾರೆ.

“ಸದ್ಯಕ್ಕೆ ಕಾರ್ಮಿಕರೊಂದಿಗೆ ಯಾವುದೇ ಸಂವಹನ ನಡೆಸಲು ಸಾಧ್ಯವಾಗುತ್ತಿಲ್ಲ. ನಾವು ಜಿಎಸ್‌ಐ ತಜ್ಞರು ಮತ್ತು ಇತರ ಕೆಲವು ಜನರ ಸಲಹೆಯನ್ನು ಪಡೆಯುತ್ತಿದ್ದೇವೆ. ಪ್ರಸ್ತುತ ನೀರು ಇಂಗಿಸುವ ಕಾರ್ಯ ನಡೆಯುತ್ತಿದೆ. ಸುರಂಗದ ಕೊನೆಯ 40-50 ಮೀಟರ್‌ಗಳವರೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಸಲಹೆಯನ್ನು ಪಡೆಯುತ್ತಿದ್ದೇವೆ. ಎಲ್‌& ಟಿ ಸಂಸ್ಥೆಯ ತಜ್ಞರು ಕೂಡ ಸ್ಥಳಕ್ಕೆ ಬಂದಿದ್ದಾರೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

“ಎಂಟು ಜನರು ಸಿಲುಕಿಕೊಂಡಿರುವ ಕೊನೆಯ ಐವತ್ತು ಮೀಟರ್‌ ಒಳಗೆ ಹೋಗಲು ರಕ್ಷಣಾ ತಂಡಗಳಿಗೆ ಸಾಧ್ಯವಾಗಿಲ್ಲ. ಅಲ್ಲಿ ಮಣ್ಣು ಮತ್ತು ಅವಶೇಷಗಳು ತುಂಬಿಕೊಂಡಿದೆ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಜೊತೆಗೆ, ಸುರಂಗ ಸಂಬಂಧಿತ ಕಾರ್ಯಾಚರಣೆಗಳಲ್ಲಿ ಅಪಾರ ಅನುಭವ ಹೊಂದಿರುವ ಎಲ್ & ಟಿ ಜೊತೆ ಸಂಬಂಧ ಇರುವ ಆಸ್ಟ್ರೇಲಿಯಾದ ತಜ್ಞರನ್ನು ಅವಘಡ ನಡೆದ ಸ್ಥಳದಲ್ಲಿ ಎಸ್‌ಎಲ್‌ಬಿಸಿ ಸುರಂಗದ ಸ್ಥಿರತೆಯನ್ನು ನಿರ್ಣಯಿಸಲು ನೇಮಿಸಲಾಗಿದೆ ಎಂದು ವರದಿಯಾಗಿದೆ.

ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ನೀರಾವರಿ ಸಚಿವ ಉತ್ತಮ್ ಕುಮಾರ್ ರೆಡ್ಡಿ ಇಂದು ಅವಘಡ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸಿ ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನೆ, ನೌಕಾಪಡೆ, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳ ನಿರಂತರ ಪ್ರಯತ್ನಗಳ ಹೊರತಾಗಿಯೂ ರಕ್ಷಣಾ ಕಾರ್ಯಾಚರಣೆಯಲ್ಲಿ ಇದುವರೆಗೆ ಯಾವುದೇ ಪ್ರಗತಿ ಕಂಡು ಬಂದಿಲ್ಲ. ಕಾರ್ಮಿಕರು ಸಿಲುಕೊಂಡಿರುವ ಜಾಗದಲ್ಲಿ ಸಿಮೆಂಟ್, ಕಂಬಿ, ಮಣ್ಣು ಮತ್ತು ಇತರ ಅವಶೇಷಗಳು ಸಿಲುಕೊಂಡಿದೆ. ಅದನ್ನು ದಾಟಿ ಕಾರ್ಮಿಕರನ್ನು ತಲುಪುವುದು ಸವಾಲಾಗಿದೆ.

ಭೂಸೇನೆ, ನೌಕಾಪಡೆ, ಸಿಂಗರೇಣಿ ಕಲ್ಲಿದ್ದಲು ಗಣಿ ಮತ್ತು ಇತರ ಸಂಸ್ಥೆಗಳ 584 ನುರಿತ ಸಿಬ್ಬಂದಿಯ ತಂಡವು ಕೇಂದ್ರ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳೊಂದಿಗೆ ಏಳು ಬಾರಿ ಸುರಂಗ ಪರಿಶೀಲನೆ ನಡೆಸಿದ್ದು, ಲೋಹದ ರಾಡ್ ಕತ್ತರಿಸಲು ಗ್ಯಾಸ್ ಕಟ್ಟರ್‌ಗಳನ್ನು ಬಳಸುವ ಮೂಲಕ ನಿರಂತರ ಪ್ರಯತ್ನ ಪಡುತ್ತಿದೆ ಎಂದು ವರದಿಗಳು ತಿಳಿಸಿವೆ.

“ದುರಂತ ಸ್ಥಳವು ಕೆಸರು ಮತ್ತು ಅವಶೇಷಗಳಿಂದ ತುಂಬಿರುವುದರಿಂದ ಸುರಂಗದೊಳಗಡೆ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಇನ್ನೂ ಕನಿಷ್ಠ ಮೂರರಿಂದ ನಾಲ್ಕು ದಿನಗಳು ಬೇಕಾಗಬಹುದು” ಎಂದು ತೆಲಂಗಾಣ ಸಚಿವ ಜೂಪಲ್ಲಿ ಕೃಷ್ಣ ರಾವ್ ಸೋಮವಾರ (ಫೆ.24) ಹೇಳಿದ್ದಾರೆ.

2023ರಲ್ಲಿ ಉತ್ತರಾಖಂಡದ ಸಿಲ್ಕ್ಯಾರಾ ಬೆಂಡ್-ಬಾರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ನಿರ್ಮಾಣ ಕಾರ್ಮಿಕರನ್ನು ರಕ್ಷಿಸಿದ್ದ ಇಲಿ ಗಣಿಗಾರರ ತಂಡವು, ಕಾರ್ಮಿಕರನ್ನು ಹೊರತರಲು ರಕ್ಷಣಾ ತಂಡಗಳೊಂದಿಗೆ ಸೇರಿಕೊಂಡಿವೆ ಎಂದು ಕೃಷ್ಣ ರಾವ್ ತಿಳಿಸಿದ್ದಾರೆ.

ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....