Homeಕರ್ನಾಟಕಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ

ಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ

ಸರ್ಕಾರವು ಪರೀಕ್ಷೆ ನಡೆಸುವ ನಿರ್ಧಾರವನ್ನು ಕೈಬಿಟ್ಟು ಮಕ್ಕಳ –ಪಾಲಕರ-ಇಲಾಖೆಯ ಅಧಿಕಾರಿಗಳ/ಸಿಬ್ಬಂದಿಯ ಜೀವ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ಮಕ್ಕಳನ್ನು ತೇರ್ಗಡೆ ಮಾಡಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಶಿಕ್ಷಣ ಇಲಾಖೆಯು ಜೂನ್‌ 25 ರಿಂದ SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ. ಈ ಕುರಿತು ತಯಾರಿಗಳನ್ನು ಆರಂಭಿಸಿದೆ. ಆದರೆ ಇದೇ ಸಂದರ್ಭದಲ್ಲಿ ಕೋವಿಡ್ 19 ಸೋಂಕು ಹರಡುತ್ತಿರುವ ಕಾರಣದಿಂದ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ಹಲವು ಶಿಕ್ಷಣ ತಜ್ಞರು, ಹೋರಾಟಗಾರರು, ವಿದ್ಯಾರ್ಥಿ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಈ ಬಾರಿ SSLC ಪರೀಕ್ಷೆಯನ್ನು ತೆಗೆದುಕೊಳ್ಳಬಹುದಾದ ವಿದ್ಯಾರ್ಥಿಗಳ ಅಂದಾಜು ಸಂಖ್ಯೆ: 8.5 ಲಕ್ಷ (ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್ ಮಾಹಿತಿಯಂತೆ). ಪರೀಕ್ಷೆಯ ನಿರ್ವಾಹಕ ಸಿಬ್ಬಂದಿ ಅಂದಾಜು 2.2 ಲಕ್ಷ. ಇವರಲ್ಲಿ ದುರದೃಷ್ಟವಶಾತ್ ಯಾರಿಗಾದರೂ ಸೋಂಕು ಉಂಟಾಗಿ ಅಲ್ಲಿಂದ ಹರಡಿದರೆ ಯಾರು ಜವಾಬ್ದಾರರು ಎಂಬ ಪ್ರಶ್ನೆ ಕುಟುಂಬದವರಿಗೆ ಕಾಡುತ್ತಿದೆ. ಇದಕ್ಕೆ ಶಿಕ್ಷಣ ಇಲಾಖೆಯ ಬಳಿ ಉತ್ತರವಿದೆಯೇ ಎಂದು ಚಿಂತಕರು ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿಗಳು ಕೂಡ ಕೊರೊನಾ ಹರಡುವ ಇಂತಹ ಭಯದ ಸನ್ನಿವೇಶದಲ್ಲಿ ಹೇಗೆ ಅವರು ತಮ್ಮ ಗಮನವನ್ನು ಕೇಂದ್ರೀಕರಿಸಿ ಆತಂಕರಹಿತವಾಗಿ ಪರೀಕ್ಷೆಯನ್ನು ಬರೆಯಲು ಹೇಗೆ ಸಾಧ್ಯವಾಗುತ್ತದೆ? ಪರೀಕ್ಷೆಯ ನಿರ್ವಾಹಕ ಸಿಬ್ಬಂದಿಯು ಹೇಗೆ ತಾನೇ ಮಾನಸಿಕ ಒತ್ತಡದಲ್ಲಿ ಪರೀಕ್ಷೆಯನ್ನು ನಡೆಸಲು ಸಾಧ್ಯ?
ಪರೀಕ್ಷೆ ನಡೆಸುವ ಹಾಗು ನಂತರದಲ್ಲಿ ಪರೀಕ್ಷೆಯಲ್ಲಿ ನೇರವಾಗಿ ಭಾಗಿಯಾಗುವವರಿಗೆ ಸೋಂಕು ಹರಡುವ ಭಯ, ಅವರ ಕುಟುಬದವರಿಗೆ ಯಾವಾಗ ಏನಾಗುವುದೋ ಎನ್ನುವ ಆತಂಕ ಮತ್ತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೂ ಕೂಡ ಅದೇ ಬಗೆಯ ಉದ್ವೇಗ ಮತ್ತು ಒತ್ತಡ ಹೆಚ್ಚುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬಹುತೇಕ ಪರೀಕ್ಷಾ ಕೇಂದ್ರಗಳಿರುವುದು ಜಿಲ್ಲಾ ಕೇಂದ್ರಗಳಲ್ಲಿ. ಆದರೆ ರಾಮನಗರ ಹೊರತು ಪಡಿಸಿ ಎಲ್ಲಾ ಜಿಲ್ಲೆಗಳು ಕೋವಿಡ್‌ ಕಂಟೈನ್‌ಮೆಂಟ್ ಜೋನ್ನಲ್ಲಿವೆ. ಇನ್ನು ಉಳಿದಿರುವ ಕೇಂದ್ರಗಳು ಹೋಬಳಿ ಮತ್ತು ತಾಲೂಕು ಮಟ್ಟದ ಕ್ಲಸ್ಟರ್ ಕೇಂದ್ರಗಳಾಗಿರುವುದರಿಂದ ಮತ್ತೊಮ್ಮೆ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಮತ್ತು ಅಷ್ಟೇ ಸಂಖ್ಯೆಯ ಪೋಷಕರು ಪರಸ್ಪರ ಭೇಟಿಯಾದರೆ ಇದಕ್ಕಿಂತ ದುರಂತ ಮತ್ತೇನಿದೆ. ಜಿಲ್ಲಾ ಕೇಂದ್ರಗಳು ಹಲವು ಶಾಲೆಗಳನ್ನು ಹೊಂದಿರುವ ಕ್ಲಸ್ಟರ್ ಪರೀಕ್ಷಾ ಕೇಂದ್ರ ಗಳನ್ನು ಹೊಂದಿರುವುದರಿಂದ ಇದು ಪೋಷಕರು ಮತ್ತು ವಿದ್ಯಾರ್ಥಿಗಳು ನಗರದಾದ್ಯಂತ ಸಂಚರಿಸಲು ಅನುವು ಮಾಡಿಕೊಟ್ಟಂತಾಗುವುದಿಲ್ಲವೇ ?
ಇನ್ನು ಪ್ರಶ್ನೆ ಪತ್ರಿಕೆ ಪೂರೈಕೆಯಾಗುವುದು ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಿಂದ ಇದರಿಂದ ಕೋವಿಂದ್ ಸೋಂಕು ಜಿಲ್ಲಾ ಕೆಂದ್ರಗಳಿಂದ ತಾಲೂಕು ಕೇಂದ್ರ ಗಳತ್ತ ಪಸರಿಸಲು ಇದು ದಾರಿ ಮಾಡಕೊಡುವುದಿಲ್ಲವೆ ಎಂಬುದು ಅವರ ಪ್ರಶ್ನೆಯಾಗಿದೆ.

ಹಾಗಾಗಿ ಸರ್ಕಾರವು SSLC ಪರೀಕ್ಷೆ ನಡೆಸುವ ನಿರ್ಧಾರವನ್ನು ಕೈಬಿಟ್ಟು ಮಕ್ಕಳ –ಪಾಲಕರ-ಇಲಾಖೆಯ ಅಧಿಕಾರಿಗಳ/ಸಿಬ್ಬಂದಿಯ ಜೀವ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ಮಕ್ಕಳನ್ನು ತೇರ್ಗಡೆ ಮಾಡಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪತ್ರಿಕಾ ಹೇಳಿಕೆಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ್‌, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ದ ಮಾವಳ್ಳಿ ಶಂಕರ್, ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಫಾಫ್ರೆ)ಯ ನಿರಂಜನಾರಾದ್ಯ .ವಿ.ಪಿ, ಪ್ರಾಥಮಿಕ ಶಿಕ್ಷಕರ ಫೆಡರೇಷನ್ (ಎಐಪಿಟಿಎಫ್)ನ ಬಸವರಾಜ ಗುರಿಕಾರ, ಕರ್ನಾಟಕ ರಾಜ್ಯ ನಿವೃತ್ತ ಶಿಕ್ಷಣ ಅಧಿಕಾರಿಗಳ ವೇದಿಕೆಯ ಜಗನ್ನಾಥರಾವ್ .ಡಿ ಸಹಿ ಮಾಡಿರುವವರಲ್ಲಿ ಪ್ರಮುಖರಾಗಿದ್ದಾರೆ.

ಅದೇ ರೀತಿಯಾಗಿ ಶ್ರೀಮತಿ ಜಯಮ್ಮ (ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರ ಫೆಡರೇಷನ್), ಶುಭಂಕರ್ (ಭಾರತ ಜ್ಞಾನ ವಿಜ್ಞಾನ ಸಮಿತಿ), ವಿದ್ಯಾ ಪಾಟೀಲ್ (ರಾಜ್ಯ ಮಹಿಳಾ ಒಕ್ಕೂಟ), ಜ್ಯೋತಿ.ಕೆ (ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್), ಮೊಹಮ್ಮದ್ ಪೀರ್ ಲಟಗೇರಿ (ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಷನ್) ಕರ್ನಾಟಕ, ಮೊಯ್ಯುದ್ದೀನ್ ಕುಟ್ಟಿ (ಕರ್ನಾಟಕ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ), ಬಿ. ಶ್ರೀಪಾದ್ ಭಟ್ (ಸಮಾನ ಶಿಕ್ಷಣಕ್ಕಾಗಿ ಜನಾಂದೋಲನ), ಸರೋವರ್ ಬೆಂಕಿಕೆರೆ, (ಕರ್ನಾಟಕ ವಿದ್ಯಾರ್ಥಿ ಸಂಘಟನೆ), ಗಂಗಾಧರ (ಸಮ ಸಮಾಜಕ್ಕಾಗಿ ಗೆಳೆಯರ ಬಳಗ), ಗಾಯತ್ರಿ ದೇವಿ ದತ್ (ನಿವೃತ್ತ ನಿರ್ದೇಶಕರು,ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ), ಸಿದ್ಧರಾಮ ಮನೋಳ್ಳಿ
(ನಿವೃತ್ತ ನಿರ್ದೇಶಕರು,ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ), ಸಿ.ವಿ.ತಿರುಮಲರಾವ್
(ನಿವೃತ್ತ ಜಂಟಿ-ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ), ಫಾದರ್ ಸತೀಸ್ (ವಿಮುಕ್ತಿ) ಮುಂತಾದವರು ಪತ್ರಿಕೆ ಹೇಳಿಕೆಗೆ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆ ನಡೆಸಲು ಮುಂದಾಗಿರುವುದು ಆತುರದ ನಿರ್ಧಾರ: ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....