Homeಕರ್ನಾಟಕಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ

ಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ

ಸರ್ಕಾರವು ಪರೀಕ್ಷೆ ನಡೆಸುವ ನಿರ್ಧಾರವನ್ನು ಕೈಬಿಟ್ಟು ಮಕ್ಕಳ –ಪಾಲಕರ-ಇಲಾಖೆಯ ಅಧಿಕಾರಿಗಳ/ಸಿಬ್ಬಂದಿಯ ಜೀವ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ಮಕ್ಕಳನ್ನು ತೇರ್ಗಡೆ ಮಾಡಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಶಿಕ್ಷಣ ಇಲಾಖೆಯು ಜೂನ್‌ 25 ರಿಂದ SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ. ಈ ಕುರಿತು ತಯಾರಿಗಳನ್ನು ಆರಂಭಿಸಿದೆ. ಆದರೆ ಇದೇ ಸಂದರ್ಭದಲ್ಲಿ ಕೋವಿಡ್ 19 ಸೋಂಕು ಹರಡುತ್ತಿರುವ ಕಾರಣದಿಂದ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ಹಲವು ಶಿಕ್ಷಣ ತಜ್ಞರು, ಹೋರಾಟಗಾರರು, ವಿದ್ಯಾರ್ಥಿ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಈ ಬಾರಿ SSLC ಪರೀಕ್ಷೆಯನ್ನು ತೆಗೆದುಕೊಳ್ಳಬಹುದಾದ ವಿದ್ಯಾರ್ಥಿಗಳ ಅಂದಾಜು ಸಂಖ್ಯೆ: 8.5 ಲಕ್ಷ (ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್ ಮಾಹಿತಿಯಂತೆ). ಪರೀಕ್ಷೆಯ ನಿರ್ವಾಹಕ ಸಿಬ್ಬಂದಿ ಅಂದಾಜು 2.2 ಲಕ್ಷ. ಇವರಲ್ಲಿ ದುರದೃಷ್ಟವಶಾತ್ ಯಾರಿಗಾದರೂ ಸೋಂಕು ಉಂಟಾಗಿ ಅಲ್ಲಿಂದ ಹರಡಿದರೆ ಯಾರು ಜವಾಬ್ದಾರರು ಎಂಬ ಪ್ರಶ್ನೆ ಕುಟುಂಬದವರಿಗೆ ಕಾಡುತ್ತಿದೆ. ಇದಕ್ಕೆ ಶಿಕ್ಷಣ ಇಲಾಖೆಯ ಬಳಿ ಉತ್ತರವಿದೆಯೇ ಎಂದು ಚಿಂತಕರು ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿಗಳು ಕೂಡ ಕೊರೊನಾ ಹರಡುವ ಇಂತಹ ಭಯದ ಸನ್ನಿವೇಶದಲ್ಲಿ ಹೇಗೆ ಅವರು ತಮ್ಮ ಗಮನವನ್ನು ಕೇಂದ್ರೀಕರಿಸಿ ಆತಂಕರಹಿತವಾಗಿ ಪರೀಕ್ಷೆಯನ್ನು ಬರೆಯಲು ಹೇಗೆ ಸಾಧ್ಯವಾಗುತ್ತದೆ? ಪರೀಕ್ಷೆಯ ನಿರ್ವಾಹಕ ಸಿಬ್ಬಂದಿಯು ಹೇಗೆ ತಾನೇ ಮಾನಸಿಕ ಒತ್ತಡದಲ್ಲಿ ಪರೀಕ್ಷೆಯನ್ನು ನಡೆಸಲು ಸಾಧ್ಯ?
ಪರೀಕ್ಷೆ ನಡೆಸುವ ಹಾಗು ನಂತರದಲ್ಲಿ ಪರೀಕ್ಷೆಯಲ್ಲಿ ನೇರವಾಗಿ ಭಾಗಿಯಾಗುವವರಿಗೆ ಸೋಂಕು ಹರಡುವ ಭಯ, ಅವರ ಕುಟುಬದವರಿಗೆ ಯಾವಾಗ ಏನಾಗುವುದೋ ಎನ್ನುವ ಆತಂಕ ಮತ್ತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೂ ಕೂಡ ಅದೇ ಬಗೆಯ ಉದ್ವೇಗ ಮತ್ತು ಒತ್ತಡ ಹೆಚ್ಚುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಬಹುತೇಕ ಪರೀಕ್ಷಾ ಕೇಂದ್ರಗಳಿರುವುದು ಜಿಲ್ಲಾ ಕೇಂದ್ರಗಳಲ್ಲಿ. ಆದರೆ ರಾಮನಗರ ಹೊರತು ಪಡಿಸಿ ಎಲ್ಲಾ ಜಿಲ್ಲೆಗಳು ಕೋವಿಡ್‌ ಕಂಟೈನ್‌ಮೆಂಟ್ ಜೋನ್ನಲ್ಲಿವೆ. ಇನ್ನು ಉಳಿದಿರುವ ಕೇಂದ್ರಗಳು ಹೋಬಳಿ ಮತ್ತು ತಾಲೂಕು ಮಟ್ಟದ ಕ್ಲಸ್ಟರ್ ಕೇಂದ್ರಗಳಾಗಿರುವುದರಿಂದ ಮತ್ತೊಮ್ಮೆ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಮತ್ತು ಅಷ್ಟೇ ಸಂಖ್ಯೆಯ ಪೋಷಕರು ಪರಸ್ಪರ ಭೇಟಿಯಾದರೆ ಇದಕ್ಕಿಂತ ದುರಂತ ಮತ್ತೇನಿದೆ. ಜಿಲ್ಲಾ ಕೇಂದ್ರಗಳು ಹಲವು ಶಾಲೆಗಳನ್ನು ಹೊಂದಿರುವ ಕ್ಲಸ್ಟರ್ ಪರೀಕ್ಷಾ ಕೇಂದ್ರ ಗಳನ್ನು ಹೊಂದಿರುವುದರಿಂದ ಇದು ಪೋಷಕರು ಮತ್ತು ವಿದ್ಯಾರ್ಥಿಗಳು ನಗರದಾದ್ಯಂತ ಸಂಚರಿಸಲು ಅನುವು ಮಾಡಿಕೊಟ್ಟಂತಾಗುವುದಿಲ್ಲವೇ ?
ಇನ್ನು ಪ್ರಶ್ನೆ ಪತ್ರಿಕೆ ಪೂರೈಕೆಯಾಗುವುದು ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಿಂದ ಇದರಿಂದ ಕೋವಿಂದ್ ಸೋಂಕು ಜಿಲ್ಲಾ ಕೆಂದ್ರಗಳಿಂದ ತಾಲೂಕು ಕೇಂದ್ರ ಗಳತ್ತ ಪಸರಿಸಲು ಇದು ದಾರಿ ಮಾಡಕೊಡುವುದಿಲ್ಲವೆ ಎಂಬುದು ಅವರ ಪ್ರಶ್ನೆಯಾಗಿದೆ.

ಹಾಗಾಗಿ ಸರ್ಕಾರವು SSLC ಪರೀಕ್ಷೆ ನಡೆಸುವ ನಿರ್ಧಾರವನ್ನು ಕೈಬಿಟ್ಟು ಮಕ್ಕಳ –ಪಾಲಕರ-ಇಲಾಖೆಯ ಅಧಿಕಾರಿಗಳ/ಸಿಬ್ಬಂದಿಯ ಜೀವ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ಮಕ್ಕಳನ್ನು ತೇರ್ಗಡೆ ಮಾಡಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪತ್ರಿಕಾ ಹೇಳಿಕೆಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ್‌, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ದ ಮಾವಳ್ಳಿ ಶಂಕರ್, ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಫಾಫ್ರೆ)ಯ ನಿರಂಜನಾರಾದ್ಯ .ವಿ.ಪಿ, ಪ್ರಾಥಮಿಕ ಶಿಕ್ಷಕರ ಫೆಡರೇಷನ್ (ಎಐಪಿಟಿಎಫ್)ನ ಬಸವರಾಜ ಗುರಿಕಾರ, ಕರ್ನಾಟಕ ರಾಜ್ಯ ನಿವೃತ್ತ ಶಿಕ್ಷಣ ಅಧಿಕಾರಿಗಳ ವೇದಿಕೆಯ ಜಗನ್ನಾಥರಾವ್ .ಡಿ ಸಹಿ ಮಾಡಿರುವವರಲ್ಲಿ ಪ್ರಮುಖರಾಗಿದ್ದಾರೆ.

ಅದೇ ರೀತಿಯಾಗಿ ಶ್ರೀಮತಿ ಜಯಮ್ಮ (ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರ ಫೆಡರೇಷನ್), ಶುಭಂಕರ್ (ಭಾರತ ಜ್ಞಾನ ವಿಜ್ಞಾನ ಸಮಿತಿ), ವಿದ್ಯಾ ಪಾಟೀಲ್ (ರಾಜ್ಯ ಮಹಿಳಾ ಒಕ್ಕೂಟ), ಜ್ಯೋತಿ.ಕೆ (ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್), ಮೊಹಮ್ಮದ್ ಪೀರ್ ಲಟಗೇರಿ (ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಷನ್) ಕರ್ನಾಟಕ, ಮೊಯ್ಯುದ್ದೀನ್ ಕುಟ್ಟಿ (ಕರ್ನಾಟಕ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ), ಬಿ. ಶ್ರೀಪಾದ್ ಭಟ್ (ಸಮಾನ ಶಿಕ್ಷಣಕ್ಕಾಗಿ ಜನಾಂದೋಲನ), ಸರೋವರ್ ಬೆಂಕಿಕೆರೆ, (ಕರ್ನಾಟಕ ವಿದ್ಯಾರ್ಥಿ ಸಂಘಟನೆ), ಗಂಗಾಧರ (ಸಮ ಸಮಾಜಕ್ಕಾಗಿ ಗೆಳೆಯರ ಬಳಗ), ಗಾಯತ್ರಿ ದೇವಿ ದತ್ (ನಿವೃತ್ತ ನಿರ್ದೇಶಕರು,ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ), ಸಿದ್ಧರಾಮ ಮನೋಳ್ಳಿ
(ನಿವೃತ್ತ ನಿರ್ದೇಶಕರು,ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ), ಸಿ.ವಿ.ತಿರುಮಲರಾವ್
(ನಿವೃತ್ತ ಜಂಟಿ-ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ), ಫಾದರ್ ಸತೀಸ್ (ವಿಮುಕ್ತಿ) ಮುಂತಾದವರು ಪತ್ರಿಕೆ ಹೇಳಿಕೆಗೆ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆ ನಡೆಸಲು ಮುಂದಾಗಿರುವುದು ಆತುರದ ನಿರ್ಧಾರ: ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...