Homeಕರ್ನಾಟಕSSLC ಪರೀಕ್ಷೆಯಲ್ಲಿ ನಕಲು ತಡೆಯಲು ಕ್ರಮ: ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧಾರ

SSLC ಪರೀಕ್ಷೆಯಲ್ಲಿ ನಕಲು ತಡೆಯಲು ಕ್ರಮ: ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧಾರ

- Advertisement -
- Advertisement -

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಹಲವು ಕ್ರಮಗಳನ್ನು ಜಾರಿಗೆ ತರಲು ಮುಂದಾಗಿದ್ದು, ಪರೀಕ್ಷಾ ಕೇಂದ್ರಗಳ ಕೊಠಡಿ ಮೇಲ್ವಿಚಾರಕರಾಗಿ ಪ್ರೌಢಶಾಲಾ ಶಿಕ್ಷಕರನ್ನು ಬಳಸಿಕೊಳ್ಳವ ಬದಲು ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಪ್ರಾಥಮಿಕ ಶಾಲಾ ಶಿಕ್ಷಕರನ್ನಷ್ಟೇ ಮೇಲ್ವಿಚಾರಕರಾಗಿ ನೇಮಿಸಿಕೊಳ್ಳಲು ತೀರ್ಮಾನಿಸಿದೆ. ಇದುವರೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಪ್ರೌಢಶಾಲಾ ಶಿಕ್ಷಕರು ಕೊಠಡಿ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು. ಒಂದು ಶಾಲೆಯ ಶಿಕ್ಷಕರನ್ನು ಬೇರೊಂದು ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾಗುತ್ತಿತ್ತು. ಶಿಕ್ಷಕರ ಕೊರತೆಯಾದಾಗ ಮಾತ್ರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತಿತ್ತು.

ಈ ಹಿಂದೆ ರಾಜ್ಯದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ನಕಲು ಪ್ರಕರಣಗಳ ಕುರಿತು ತನಿಖೆ ನಡೆಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳು, ಕೊಠಡಿ ಮೇಲ್ವಿಚಾರಕರಾಗಿ ಕೆಲಸ ಮಾಡಿದ ಪ್ರೌಢಶಾಲಾ ಶಿಕ್ಷಕರೇ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ್ದನ್ನು ಪತ್ತೆಹಚ್ಚಿದ್ದರು. ಇಲಾಖೆಯ ಅಧಿಕಾರಿಗಳು ನೀಡಿದ ವರದಿ ಆಧಾರದಲ್ಲಿ ಮುಂದಿನ ಪರೀಕ್ಷೆಗಳಲ್ಲಿ ನಕಲು ನಡೆಯದಂತೆ ತಡೆಯಲು ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳುವ ನಿರ್ಧಾರಕ್ಕೆ ಮಂಡಳಿ ಬಂದಿದೆ. ಅಲ್ಲದೇ ಒಂದು ಪ್ರೌಢಶಾಲೆಯ ಎಸ್‌ಡಿಎ, ಡಿ ಗ್ರೂಪ್ ಸೇರಿದಂತೆ ಇತರ ಬೋಧಕೇತರ ಸಿಬ್ಬಂದಿಯನ್ನೂ ಕಡ್ಡಾಯವಾಗಿ ಅದೇ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸದಂತೆ ನಿಯಮ ರೂಪಿಸಲಾಗಿದೆ.

ಪ್ರತಿ ಜಿಲ್ಲೆಗಳು ಅಧಿಕ ಫಲಿತಾಂಶ ಪಡೆಯಬೇಕು. ಜಿಲ್ಲಾವಾರು ಫಲಿತಾಂಶದ ಪಟ್ಟಿಯಲ್ಲಿ ಮೇಲುಸ್ತರದಲ್ಲಿ ಇರಬೇಕು ಎಂದು ಪ್ರತಿ ಬಾರಿಯೂ ಗುರಿ ನಿಗದಿ ಮಾಡಲಾಗುತ್ತಿದೆ. ಕಡಿಮೆ ಫಲಿತಾಂಶ ಬಂದ ಶಾಲೆಗಳ ಶಿಕ್ಷಕರು, ಮುಖ್ಯ ಶಿಕ್ಷಕರ ವಿರುದ್ಧ ತೆಗೆದುಕೊಳ್ಳುತ್ತಿದ್ದ ಕ್ರಮಗಳೂ ನಕಲು ಹೆಚ್ಚಲು ಕಾರಣ ಎನ್ನುವುದು ವರದಿಯಲ್ಲಿ ಬಹಿರಂಗವಾಗಿದೆ. ಹಾಗಾಗಿ, ಫಲಿತಾಂಶ ವೃದಿಗೆ ಒತ್ತಡ ಹಾಕದೇ ಉತ್ತಮ ಫಲಿತಾಂಶ ಪಡೆಯಲು ಅಗತ್ಯವಾದ ಯೋಜನೆಗಳನ್ನು ಅಳವಡಿಸಿಕೊಳ್ಳಲು ಹಾಗೂ ಪೋಷಕರು, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವತ್ತ ಗಮನ ಹರಿಸಲು ಸೂಚಿಸಲಾಗಿದೆ.

ನಕಲು ತಡೆಯಲು ಡ್ರೋನ್ ಬಳಕೆ:

ಈವರೆಗೂ ಪರೀಕ್ಷಾ ಕೊಠಡಿಗಳಲ್ಲಿ ನಕಲು ತಡೆಯಲು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುತ್ತಿತ್ತು. ಬಹುತೇಕ ಶಾಲೆಗಳಲ್ಲಿ ವಿದ್ಯುತ್ ವ್ಯತ್ತಾಯ ತಾಂತ್ರಿಕ ಸಮಸ್ಯೆಗಳಿಂದ ಅವುಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಸಬೂಬು ನೀಡಲಾಗುತ್ತಿತ್ತು. ಇದು ನಕಲು ಕಾರ್ಯಕ ದಾರಿ ಮಾಡಿಕೊಟ್ಟಿತ್ತು. ಸಿಸಿಟಿವಿ ಕ್ಯಾಮರಾಗಳನ್ನು ಸುಸ್ಥಿತಿಯಲ್ಲಿಡುವ ಹೊಣೆಗಾರಿಕೆಯನ್ನು ಆಯಾ ಜಿಲ್ಲೆಯ ಉಪ ನಿರ್ದೇಶಕರು (ಡಿಡಿಪಿಐ) ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ನಿರ್ವಹಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳ ಮೇಲೆ ಡ್ರೋನ್ ಕಾಣ್ಗಾವಲು ಇಡಬೇಕು. ಪರೀಕ್ಷೆ ಆರಂಭವಾದ ದಿನದಿಂದ ಮುಗಿಯವವರೆಗೆ ಸ್ಥಳೀಯವಾಗಿ ಬಾಡಿಗೆಗೆ ಪಡೆಯಬೇಕು ಎಂದು ನಿಯಮ ರೂಪಿಸಲಾಗಿದೆ.

ಇದನ್ನೂ ಓದಿ: ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಪ್ರಸ್ತಾಪ ಇಲ್ಲ: ಸಚಿವ ಮುನಿಯಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....