Homeಕರ್ನಾಟಕಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ಆಗಸ್ಟ್ 14ರಂದು ಬೆಂಗಳೂರಿಗೆ ಚಂದ್ರಶೇಖರ್ ರಾವಣ್ ಅಜಾದ್: ದೊರೆಸ್ವಾಮಿಯವರ ಜೊತೆಗೂಡಿ ಭೂಮಿ, ವಸತಿಗಾಗಿ ಹೋರಾಟ

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ಆಗಸ್ಟ್ 14-15 ಮಧ್ಯರಾತ್ರಿಯಿಂದಲೇ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ ವಿಶಿಷ್ಟಿ ಹೋರಾಟ ನಡೆಯಲಿದೆ.

- Advertisement -
- Advertisement -

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ವತಿಯಿಂದ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿಯವರ ನೇತೃತ್ವದಲ್ಲಿ  ಆಗಸ್ಟ್ 14ರ ಸಂಜೆಯಿಂದ ಆಗಸ್ಟ್ 15ರ ಸಂಜೆವರೆಗೂ ಬಡವರಿಗೆ ಭೂಮಿ ಮತ್ತು ವಸತಿಗಾಗಿ ವಿಶಿಷ್ಟ ಆಂದೋಲನ ಬೆಂಗಳೂರಿನಲ್ಲಿ ನಡೆಯಲಿದೆ.

• ಆಗಸ್ಟ್ 14ರ ಸೂರ್ಯಾಸ್ತದೊಂದಿಗೆ ಹಣತೆಯ ಮೆರವಣಿಗೆ – ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಬನಪ್ಪ ಪಾರ್ಕಿಗೆ.
• ಆಗಸ್ಟ್ 14–15ರ ಇಡೀ ರಾತ್ರಿ ಪ್ರತಿರೋಧ ಕಾರ್ಯಕ್ರಮಗಳು – ಭಾಷಣಗಳು, ಹೋರಾಟದ ಹಾಡುಗಳು, ರೂಪಕಗಳು ಇತ್ಯಾದಿ.
• ಮಧ್ಯರಾತ್ರಿ 11.30ರಿಂದ 12: ಮುಖ್ಯ ಅತಿಥಿ ಚಂದ್ರಶೇಖರ ಆಜಾದ್ ‘ರಾವಣ’ರಿಂದ ಸಂಘರ್ಷದ ಸಂದೇಶ.
• ನಡುರಾತ್ರಿ 12.05ಕ್ಕೆ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರಿಂದ ಧ್ವಜಾರೋಹಣ ಹಾಗೂ ನಿಜ ಸ್ವಾತಂತ್ರ್ಯದ ಕರೆ
• ಆಗಸ್ಟ್ 15ರ ಮುಂಜಾನೆ 9 ಗಂಟೆಗೆ ಹಕ್ಕಿಗಾಗಿ ನಮ್ಮ ಹೆಜ್ಜೆ – ಬನಪ್ಪ ಪಾರ್ಕಿನಿಂದ ಪೆರೇಡ್ ಗ್ರೌಂಡ್ ಕಡೆಗೆ.

ಈ ಕುರಿತು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿಯ ನೂರ್ ಶ್ರೀಧರ್ ರವರು “ಬಡಜನರು ಸರ್ಕಾರಿ/ಖಾಸಗಿ ಜಾಗಗಳಲ್ಲಿ ಕಟ್ಟಿಕೊಂಡಿರುವ ಮನೆಗಳನ್ನು/ಗುಡಿಸಲುಗಳನ್ನು 94ಸಿ/94ಸಿಸಿ ಯೋಜನೆಯಡಿ ಸಕ್ರಮಗೊಳಿಸಿ ಹಕ್ಕುಪತ್ರಗಳನ್ನೂ ನೀಡುತ್ತಿಲ್ಲ. ಬದಲಿಗೆ ಜನರನ್ನು ಒಕ್ಕಲೆಬ್ಬಿಸುವ ಕಿರುಕುಳ ಮಾತ್ರ ಎಲ್ಲಾ ಕಡೆ ಆರಂಭವಾಗಿದೆ. ವಿಶೇಷವಾಗಿ ಅರಣ್ಯ ಇಲಾಖೆಯಂತೂ ಸಾವಿರಾರು ಎಕರೆ ಭೂಮಿ ಕಬಳಿಸಿರುವ ಬಲಾಢ್ಯರನ್ನು ಬಿಟ್ಟು, ಬದುಕಿಗೆ ಗೂಡು ಕಟ್ಟಿಕೊಂಡಿರುವ ಬಡವರ ಮೇಲೆ ಅಕ್ಷರಶಃ ‘ಬುಲ್‍ಡೋಜರ್ ಯುದ್ಧ’ ಸಾರಿದೆ! ಅದಕ್ಕಾಗಿ ಹೋರಾಟ ಅನಿವಾರ್ಯವಾಗಿದೆ” ಎಂದಿದ್ದಾರೆ.

“ಆತ್ಮಗಳನ್ನು ಮಾರಿಕೊಂಡಿರುವ” ಆಳುವವರನ್ನು, ಅವರ ಸರ್ಕಾರಗಳನ್ನು ಮತ್ತೊಮ್ಮೆ ಕಾರ್ಯಪ್ರವೃತ್ತರಾಗುವಂತೆ ಮಾಡುವುದಕ್ಕೋಸ್ಕರ, ಹಾಗೂ, ಆಳುವವರ ನಿಷ್ಕಾಳಜಿ, ನಿಷ್ಕ್ರಿಯತೆಗೆ ಛೀಮಾರಿ ಹಾಕಿ, ‘ಇದು ಸೋತು ಸುಮ್ಮನಾಗುವ ಚಳವಳಿಯಲ್ಲ’ ಎಂಬ ಸಂದೇಶವನ್ನು ಅವರಿಗೆ ರವಾನಿಸುವ ಹಾಗೂ ಹೋರಾಟವನ್ನು ಬಿಗಿ ಮತ್ತು ಬಿರುಸುಗೊಳಿಸುವ ಸಂಕಲ್ಪ ತೊಡುವ ಸಂದರ್ಭವಾಗಿ ಈ ಬಾರಿಯ ಸ್ವಾತಂತ್ರ್ಯ ದಿನವನ್ನು ಬಡಜನರ “ನಡುರಾತ್ರಿ ಸ್ವಾತಂತ್ರ್ಯೋತ್ಸವ”ವನ್ನಾಗಿ ಸಂಘಟಿಸಲಾಗುತ್ತಿದೆ ಎಂದು ನೂರ್ ಶ್ರೀಧರ್ ತಿಳಿಸಿದ್ದಾರೆ.

ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ ಮಾತನಾಡಿ “72 ವರ್ಷಗಳ ಹಿಂದೆ ದೇಶದ ಸ್ವಾತಂತ್ರ್ಯದ ಸಂಕೇತವಾಗಿ ರಾಷ್ಟ್ರಧ್ವಜಾರೋಹಣ ಮಾಡಿದ್ದ ಸ್ವಾತಂತ್ರ್ಯ ಸೇನಾನಿ ಶತಾಯುಷಿ ದೊರೆಸ್ವಾಮಿಯವರೇ ಈ ದಿನ ಬಡವರ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನೂ ನೆರವೇರಿಸುತ್ತಾರೆ ಮತ್ತು ಬಡವರ ನೈಜ ಸ್ವಾತಂತ್ರ್ಯಕ್ಕಾಗಿನ ಮತ್ತೊಂದು ಸೋಲೊಪ್ಪದ ಸಂಗ್ರಾಮಕ್ಕೆ ಚಾಲನೆಯನ್ನೂ ನೀಡುತ್ತಾರೆ. ದಲಿತ-ದಮನಿತರ ಸಿಡಿಲ ದನಿ, ಉತ್ತರ ಪ್ರದೇಶದ ‘ಭೀಮ್ ಆರ್ಮಿ’ ಸಂಸ್ಥಾಪಕ ಚಂದ್ರಶೇಖರ ಆಝಾದ್ ‘ರಾವಣ’ ಈ ಸ್ವಾತಂತ್ರ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುತ್ತಾರೆ. ಈ ಅರ್ಥಪೂರ್ಣ ಸಂದರ್ಭಕ್ಕೆ ನಾಡಿನ ಸಹಸ್ರಾರು ಭೂಮಿ-ವಸತಿ ವಂಚಿತರ ಜೊತೆಯಲ್ಲಿ ನಾಡಿನೆಲ್ಲೆಡೆಯ ಹಿರಿಯ ಹೋರಾಟಗಾರರು, ಸಂಘಟನೆಗಳ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ ಎಂದರು.

ದೇಶದ ಕಟ್ಟಕಡೆಯ ಪ್ರಜೆಗೆ ಘನತೆಯಿಂದ ಬದುಕಲೊಂದು ತುಂಡು ಭೂಮಿ, ಮಾನದಿಂದ ಬಾಳಲೊಂದು ಸೂರು – ಇಷ್ಟನ್ನಾದರೂ ದೊರಕಿಸಬೇಕೆಂಬ ಗುರಿಯೊಂದಿಗೆ ವಿವಿಧ ಜನಪರ ಹೋರಾಟನಿರತ ಸಂಘಟನೆಗಳು ಒಟ್ಟುಗೂಡಿ ಮೂರು ವರ್ಷಗಳ ಹಿಂದೆ 2016ರಲ್ಲಿ [ಮಾಜಿ ಮುಖ್ಯಮಂತ್ರಿ ದೇವರಾಜ ಅರಸರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ] ‘ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ರೂಪ ತಾಳಿತು. ಈ ಸಮಿತಿಯ ನೇತೃತ್ವದಲ್ಲಿ ಸತತವಾಗಿ ನಡೆಸಿದ ಹೋರಾಟಗಳ ಫಲವಾಗಿ 2018ರ ಜನವರಿಯಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ, ಸಂಬಂಧಿತ ಇಲಾಖೆಗಳ ಮಂತ್ರಿಗಳ/ಪ್ರಧಾನ ಕಾರ್ಯದರ್ಶಿಗಳ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಹಾಗೂ ದೊರೆಸ್ವಾಮಿಯವರ ನೇತೃತ್ವದ ಹೋರಾಟಗಾರರ ನಿಯೋಗದ ಸಮ್ಮುಖದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಆ ಸಭೆಯಲ್ಲಿ ಚಳವಳಿ ಮುಂದಿಟ್ಟ ಎಲ್ಲಾ ಹಕ್ಕೊತ್ತಾಯಗಳನ್ನು ಸರ್ಕಾರ ಒಪ್ಪಿದ್ದಲ್ಲದೆ, ಸಮಸ್ಯೆಯ ತ್ವರಿತ ಪರಿಹಾರಕ್ಕಾಗಿ ಎಲ್ಲ ಸಂಬಂಧಿತ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಹೋರಾಟ ಸಮಿತಿಯ ಇಬ್ಬರು ಪ್ರತಿನಿಧಿಗಳನ್ನೊಳಗೊಂಡ “ಉನ್ನತ ಮಟ್ಟದ ಸಮಿತಿ”ಯನ್ನು ರಚಿಸಿತು. ಜೊತೆಗೆ, 2005ರವರೆಗೂ ಬಗರ್‍ಹುಕುಂ ಉಳುಮೆ ಮಾಡುತ್ತಿದ್ದವರೂ ಸಹ ಹೊಸದಾಗಿ ಭೂ ಮಂಜೂರಾತಿಗೆ ಫಾರಂ 57ರಡಿ ಅರ್ಜಿ ಸಲ್ಲಿಸುವ ಅವಕಾಶವನ್ನು ನೀಡಿ, ಕಾಯ್ದೆ ತಿದ್ದುಪಡಿಯನ್ನೂ ಮಾಡಿತು. ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಹಳೇ ಫಾರಂ 50-53ರ ಅರ್ಜಿಗಳೇ ವಿಲೇವಾರಿಯಾಗಿಲ್ಲ, ಹೊಸ ಅರ್ಜಿಗಳನ್ನು ಮುಟ್ಟಿಯೂ ಇಲ್ಲ, ಭೂ ಮಂಜೂರಾತಿ ಮಾಡುವ ಸಮಿತಿಗಳನ್ನೇ ಪುನರ್ರಚಿಸಿಲ್ಲ ಎಂದು ಸಮಿತಿಯು ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...