Homeಕರ್ನಾಟಕಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ಆಗಸ್ಟ್ 14-15 ಮಧ್ಯರಾತ್ರಿಯಿಂದಲೇ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ವಿಶಿಷ್ಟಿ ಹೋರಾಟ ನಡೆಯಲಿದೆ.

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ  ಆಗಸ್ಟ್ 14ರ ಸಂಜೆಯಿಂದ ಆಗಸ್ಟ್ 15ರ ಸಂಜೆವರೆಗೂ ಬಡವರಿಗೆ ಭೂಮಿ ಮತ್ತು ವಸತಿಗಾಗಿ ವಿಶಿಷ್ಟ ಆಂದೋಲನ ಬೆಂಗಳೂರಿನಲ್ಲಿ ನಡೆಯಲಿದೆ.

• ಆಗಸ್ಟ್ 14ರ ಸೂರ್ಯಾಸ್ತದೊಂದಿಗೆ ಹಣತೆಯ ಮೆರವಣಿಗೆ – ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಬನಪ್ಪ ಪಾರ್ಕಿಗೆ.
• ಆಗಸ್ಟ್ 14–15ರ ಇಡೀ ರಾತ್ರಿ ಪ್ರತಿರೋಧ ಕಾರ್ಯಕ್ರಮಗಳು – ಭಾಷಣಗಳು, ಹೋರಾಟದ ಹಾಡುಗಳು, ರೂಪಕಗಳು ಇತ್ಯಾದಿ.
• ಮಧ್ಯರಾತ್ರಿ 11.30ರಿಂದ 12: ಮುಖ್ಯ ಅತಿಥಿ ಚಂದ್ರಶೇಖರ ಆಜಾದ್ ‘ರಾವಣ’ರಿಂದ ಸಂಘರ್ಷದ ಸಂದೇಶ.
• ನಡುರಾತ್ರಿ 12.05ಕ್ಕೆ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರಿಂದ ಧ್ವಜಾರೋಹಣ ಹಾಗೂ ನಿಜ ಸ್ವಾತಂತ್ರ್ಯದ ಕರೆ
• ಆಗಸ್ಟ್ 15ರ ಮುಂಜಾನೆ 9 ಗಂಟೆಗೆ ಹಕ್ಕಿಗಾಗಿ ನಮ್ಮ ಹೆಜ್ಜೆ – ಬನಪ್ಪ ಪಾರ್ಕಿನಿಂದ ಪೆರೇಡ್ ಗ್ರೌಂಡ್ ಕಡೆಗೆ.

ಈ ಕುರಿತು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿಯ ನೂರ್ ಶ್ರೀಧರ್ ರವರು “ಬಡಜನರು ಸರ್ಕಾರಿ/ಖಾಸಗಿ ಜಾಗಗಳಲ್ಲಿ ಕಟ್ಟಿಕೊಂಡಿರುವ ಮನೆಗಳನ್ನು/ಗುಡಿಸಲುಗಳನ್ನು 94ಸಿ/94ಸಿಸಿ ಯೋಜನೆಯಡಿ ಸಕ್ರಮಗೊಳಿಸಿ ಹಕ್ಕುಪತ್ರಗಳನ್ನೂ ನೀಡುತ್ತಿಲ್ಲ. ಬದಲಿಗೆ ಜನರನ್ನು ಒಕ್ಕಲೆಬ್ಬಿಸುವ ಕಿರುಕುಳ ಮಾತ್ರ ಎಲ್ಲಾ ಕಡೆ ಆರಂಭವಾಗಿದೆ. ವಿಶೇಷವಾಗಿ ಅರಣ್ಯ ಇಲಾಖೆಯಂತೂ ಸಾವಿರಾರು ಎಕರೆ ಭೂಮಿ ಕಬಳಿಸಿರುವ ಬಲಾಢ್ಯರನ್ನು ಬಿಟ್ಟು, ಬದುಕಿಗೆ ಗೂಡು ಕಟ್ಟಿಕೊಂಡಿರುವ ಬಡವರ ಮೇಲೆ ಅಕ್ಷರಶಃ ‘ಬುಲ್‍ಡೋಜರ್ ಯುದ್ಧ’ ಸಾರಿದೆ! ಅದಕ್ಕಾಗಿ ಹೋರಾಟ ಅನಿವಾರ್ಯವಾಗಿದೆ” ಎಂದಿದ್ದಾರೆ.

“ಆತ್ಮಗಳನ್ನು ಮಾರಿಕೊಂಡಿರುವ” ಆಳುವವರನ್ನು, ಅವರ ಸರ್ಕಾರಗಳನ್ನು ಮತ್ತೊಮ್ಮೆ ಕಾರ್ಯಪ್ರವೃತ್ತರಾಗುವಂತೆ ಮಾಡುವುದಕ್ಕೋಸ್ಕರ, ಹಾಗೂ, ಆಳುವವರ ನಿಷ್ಕಾಳಜಿ, ನಿಷ್ಕ್ರಿಯತೆಗೆ ಛೀಮಾರಿ ಹಾಕಿ, ‘ಇದು ಸೋತು ಸುಮ್ಮನಾಗುವ ಚಳವಳಿಯಲ್ಲ’ ಎಂಬ ಸಂದೇಶವನ್ನು ಅವರಿಗೆ ರವಾನಿಸುವ ಹಾಗೂ ಹೋರಾಟವನ್ನು ಬಿಗಿ ಮತ್ತು ಬಿರುಸುಗೊಳಿಸುವ ಸಂಕಲ್ಪ ತೊಡುವ ಸಂದರ್ಭವಾಗಿ ಈ ಬಾರಿಯ ಸ್ವಾತಂತ್ರ್ಯ ದಿನವನ್ನು ಬಡಜನರ “ನಡುರಾತ್ರಿ ಸ್ವಾತಂತ್ರ್ಯೋತ್ಸವ”ವನ್ನಾಗಿ ಸಂಘಟಿಸಲಾಗುತ್ತಿದೆ ಎಂದು ನೂರ್ ಶ್ರೀಧರ್ ತಿಳಿಸಿದ್ದಾರೆ.

ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ ಮಾತನಾಡಿ “72 ವರ್ಷಗಳ ಹಿಂದೆ ದೇಶದ ಸ್ವಾತಂತ್ರ್ಯದ ಸಂಕೇತವಾಗಿ ರಾಷ್ಟ್ರಧ್ವಜಾರೋಹಣ ಮಾಡಿದ್ದ ಸ್ವಾತಂತ್ರ್ಯ ಸೇನಾನಿ ಶತಾಯುಷಿ ದೊರೆಸ್ವಾಮಿಯವರೇ ಈ ದಿನ ಬಡವರ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನೂ ನೆರವೇರಿಸುತ್ತಾರೆ ಮತ್ತು ಬಡವರ ನೈಜ ಸ್ವಾತಂತ್ರ್ಯಕ್ಕಾಗಿನ ಮತ್ತೊಂದು ಸೋಲೊಪ್ಪದ ಸಂಗ್ರಾಮಕ್ಕೆ ಚಾಲನೆಯನ್ನೂ ನೀಡುತ್ತಾರೆ. ದಲಿತ-ದಮನಿತರ ಸಿಡಿಲ ದನಿ, ಉತ್ತರ ಪ್ರದೇಶದ ‘ಭೀಮ್ ಆರ್ಮಿ’ ಸಂಸ್ಥಾಪಕ ಚಂದ್ರಶೇಖರ ಆಝಾದ್ ‘ರಾವಣ’ ಈ ಸ್ವಾತಂತ್ರ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುತ್ತಾರೆ. ಈ ಅರ್ಥಪೂರ್ಣ ಸಂದರ್ಭಕ್ಕೆ ನಾಡಿನ ಸಹಸ್ರಾರು ಭೂಮಿ-ವಸತಿ ವಂಚಿತರ ಜೊತೆಯಲ್ಲಿ ನಾಡಿನೆಲ್ಲೆಡೆಯ ಹಿರಿಯ ಹೋರಾಟಗಾರರು, ಸಂಘಟನೆಗಳ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ ಎಂದರು.

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ವಿವಿಧ ಜನಪರ ಹೋರಾಟನಿರತ ಸಂಘಟನೆಗಳು ಒಟ್ಟುಗೂಡಿ ಮೂರು ವರ್ಷಗಳ ಹಿಂದೆ 2016ರಲ್ಲಿ [ಮಾಜಿ ಮುಖ್ಯಮಂತ್ರಿ ದೇವರಾಜ ಅರಸರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ] ‘ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ರೂಪ ತಾಳಿತು. ಈ ಸಮಿತಿಯ ನೇತೃತ್ವದಲ್ಲಿ ಸತತವಾಗಿ ನಡೆಸಿದ ಹೋರಾಟಗಳ ಫಲವಾಗಿ 2018ರ ಜನವರಿಯಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ, ಸಂಬಂಧಿತ ಇಲಾಖೆಗಳ ಮಂತ್ರಿಗಳ/ಪ್ರಧಾನ ಕಾರ್ಯದರ್ಶಿಗಳ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಾಗೂ ದೊರೆಸ್ವಾಮಿಯವರ ನೇತೃತ್ವದ ಹೋರಾಟಗಾರರ ನಿಯೋಗದ ಸಮ್ಮುಖದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಆ ಸಭೆಯಲ್ಲಿ ಚಳವಳಿ ಮುಂದಿಟ್ಟ ಎಲ್ಲಾ ಹಕ್ಕೊತ್ತಾಯಗಳನ್ನು ಸರ್ಕಾರ ಒಪ್ಪಿದ್ದಲ್ಲದೆ, ಸಮಸ್ಯೆಯ ತ್ವರಿತ ಪರಿಹಾರಕ್ಕಾಗಿ ಎಲ್ಲ ಸಂಬಂಧಿತ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಹೋರಾಟ ಸಮಿತಿಯ ಇಬ್ಬರು ಪ್ರತಿನಿಧಿಗಳನ್ನೊಳಗೊಂಡ “ಉನ್ನತ ಮಟ್ಟದ ಸಮಿತಿ”ಯನ್ನು ರಚಿಸಿತು. ಜೊತೆಗೆ, 2005ರವರೆಗೂ ಬಗರ್‍ಹುಕುಂ ಉಳುಮೆ ಮಾಡುತ್ತಿದ್ದವರೂ ಸಹ ಹೊಸದಾಗಿ ಭೂ ಮಂಜೂರಾತಿಗೆ ಫಾರಂ 57ರಡಿ ಅರ್ಜಿ ಸಲ್ಲಿಸುವ ಅವಕಾಶವನ್ನು ನೀಡಿ, ಕಾಯ್ದೆ ತಿದ್ದುಪಡಿಯನ್ನೂ ಮಾಡಿತು. ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಹಳೇ ಫಾರಂ 50-53ರ ಅರ್ಜಿಗಳೇ ವಿಲೇವಾರಿಯಾಗಿಲ್ಲ, ಹೊಸ ಅರ್ಜಿಗಳನ್ನು ಮುಟ್ಟಿಯೂ ಇಲ್ಲ, ಭೂ ಮಂಜೂರಾತಿ ಮಾಡುವ ಸಮಿತಿಗಳನ್ನೇ ಪುನರ್ರಚಿಸಿಲ್ಲ ಎಂದು ಸಮಿತಿಯು ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...