Homeಮುಖಪುಟಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ...

ಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ ಮೊರೆ ಹೋದ ತೆಲಂಗಾಣ ಸರ್ಕಾರ

- Advertisement -
- Advertisement -

ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗದ ಒಂದು ಭಾಗ ಶನಿವಾರ (ಫೆ.22) ಕುಸಿದು ಬಿದ್ದಿದ್ದು, ಅದರಲ್ಲಿ ಸಿಲುಕಿರುವ ಎಂಟು ಮಂದಿ ಕಾರ್ಮಿಕರನ್ನು ರಕ್ಷಿಸುವ ಬಗ್ಗೆ ಮುಂದಿನ ದಾರಿಯನ್ನು ಸೂಚಿಸಲು ತೆಲಂಗಾಣ ಸರ್ಕಾರ ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಮೊರೆ ಹೋಗಿದೆ.

ಎಂಟು ಮಂದಿ ಕಾರ್ಮಿಕರು ನಾಲ್ಕು ದಿನ ಕಳೆದರೂ ಸುರಂಗದೊಳಗಡೆಯೇ ಸಿಲುಕಿಕೊಂಡಿದ್ದು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಮತ್ತು ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆ (ಎನ್‌ಜಿಆರ್‌ಐ)ಯ ತಜ್ಞರನ್ನು ರಕ್ಷಣಾ ಕಾರ್ಯಗಳಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ (ಫೆ.25) ತಿಳಿಸಿದ್ದಾರೆ.

ನಾಗರಕುರ್ನೂಲ್ ಜಿಲ್ಲಾಧಿಕಾರಿ ಬಿ ಸಂತೋಷ್ ಮಂಗಳವಾರ ಮಾತನಾಡಿ, “ಯಾವುದೇ ಹೆಜ್ಜೆ ಮುಂದಿಡುವ ಮುನ್ನ ಸುರಂಗದ ಸ್ಥಿರತೆಯನ್ನು ಪರಿಗಣಿಸಿ ಮುಂದುವರಿಯಲಾಗುತ್ತಿದೆ. ಪ್ರಸ್ತುತ ಸುರಂಗದ ನಿರ್ಜಲೀಕರಣ (ನೀರು ಇಂಗಿಸುವುದು) ಕಾರ್ಯ ನಡೆಯುತ್ತಿದೆ” ಎಂದಿದ್ದಾರೆ.

“ಸದ್ಯಕ್ಕೆ ಕಾರ್ಮಿಕರೊಂದಿಗೆ ಯಾವುದೇ ಸಂವಹನ ನಡೆಸಲು ಸಾಧ್ಯವಾಗುತ್ತಿಲ್ಲ. ನಾವು ಜಿಎಸ್‌ಐ ತಜ್ಞರು ಮತ್ತು ಇತರ ಕೆಲವು ಜನರ ಸಲಹೆಯನ್ನು ಪಡೆಯುತ್ತಿದ್ದೇವೆ. ಪ್ರಸ್ತುತ ನೀರು ಇಂಗಿಸುವ ಕಾರ್ಯ ನಡೆಯುತ್ತಿದೆ. ಸುರಂಗದ ಕೊನೆಯ 40-50 ಮೀಟರ್‌ಗಳವರೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಸಲಹೆಯನ್ನು ಪಡೆಯುತ್ತಿದ್ದೇವೆ. ಎಲ್‌& ಟಿ ಸಂಸ್ಥೆಯ ತಜ್ಞರು ಕೂಡ ಸ್ಥಳಕ್ಕೆ ಬಂದಿದ್ದಾರೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

“ಎಂಟು ಜನರು ಸಿಲುಕಿಕೊಂಡಿರುವ ಕೊನೆಯ ಐವತ್ತು ಮೀಟರ್‌ ಒಳಗೆ ಹೋಗಲು ರಕ್ಷಣಾ ತಂಡಗಳಿಗೆ ಸಾಧ್ಯವಾಗಿಲ್ಲ. ಅಲ್ಲಿ ಮಣ್ಣು ಮತ್ತು ಅವಶೇಷಗಳು ತುಂಬಿಕೊಂಡಿದೆ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಜೊತೆಗೆ, ಸುರಂಗ ಸಂಬಂಧಿತ ಕಾರ್ಯಾಚರಣೆಗಳಲ್ಲಿ ಅಪಾರ ಅನುಭವ ಹೊಂದಿರುವ ಎಲ್ & ಟಿ ಜೊತೆ ಸಂಬಂಧ ಇರುವ ಆಸ್ಟ್ರೇಲಿಯಾದ ತಜ್ಞರನ್ನು ಅವಘಡ ನಡೆದ ಸ್ಥಳದಲ್ಲಿ ಎಸ್‌ಎಲ್‌ಬಿಸಿ ಸುರಂಗದ ಸ್ಥಿರತೆಯನ್ನು ನಿರ್ಣಯಿಸಲು ನೇಮಿಸಲಾಗಿದೆ ಎಂದು ವರದಿಯಾಗಿದೆ.

ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ನೀರಾವರಿ ಸಚಿವ ಉತ್ತಮ್ ಕುಮಾರ್ ರೆಡ್ಡಿ ಇಂದು ಅವಘಡ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸಿ ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನೆ, ನೌಕಾಪಡೆ, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳ ನಿರಂತರ ಪ್ರಯತ್ನಗಳ ಹೊರತಾಗಿಯೂ ರಕ್ಷಣಾ ಕಾರ್ಯಾಚರಣೆಯಲ್ಲಿ ಇದುವರೆಗೆ ಯಾವುದೇ ಪ್ರಗತಿ ಕಂಡು ಬಂದಿಲ್ಲ. ಕಾರ್ಮಿಕರು ಸಿಲುಕೊಂಡಿರುವ ಜಾಗದಲ್ಲಿ ಸಿಮೆಂಟ್, ಕಂಬಿ, ಮಣ್ಣು ಮತ್ತು ಇತರ ಅವಶೇಷಗಳು ಸಿಲುಕೊಂಡಿದೆ. ಅದನ್ನು ದಾಟಿ ಕಾರ್ಮಿಕರನ್ನು ತಲುಪುವುದು ಸವಾಲಾಗಿದೆ.

ಭೂಸೇನೆ, ನೌಕಾಪಡೆ, ಸಿಂಗರೇಣಿ ಕಲ್ಲಿದ್ದಲು ಗಣಿ ಮತ್ತು ಇತರ ಸಂಸ್ಥೆಗಳ 584 ನುರಿತ ಸಿಬ್ಬಂದಿಯ ತಂಡವು ಕೇಂದ್ರ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳೊಂದಿಗೆ ಏಳು ಬಾರಿ ಸುರಂಗ ಪರಿಶೀಲನೆ ನಡೆಸಿದ್ದು, ಲೋಹದ ರಾಡ್ ಕತ್ತರಿಸಲು ಗ್ಯಾಸ್ ಕಟ್ಟರ್‌ಗಳನ್ನು ಬಳಸುವ ಮೂಲಕ ನಿರಂತರ ಪ್ರಯತ್ನ ಪಡುತ್ತಿದೆ ಎಂದು ವರದಿಗಳು ತಿಳಿಸಿವೆ.

“ದುರಂತ ಸ್ಥಳವು ಕೆಸರು ಮತ್ತು ಅವಶೇಷಗಳಿಂದ ತುಂಬಿರುವುದರಿಂದ ಸುರಂಗದೊಳಗಡೆ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಇನ್ನೂ ಕನಿಷ್ಠ ಮೂರರಿಂದ ನಾಲ್ಕು ದಿನಗಳು ಬೇಕಾಗಬಹುದು” ಎಂದು ತೆಲಂಗಾಣ ಸಚಿವ ಜೂಪಲ್ಲಿ ಕೃಷ್ಣ ರಾವ್ ಸೋಮವಾರ (ಫೆ.24) ಹೇಳಿದ್ದಾರೆ.

2023ರಲ್ಲಿ ಉತ್ತರಾಖಂಡದ ಸಿಲ್ಕ್ಯಾರಾ ಬೆಂಡ್-ಬಾರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ನಿರ್ಮಾಣ ಕಾರ್ಮಿಕರನ್ನು ರಕ್ಷಿಸಿದ್ದ ಇಲಿ ಗಣಿಗಾರರ ತಂಡವು, ಕಾರ್ಮಿಕರನ್ನು ಹೊರತರಲು ರಕ್ಷಣಾ ತಂಡಗಳೊಂದಿಗೆ ಸೇರಿಕೊಂಡಿವೆ ಎಂದು ಕೃಷ್ಣ ರಾವ್ ತಿಳಿಸಿದ್ದಾರೆ.

ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...