Homeಮುಖಪುಟಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ...

ಶ್ರೀಶೈಲಂ ಸುರಂಗ ಕುಸಿತ : ನಾಲ್ಕು ದಿನ ಕಳೆದರೂ ಸಿಗದ ಕಾರ್ಮಿಕರ ಸುಳಿವು : ತಜ್ಞರ ಮೊರೆ ಹೋದ ತೆಲಂಗಾಣ ಸರ್ಕಾರ

- Advertisement -
- Advertisement -

ಶ್ರೀಶೈಲಂ ಎಡದಂಡೆ ಕಾಲುವೆಯ ಸುರಂಗದ ಒಂದು ಭಾಗ ಶನಿವಾರ (ಫೆ.22) ಕುಸಿದು ಬಿದ್ದಿದ್ದು, ಅದರಲ್ಲಿ ಸಿಲುಕಿರುವ ಎಂಟು ಮಂದಿ ಕಾರ್ಮಿಕರನ್ನು ರಕ್ಷಿಸುವ ಬಗ್ಗೆ ಮುಂದಿನ ದಾರಿಯನ್ನು ಸೂಚಿಸಲು ತೆಲಂಗಾಣ ಸರ್ಕಾರ ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಮೊರೆ ಹೋಗಿದೆ.

ಎಂಟು ಮಂದಿ ಕಾರ್ಮಿಕರು ನಾಲ್ಕು ದಿನ ಕಳೆದರೂ ಸುರಂಗದೊಳಗಡೆಯೇ ಸಿಲುಕಿಕೊಂಡಿದ್ದು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಮತ್ತು ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆ (ಎನ್‌ಜಿಆರ್‌ಐ)ಯ ತಜ್ಞರನ್ನು ರಕ್ಷಣಾ ಕಾರ್ಯಗಳಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ (ಫೆ.25) ತಿಳಿಸಿದ್ದಾರೆ.

ನಾಗರಕುರ್ನೂಲ್ ಜಿಲ್ಲಾಧಿಕಾರಿ ಬಿ ಸಂತೋಷ್ ಮಂಗಳವಾರ ಮಾತನಾಡಿ, “ಯಾವುದೇ ಹೆಜ್ಜೆ ಮುಂದಿಡುವ ಮುನ್ನ ಸುರಂಗದ ಸ್ಥಿರತೆಯನ್ನು ಪರಿಗಣಿಸಿ ಮುಂದುವರಿಯಲಾಗುತ್ತಿದೆ. ಪ್ರಸ್ತುತ ಸುರಂಗದ ನಿರ್ಜಲೀಕರಣ (ನೀರು ಇಂಗಿಸುವುದು) ಕಾರ್ಯ ನಡೆಯುತ್ತಿದೆ” ಎಂದಿದ್ದಾರೆ.

“ಸದ್ಯಕ್ಕೆ ಕಾರ್ಮಿಕರೊಂದಿಗೆ ಯಾವುದೇ ಸಂವಹನ ನಡೆಸಲು ಸಾಧ್ಯವಾಗುತ್ತಿಲ್ಲ. ನಾವು ಜಿಎಸ್‌ಐ ತಜ್ಞರು ಮತ್ತು ಇತರ ಕೆಲವು ಜನರ ಸಲಹೆಯನ್ನು ಪಡೆಯುತ್ತಿದ್ದೇವೆ. ಪ್ರಸ್ತುತ ನೀರು ಇಂಗಿಸುವ ಕಾರ್ಯ ನಡೆಯುತ್ತಿದೆ. ಸುರಂಗದ ಕೊನೆಯ 40-50 ಮೀಟರ್‌ಗಳವರೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಸಲಹೆಯನ್ನು ಪಡೆಯುತ್ತಿದ್ದೇವೆ. ಎಲ್‌& ಟಿ ಸಂಸ್ಥೆಯ ತಜ್ಞರು ಕೂಡ ಸ್ಥಳಕ್ಕೆ ಬಂದಿದ್ದಾರೆ” ಎಂದು ಜಿಲ್ಲಾಧಿಕಾರಿ ಹೇಳಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

“ಎಂಟು ಜನರು ಸಿಲುಕಿಕೊಂಡಿರುವ ಕೊನೆಯ ಐವತ್ತು ಮೀಟರ್‌ ಒಳಗೆ ಹೋಗಲು ರಕ್ಷಣಾ ತಂಡಗಳಿಗೆ ಸಾಧ್ಯವಾಗಿಲ್ಲ. ಅಲ್ಲಿ ಮಣ್ಣು ಮತ್ತು ಅವಶೇಷಗಳು ತುಂಬಿಕೊಂಡಿದೆ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಜಿಎಸ್‌ಐ ಮತ್ತು ಎನ್‌ಜಿಆರ್‌ಐ ತಜ್ಞರ ಜೊತೆಗೆ, ಸುರಂಗ ಸಂಬಂಧಿತ ಕಾರ್ಯಾಚರಣೆಗಳಲ್ಲಿ ಅಪಾರ ಅನುಭವ ಹೊಂದಿರುವ ಎಲ್ & ಟಿ ಜೊತೆ ಸಂಬಂಧ ಇರುವ ಆಸ್ಟ್ರೇಲಿಯಾದ ತಜ್ಞರನ್ನು ಅವಘಡ ನಡೆದ ಸ್ಥಳದಲ್ಲಿ ಎಸ್‌ಎಲ್‌ಬಿಸಿ ಸುರಂಗದ ಸ್ಥಿರತೆಯನ್ನು ನಿರ್ಣಯಿಸಲು ನೇಮಿಸಲಾಗಿದೆ ಎಂದು ವರದಿಯಾಗಿದೆ.

ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ನೀರಾವರಿ ಸಚಿವ ಉತ್ತಮ್ ಕುಮಾರ್ ರೆಡ್ಡಿ ಇಂದು ಅವಘಡ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸಿ ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನೆ, ನೌಕಾಪಡೆ, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳ ನಿರಂತರ ಪ್ರಯತ್ನಗಳ ಹೊರತಾಗಿಯೂ ರಕ್ಷಣಾ ಕಾರ್ಯಾಚರಣೆಯಲ್ಲಿ ಇದುವರೆಗೆ ಯಾವುದೇ ಪ್ರಗತಿ ಕಂಡು ಬಂದಿಲ್ಲ. ಕಾರ್ಮಿಕರು ಸಿಲುಕೊಂಡಿರುವ ಜಾಗದಲ್ಲಿ ಸಿಮೆಂಟ್, ಕಂಬಿ, ಮಣ್ಣು ಮತ್ತು ಇತರ ಅವಶೇಷಗಳು ಸಿಲುಕೊಂಡಿದೆ. ಅದನ್ನು ದಾಟಿ ಕಾರ್ಮಿಕರನ್ನು ತಲುಪುವುದು ಸವಾಲಾಗಿದೆ.

ಭೂಸೇನೆ, ನೌಕಾಪಡೆ, ಸಿಂಗರೇಣಿ ಕಲ್ಲಿದ್ದಲು ಗಣಿ ಮತ್ತು ಇತರ ಸಂಸ್ಥೆಗಳ 584 ನುರಿತ ಸಿಬ್ಬಂದಿಯ ತಂಡವು ಕೇಂದ್ರ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳೊಂದಿಗೆ ಏಳು ಬಾರಿ ಸುರಂಗ ಪರಿಶೀಲನೆ ನಡೆಸಿದ್ದು, ಲೋಹದ ರಾಡ್ ಕತ್ತರಿಸಲು ಗ್ಯಾಸ್ ಕಟ್ಟರ್‌ಗಳನ್ನು ಬಳಸುವ ಮೂಲಕ ನಿರಂತರ ಪ್ರಯತ್ನ ಪಡುತ್ತಿದೆ ಎಂದು ವರದಿಗಳು ತಿಳಿಸಿವೆ.

“ದುರಂತ ಸ್ಥಳವು ಕೆಸರು ಮತ್ತು ಅವಶೇಷಗಳಿಂದ ತುಂಬಿರುವುದರಿಂದ ಸುರಂಗದೊಳಗಡೆ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಇನ್ನೂ ಕನಿಷ್ಠ ಮೂರರಿಂದ ನಾಲ್ಕು ದಿನಗಳು ಬೇಕಾಗಬಹುದು” ಎಂದು ತೆಲಂಗಾಣ ಸಚಿವ ಜೂಪಲ್ಲಿ ಕೃಷ್ಣ ರಾವ್ ಸೋಮವಾರ (ಫೆ.24) ಹೇಳಿದ್ದಾರೆ.

2023ರಲ್ಲಿ ಉತ್ತರಾಖಂಡದ ಸಿಲ್ಕ್ಯಾರಾ ಬೆಂಡ್-ಬಾರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ನಿರ್ಮಾಣ ಕಾರ್ಮಿಕರನ್ನು ರಕ್ಷಿಸಿದ್ದ ಇಲಿ ಗಣಿಗಾರರ ತಂಡವು, ಕಾರ್ಮಿಕರನ್ನು ಹೊರತರಲು ರಕ್ಷಣಾ ತಂಡಗಳೊಂದಿಗೆ ಸೇರಿಕೊಂಡಿವೆ ಎಂದು ಕೃಷ್ಣ ರಾವ್ ತಿಳಿಸಿದ್ದಾರೆ.

ಕೇರಳ | ಸಹೋದರ, ಚಿಕ್ಕಪ್ಪ, ಚಿಕ್ಕಮ್ಮ ಸೇರಿ ಐವರನ್ನು ಕೊಂದ ಯುವಕ : ವಿಷ ಸೇವಿಸಿ ಪೊಲೀಸರ ಮುಂದೆ ಶರಣು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...