Homeಕರ್ನಾಟಕಎಸ್ಸೆಸ್ಸೆಲ್ಸಿ ಪರೀಕ್ಷೆ: ಹೆಚ್ಚಿನ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ಇನ್ನೂ ತಯಾರಾಗಿಲ್ಲ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಹೆಚ್ಚಿನ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ಇನ್ನೂ ತಯಾರಾಗಿಲ್ಲ

- Advertisement -
- Advertisement -

ಲಾಕ್‌ಡೌನ್‌‌ನಿಂದಾಗಿ ಮುಂದೂಲ್ಪಟ್ಟಿದ್ದ 10 ನೇ ತರಗತಿಯ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳು ಮುಂದಾಗುತ್ತಿದೆ. ಆದರೆ ಈ ವರ್ಷ ಕಲಿತ ಶೇಕಡಾ 60 ರಷ್ಟು ವಿಷಯಗಳನ್ನು ವಿದ್ಯಾರ್ಥಿಗಳು ಮರೆತಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಡುತ್ತಾರೆ. ಅದರಲ್ಲೂ ಎಸ್ಸಿ ಹಾಗೂ ಎಸ್ಟಿ ವಿದ್ಯಾರ್ಥಿಗಳು ಈ ಲಾಕ್‌ಡೌನ್ ಸಮಯದಲ್ಲಿ ಶಿಕ್ಷಣ ಸಂಸ್ಥಗಳು ಅಥವಾ ಸರ್ಕಾರ ನಡೆಸಿದ ಆನ್‌ಲೈನ್‌ ಕ್ಲಾಸುಗಳಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ.

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ 10 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಿದ್ದ ದಕ್ಷಿಣದ ಕೆಲ ರಾಜ್ಯಗಳು ಅವುಗಳನ್ನು ಶೀಘ್ರವಾಗಿ ನಡೆಸಲು ಉತ್ಸುಕವಾಗಿವೆ. ಕೇರಳ ಈಗಾಗಲೇ ಮೇ 26 ಮತ್ತು 29 ರ ನಡುವೆ ಉಳಿದ ಮೂರು ಪರೀಕ್ಷೆಗಳನ್ನು ನಡೆಸಿದೆ. ಜೂನ್ 8 ಕ್ಕೆ ನಿಗದಿಯಾಗಿದ್ದ ’ಟಿಎಸ್ ಎಸ್‌ಎಸ್‌ಸಿ’ ಪರೀಕ್ಷೆಗಳನ್ನು ತೆಲಂಗಾಣ ರದ್ದುಗೊಳಿಸಿದ್ದರೆ, ತಮಿಳುನಾಡು ಸಹ ಪರೀಕ್ಷೆ ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡಲು ಮುಂದಾಗಿದೆ. ಆದರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಕ್ರಮವಾಗಿ ಜೂನ್ 25 ಮತ್ತು ಜುಲೈ 10 ಅಂತಿಮ ಪರೀಕ್ಷೆಗಳನ್ನು ನಡೆಸಲಿದೆ.


ಇದನ್ನೂ ಓದಿ: ತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದು: ವಿದ್ಯಾರ್ಥಿಗಳಿಗೆ ಮುಂಬಡ್ತಿ


ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಖಾಸಗಿ ಶಾಲೆಗಳು ಹಾಗೂ ಕೆಲವು ಸರ್ಕಾರಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ತರಗತಿ ಪ್ರಾರಂಭಿಸಿದ್ದಾರೆ. ರಾಜ್ಯ ಸರ್ಕಾರಗಳು ಸ್ಥಳೀಯ ಕೇಬಲ್ ನೆಟ್‌ವರ್ಕ್‌ಗಳ ಮೂಲಕ ತರಗತಿಗಳನ್ನು ನಡೆಸುತ್ತಿವೆ. ಆದರೆ ಈ ಎಲ್ಲದರ ಹೊರತಾಗಿಯೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಜೂನ್ 15 ರಂದು ತಮಿಳುನಾಡಿನಲ್ಲಿ ರಾಜ್ಯದ 9.45 ಲಕ್ಷ ವಿದ್ಯಾರ್ಥಿಗಳು 10 ನೇ ತರಗತಿ ಪರೀಕ್ಷೆಗೆ ಹಾಜರಾಗಲು ಸಿದ್ದರಾಗಿದ್ದರು. ಇದೇ ಸಮಯದಲ್ಲಿ ತಮಿಳುನಾಡಿನ ಪರಿಶಿಷ್ಟ ಪಂಗಡ ಸಮುದಾಯದ 14 ವರ್ಷದ ಬಾಲಕಿ ಹೇಮ ಪ್ರಿಯಾ ಗಣಿತ ಪರಿಕ್ಷೆಯಲ್ಲಿ ಉತ್ತೀರ್ಣ ಗಳಿಸಲು ನೆರವಾಗುವ ಗ್ರಾಫ್ ಅನ್ನು ಹೇಗೆ ಬರೆಯುವುದು ಎಂದು ತಿಳಿದಿಲ್ಲ ಎನ್ನುತ್ತಾರೆ.

ಹೇಮಾ ಪ್ರಿಯಾ ತಮ್ಮ ಪರೀಕ್ಷೆಯನ್ನು ಹೇಗೆ ನಿಭಾಯಿಸುತ್ತಾರೆಂದು ವಿವರಿಸಲು ಪ್ರಾರಂಭಿಸಿದಾಗ, ಅವರ ಧ್ವನಿ ನಡುಗುತ್ತದೆ. ತಿರುವಳ್ಳೂರು ಜಿಲ್ಲೆಯ ಪೊನ್ನೆರಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿರುವ ಇವರು ತನ್ನ ಸ್ನೇಹಿತರು ಹೋಗುವಂತೆ ಖಾಸಗಿ ಕೋಚಿಂಗ್ ಕೇಂದ್ರಗಳಿಗೆ ಹೋಗಲು ಮನಸ್ಸಿದ್ದರೂ, ಪ್ರವೇಶ ಶುಲ್ಕವಾಗಿ 1000 ರೂ. ಹಾಗೂ ಮಾಸಿಕ ಶುಲ್ಕವಾಗಿ 500 ರೂ. ಗಳನ್ನು ಪಾವತಿಸಬೇಕಾದ್ದರಿಂದ ಅವರು ಅಲ್ಲಿಗೆ ಹೋಗಲು ಸಾಧ್ಯವಾಗದೇ, ಖಾಸಗಿ ಕೋಚಿಂಗ್ ಹೋಗುವ ತನ್ನ ಸ್ನೇಹಿತರಿಂದ ತಿಳಿಯಲು ಒಂದು ಗಂಟೆ ಮುಂಚಿತವಾಗಿ ಶಾಲೆಗೆ ಹೋಗುತ್ತಿದ್ದರು ಆದರೆ ಈಗ ಲಾಕ್‌ಡೌನ್ ಆದ್ದರಿಂದ ಅದೂ ಅಸಾಧ್ಯವಾಗಿದೆ.

ಇವರ ತರಗತಿಗೆ ಅರ್ಧ ವರ್ಷದವರೆಗೂ ಗಣಿತ ಶಿಕ್ಷಕರೇ ಇರಲಿಲ್ಲ, ನಂತರ ಶಿಕ್ಷಕರು ಬಂದರೂ ಎಲ್ಲಾ ವಿಷಯಗಳಲ್ಲಿ ಸುಮಾರು 60 ಅಂಕಗಳನ್ನು ಪಡೆಯುತ್ತಿದ್ದ ಹೇಮಾ ಮಧ್ಯಾವಧಿ ಗಣಿತ ಪರೀಕ್ಷೆಯಲ್ಲಿ ವಿಫಲವಾಗಿದ್ದಾರೆ. ಬೋರ್ಡ್ ಪರೀಕ್ಷೆಗೆ ತಯಾರಾಗುವ ಹೊತ್ತಿಗೆ ಲಾಕ್‌ಡೌನ್‌ ವಿಧಿಸಲಾಯಿತು ಆದರೆ ಇಂಟರ್ನೆಟ್ ಇಲ್ಲದ ಅವರ ತಂದೆಯ ಮೊಬೈಲ್ ಫೋನಿನಿಂದ ಆನ್‌ಲೈನ್ ಕ್ಲಾಸುಗಳನ್ನುಸೇರಲು ಅವರಿಗೆ ಸಾಧ್ಯವಾಗಿಲ್ಲ. ಹಾಗೆ ನೋಡಿದರೆ ಆ ಬಟನ್‌ ಫೋನಿನಲ್ಲಿ ರೀಚಾರ್ಜ್‌ಮಾಡಲೂ ಅವರ ತಂದೆಯಲ್ಲಿ ದುಡ್ಡು ಇರಲಿಲ್ಲ. ಈಗ ಪರೀಕ್ಷೆಗಳು ನಡೆಯಲಿವೆ ಎನ್ನುತ್ತಿದ್ದಂತೆ ಏನು ಮಾಡಬೇಕು ಎಂದು ತೋಚದ ಸ್ಥಿತಿಯಲ್ಲಿ ಅವರಿದ್ದಾರೆ.

ತಮಿಳು ನಾಡಿನಿಂದ 450 ಕಿ.ಮೀ. ದೂರದ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಯೆಮಿಗನೂರ್ ಪಟ್ಟಣದ ರಸ್ತೆಬದಿಯ ಗುಡಿಸಲಿನಲ್ಲಿ 15 ವರ್ಷದ ಕಿರಣ್ ವಾಸಿಸುತ್ತಿದ್ದಾರೆ. ಇಂಗ್ಲಿಷ್ ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ಅವರು ಎಸ್‌ಟಿ ಸಮುದಾಯಕ್ಕೆ ಸೇರಿದವರಾಗಿದ್ದು, ಕುಟುಂಬವೂ ಬುಟ್ಟಿ ಹೆಣೆದು ಜೀವನ ಸಾಗಿಸುತ್ತದೆ.

ಹೇಮಾ ಪ್ರಿಯಾ ಅವರಂತೆ ಕಿರಣ್ ಕೂಡ ಸ್ಮಾರ್ಟ್‌ಫೋನ್ ಹೊಂದಿಲ್ಲ. ಇದರಿಂದಾಗಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ನಡೆಸಿದ ವಾಟ್ಸಾಪ್ ಪರೀಕ್ಷೆಗಳಿಂದ ವಂಚಿತವಾಗಿದ್ದಾರೆ. ಆದರೆ ಅವರು ಸ್ನೇಹಿತರ ಮನೆಯ ಟೀವಿಯಲ್ಲಿ ಸರ್ಕಾರ ನಡೆಸುವ ಕೆಲವು ತರಗತಿಗಳನ್ನು ವೀಕ್ಷಿಸುತ್ತಾರೆ, ಆದರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಅದು ಸಾಕಾಗುವುದಿಲ್ಲ ಎಂಬ ಭಯ ಅವರಿಗಿದೆ.

ಲಾಕ್ ಡೌನ್ ಆಗುವವರೆಗೂ, 15 ವರ್ಷದ ಕಿರಣ್ ಸಂಜೆಯ ವೇಳೆ ಖಾಸಗಿ ವಾಟರ್ ಟ್ಯಾಂಕರ್‌ನಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದರಿಂದ ದಿನಕ್ಕೆ ₹ 100 ಪಡೆಯುತ್ತಿದ್ದರು. ಆಗ ಅವರಿಗೆ ಓದಲು ಸಮಯ ಸಾಲುತ್ತಿರಲಿಲ್ಲ. ಆದರೆ ಈಗ ಅವರಿಗೆ ಲಾಕ್‌ಡೌನ್‌ನಿಂದಾಗಿ ಸಾಕಷ್ಟು ಸಮಯವಿದ್ದರೂ ಓದಿಸಲು ಸರಿಯಾದ ಮಾರ್ಗದರ್ಶನ ಇಲ್ಲ.

ಅದೃಷ್ಟವಶಾತ್, ಕಿರಣ್ ಇಂಗ್ಲಿಷ್‌ನಲ್ಲಿ ’ಮನ ಟಿವಿ’ಯಲ್ಲಿ ನಡೆಯುವ ಕ್ಲಾಸುಗಳನ್ನು ನೋಡುತ್ತಾರೆ ಆದರೆ ತೆಲುಗು ಭಾಷಿಕ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಇದು ಸಾಧ್ಯವಾಗುವುದಿಲ್ಲ.

ಯೆಮ್ಮಿಗನೂರ್‌ನಿಂದ ಸುಮಾರು 50 ಕಿ.ಮೀ ದೂರದಲ್ಲಿನ ಕರ್ನಾಟಕದ ಗಡಿಯಲ್ಲಿರುವ ಜಂಪಾಪುರಂ ಗ್ರಾಮದ 1 ನೇ ತರಗತಿಯಿಂದ ತೆಲುಗು ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿದ ಎಸ್ಸಿ ಸಮುದಾಯದ 14 ವರ್ಷದ ’ಐಶ್ವರ್ಯ’, ಆನ್‌ಲೈನ್‌ ತರಗತಿಗಳನ್ನು ವಿಶೇಷವಾಗಿ ವಿಜ್ಞಾನ ಮತ್ತು ಸಾಮಾಜಿಕ ಅಧ್ಯಯನ ವಿಷಯಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟಕರವಾಗಿದೆ. ಆದರೆ ಇವರಿಗೆ ತನ್ನ ಸೋದರಸಂಬಂಧಿಯ ಸ್ಮಾರ್ಟ್‌ಫೋನ್‌ನಲ್ಲಿ ವಾಟ್ಸಾಪ್ ಕ್ಲಾಸುಗಳಲ್ಲಿ ಭಾಗವಹಿಸಿದ್ದಾರೆ.

ಪ್ರತಿ ವಿಷಯದಲ್ಲಿ ಸುಮಾರು 50 ಅಂಕಗಳನ್ನು ಗಳಿಸುವ ಐಶ್ವರ್ಯಾ, ಈ ಆನ್‌ಲೈನ್ ಮತ್ತು ಟಿವಿಯ ತರಗತಿಗಳು ಶಾಲೆಯಲ್ಲಿ ತನ್ನ ಶಿಕ್ಷಕರು ಬೋಧಿಸುವಷ್ಟು ಆಗುವುದಿಲ್ಲ ಎನ್ನುತ್ತಾರೆ.

ವಾಟ್ಸಾಪ್ ಪರೀಕ್ಷೆಗಳು ಶಾಲೆಯ ಪರೀಕ್ಷಗಳಿಗಿಂತ ಭಿನ್ನವಾಗಿರುತ್ತದೆ ಎಂದು ಕರ್ನೂಲ್‌ನ ಸರ್ಕಾರಿ ಶಿಕ್ಷಕ ದೇವೇಂದ್ರ ಬಾಬು ಹೇಳುತ್ತಾರೆ. ಕಡಿಮೆ ವಿಧ್ಯಾರ್ಥಿಗಳಿದ್ದರೆ ಶಿಕ್ಷಕರಿಗೆ ಎಲ್ಲಾ ವಿದ್ಯಾರ್ಥಿಗಳನ್ನು ವಾಟ್ಸಾಪ್ ಗುಂಪಿನಲ್ಲಿ ನಿರ್ವಹಿಸಲು ಮತ್ತು ಸಂಘಟಿಸಲು ಸುಲಭವಾಗಿರುತ್ತದೆ. ಆದರೆ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಶಾಲೆಗಳ ಶಿಕ್ಷಕರಿಗೆ ಎಲ್ಲಾ ವಿದ್ಯಾರ್ಥಿಗಳನ್ನು ಒಟ್ಟಿಗೆ ಸೇರಿಸುವಲ್ಲಿ ತೊಂದರೆಯಾಗುತ್ತದೆ. ಅಲ್ಲದೆ ಇಂಟರ್ನೆಟ್ ಇಲ್ಲದೆ ಇರುವ ಸಮುದಾಯಗಳ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ದೇವೇಂದ್ರ ಬಾಬು ಹೇಳುತ್ತಾರೆ.

ಬೆಂಗಳೂರಿನ ಕೋರಮಂಗಲದ ಕೊಳೆಗೇರಿಗಳಲ್ಲಿರುವ ವಿದ್ಯಾರ್ಥಿಗಳ ವಿಷಯವೂ ಇದೇ ಆಗಿದೆ. ಆನ್‌ಲೈನ್ ತರಗತಿಗಳು ಏಕರೂಪವಾಗಿಲ್ಲ. ಕೆಲವು ಸರ್ಕಾರಿ ಅನುದಾನಿತ ಶಾಲೆಗಳ ಶಿಕ್ಷಕರು ಆನ್‌ಲೈನ್ ಪಾಠಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೆ ಅನೇಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಇವುಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಈ ಪ್ರದೇಶದ ಕೊಳೆಗೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆಧಾರಿತ ಸಂಘಟನೆಯಾದ ’ಮಾರ್ಗಾ’ದ ಗಣಿತ ಶಿಕ್ಷಕಿ ಮತ್ತು ಕಾರ್ಯಕ್ರಮ ಸಂಯೋಜಕರಾದ ಮೋನಿಷಾ ಹೇಳುತ್ತಾರೆ.

ಈ ವರ್ಷ ವಿದ್ಯಾರ್ಥಿಗಳು ಕಲಿತದ್ದರಲ್ಲಿ ಶೇಕಡಾ 60 ರಷ್ಟು ಮರೆತಿದ್ದಾರೆ ಎಂದು ಅವರು ಹೇಳುತ್ತಾರೆ. ಈ ವಿದ್ಯಾರ್ಥಿಗಳಿಗೆ ಸಂಜೆಯ ಸಮಯದಲ್ಲಿ ತರಬೇತಿ ನೀಡಲು ಸರ್ಕಾರವು ಮುಂದಾಗುತ್ತಿದ್ದರೂ, ತರಗತಿಗಳನ್ನು ತೆಗೆದುಕೊಳ್ಳುವುದನ್ನು ಮುಂದುವರೆಸುತ್ತಿದ್ದರೂ, ಈ ಪ್ರದೇಶದ ಏಳು ಕೊಳೆಗೇರಿಗಳಲ್ಲಿ ಎರಡನ್ನು ಮಾತ್ರ ಒಳಗೊಳ್ಳುತ್ತದೆ. ಆದ್ದರಿಂದ, ಇತರ ಕೊಳೆಗೇರಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಯಾವುದೇ ತರಬೇತಿ ಸಿಗುವುದಿಲ್ಲ ಎಂದು ಅವರು ಹೇಳುತ್ತಾರೆ.

ಈ ಪರಿಸ್ಥಿತಿಯಲ್ಲಿ ಈ ವಿದ್ಯಾರ್ಥಿಗಳು ಪರೀಕ್ಷಗೆ ಕುಳಿತರೆ ಪದವಿ ಪೂರ್ವ ಕಾಲೇಜಿಗೆ ಅವರು ಪ್ರವೇಶವನ್ನು ಪಡೆದುಕೊಳ್ಳಲು ಸಾಧ್ಯವಿದೆಯೇ?

ಇಷ್ಟೇ ಅಲ್ಲದೆ ಈ ಸಮಯದಲ್ಲಿ ಇರುವ ಮತ್ತೊಂದು ಸಮಸ್ಯೆಯೆಂದರೆ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸುವುದು. ದೂರದ ಹಳ್ಳಿಗಳು ಹಾಗೂ ಗುಡ್ಡಗಾಡು ಪ್ರದೇಶದ ಎಲ್ಲಾ ವಿದ್ಯಾರ್ಥಿಗಳು ಈ ಸಮಸ್ಯೆಯನ್ನು ಎದುರಿಸುತ್ತಾರೆ. ಉದಾಹರಣೆಗೆ ಐಶ್ವರ್ಯಾ ಅವರ ಪರೀಕ್ಷಾ ಕೇಂದ್ರವು ತನ್ನ ಹಳ್ಳಿಯಿಂದ ಸುಮಾರು 8 ಕಿ.ಮೀ ದೂರದಲ್ಲಿದಲ್ಲಿದೆ. ಕೇಂದ್ರಕ್ಕೆ ಬಸ್ಸಿನಲ್ಲಿ ಹೋದರೂ ಕನಿಷ್ಠ 2 ಕಿ.ಮೀ ನಡೆದು ಕೊಂಡೆ ಹೋಗಬೇಕು.

ತಮಿಳುನಾಡಿನ ಗುಡ್ಡಗಾಡು ಪ್ರದೇಶಗಳಲ್ಲಿನ ಅನೇಕ ವಿದ್ಯಾರ್ಥಿಗಳು ಇದೇ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕೆಲವೊಂದು ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ 35 ಕಿ.ಮಿ. ದೂರದಲ್ಲಿದೆ. ಆದರೆ, ರಾಜ್ಯ ಸರ್ಕಾರವು ಎಲ್ಲಾ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯಗಳನ್ನು ಏರ್ಪಡಿಸಿದೆ. ಆದರೆ ಲಕ್ಷಾಂತರ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತದೆಯೇ ಎಂಬುದು ಪ್ರಶ್ನೆಯಾಗಿದೆ.

ಇದಲ್ಲದೆ, ಜೂನ್ 11 ರೊಳಗೆ ತಮಿಳುನಾಡಿನ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನಾಂಗವಾದ ಆದಿ ದ್ರಾವಿಡಾರ್‌ ವಿದ್ಯಾರ್ಥಿಗಳನ್ನು ಮತ್ತೆ ಹಾಸ್ಟೆಲ್‌ಗಳಿಗೆ ಕರೆತರಲು ರಾಜ್ಯ ನಿರ್ಧರಿಸಿದೆ. ಈ ಹಾಸ್ಟೆಲ್‌ಗಳಲ್ಲಿ ಉಳಿದುಕೊಂಡಿದ್ದ ಅನೇಕ ವಿದ್ಯಾರ್ಥಿಗಳು ಲಾಕ್‌ಡೌನ್‌ ಘೋಷಿಸಿದಾಗ ತಮ್ಮೆ ಮನೆಗೆ ತೆರಳುವ ಹೊತ್ತಿಗೆ ಪಠ್ಯಪುಸ್ತಕಗಳು ಸೇರಿದಂತೆ ತಮ್ಮ ವಸ್ತುಗಳನ್ನು ಸಹ ತೆಗೆದುಕೊಂಡು ಹೋಗಿರಲಿಲ್ಲ.

ಇದರಿಂದಾಗಿ ತಜ್ಞೆ ಡಾ. ವಿ.ವಸಂತಿ ಪರೀಕ್ಷೆಗಳ ರದ್ದತಿ ಹಾಗೂ ಎಲ್ಲಾ ವಿದ್ಯಾರ್ಥಿಗಳನ್ನು 11 ನೇ ತರಗತಿಗೆ ಬಡ್ತಿ ನೀಡುವಂತೆ ಕೋರಿದ್ದಾರೆ.

ಆದಾಗ್ಯೂ, ಪ್ರತಿ ವಿದ್ಯಾರ್ಥಿಯ ಜೀವನದಲ್ಲಿ ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್‌ಎಸ್‌ಎಲ್‌ಸಿ) ಮುಖ್ಯವಾಗಿದೆ ಎಂದು ವಸಂತಿ ಹೇಳುತ್ತಾರೆ. ಪರೀಕ್ಷೆಗಳನ್ನು ನಡೆಸಲು ತೆಗೆದುಕೊಳ್ಳುತ್ತಿರುವ ಪ್ರಯತ್ನಗಳಿಗಿಂತ ಮಕ್ಕಳ ಭವಿಷ್ಯವು ಬಹಳ ಮುಖ್ಯ ಎಂದು ಸರ್ಕಾರ ಭಾವಿಸುತ್ತದೆ ಎಂದು ಅವರು ಹೇಳುತ್ತಾರೆ.

ರಾಜ್ಯವು ಅಚಲವಾಗಿದ್ದರೆ, ಎಲ್ಲಾ ತರಗತಿಗಳಿಗೆ ಶಾಲೆಗಳು ಮತ್ತೆ ತೆರೆದ ಒಂದು ತಿಂಗಳ ನಂತರ ಪರೀಕ್ಷೆಗಳನ್ನು ನಡೆಸಬೇಕು ಎಂಬುವುದು ವಸಂತಿ ಅವರ ಅಭಿಪ್ರಾಯ.

ಈ ಒಂದು ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ತಮ್ಮ ಹಳೆಯ ಪಾಠಗಳನ್ನು ಪುನಃ ಮನನ ಹಾಗೂ ತಂತ್ರಜ್ಞಾನಗಳಿಂದ ವಂಚಿತರಾಗಿರುವ ಹೇಮ ಪ್ರಿಯ, ಕಿರಣ್ ಹಾಗೂ ಭಾಷಾ ಅಡೆತಡೆಗಳನ್ನು ಎದುರಿಸುತ್ತಿರುವ ಐಶ್ವರ್ಯಾರಂತಹವರೂ ತಮ್ಮ ಕಲಿಕೆಯನ್ನು ಮುಂದುವರೆಸಲು ಅನುವು ಮಾಡಿಕೊಡುತ್ತದೆ.

ಮೂಲ: ವಿಗ್ನೇಶ್‌ ಕೆ.ಜೆ ದಿ ಫೆಡರಲ್‌


ಓದಿ:  ಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...