Homeಕರ್ನಾಟಕಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ಆಗಸ್ಟ್ 14-15 ಮಧ್ಯರಾತ್ರಿಯಿಂದಲೇ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ವಿಶಿಷ್ಟಿ ಹೋರಾಟ ನಡೆಯಲಿದೆ.

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ  ಆಗಸ್ಟ್ 14ರ ಸಂಜೆಯಿಂದ ಆಗಸ್ಟ್ 15ರ ಸಂಜೆವರೆಗೂ ಬಡವರಿಗೆ ಭೂಮಿ ಮತ್ತು ವಸತಿಗಾಗಿ ವಿಶಿಷ್ಟ ಆಂದೋಲನ ಬೆಂಗಳೂರಿನಲ್ಲಿ ನಡೆಯಲಿದೆ.

• ಆಗಸ್ಟ್ 14ರ ಸೂರ್ಯಾಸ್ತದೊಂದಿಗೆ ಹಣತೆಯ ಮೆರವಣಿಗೆ – ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಬನಪ್ಪ ಪಾರ್ಕಿಗೆ.
• ಆಗಸ್ಟ್ 14–15ರ ಇಡೀ ರಾತ್ರಿ ಪ್ರತಿರೋಧ ಕಾರ್ಯಕ್ರಮಗಳು – ಭಾಷಣಗಳು, ಹೋರಾಟದ ಹಾಡುಗಳು, ರೂಪಕಗಳು ಇತ್ಯಾದಿ.
• ಮಧ್ಯರಾತ್ರಿ 11.30ರಿಂದ 12: ಮುಖ್ಯ ಅತಿಥಿ ಚಂದ್ರಶೇಖರ ಆಜಾದ್ ‘ರಾವಣ’ರಿಂದ ಸಂಘರ್ಷದ ಸಂದೇಶ.
• ನಡುರಾತ್ರಿ 12.05ಕ್ಕೆ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರಿಂದ ಧ್ವಜಾರೋಹಣ ಹಾಗೂ ನಿಜ ಸ್ವಾತಂತ್ರ್ಯದ ಕರೆ
• ಆಗಸ್ಟ್ 15ರ ಮುಂಜಾನೆ 9 ಗಂಟೆಗೆ ಹಕ್ಕಿಗಾಗಿ ನಮ್ಮ ಹೆಜ್ಜೆ – ಬನಪ್ಪ ಪಾರ್ಕಿನಿಂದ ಪೆರೇಡ್ ಗ್ರೌಂಡ್ ಕಡೆಗೆ.

ಈ ಕುರಿತು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿಯ ನೂರ್ ಶ್ರೀಧರ್ ರವರು “ಬಡಜನರು ಸರ್ಕಾರಿ/ಖಾಸಗಿ ಜಾಗಗಳಲ್ಲಿ ಕಟ್ಟಿಕೊಂಡಿರುವ ಮನೆಗಳನ್ನು/ಗುಡಿಸಲುಗಳನ್ನು 94ಸಿ/94ಸಿಸಿ ಯೋಜನೆಯಡಿ ಸಕ್ರಮಗೊಳಿಸಿ ಹಕ್ಕುಪತ್ರಗಳನ್ನೂ ನೀಡುತ್ತಿಲ್ಲ. ಬದಲಿಗೆ ಜನರನ್ನು ಒಕ್ಕಲೆಬ್ಬಿಸುವ ಕಿರುಕುಳ ಮಾತ್ರ ಎಲ್ಲಾ ಕಡೆ ಆರಂಭವಾಗಿದೆ. ವಿಶೇಷವಾಗಿ ಅರಣ್ಯ ಇಲಾಖೆಯಂತೂ ಸಾವಿರಾರು ಎಕರೆ ಭೂಮಿ ಕಬಳಿಸಿರುವ ಬಲಾಢ್ಯರನ್ನು ಬಿಟ್ಟು, ಬದುಕಿಗೆ ಗೂಡು ಕಟ್ಟಿಕೊಂಡಿರುವ ಬಡವರ ಮೇಲೆ ಅಕ್ಷರಶಃ ‘ಬುಲ್‍ಡೋಜರ್ ಯುದ್ಧ’ ಸಾರಿದೆ! ಅದಕ್ಕಾಗಿ ಹೋರಾಟ ಅನಿವಾರ್ಯವಾಗಿದೆ” ಎಂದಿದ್ದಾರೆ.

“ಆತ್ಮಗಳನ್ನು ಮಾರಿಕೊಂಡಿರುವ” ಆಳುವವರನ್ನು, ಅವರ ಸರ್ಕಾರಗಳನ್ನು ಮತ್ತೊಮ್ಮೆ ಕಾರ್ಯಪ್ರವೃತ್ತರಾಗುವಂತೆ ಮಾಡುವುದಕ್ಕೋಸ್ಕರ, ಹಾಗೂ, ಆಳುವವರ ನಿಷ್ಕಾಳಜಿ, ನಿಷ್ಕ್ರಿಯತೆಗೆ ಛೀಮಾರಿ ಹಾಕಿ, ‘ಇದು ಸೋತು ಸುಮ್ಮನಾಗುವ ಚಳವಳಿಯಲ್ಲ’ ಎಂಬ ಸಂದೇಶವನ್ನು ಅವರಿಗೆ ರವಾನಿಸುವ ಹಾಗೂ ಹೋರಾಟವನ್ನು ಬಿಗಿ ಮತ್ತು ಬಿರುಸುಗೊಳಿಸುವ ಸಂಕಲ್ಪ ತೊಡುವ ಸಂದರ್ಭವಾಗಿ ಈ ಬಾರಿಯ ಸ್ವಾತಂತ್ರ್ಯ ದಿನವನ್ನು ಬಡಜನರ “ನಡುರಾತ್ರಿ ಸ್ವಾತಂತ್ರ್ಯೋತ್ಸವ”ವನ್ನಾಗಿ ಸಂಘಟಿಸಲಾಗುತ್ತಿದೆ ಎಂದು ನೂರ್ ಶ್ರೀಧರ್ ತಿಳಿಸಿದ್ದಾರೆ.

ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ ಮಾತನಾಡಿ “72 ವರ್ಷಗಳ ಹಿಂದೆ ದೇಶದ ಸ್ವಾತಂತ್ರ್ಯದ ಸಂಕೇತವಾಗಿ ರಾಷ್ಟ್ರಧ್ವಜಾರೋಹಣ ಮಾಡಿದ್ದ ಸ್ವಾತಂತ್ರ್ಯ ಸೇನಾನಿ ಶತಾಯುಷಿ ದೊರೆಸ್ವಾಮಿಯವರೇ ಈ ದಿನ ಬಡವರ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನೂ ನೆರವೇರಿಸುತ್ತಾರೆ ಮತ್ತು ಬಡವರ ನೈಜ ಸ್ವಾತಂತ್ರ್ಯಕ್ಕಾಗಿನ ಮತ್ತೊಂದು ಸೋಲೊಪ್ಪದ ಸಂಗ್ರಾಮಕ್ಕೆ ಚಾಲನೆಯನ್ನೂ ನೀಡುತ್ತಾರೆ. ದಲಿತ-ದಮನಿತರ ಸಿಡಿಲ ದನಿ, ಉತ್ತರ ಪ್ರದೇಶದ ‘ಭೀಮ್ ಆರ್ಮಿ’ ಸಂಸ್ಥಾಪಕ ಚಂದ್ರಶೇಖರ ಆಝಾದ್ ‘ರಾವಣ’ ಈ ಸ್ವಾತಂತ್ರ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುತ್ತಾರೆ. ಈ ಅರ್ಥಪೂರ್ಣ ಸಂದರ್ಭಕ್ಕೆ ನಾಡಿನ ಸಹಸ್ರಾರು ಭೂಮಿ-ವಸತಿ ವಂಚಿತರ ಜೊತೆಯಲ್ಲಿ ನಾಡಿನೆಲ್ಲೆಡೆಯ ಹಿರಿಯ ಹೋರಾಟಗಾರರು, ಸಂಘಟನೆಗಳ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ ಎಂದರು.

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ವಿವಿಧ ಜನಪರ ಹೋರಾಟನಿರತ ಸಂಘಟನೆಗಳು ಒಟ್ಟುಗೂಡಿ ಮೂರು ವರ್ಷಗಳ ಹಿಂದೆ 2016ರಲ್ಲಿ [ಮಾಜಿ ಮುಖ್ಯಮಂತ್ರಿ ದೇವರಾಜ ಅರಸರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ] ‘ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ರೂಪ ತಾಳಿತು. ಈ ಸಮಿತಿಯ ನೇತೃತ್ವದಲ್ಲಿ ಸತತವಾಗಿ ನಡೆಸಿದ ಹೋರಾಟಗಳ ಫಲವಾಗಿ 2018ರ ಜನವರಿಯಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ, ಸಂಬಂಧಿತ ಇಲಾಖೆಗಳ ಮಂತ್ರಿಗಳ/ಪ್ರಧಾನ ಕಾರ್ಯದರ್ಶಿಗಳ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಾಗೂ ದೊರೆಸ್ವಾಮಿಯವರ ನೇತೃತ್ವದ ಹೋರಾಟಗಾರರ ನಿಯೋಗದ ಸಮ್ಮುಖದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಆ ಸಭೆಯಲ್ಲಿ ಚಳವಳಿ ಮುಂದಿಟ್ಟ ಎಲ್ಲಾ ಹಕ್ಕೊತ್ತಾಯಗಳನ್ನು ಸರ್ಕಾರ ಒಪ್ಪಿದ್ದಲ್ಲದೆ, ಸಮಸ್ಯೆಯ ತ್ವರಿತ ಪರಿಹಾರಕ್ಕಾಗಿ ಎಲ್ಲ ಸಂಬಂಧಿತ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಹೋರಾಟ ಸಮಿತಿಯ ಇಬ್ಬರು ಪ್ರತಿನಿಧಿಗಳನ್ನೊಳಗೊಂಡ “ಉನ್ನತ ಮಟ್ಟದ ಸಮಿತಿ”ಯನ್ನು ರಚಿಸಿತು. ಜೊತೆಗೆ, 2005ರವರೆಗೂ ಬಗರ್‍ಹುಕುಂ ಉಳುಮೆ ಮಾಡುತ್ತಿದ್ದವರೂ ಸಹ ಹೊಸದಾಗಿ ಭೂ ಮಂಜೂರಾತಿಗೆ ಫಾರಂ 57ರಡಿ ಅರ್ಜಿ ಸಲ್ಲಿಸುವ ಅವಕಾಶವನ್ನು ನೀಡಿ, ಕಾಯ್ದೆ ತಿದ್ದುಪಡಿಯನ್ನೂ ಮಾಡಿತು. ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಹಳೇ ಫಾರಂ 50-53ರ ಅರ್ಜಿಗಳೇ ವಿಲೇವಾರಿಯಾಗಿಲ್ಲ, ಹೊಸ ಅರ್ಜಿಗಳನ್ನು ಮುಟ್ಟಿಯೂ ಇಲ್ಲ, ಭೂ ಮಂಜೂರಾತಿ ಮಾಡುವ ಸಮಿತಿಗಳನ್ನೇ ಪುನರ್ರಚಿಸಿಲ್ಲ ಎಂದು ಸಮಿತಿಯು ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...