Homeಕರ್ನಾಟಕಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ಆಗಸ್ಟ್ 14-15 ಮಧ್ಯರಾತ್ರಿಯಿಂದಲೇ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ವಿಶಿಷ್ಟಿ ಹೋರಾಟ ನಡೆಯಲಿದೆ.

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ  ಆಗಸ್ಟ್ 14ರ ಸಂಜೆಯಿಂದ ಆಗಸ್ಟ್ 15ರ ಸಂಜೆವರೆಗೂ ಬಡವರಿಗೆ ಭೂಮಿ ಮತ್ತು ವಸತಿಗಾಗಿ ವಿಶಿಷ್ಟ ಆಂದೋಲನ ಬೆಂಗಳೂರಿನಲ್ಲಿ ನಡೆಯಲಿದೆ.

• ಆಗಸ್ಟ್ 14ರ ಸೂರ್ಯಾಸ್ತದೊಂದಿಗೆ ಹಣತೆಯ ಮೆರವಣಿಗೆ – ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಬನಪ್ಪ ಪಾರ್ಕಿಗೆ.
• ಆಗಸ್ಟ್ 14–15ರ ಇಡೀ ರಾತ್ರಿ ಪ್ರತಿರೋಧ ಕಾರ್ಯಕ್ರಮಗಳು – ಭಾಷಣಗಳು, ಹೋರಾಟದ ಹಾಡುಗಳು, ರೂಪಕಗಳು ಇತ್ಯಾದಿ.
• ಮಧ್ಯರಾತ್ರಿ 11.30ರಿಂದ 12: ಮುಖ್ಯ ಅತಿಥಿ ಚಂದ್ರಶೇಖರ ಆಜಾದ್ ‘ರಾವಣ’ರಿಂದ ಸಂಘರ್ಷದ ಸಂದೇಶ.
• ನಡುರಾತ್ರಿ 12.05ಕ್ಕೆ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರಿಂದ ಧ್ವಜಾರೋಹಣ ಹಾಗೂ ನಿಜ ಸ್ವಾತಂತ್ರ್ಯದ ಕರೆ
• ಆಗಸ್ಟ್ 15ರ ಮುಂಜಾನೆ 9 ಗಂಟೆಗೆ ಹಕ್ಕಿಗಾಗಿ ನಮ್ಮ ಹೆಜ್ಜೆ – ಬನಪ್ಪ ಪಾರ್ಕಿನಿಂದ ಪೆರೇಡ್ ಗ್ರೌಂಡ್ ಕಡೆಗೆ.

ಈ ಕುರಿತು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿಯ ನೂರ್ ಶ್ರೀಧರ್ ರವರು “ಬಡಜನರು ಸರ್ಕಾರಿ/ಖಾಸಗಿ ಜಾಗಗಳಲ್ಲಿ ಕಟ್ಟಿಕೊಂಡಿರುವ ಮನೆಗಳನ್ನು/ಗುಡಿಸಲುಗಳನ್ನು 94ಸಿ/94ಸಿಸಿ ಯೋಜನೆಯಡಿ ಸಕ್ರಮಗೊಳಿಸಿ ಹಕ್ಕುಪತ್ರಗಳನ್ನೂ ನೀಡುತ್ತಿಲ್ಲ. ಬದಲಿಗೆ ಜನರನ್ನು ಒಕ್ಕಲೆಬ್ಬಿಸುವ ಕಿರುಕುಳ ಮಾತ್ರ ಎಲ್ಲಾ ಕಡೆ ಆರಂಭವಾಗಿದೆ. ವಿಶೇಷವಾಗಿ ಅರಣ್ಯ ಇಲಾಖೆಯಂತೂ ಸಾವಿರಾರು ಎಕರೆ ಭೂಮಿ ಕಬಳಿಸಿರುವ ಬಲಾಢ್ಯರನ್ನು ಬಿಟ್ಟು, ಬದುಕಿಗೆ ಗೂಡು ಕಟ್ಟಿಕೊಂಡಿರುವ ಬಡವರ ಮೇಲೆ ಅಕ್ಷರಶಃ ‘ಬುಲ್‍ಡೋಜರ್ ಯುದ್ಧ’ ಸಾರಿದೆ! ಅದಕ್ಕಾಗಿ ಹೋರಾಟ ಅನಿವಾರ್ಯವಾಗಿದೆ” ಎಂದಿದ್ದಾರೆ.

“ಆತ್ಮಗಳನ್ನು ಮಾರಿಕೊಂಡಿರುವ” ಆಳುವವರನ್ನು, ಅವರ ಸರ್ಕಾರಗಳನ್ನು ಮತ್ತೊಮ್ಮೆ ಕಾರ್ಯಪ್ರವೃತ್ತರಾಗುವಂತೆ ಮಾಡುವುದಕ್ಕೋಸ್ಕರ, ಹಾಗೂ, ಆಳುವವರ ನಿಷ್ಕಾಳಜಿ, ನಿಷ್ಕ್ರಿಯತೆಗೆ ಛೀಮಾರಿ ಹಾಕಿ, ‘ಇದು ಸೋತು ಸುಮ್ಮನಾಗುವ ಚಳವಳಿಯಲ್ಲ’ ಎಂಬ ಸಂದೇಶವನ್ನು ಅವರಿಗೆ ರವಾನಿಸುವ ಹಾಗೂ ಹೋರಾಟವನ್ನು ಬಿಗಿ ಮತ್ತು ಬಿರುಸುಗೊಳಿಸುವ ಸಂಕಲ್ಪ ತೊಡುವ ಸಂದರ್ಭವಾಗಿ ಈ ಬಾರಿಯ ಸ್ವಾತಂತ್ರ್ಯ ದಿನವನ್ನು ಬಡಜನರ “ನಡುರಾತ್ರಿ ಸ್ವಾತಂತ್ರ್ಯೋತ್ಸವ”ವನ್ನಾಗಿ ಸಂಘಟಿಸಲಾಗುತ್ತಿದೆ ಎಂದು ನೂರ್ ಶ್ರೀಧರ್ ತಿಳಿಸಿದ್ದಾರೆ.

ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ ಮಾತನಾಡಿ “72 ವರ್ಷಗಳ ಹಿಂದೆ ದೇಶದ ಸ್ವಾತಂತ್ರ್ಯದ ಸಂಕೇತವಾಗಿ ರಾಷ್ಟ್ರಧ್ವಜಾರೋಹಣ ಮಾಡಿದ್ದ ಸ್ವಾತಂತ್ರ್ಯ ಸೇನಾನಿ ಶತಾಯುಷಿ ದೊರೆಸ್ವಾಮಿಯವರೇ ಈ ದಿನ ಬಡವರ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನೂ ನೆರವೇರಿಸುತ್ತಾರೆ ಮತ್ತು ಬಡವರ ನೈಜ ಸ್ವಾತಂತ್ರ್ಯಕ್ಕಾಗಿನ ಮತ್ತೊಂದು ಸೋಲೊಪ್ಪದ ಸಂಗ್ರಾಮಕ್ಕೆ ಚಾಲನೆಯನ್ನೂ ನೀಡುತ್ತಾರೆ. ದಲಿತ-ದಮನಿತರ ಸಿಡಿಲ ದನಿ, ಉತ್ತರ ಪ್ರದೇಶದ ‘ಭೀಮ್ ಆರ್ಮಿ’ ಸಂಸ್ಥಾಪಕ ಚಂದ್ರಶೇಖರ ಆಝಾದ್ ‘ರಾವಣ’ ಈ ಸ್ವಾತಂತ್ರ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುತ್ತಾರೆ. ಈ ಅರ್ಥಪೂರ್ಣ ಸಂದರ್ಭಕ್ಕೆ ನಾಡಿನ ಸಹಸ್ರಾರು ಭೂಮಿ-ವಸತಿ ವಂಚಿತರ ಜೊತೆಯಲ್ಲಿ ನಾಡಿನೆಲ್ಲೆಡೆಯ ಹಿರಿಯ ಹೋರಾಟಗಾರರು, ಸಂಘಟನೆಗಳ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ ಎಂದರು.

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ವಿವಿಧ ಜನಪರ ಹೋರಾಟನಿರತ ಸಂಘಟನೆಗಳು ಒಟ್ಟುಗೂಡಿ ಮೂರು ವರ್ಷಗಳ ಹಿಂದೆ 2016ರಲ್ಲಿ [ಮಾಜಿ ಮುಖ್ಯಮಂತ್ರಿ ದೇವರಾಜ ಅರಸರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ] ‘ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ರೂಪ ತಾಳಿತು. ಈ ಸಮಿತಿಯ ನೇತೃತ್ವದಲ್ಲಿ ಸತತವಾಗಿ ನಡೆಸಿದ ಹೋರಾಟಗಳ ಫಲವಾಗಿ 2018ರ ಜನವರಿಯಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ, ಸಂಬಂಧಿತ ಇಲಾಖೆಗಳ ಮಂತ್ರಿಗಳ/ಪ್ರಧಾನ ಕಾರ್ಯದರ್ಶಿಗಳ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಾಗೂ ದೊರೆಸ್ವಾಮಿಯವರ ನೇತೃತ್ವದ ಹೋರಾಟಗಾರರ ನಿಯೋಗದ ಸಮ್ಮುಖದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಆ ಸಭೆಯಲ್ಲಿ ಚಳವಳಿ ಮುಂದಿಟ್ಟ ಎಲ್ಲಾ ಹಕ್ಕೊತ್ತಾಯಗಳನ್ನು ಸರ್ಕಾರ ಒಪ್ಪಿದ್ದಲ್ಲದೆ, ಸಮಸ್ಯೆಯ ತ್ವರಿತ ಪರಿಹಾರಕ್ಕಾಗಿ ಎಲ್ಲ ಸಂಬಂಧಿತ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಹೋರಾಟ ಸಮಿತಿಯ ಇಬ್ಬರು ಪ್ರತಿನಿಧಿಗಳನ್ನೊಳಗೊಂಡ “ಉನ್ನತ ಮಟ್ಟದ ಸಮಿತಿ”ಯನ್ನು ರಚಿಸಿತು. ಜೊತೆಗೆ, 2005ರವರೆಗೂ ಬಗರ್‍ಹುಕುಂ ಉಳುಮೆ ಮಾಡುತ್ತಿದ್ದವರೂ ಸಹ ಹೊಸದಾಗಿ ಭೂ ಮಂಜೂರಾತಿಗೆ ಫಾರಂ 57ರಡಿ ಅರ್ಜಿ ಸಲ್ಲಿಸುವ ಅವಕಾಶವನ್ನು ನೀಡಿ, ಕಾಯ್ದೆ ತಿದ್ದುಪಡಿಯನ್ನೂ ಮಾಡಿತು. ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಹಳೇ ಫಾರಂ 50-53ರ ಅರ್ಜಿಗಳೇ ವಿಲೇವಾರಿಯಾಗಿಲ್ಲ, ಹೊಸ ಅರ್ಜಿಗಳನ್ನು ಮುಟ್ಟಿಯೂ ಇಲ್ಲ, ಭೂ ಮಂಜೂರಾತಿ ಮಾಡುವ ಸಮಿತಿಗಳನ್ನೇ ಪುನರ್ರಚಿಸಿಲ್ಲ ಎಂದು ಸಮಿತಿಯು ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...