Homeಕರ್ನಾಟಕಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ

ಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ

ಸರ್ಕಾರವು ಪರೀಕ್ಷೆ ನಡೆಸುವ ನಿರ್ಧಾರವನ್ನು ಕೈಬಿಟ್ಟು ಮಕ್ಕಳ –ಪಾಲಕರ-ಇಲಾಖೆಯ ಅಧಿಕಾರಿಗಳ/ಸಿಬ್ಬಂದಿಯ ಜೀವ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ಮಕ್ಕಳನ್ನು ತೇರ್ಗಡೆ ಮಾಡಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಶಿಕ್ಷಣ ಇಲಾಖೆಯು ಜೂನ್‌ 25 ರಿಂದ SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ. ಈ ಕುರಿತು ತಯಾರಿಗಳನ್ನು ಆರಂಭಿಸಿದೆ. ಆದರೆ ಇದೇ ಸಂದರ್ಭದಲ್ಲಿ ಕೋವಿಡ್ 19 ಸೋಂಕು ಹರಡುತ್ತಿರುವ ಕಾರಣದಿಂದ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ಹಲವು ಶಿಕ್ಷಣ ತಜ್ಞರು, ಹೋರಾಟಗಾರರು, ವಿದ್ಯಾರ್ಥಿ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಈ ಬಾರಿ SSLC ಪರೀಕ್ಷೆಯನ್ನು ತೆಗೆದುಕೊಳ್ಳಬಹುದಾದ ವಿದ್ಯಾರ್ಥಿಗಳ ಅಂದಾಜು ಸಂಖ್ಯೆ: 8.5 ಲಕ್ಷ (ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್ ಮಾಹಿತಿಯಂತೆ). ಪರೀಕ್ಷೆಯ ನಿರ್ವಾಹಕ ಸಿಬ್ಬಂದಿ ಅಂದಾಜು 2.2 ಲಕ್ಷ. ಇವರಲ್ಲಿ ದುರದೃಷ್ಟವಶಾತ್ ಯಾರಿಗಾದರೂ ಸೋಂಕು ಉಂಟಾಗಿ ಅಲ್ಲಿಂದ ಹರಡಿದರೆ ಯಾರು ಜವಾಬ್ದಾರರು ಎಂಬ ಪ್ರಶ್ನೆ ಕುಟುಂಬದವರಿಗೆ ಕಾಡುತ್ತಿದೆ. ಇದಕ್ಕೆ ಶಿಕ್ಷಣ ಇಲಾಖೆಯ ಬಳಿ ಉತ್ತರವಿದೆಯೇ ಎಂದು ಚಿಂತಕರು ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿಗಳು ಕೂಡ ಕೊರೊನಾ ಹರಡುವ ಇಂತಹ ಭಯದ ಸನ್ನಿವೇಶದಲ್ಲಿ ಹೇಗೆ ಅವರು ತಮ್ಮ ಗಮನವನ್ನು ಕೇಂದ್ರೀಕರಿಸಿ ಆತಂಕರಹಿತವಾಗಿ ಪರೀಕ್ಷೆಯನ್ನು ಬರೆಯಲು ಹೇಗೆ ಸಾಧ್ಯವಾಗುತ್ತದೆ? ಪರೀಕ್ಷೆಯ ನಿರ್ವಾಹಕ ಸಿಬ್ಬಂದಿಯು ಹೇಗೆ ತಾನೇ ಮಾನಸಿಕ ಒತ್ತಡದಲ್ಲಿ ಪರೀಕ್ಷೆಯನ್ನು ನಡೆಸಲು ಸಾಧ್ಯ?
ಪರೀಕ್ಷೆ ನಡೆಸುವ ಹಾಗು ನಂತರದಲ್ಲಿ ಪರೀಕ್ಷೆಯಲ್ಲಿ ನೇರವಾಗಿ ಭಾಗಿಯಾಗುವವರಿಗೆ ಸೋಂಕು ಹರಡುವ ಭಯ, ಅವರ ಕುಟುಬದವರಿಗೆ ಯಾವಾಗ ಏನಾಗುವುದೋ ಎನ್ನುವ ಆತಂಕ ಮತ್ತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೂ ಕೂಡ ಅದೇ ಬಗೆಯ ಉದ್ವೇಗ ಮತ್ತು ಒತ್ತಡ ಹೆಚ್ಚುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬಹುತೇಕ ಪರೀಕ್ಷಾ ಕೇಂದ್ರಗಳಿರುವುದು ಜಿಲ್ಲಾ ಕೇಂದ್ರಗಳಲ್ಲಿ. ಆದರೆ ರಾಮನಗರ ಹೊರತು ಪಡಿಸಿ ಎಲ್ಲಾ ಜಿಲ್ಲೆಗಳು ಕೋವಿಡ್‌ ಕಂಟೈನ್‌ಮೆಂಟ್ ಜೋನ್ನಲ್ಲಿವೆ. ಇನ್ನು ಉಳಿದಿರುವ ಕೇಂದ್ರಗಳು ಹೋಬಳಿ ಮತ್ತು ತಾಲೂಕು ಮಟ್ಟದ ಕ್ಲಸ್ಟರ್ ಕೇಂದ್ರಗಳಾಗಿರುವುದರಿಂದ ಮತ್ತೊಮ್ಮೆ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಮತ್ತು ಅಷ್ಟೇ ಸಂಖ್ಯೆಯ ಪೋಷಕರು ಪರಸ್ಪರ ಭೇಟಿಯಾದರೆ ಇದಕ್ಕಿಂತ ದುರಂತ ಮತ್ತೇನಿದೆ. ಜಿಲ್ಲಾ ಕೇಂದ್ರಗಳು ಹಲವು ಶಾಲೆಗಳನ್ನು ಹೊಂದಿರುವ ಕ್ಲಸ್ಟರ್ ಪರೀಕ್ಷಾ ಕೇಂದ್ರ ಗಳನ್ನು ಹೊಂದಿರುವುದರಿಂದ ಇದು ಪೋಷಕರು ಮತ್ತು ವಿದ್ಯಾರ್ಥಿಗಳು ನಗರದಾದ್ಯಂತ ಸಂಚರಿಸಲು ಅನುವು ಮಾಡಿಕೊಟ್ಟಂತಾಗುವುದಿಲ್ಲವೇ ?
ಇನ್ನು ಪ್ರಶ್ನೆ ಪತ್ರಿಕೆ ಪೂರೈಕೆಯಾಗುವುದು ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಿಂದ ಇದರಿಂದ ಕೋವಿಂದ್ ಸೋಂಕು ಜಿಲ್ಲಾ ಕೆಂದ್ರಗಳಿಂದ ತಾಲೂಕು ಕೇಂದ್ರ ಗಳತ್ತ ಪಸರಿಸಲು ಇದು ದಾರಿ ಮಾಡಕೊಡುವುದಿಲ್ಲವೆ ಎಂಬುದು ಅವರ ಪ್ರಶ್ನೆಯಾಗಿದೆ.

ಹಾಗಾಗಿ ಸರ್ಕಾರವು SSLC ಪರೀಕ್ಷೆ ನಡೆಸುವ ನಿರ್ಧಾರವನ್ನು ಕೈಬಿಟ್ಟು ಮಕ್ಕಳ –ಪಾಲಕರ-ಇಲಾಖೆಯ ಅಧಿಕಾರಿಗಳ/ಸಿಬ್ಬಂದಿಯ ಜೀವ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ಮಕ್ಕಳನ್ನು ತೇರ್ಗಡೆ ಮಾಡಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪತ್ರಿಕಾ ಹೇಳಿಕೆಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ್‌, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ದ ಮಾವಳ್ಳಿ ಶಂಕರ್, ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಫಾಫ್ರೆ)ಯ ನಿರಂಜನಾರಾದ್ಯ .ವಿ.ಪಿ, ಪ್ರಾಥಮಿಕ ಶಿಕ್ಷಕರ ಫೆಡರೇಷನ್ (ಎಐಪಿಟಿಎಫ್)ನ ಬಸವರಾಜ ಗುರಿಕಾರ, ಕರ್ನಾಟಕ ರಾಜ್ಯ ನಿವೃತ್ತ ಶಿಕ್ಷಣ ಅಧಿಕಾರಿಗಳ ವೇದಿಕೆಯ ಜಗನ್ನಾಥರಾವ್ .ಡಿ ಸಹಿ ಮಾಡಿರುವವರಲ್ಲಿ ಪ್ರಮುಖರಾಗಿದ್ದಾರೆ.

ಅದೇ ರೀತಿಯಾಗಿ ಶ್ರೀಮತಿ ಜಯಮ್ಮ (ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರ ಫೆಡರೇಷನ್), ಶುಭಂಕರ್ (ಭಾರತ ಜ್ಞಾನ ವಿಜ್ಞಾನ ಸಮಿತಿ), ವಿದ್ಯಾ ಪಾಟೀಲ್ (ರಾಜ್ಯ ಮಹಿಳಾ ಒಕ್ಕೂಟ), ಜ್ಯೋತಿ.ಕೆ (ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್), ಮೊಹಮ್ಮದ್ ಪೀರ್ ಲಟಗೇರಿ (ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಷನ್) ಕರ್ನಾಟಕ, ಮೊಯ್ಯುದ್ದೀನ್ ಕುಟ್ಟಿ (ಕರ್ನಾಟಕ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ), ಬಿ. ಶ್ರೀಪಾದ್ ಭಟ್ (ಸಮಾನ ಶಿಕ್ಷಣಕ್ಕಾಗಿ ಜನಾಂದೋಲನ), ಸರೋವರ್ ಬೆಂಕಿಕೆರೆ, (ಕರ್ನಾಟಕ ವಿದ್ಯಾರ್ಥಿ ಸಂಘಟನೆ), ಗಂಗಾಧರ (ಸಮ ಸಮಾಜಕ್ಕಾಗಿ ಗೆಳೆಯರ ಬಳಗ), ಗಾಯತ್ರಿ ದೇವಿ ದತ್ (ನಿವೃತ್ತ ನಿರ್ದೇಶಕರು,ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ), ಸಿದ್ಧರಾಮ ಮನೋಳ್ಳಿ
(ನಿವೃತ್ತ ನಿರ್ದೇಶಕರು,ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ), ಸಿ.ವಿ.ತಿರುಮಲರಾವ್
(ನಿವೃತ್ತ ಜಂಟಿ-ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ), ಫಾದರ್ ಸತೀಸ್ (ವಿಮುಕ್ತಿ) ಮುಂತಾದವರು ಪತ್ರಿಕೆ ಹೇಳಿಕೆಗೆ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆ ನಡೆಸಲು ಮುಂದಾಗಿರುವುದು ಆತುರದ ನಿರ್ಧಾರ: ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....