Homeಕರ್ನಾಟಕಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ಆಗಸ್ಟ್ 14-15 ಮಧ್ಯರಾತ್ರಿಯಿಂದಲೇ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ವಿಶಿಷ್ಟಿ ಹೋರಾಟ ನಡೆಯಲಿದೆ.

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ  ಆಗಸ್ಟ್ 14ರ ಸಂಜೆಯಿಂದ ಆಗಸ್ಟ್ 15ರ ಸಂಜೆವರೆಗೂ ಬಡವರಿಗೆ ಭೂಮಿ ಮತ್ತು ವಸತಿಗಾಗಿ ವಿಶಿಷ್ಟ ಆಂದೋಲನ ಬೆಂಗಳೂರಿನಲ್ಲಿ ನಡೆಯಲಿದೆ.

• ಆಗಸ್ಟ್ 14ರ ಸೂರ್ಯಾಸ್ತದೊಂದಿಗೆ ಹಣತೆಯ ಮೆರವಣಿಗೆ – ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಬನಪ್ಪ ಪಾರ್ಕಿಗೆ.
• ಆಗಸ್ಟ್ 14–15ರ ಇಡೀ ರಾತ್ರಿ ಪ್ರತಿರೋಧ ಕಾರ್ಯಕ್ರಮಗಳು – ಭಾಷಣಗಳು, ಹೋರಾಟದ ಹಾಡುಗಳು, ರೂಪಕಗಳು ಇತ್ಯಾದಿ.
• ಮಧ್ಯರಾತ್ರಿ 11.30ರಿಂದ 12: ಮುಖ್ಯ ಅತಿಥಿ ಚಂದ್ರಶೇಖರ ಆಜಾದ್ ‘ರಾವಣ’ರಿಂದ ಸಂಘರ್ಷದ ಸಂದೇಶ.
• ನಡುರಾತ್ರಿ 12.05ಕ್ಕೆ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರಿಂದ ಧ್ವಜಾರೋಹಣ ಹಾಗೂ ನಿಜ ಸ್ವಾತಂತ್ರ್ಯದ ಕರೆ
• ಆಗಸ್ಟ್ 15ರ ಮುಂಜಾನೆ 9 ಗಂಟೆಗೆ ಹಕ್ಕಿಗಾಗಿ ನಮ್ಮ ಹೆಜ್ಜೆ – ಬನಪ್ಪ ಪಾರ್ಕಿನಿಂದ ಪೆರೇಡ್ ಗ್ರೌಂಡ್ ಕಡೆಗೆ.

ಈ ಕುರಿತು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿಯ ನೂರ್ ಶ್ರೀಧರ್ ರವರು “ಬಡಜನರು ಸರ್ಕಾರಿ/ಖಾಸಗಿ ಜಾಗಗಳಲ್ಲಿ ಕಟ್ಟಿಕೊಂಡಿರುವ ಮನೆಗಳನ್ನು/ಗುಡಿಸಲುಗಳನ್ನು 94ಸಿ/94ಸಿಸಿ ಯೋಜನೆಯಡಿ ಸಕ್ರಮಗೊಳಿಸಿ ಹಕ್ಕುಪತ್ರಗಳನ್ನೂ ನೀಡುತ್ತಿಲ್ಲ. ಬದಲಿಗೆ ಜನರನ್ನು ಒಕ್ಕಲೆಬ್ಬಿಸುವ ಕಿರುಕುಳ ಮಾತ್ರ ಎಲ್ಲಾ ಕಡೆ ಆರಂಭವಾಗಿದೆ. ವಿಶೇಷವಾಗಿ ಅರಣ್ಯ ಇಲಾಖೆಯಂತೂ ಸಾವಿರಾರು ಎಕರೆ ಭೂಮಿ ಕಬಳಿಸಿರುವ ಬಲಾಢ್ಯರನ್ನು ಬಿಟ್ಟು, ಬದುಕಿಗೆ ಗೂಡು ಕಟ್ಟಿಕೊಂಡಿರುವ ಬಡವರ ಮೇಲೆ ಅಕ್ಷರಶಃ ‘ಬುಲ್‍ಡೋಜರ್ ಯುದ್ಧ’ ಸಾರಿದೆ! ಅದಕ್ಕಾಗಿ ಹೋರಾಟ ಅನಿವಾರ್ಯವಾಗಿದೆ” ಎಂದಿದ್ದಾರೆ.

“ಆತ್ಮಗಳನ್ನು ಮಾರಿಕೊಂಡಿರುವ” ಆಳುವವರನ್ನು, ಅವರ ಸರ್ಕಾರಗಳನ್ನು ಮತ್ತೊಮ್ಮೆ ಕಾರ್ಯಪ್ರವೃತ್ತರಾಗುವಂತೆ ಮಾಡುವುದಕ್ಕೋಸ್ಕರ, ಹಾಗೂ, ಆಳುವವರ ನಿಷ್ಕಾಳಜಿ, ನಿಷ್ಕ್ರಿಯತೆಗೆ ಛೀಮಾರಿ ಹಾಕಿ, ‘ಇದು ಸೋತು ಸುಮ್ಮನಾಗುವ ಚಳವಳಿಯಲ್ಲ’ ಎಂಬ ಸಂದೇಶವನ್ನು ಅವರಿಗೆ ರವಾನಿಸುವ ಹಾಗೂ ಹೋರಾಟವನ್ನು ಬಿಗಿ ಮತ್ತು ಬಿರುಸುಗೊಳಿಸುವ ಸಂಕಲ್ಪ ತೊಡುವ ಸಂದರ್ಭವಾಗಿ ಈ ಬಾರಿಯ ಸ್ವಾತಂತ್ರ್ಯ ದಿನವನ್ನು ಬಡಜನರ “ನಡುರಾತ್ರಿ ಸ್ವಾತಂತ್ರ್ಯೋತ್ಸವ”ವನ್ನಾಗಿ ಸಂಘಟಿಸಲಾಗುತ್ತಿದೆ ಎಂದು ನೂರ್ ಶ್ರೀಧರ್ ತಿಳಿಸಿದ್ದಾರೆ.

ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ ಮಾತನಾಡಿ “72 ವರ್ಷಗಳ ಹಿಂದೆ ದೇಶದ ಸ್ವಾತಂತ್ರ್ಯದ ಸಂಕೇತವಾಗಿ ರಾಷ್ಟ್ರಧ್ವಜಾರೋಹಣ ಮಾಡಿದ್ದ ಸ್ವಾತಂತ್ರ್ಯ ಸೇನಾನಿ ಶತಾಯುಷಿ ದೊರೆಸ್ವಾಮಿಯವರೇ ಈ ದಿನ ಬಡವರ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನೂ ನೆರವೇರಿಸುತ್ತಾರೆ ಮತ್ತು ಬಡವರ ನೈಜ ಸ್ವಾತಂತ್ರ್ಯಕ್ಕಾಗಿನ ಮತ್ತೊಂದು ಸೋಲೊಪ್ಪದ ಸಂಗ್ರಾಮಕ್ಕೆ ಚಾಲನೆಯನ್ನೂ ನೀಡುತ್ತಾರೆ. ದಲಿತ-ದಮನಿತರ ಸಿಡಿಲ ದನಿ, ಉತ್ತರ ಪ್ರದೇಶದ ‘ಭೀಮ್ ಆರ್ಮಿ’ ಸಂಸ್ಥಾಪಕ ಚಂದ್ರಶೇಖರ ಆಝಾದ್ ‘ರಾವಣ’ ಈ ಸ್ವಾತಂತ್ರ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುತ್ತಾರೆ. ಈ ಅರ್ಥಪೂರ್ಣ ಸಂದರ್ಭಕ್ಕೆ ನಾಡಿನ ಸಹಸ್ರಾರು ಭೂಮಿ-ವಸತಿ ವಂಚಿತರ ಜೊತೆಯಲ್ಲಿ ನಾಡಿನೆಲ್ಲೆಡೆಯ ಹಿರಿಯ ಹೋರಾಟಗಾರರು, ಸಂಘಟನೆಗಳ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ ಎಂದರು.

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ವಿವಿಧ ಜನಪರ ಹೋರಾಟನಿರತ ಸಂಘಟನೆಗಳು ಒಟ್ಟುಗೂಡಿ ಮೂರು ವರ್ಷಗಳ ಹಿಂದೆ 2016ರಲ್ಲಿ [ಮಾಜಿ ಮುಖ್ಯಮಂತ್ರಿ ದೇವರಾಜ ಅರಸರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ] ‘ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ರೂಪ ತಾಳಿತು. ಈ ಸಮಿತಿಯ ನೇತೃತ್ವದಲ್ಲಿ ಸತತವಾಗಿ ನಡೆಸಿದ ಹೋರಾಟಗಳ ಫಲವಾಗಿ 2018ರ ಜನವರಿಯಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ, ಸಂಬಂಧಿತ ಇಲಾಖೆಗಳ ಮಂತ್ರಿಗಳ/ಪ್ರಧಾನ ಕಾರ್ಯದರ್ಶಿಗಳ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಾಗೂ ದೊರೆಸ್ವಾಮಿಯವರ ನೇತೃತ್ವದ ಹೋರಾಟಗಾರರ ನಿಯೋಗದ ಸಮ್ಮುಖದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಆ ಸಭೆಯಲ್ಲಿ ಚಳವಳಿ ಮುಂದಿಟ್ಟ ಎಲ್ಲಾ ಹಕ್ಕೊತ್ತಾಯಗಳನ್ನು ಸರ್ಕಾರ ಒಪ್ಪಿದ್ದಲ್ಲದೆ, ಸಮಸ್ಯೆಯ ತ್ವರಿತ ಪರಿಹಾರಕ್ಕಾಗಿ ಎಲ್ಲ ಸಂಬಂಧಿತ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಹೋರಾಟ ಸಮಿತಿಯ ಇಬ್ಬರು ಪ್ರತಿನಿಧಿಗಳನ್ನೊಳಗೊಂಡ “ಉನ್ನತ ಮಟ್ಟದ ಸಮಿತಿ”ಯನ್ನು ರಚಿಸಿತು. ಜೊತೆಗೆ, 2005ರವರೆಗೂ ಬಗರ್‍ಹುಕುಂ ಉಳುಮೆ ಮಾಡುತ್ತಿದ್ದವರೂ ಸಹ ಹೊಸದಾಗಿ ಭೂ ಮಂಜೂರಾತಿಗೆ ಫಾರಂ 57ರಡಿ ಅರ್ಜಿ ಸಲ್ಲಿಸುವ ಅವಕಾಶವನ್ನು ನೀಡಿ, ಕಾಯ್ದೆ ತಿದ್ದುಪಡಿಯನ್ನೂ ಮಾಡಿತು. ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಹಳೇ ಫಾರಂ 50-53ರ ಅರ್ಜಿಗಳೇ ವಿಲೇವಾರಿಯಾಗಿಲ್ಲ, ಹೊಸ ಅರ್ಜಿಗಳನ್ನು ಮುಟ್ಟಿಯೂ ಇಲ್ಲ, ಭೂ ಮಂಜೂರಾತಿ ಮಾಡುವ ಸಮಿತಿಗಳನ್ನೇ ಪುನರ್ರಚಿಸಿಲ್ಲ ಎಂದು ಸಮಿತಿಯು ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...