Homeಕರ್ನಾಟಕಎಸ್ಸೆಸ್ಸೆಲ್ಸಿ ಪರೀಕ್ಷೆ: ಹೆಚ್ಚಿನ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ಇನ್ನೂ ತಯಾರಾಗಿಲ್ಲ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಹೆಚ್ಚಿನ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ಇನ್ನೂ ತಯಾರಾಗಿಲ್ಲ

- Advertisement -
- Advertisement -

ಲಾಕ್‌ಡೌನ್‌‌ನಿಂದಾಗಿ ಮುಂದೂಲ್ಪಟ್ಟಿದ್ದ 10 ನೇ ತರಗತಿಯ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳು ಮುಂದಾಗುತ್ತಿದೆ. ಆದರೆ ಈ ವರ್ಷ ಕಲಿತ ಶೇಕಡಾ 60 ರಷ್ಟು ವಿಷಯಗಳನ್ನು ವಿದ್ಯಾರ್ಥಿಗಳು ಮರೆತಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಡುತ್ತಾರೆ. ಅದರಲ್ಲೂ ಎಸ್ಸಿ ಹಾಗೂ ಎಸ್ಟಿ ವಿದ್ಯಾರ್ಥಿಗಳು ಈ ಲಾಕ್‌ಡೌನ್ ಸಮಯದಲ್ಲಿ ಶಿಕ್ಷಣ ಸಂಸ್ಥಗಳು ಅಥವಾ ಸರ್ಕಾರ ನಡೆಸಿದ ಆನ್‌ಲೈನ್‌ ಕ್ಲಾಸುಗಳಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ.

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ 10 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಿದ್ದ ದಕ್ಷಿಣದ ಕೆಲ ರಾಜ್ಯಗಳು ಅವುಗಳನ್ನು ಶೀಘ್ರವಾಗಿ ನಡೆಸಲು ಉತ್ಸುಕವಾಗಿವೆ. ಕೇರಳ ಈಗಾಗಲೇ ಮೇ 26 ಮತ್ತು 29 ರ ನಡುವೆ ಉಳಿದ ಮೂರು ಪರೀಕ್ಷೆಗಳನ್ನು ನಡೆಸಿದೆ. ಜೂನ್ 8 ಕ್ಕೆ ನಿಗದಿಯಾಗಿದ್ದ ’ಟಿಎಸ್ ಎಸ್‌ಎಸ್‌ಸಿ’ ಪರೀಕ್ಷೆಗಳನ್ನು ತೆಲಂಗಾಣ ರದ್ದುಗೊಳಿಸಿದ್ದರೆ, ತಮಿಳುನಾಡು ಸಹ ಪರೀಕ್ಷೆ ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡಲು ಮುಂದಾಗಿದೆ. ಆದರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಕ್ರಮವಾಗಿ ಜೂನ್ 25 ಮತ್ತು ಜುಲೈ 10 ಅಂತಿಮ ಪರೀಕ್ಷೆಗಳನ್ನು ನಡೆಸಲಿದೆ.


ಇದನ್ನೂ ಓದಿ: ತಮಿಳುನಾಡಿನಲ್ಲೂ SSLC ಪರೀಕ್ಷೆ ರದ್ದು: ವಿದ್ಯಾರ್ಥಿಗಳಿಗೆ ಮುಂಬಡ್ತಿ


ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಖಾಸಗಿ ಶಾಲೆಗಳು ಹಾಗೂ ಕೆಲವು ಸರ್ಕಾರಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ತರಗತಿ ಪ್ರಾರಂಭಿಸಿದ್ದಾರೆ. ರಾಜ್ಯ ಸರ್ಕಾರಗಳು ಸ್ಥಳೀಯ ಕೇಬಲ್ ನೆಟ್‌ವರ್ಕ್‌ಗಳ ಮೂಲಕ ತರಗತಿಗಳನ್ನು ನಡೆಸುತ್ತಿವೆ. ಆದರೆ ಈ ಎಲ್ಲದರ ಹೊರತಾಗಿಯೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಜೂನ್ 15 ರಂದು ತಮಿಳುನಾಡಿನಲ್ಲಿ ರಾಜ್ಯದ 9.45 ಲಕ್ಷ ವಿದ್ಯಾರ್ಥಿಗಳು 10 ನೇ ತರಗತಿ ಪರೀಕ್ಷೆಗೆ ಹಾಜರಾಗಲು ಸಿದ್ದರಾಗಿದ್ದರು. ಇದೇ ಸಮಯದಲ್ಲಿ ತಮಿಳುನಾಡಿನ ಪರಿಶಿಷ್ಟ ಪಂಗಡ ಸಮುದಾಯದ 14 ವರ್ಷದ ಬಾಲಕಿ ಹೇಮ ಪ್ರಿಯಾ ಗಣಿತ ಪರಿಕ್ಷೆಯಲ್ಲಿ ಉತ್ತೀರ್ಣ ಗಳಿಸಲು ನೆರವಾಗುವ ಗ್ರಾಫ್ ಅನ್ನು ಹೇಗೆ ಬರೆಯುವುದು ಎಂದು ತಿಳಿದಿಲ್ಲ ಎನ್ನುತ್ತಾರೆ.

ಹೇಮಾ ಪ್ರಿಯಾ ತಮ್ಮ ಪರೀಕ್ಷೆಯನ್ನು ಹೇಗೆ ನಿಭಾಯಿಸುತ್ತಾರೆಂದು ವಿವರಿಸಲು ಪ್ರಾರಂಭಿಸಿದಾಗ, ಅವರ ಧ್ವನಿ ನಡುಗುತ್ತದೆ. ತಿರುವಳ್ಳೂರು ಜಿಲ್ಲೆಯ ಪೊನ್ನೆರಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿರುವ ಇವರು ತನ್ನ ಸ್ನೇಹಿತರು ಹೋಗುವಂತೆ ಖಾಸಗಿ ಕೋಚಿಂಗ್ ಕೇಂದ್ರಗಳಿಗೆ ಹೋಗಲು ಮನಸ್ಸಿದ್ದರೂ, ಪ್ರವೇಶ ಶುಲ್ಕವಾಗಿ 1000 ರೂ. ಹಾಗೂ ಮಾಸಿಕ ಶುಲ್ಕವಾಗಿ 500 ರೂ. ಗಳನ್ನು ಪಾವತಿಸಬೇಕಾದ್ದರಿಂದ ಅವರು ಅಲ್ಲಿಗೆ ಹೋಗಲು ಸಾಧ್ಯವಾಗದೇ, ಖಾಸಗಿ ಕೋಚಿಂಗ್ ಹೋಗುವ ತನ್ನ ಸ್ನೇಹಿತರಿಂದ ತಿಳಿಯಲು ಒಂದು ಗಂಟೆ ಮುಂಚಿತವಾಗಿ ಶಾಲೆಗೆ ಹೋಗುತ್ತಿದ್ದರು ಆದರೆ ಈಗ ಲಾಕ್‌ಡೌನ್ ಆದ್ದರಿಂದ ಅದೂ ಅಸಾಧ್ಯವಾಗಿದೆ.

ಇವರ ತರಗತಿಗೆ ಅರ್ಧ ವರ್ಷದವರೆಗೂ ಗಣಿತ ಶಿಕ್ಷಕರೇ ಇರಲಿಲ್ಲ, ನಂತರ ಶಿಕ್ಷಕರು ಬಂದರೂ ಎಲ್ಲಾ ವಿಷಯಗಳಲ್ಲಿ ಸುಮಾರು 60 ಅಂಕಗಳನ್ನು ಪಡೆಯುತ್ತಿದ್ದ ಹೇಮಾ ಮಧ್ಯಾವಧಿ ಗಣಿತ ಪರೀಕ್ಷೆಯಲ್ಲಿ ವಿಫಲವಾಗಿದ್ದಾರೆ. ಬೋರ್ಡ್ ಪರೀಕ್ಷೆಗೆ ತಯಾರಾಗುವ ಹೊತ್ತಿಗೆ ಲಾಕ್‌ಡೌನ್‌ ವಿಧಿಸಲಾಯಿತು ಆದರೆ ಇಂಟರ್ನೆಟ್ ಇಲ್ಲದ ಅವರ ತಂದೆಯ ಮೊಬೈಲ್ ಫೋನಿನಿಂದ ಆನ್‌ಲೈನ್ ಕ್ಲಾಸುಗಳನ್ನುಸೇರಲು ಅವರಿಗೆ ಸಾಧ್ಯವಾಗಿಲ್ಲ. ಹಾಗೆ ನೋಡಿದರೆ ಆ ಬಟನ್‌ ಫೋನಿನಲ್ಲಿ ರೀಚಾರ್ಜ್‌ಮಾಡಲೂ ಅವರ ತಂದೆಯಲ್ಲಿ ದುಡ್ಡು ಇರಲಿಲ್ಲ. ಈಗ ಪರೀಕ್ಷೆಗಳು ನಡೆಯಲಿವೆ ಎನ್ನುತ್ತಿದ್ದಂತೆ ಏನು ಮಾಡಬೇಕು ಎಂದು ತೋಚದ ಸ್ಥಿತಿಯಲ್ಲಿ ಅವರಿದ್ದಾರೆ.

ತಮಿಳು ನಾಡಿನಿಂದ 450 ಕಿ.ಮೀ. ದೂರದ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಯೆಮಿಗನೂರ್ ಪಟ್ಟಣದ ರಸ್ತೆಬದಿಯ ಗುಡಿಸಲಿನಲ್ಲಿ 15 ವರ್ಷದ ಕಿರಣ್ ವಾಸಿಸುತ್ತಿದ್ದಾರೆ. ಇಂಗ್ಲಿಷ್ ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ಅವರು ಎಸ್‌ಟಿ ಸಮುದಾಯಕ್ಕೆ ಸೇರಿದವರಾಗಿದ್ದು, ಕುಟುಂಬವೂ ಬುಟ್ಟಿ ಹೆಣೆದು ಜೀವನ ಸಾಗಿಸುತ್ತದೆ.

ಹೇಮಾ ಪ್ರಿಯಾ ಅವರಂತೆ ಕಿರಣ್ ಕೂಡ ಸ್ಮಾರ್ಟ್‌ಫೋನ್ ಹೊಂದಿಲ್ಲ. ಇದರಿಂದಾಗಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ನಡೆಸಿದ ವಾಟ್ಸಾಪ್ ಪರೀಕ್ಷೆಗಳಿಂದ ವಂಚಿತವಾಗಿದ್ದಾರೆ. ಆದರೆ ಅವರು ಸ್ನೇಹಿತರ ಮನೆಯ ಟೀವಿಯಲ್ಲಿ ಸರ್ಕಾರ ನಡೆಸುವ ಕೆಲವು ತರಗತಿಗಳನ್ನು ವೀಕ್ಷಿಸುತ್ತಾರೆ, ಆದರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಅದು ಸಾಕಾಗುವುದಿಲ್ಲ ಎಂಬ ಭಯ ಅವರಿಗಿದೆ.

ಲಾಕ್ ಡೌನ್ ಆಗುವವರೆಗೂ, 15 ವರ್ಷದ ಕಿರಣ್ ಸಂಜೆಯ ವೇಳೆ ಖಾಸಗಿ ವಾಟರ್ ಟ್ಯಾಂಕರ್‌ನಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದರಿಂದ ದಿನಕ್ಕೆ ₹ 100 ಪಡೆಯುತ್ತಿದ್ದರು. ಆಗ ಅವರಿಗೆ ಓದಲು ಸಮಯ ಸಾಲುತ್ತಿರಲಿಲ್ಲ. ಆದರೆ ಈಗ ಅವರಿಗೆ ಲಾಕ್‌ಡೌನ್‌ನಿಂದಾಗಿ ಸಾಕಷ್ಟು ಸಮಯವಿದ್ದರೂ ಓದಿಸಲು ಸರಿಯಾದ ಮಾರ್ಗದರ್ಶನ ಇಲ್ಲ.

ಅದೃಷ್ಟವಶಾತ್, ಕಿರಣ್ ಇಂಗ್ಲಿಷ್‌ನಲ್ಲಿ ’ಮನ ಟಿವಿ’ಯಲ್ಲಿ ನಡೆಯುವ ಕ್ಲಾಸುಗಳನ್ನು ನೋಡುತ್ತಾರೆ ಆದರೆ ತೆಲುಗು ಭಾಷಿಕ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಇದು ಸಾಧ್ಯವಾಗುವುದಿಲ್ಲ.

ಯೆಮ್ಮಿಗನೂರ್‌ನಿಂದ ಸುಮಾರು 50 ಕಿ.ಮೀ ದೂರದಲ್ಲಿನ ಕರ್ನಾಟಕದ ಗಡಿಯಲ್ಲಿರುವ ಜಂಪಾಪುರಂ ಗ್ರಾಮದ 1 ನೇ ತರಗತಿಯಿಂದ ತೆಲುಗು ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿದ ಎಸ್ಸಿ ಸಮುದಾಯದ 14 ವರ್ಷದ ’ಐಶ್ವರ್ಯ’, ಆನ್‌ಲೈನ್‌ ತರಗತಿಗಳನ್ನು ವಿಶೇಷವಾಗಿ ವಿಜ್ಞಾನ ಮತ್ತು ಸಾಮಾಜಿಕ ಅಧ್ಯಯನ ವಿಷಯಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟಕರವಾಗಿದೆ. ಆದರೆ ಇವರಿಗೆ ತನ್ನ ಸೋದರಸಂಬಂಧಿಯ ಸ್ಮಾರ್ಟ್‌ಫೋನ್‌ನಲ್ಲಿ ವಾಟ್ಸಾಪ್ ಕ್ಲಾಸುಗಳಲ್ಲಿ ಭಾಗವಹಿಸಿದ್ದಾರೆ.

ಪ್ರತಿ ವಿಷಯದಲ್ಲಿ ಸುಮಾರು 50 ಅಂಕಗಳನ್ನು ಗಳಿಸುವ ಐಶ್ವರ್ಯಾ, ಈ ಆನ್‌ಲೈನ್ ಮತ್ತು ಟಿವಿಯ ತರಗತಿಗಳು ಶಾಲೆಯಲ್ಲಿ ತನ್ನ ಶಿಕ್ಷಕರು ಬೋಧಿಸುವಷ್ಟು ಆಗುವುದಿಲ್ಲ ಎನ್ನುತ್ತಾರೆ.

ವಾಟ್ಸಾಪ್ ಪರೀಕ್ಷೆಗಳು ಶಾಲೆಯ ಪರೀಕ್ಷಗಳಿಗಿಂತ ಭಿನ್ನವಾಗಿರುತ್ತದೆ ಎಂದು ಕರ್ನೂಲ್‌ನ ಸರ್ಕಾರಿ ಶಿಕ್ಷಕ ದೇವೇಂದ್ರ ಬಾಬು ಹೇಳುತ್ತಾರೆ. ಕಡಿಮೆ ವಿಧ್ಯಾರ್ಥಿಗಳಿದ್ದರೆ ಶಿಕ್ಷಕರಿಗೆ ಎಲ್ಲಾ ವಿದ್ಯಾರ್ಥಿಗಳನ್ನು ವಾಟ್ಸಾಪ್ ಗುಂಪಿನಲ್ಲಿ ನಿರ್ವಹಿಸಲು ಮತ್ತು ಸಂಘಟಿಸಲು ಸುಲಭವಾಗಿರುತ್ತದೆ. ಆದರೆ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಶಾಲೆಗಳ ಶಿಕ್ಷಕರಿಗೆ ಎಲ್ಲಾ ವಿದ್ಯಾರ್ಥಿಗಳನ್ನು ಒಟ್ಟಿಗೆ ಸೇರಿಸುವಲ್ಲಿ ತೊಂದರೆಯಾಗುತ್ತದೆ. ಅಲ್ಲದೆ ಇಂಟರ್ನೆಟ್ ಇಲ್ಲದೆ ಇರುವ ಸಮುದಾಯಗಳ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ದೇವೇಂದ್ರ ಬಾಬು ಹೇಳುತ್ತಾರೆ.

ಬೆಂಗಳೂರಿನ ಕೋರಮಂಗಲದ ಕೊಳೆಗೇರಿಗಳಲ್ಲಿರುವ ವಿದ್ಯಾರ್ಥಿಗಳ ವಿಷಯವೂ ಇದೇ ಆಗಿದೆ. ಆನ್‌ಲೈನ್ ತರಗತಿಗಳು ಏಕರೂಪವಾಗಿಲ್ಲ. ಕೆಲವು ಸರ್ಕಾರಿ ಅನುದಾನಿತ ಶಾಲೆಗಳ ಶಿಕ್ಷಕರು ಆನ್‌ಲೈನ್ ಪಾಠಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದರೆ ಅನೇಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಇವುಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಈ ಪ್ರದೇಶದ ಕೊಳೆಗೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆಧಾರಿತ ಸಂಘಟನೆಯಾದ ’ಮಾರ್ಗಾ’ದ ಗಣಿತ ಶಿಕ್ಷಕಿ ಮತ್ತು ಕಾರ್ಯಕ್ರಮ ಸಂಯೋಜಕರಾದ ಮೋನಿಷಾ ಹೇಳುತ್ತಾರೆ.

ಈ ವರ್ಷ ವಿದ್ಯಾರ್ಥಿಗಳು ಕಲಿತದ್ದರಲ್ಲಿ ಶೇಕಡಾ 60 ರಷ್ಟು ಮರೆತಿದ್ದಾರೆ ಎಂದು ಅವರು ಹೇಳುತ್ತಾರೆ. ಈ ವಿದ್ಯಾರ್ಥಿಗಳಿಗೆ ಸಂಜೆಯ ಸಮಯದಲ್ಲಿ ತರಬೇತಿ ನೀಡಲು ಸರ್ಕಾರವು ಮುಂದಾಗುತ್ತಿದ್ದರೂ, ತರಗತಿಗಳನ್ನು ತೆಗೆದುಕೊಳ್ಳುವುದನ್ನು ಮುಂದುವರೆಸುತ್ತಿದ್ದರೂ, ಈ ಪ್ರದೇಶದ ಏಳು ಕೊಳೆಗೇರಿಗಳಲ್ಲಿ ಎರಡನ್ನು ಮಾತ್ರ ಒಳಗೊಳ್ಳುತ್ತದೆ. ಆದ್ದರಿಂದ, ಇತರ ಕೊಳೆಗೇರಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಯಾವುದೇ ತರಬೇತಿ ಸಿಗುವುದಿಲ್ಲ ಎಂದು ಅವರು ಹೇಳುತ್ತಾರೆ.

ಈ ಪರಿಸ್ಥಿತಿಯಲ್ಲಿ ಈ ವಿದ್ಯಾರ್ಥಿಗಳು ಪರೀಕ್ಷಗೆ ಕುಳಿತರೆ ಪದವಿ ಪೂರ್ವ ಕಾಲೇಜಿಗೆ ಅವರು ಪ್ರವೇಶವನ್ನು ಪಡೆದುಕೊಳ್ಳಲು ಸಾಧ್ಯವಿದೆಯೇ?

ಇಷ್ಟೇ ಅಲ್ಲದೆ ಈ ಸಮಯದಲ್ಲಿ ಇರುವ ಮತ್ತೊಂದು ಸಮಸ್ಯೆಯೆಂದರೆ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸುವುದು. ದೂರದ ಹಳ್ಳಿಗಳು ಹಾಗೂ ಗುಡ್ಡಗಾಡು ಪ್ರದೇಶದ ಎಲ್ಲಾ ವಿದ್ಯಾರ್ಥಿಗಳು ಈ ಸಮಸ್ಯೆಯನ್ನು ಎದುರಿಸುತ್ತಾರೆ. ಉದಾಹರಣೆಗೆ ಐಶ್ವರ್ಯಾ ಅವರ ಪರೀಕ್ಷಾ ಕೇಂದ್ರವು ತನ್ನ ಹಳ್ಳಿಯಿಂದ ಸುಮಾರು 8 ಕಿ.ಮೀ ದೂರದಲ್ಲಿದಲ್ಲಿದೆ. ಕೇಂದ್ರಕ್ಕೆ ಬಸ್ಸಿನಲ್ಲಿ ಹೋದರೂ ಕನಿಷ್ಠ 2 ಕಿ.ಮೀ ನಡೆದು ಕೊಂಡೆ ಹೋಗಬೇಕು.

ತಮಿಳುನಾಡಿನ ಗುಡ್ಡಗಾಡು ಪ್ರದೇಶಗಳಲ್ಲಿನ ಅನೇಕ ವಿದ್ಯಾರ್ಥಿಗಳು ಇದೇ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕೆಲವೊಂದು ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ 35 ಕಿ.ಮಿ. ದೂರದಲ್ಲಿದೆ. ಆದರೆ, ರಾಜ್ಯ ಸರ್ಕಾರವು ಎಲ್ಲಾ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯಗಳನ್ನು ಏರ್ಪಡಿಸಿದೆ. ಆದರೆ ಲಕ್ಷಾಂತರ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತದೆಯೇ ಎಂಬುದು ಪ್ರಶ್ನೆಯಾಗಿದೆ.

ಇದಲ್ಲದೆ, ಜೂನ್ 11 ರೊಳಗೆ ತಮಿಳುನಾಡಿನ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನಾಂಗವಾದ ಆದಿ ದ್ರಾವಿಡಾರ್‌ ವಿದ್ಯಾರ್ಥಿಗಳನ್ನು ಮತ್ತೆ ಹಾಸ್ಟೆಲ್‌ಗಳಿಗೆ ಕರೆತರಲು ರಾಜ್ಯ ನಿರ್ಧರಿಸಿದೆ. ಈ ಹಾಸ್ಟೆಲ್‌ಗಳಲ್ಲಿ ಉಳಿದುಕೊಂಡಿದ್ದ ಅನೇಕ ವಿದ್ಯಾರ್ಥಿಗಳು ಲಾಕ್‌ಡೌನ್‌ ಘೋಷಿಸಿದಾಗ ತಮ್ಮೆ ಮನೆಗೆ ತೆರಳುವ ಹೊತ್ತಿಗೆ ಪಠ್ಯಪುಸ್ತಕಗಳು ಸೇರಿದಂತೆ ತಮ್ಮ ವಸ್ತುಗಳನ್ನು ಸಹ ತೆಗೆದುಕೊಂಡು ಹೋಗಿರಲಿಲ್ಲ.

ಇದರಿಂದಾಗಿ ತಜ್ಞೆ ಡಾ. ವಿ.ವಸಂತಿ ಪರೀಕ್ಷೆಗಳ ರದ್ದತಿ ಹಾಗೂ ಎಲ್ಲಾ ವಿದ್ಯಾರ್ಥಿಗಳನ್ನು 11 ನೇ ತರಗತಿಗೆ ಬಡ್ತಿ ನೀಡುವಂತೆ ಕೋರಿದ್ದಾರೆ.

ಆದಾಗ್ಯೂ, ಪ್ರತಿ ವಿದ್ಯಾರ್ಥಿಯ ಜೀವನದಲ್ಲಿ ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್‌ಎಸ್‌ಎಲ್‌ಸಿ) ಮುಖ್ಯವಾಗಿದೆ ಎಂದು ವಸಂತಿ ಹೇಳುತ್ತಾರೆ. ಪರೀಕ್ಷೆಗಳನ್ನು ನಡೆಸಲು ತೆಗೆದುಕೊಳ್ಳುತ್ತಿರುವ ಪ್ರಯತ್ನಗಳಿಗಿಂತ ಮಕ್ಕಳ ಭವಿಷ್ಯವು ಬಹಳ ಮುಖ್ಯ ಎಂದು ಸರ್ಕಾರ ಭಾವಿಸುತ್ತದೆ ಎಂದು ಅವರು ಹೇಳುತ್ತಾರೆ.

ರಾಜ್ಯವು ಅಚಲವಾಗಿದ್ದರೆ, ಎಲ್ಲಾ ತರಗತಿಗಳಿಗೆ ಶಾಲೆಗಳು ಮತ್ತೆ ತೆರೆದ ಒಂದು ತಿಂಗಳ ನಂತರ ಪರೀಕ್ಷೆಗಳನ್ನು ನಡೆಸಬೇಕು ಎಂಬುವುದು ವಸಂತಿ ಅವರ ಅಭಿಪ್ರಾಯ.

ಈ ಒಂದು ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ತಮ್ಮ ಹಳೆಯ ಪಾಠಗಳನ್ನು ಪುನಃ ಮನನ ಹಾಗೂ ತಂತ್ರಜ್ಞಾನಗಳಿಂದ ವಂಚಿತರಾಗಿರುವ ಹೇಮ ಪ್ರಿಯ, ಕಿರಣ್ ಹಾಗೂ ಭಾಷಾ ಅಡೆತಡೆಗಳನ್ನು ಎದುರಿಸುತ್ತಿರುವ ಐಶ್ವರ್ಯಾರಂತಹವರೂ ತಮ್ಮ ಕಲಿಕೆಯನ್ನು ಮುಂದುವರೆಸಲು ಅನುವು ಮಾಡಿಕೊಡುತ್ತದೆ.

ಮೂಲ: ವಿಗ್ನೇಶ್‌ ಕೆ.ಜೆ ದಿ ಫೆಡರಲ್‌


ಓದಿ:  ಕೂಸು ಹುಟ್ಟೋ ಮುಂಚೆ ಕುಲಾವಿ : ಈ ಕಾಲೇಜುಗಳಲ್ಲಿ SSLC ಪರೀಕ್ಷೆ ಮುನ್ನವೇ PUCಗೆ ದಾಖಲಾತಿ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...