Homeಕರ್ನಾಟಕಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ಆಗಸ್ಟ್ 14-15 ಮಧ್ಯರಾತ್ರಿಯಿಂದಲೇ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ವಿಶಿಷ್ಟಿ ಹೋರಾಟ ನಡೆಯಲಿದೆ.

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ  ಆಗಸ್ಟ್ 14ರ ಸಂಜೆಯಿಂದ ಆಗಸ್ಟ್ 15ರ ಸಂಜೆವರೆಗೂ ಬಡವರಿಗೆ ಭೂಮಿ ಮತ್ತು ವಸತಿಗಾಗಿ ವಿಶಿಷ್ಟ ಆಂದೋಲನ ಬೆಂಗಳೂರಿನಲ್ಲಿ ನಡೆಯಲಿದೆ.

• ಆಗಸ್ಟ್ 14ರ ಸೂರ್ಯಾಸ್ತದೊಂದಿಗೆ ಹಣತೆಯ ಮೆರವಣಿಗೆ – ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಬನಪ್ಪ ಪಾರ್ಕಿಗೆ.
• ಆಗಸ್ಟ್ 14–15ರ ಇಡೀ ರಾತ್ರಿ ಪ್ರತಿರೋಧ ಕಾರ್ಯಕ್ರಮಗಳು – ಭಾಷಣಗಳು, ಹೋರಾಟದ ಹಾಡುಗಳು, ರೂಪಕಗಳು ಇತ್ಯಾದಿ.
• ಮಧ್ಯರಾತ್ರಿ 11.30ರಿಂದ 12: ಮುಖ್ಯ ಅತಿಥಿ ಚಂದ್ರಶೇಖರ ಆಜಾದ್ ‘ರಾವಣ’ರಿಂದ ಸಂಘರ್ಷದ ಸಂದೇಶ.
• ನಡುರಾತ್ರಿ 12.05ಕ್ಕೆ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರಿಂದ ಧ್ವಜಾರೋಹಣ ಹಾಗೂ ನಿಜ ಸ್ವಾತಂತ್ರ್ಯದ ಕರೆ
• ಆಗಸ್ಟ್ 15ರ ಮುಂಜಾನೆ 9 ಗಂಟೆಗೆ ಹಕ್ಕಿಗಾಗಿ ನಮ್ಮ ಹೆಜ್ಜೆ – ಬನಪ್ಪ ಪಾರ್ಕಿನಿಂದ ಪೆರೇಡ್ ಗ್ರೌಂಡ್ ಕಡೆಗೆ.

ಈ ಕುರಿತು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿಯ ನೂರ್ ಶ್ರೀಧರ್ ರವರು “ಬಡಜನರು ಸರ್ಕಾರಿ/ಖಾಸಗಿ ಜಾಗಗಳಲ್ಲಿ ಕಟ್ಟಿಕೊಂಡಿರುವ ಮನೆಗಳನ್ನು/ಗುಡಿಸಲುಗಳನ್ನು 94ಸಿ/94ಸಿಸಿ ಯೋಜನೆಯಡಿ ಸಕ್ರಮಗೊಳಿಸಿ ಹಕ್ಕುಪತ್ರಗಳನ್ನೂ ನೀಡುತ್ತಿಲ್ಲ. ಬದಲಿಗೆ ಜನರನ್ನು ಒಕ್ಕಲೆಬ್ಬಿಸುವ ಕಿರುಕುಳ ಮಾತ್ರ ಎಲ್ಲಾ ಕಡೆ ಆರಂಭವಾಗಿದೆ. ವಿಶೇಷವಾಗಿ ಅರಣ್ಯ ಇಲಾಖೆಯಂತೂ ಸಾವಿರಾರು ಎಕರೆ ಭೂಮಿ ಕಬಳಿಸಿರುವ ಬಲಾಢ್ಯರನ್ನು ಬಿಟ್ಟು, ಬದುಕಿಗೆ ಗೂಡು ಕಟ್ಟಿಕೊಂಡಿರುವ ಬಡವರ ಮೇಲೆ ಅಕ್ಷರಶಃ ‘ಬುಲ್‍ಡೋಜರ್ ಯುದ್ಧ’ ಸಾರಿದೆ! ಅದಕ್ಕಾಗಿ ಹೋರಾಟ ಅನಿವಾರ್ಯವಾಗಿದೆ” ಎಂದಿದ್ದಾರೆ.

“ಆತ್ಮಗಳನ್ನು ಮಾರಿಕೊಂಡಿರುವ” ಆಳುವವರನ್ನು, ಅವರ ಸರ್ಕಾರಗಳನ್ನು ಮತ್ತೊಮ್ಮೆ ಕಾರ್ಯಪ್ರವೃತ್ತರಾಗುವಂತೆ ಮಾಡುವುದಕ್ಕೋಸ್ಕರ, ಹಾಗೂ, ಆಳುವವರ ನಿಷ್ಕಾಳಜಿ, ನಿಷ್ಕ್ರಿಯತೆಗೆ ಛೀಮಾರಿ ಹಾಕಿ, ‘ಇದು ಸೋತು ಸುಮ್ಮನಾಗುವ ಚಳವಳಿಯಲ್ಲ’ ಎಂಬ ಸಂದೇಶವನ್ನು ಅವರಿಗೆ ರವಾನಿಸುವ ಹಾಗೂ ಹೋರಾಟವನ್ನು ಬಿಗಿ ಮತ್ತು ಬಿರುಸುಗೊಳಿಸುವ ಸಂಕಲ್ಪ ತೊಡುವ ಸಂದರ್ಭವಾಗಿ ಈ ಬಾರಿಯ ಸ್ವಾತಂತ್ರ್ಯ ದಿನವನ್ನು ಬಡಜನರ “ನಡುರಾತ್ರಿ ಸ್ವಾತಂತ್ರ್ಯೋತ್ಸವ”ವನ್ನಾಗಿ ಸಂಘಟಿಸಲಾಗುತ್ತಿದೆ ಎಂದು ನೂರ್ ಶ್ರೀಧರ್ ತಿಳಿಸಿದ್ದಾರೆ.

ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ ಮಾತನಾಡಿ “72 ವರ್ಷಗಳ ಹಿಂದೆ ದೇಶದ ಸ್ವಾತಂತ್ರ್ಯದ ಸಂಕೇತವಾಗಿ ರಾಷ್ಟ್ರಧ್ವಜಾರೋಹಣ ಮಾಡಿದ್ದ ಸ್ವಾತಂತ್ರ್ಯ ಸೇನಾನಿ ಶತಾಯುಷಿ ದೊರೆಸ್ವಾಮಿಯವರೇ ಈ ದಿನ ಬಡವರ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನೂ ನೆರವೇರಿಸುತ್ತಾರೆ ಮತ್ತು ಬಡವರ ನೈಜ ಸ್ವಾತಂತ್ರ್ಯಕ್ಕಾಗಿನ ಮತ್ತೊಂದು ಸೋಲೊಪ್ಪದ ಸಂಗ್ರಾಮಕ್ಕೆ ಚಾಲನೆಯನ್ನೂ ನೀಡುತ್ತಾರೆ. ದಲಿತ-ದಮನಿತರ ಸಿಡಿಲ ದನಿ, ಉತ್ತರ ಪ್ರದೇಶದ ‘ಭೀಮ್ ಆರ್ಮಿ’ ಸಂಸ್ಥಾಪಕ ಚಂದ್ರಶೇಖರ ಆಝಾದ್ ‘ರಾವಣ’ ಈ ಸ್ವಾತಂತ್ರ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುತ್ತಾರೆ. ಈ ಅರ್ಥಪೂರ್ಣ ಸಂದರ್ಭಕ್ಕೆ ನಾಡಿನ ಸಹಸ್ರಾರು ಭೂಮಿ-ವಸತಿ ವಂಚಿತರ ಜೊತೆಯಲ್ಲಿ ನಾಡಿನೆಲ್ಲೆಡೆಯ ಹಿರಿಯ ಹೋರಾಟಗಾರರು, ಸಂಘಟನೆಗಳ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ ಎಂದರು.

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ವಿವಿಧ ಜನಪರ ಹೋರಾಟನಿರತ ಸಂಘಟನೆಗಳು ಒಟ್ಟುಗೂಡಿ ಮೂರು ವರ್ಷಗಳ ಹಿಂದೆ 2016ರಲ್ಲಿ [ಮಾಜಿ ಮುಖ್ಯಮಂತ್ರಿ ದೇವರಾಜ ಅರಸರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ] ‘ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ರೂಪ ತಾಳಿತು. ಈ ಸಮಿತಿಯ ನೇತೃತ್ವದಲ್ಲಿ ಸತತವಾಗಿ ನಡೆಸಿದ ಹೋರಾಟಗಳ ಫಲವಾಗಿ 2018ರ ಜನವರಿಯಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ, ಸಂಬಂಧಿತ ಇಲಾಖೆಗಳ ಮಂತ್ರಿಗಳ/ಪ್ರಧಾನ ಕಾರ್ಯದರ್ಶಿಗಳ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಾಗೂ ದೊರೆಸ್ವಾಮಿಯವರ ನೇತೃತ್ವದ ಹೋರಾಟಗಾರರ ನಿಯೋಗದ ಸಮ್ಮುಖದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಆ ಸಭೆಯಲ್ಲಿ ಚಳವಳಿ ಮುಂದಿಟ್ಟ ಎಲ್ಲಾ ಹಕ್ಕೊತ್ತಾಯಗಳನ್ನು ಸರ್ಕಾರ ಒಪ್ಪಿದ್ದಲ್ಲದೆ, ಸಮಸ್ಯೆಯ ತ್ವರಿತ ಪರಿಹಾರಕ್ಕಾಗಿ ಎಲ್ಲ ಸಂಬಂಧಿತ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಹೋರಾಟ ಸಮಿತಿಯ ಇಬ್ಬರು ಪ್ರತಿನಿಧಿಗಳನ್ನೊಳಗೊಂಡ “ಉನ್ನತ ಮಟ್ಟದ ಸಮಿತಿ”ಯನ್ನು ರಚಿಸಿತು. ಜೊತೆಗೆ, 2005ರವರೆಗೂ ಬಗರ್‍ಹುಕುಂ ಉಳುಮೆ ಮಾಡುತ್ತಿದ್ದವರೂ ಸಹ ಹೊಸದಾಗಿ ಭೂ ಮಂಜೂರಾತಿಗೆ ಫಾರಂ 57ರಡಿ ಅರ್ಜಿ ಸಲ್ಲಿಸುವ ಅವಕಾಶವನ್ನು ನೀಡಿ, ಕಾಯ್ದೆ ತಿದ್ದುಪಡಿಯನ್ನೂ ಮಾಡಿತು. ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಹಳೇ ಫಾರಂ 50-53ರ ಅರ್ಜಿಗಳೇ ವಿಲೇವಾರಿಯಾಗಿಲ್ಲ, ಹೊಸ ಅರ್ಜಿಗಳನ್ನು ಮುಟ್ಟಿಯೂ ಇಲ್ಲ, ಭೂ ಮಂಜೂರಾತಿ ಮಾಡುವ ಸಮಿತಿಗಳನ್ನೇ ಪುನರ್ರಚಿಸಿಲ್ಲ ಎಂದು ಸಮಿತಿಯು ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...