Homeಕರ್ನಾಟಕSSLC ಪರೀಕ್ಷೆಯಲ್ಲಿ ನಕಲು ತಡೆಯಲು ಕ್ರಮ: ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧಾರ

SSLC ಪರೀಕ್ಷೆಯಲ್ಲಿ ನಕಲು ತಡೆಯಲು ಕ್ರಮ: ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧಾರ

- Advertisement -
- Advertisement -

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಹಲವು ಕ್ರಮಗಳನ್ನು ಜಾರಿಗೆ ತರಲು ಮುಂದಾಗಿದ್ದು, ಪರೀಕ್ಷಾ ಕೇಂದ್ರಗಳ ಕೊಠಡಿ ಮೇಲ್ವಿಚಾರಕರಾಗಿ ಪ್ರೌಢಶಾಲಾ ಶಿಕ್ಷಕರನ್ನು ಬಳಸಿಕೊಳ್ಳವ ಬದಲು ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಪ್ರಾಥಮಿಕ ಶಾಲಾ ಶಿಕ್ಷಕರನ್ನಷ್ಟೇ ಮೇಲ್ವಿಚಾರಕರಾಗಿ ನೇಮಿಸಿಕೊಳ್ಳಲು ತೀರ್ಮಾನಿಸಿದೆ. ಇದುವರೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಪ್ರೌಢಶಾಲಾ ಶಿಕ್ಷಕರು ಕೊಠಡಿ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು. ಒಂದು ಶಾಲೆಯ ಶಿಕ್ಷಕರನ್ನು ಬೇರೊಂದು ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾಗುತ್ತಿತ್ತು. ಶಿಕ್ಷಕರ ಕೊರತೆಯಾದಾಗ ಮಾತ್ರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತಿತ್ತು.

ಈ ಹಿಂದೆ ರಾಜ್ಯದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ನಕಲು ಪ್ರಕರಣಗಳ ಕುರಿತು ತನಿಖೆ ನಡೆಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳು, ಕೊಠಡಿ ಮೇಲ್ವಿಚಾರಕರಾಗಿ ಕೆಲಸ ಮಾಡಿದ ಪ್ರೌಢಶಾಲಾ ಶಿಕ್ಷಕರೇ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ್ದನ್ನು ಪತ್ತೆಹಚ್ಚಿದ್ದರು. ಇಲಾಖೆಯ ಅಧಿಕಾರಿಗಳು ನೀಡಿದ ವರದಿ ಆಧಾರದಲ್ಲಿ ಮುಂದಿನ ಪರೀಕ್ಷೆಗಳಲ್ಲಿ ನಕಲು ನಡೆಯದಂತೆ ತಡೆಯಲು ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳುವ ನಿರ್ಧಾರಕ್ಕೆ ಮಂಡಳಿ ಬಂದಿದೆ. ಅಲ್ಲದೇ ಒಂದು ಪ್ರೌಢಶಾಲೆಯ ಎಸ್‌ಡಿಎ, ಡಿ ಗ್ರೂಪ್ ಸೇರಿದಂತೆ ಇತರ ಬೋಧಕೇತರ ಸಿಬ್ಬಂದಿಯನ್ನೂ ಕಡ್ಡಾಯವಾಗಿ ಅದೇ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸದಂತೆ ನಿಯಮ ರೂಪಿಸಲಾಗಿದೆ.

ಪ್ರತಿ ಜಿಲ್ಲೆಗಳು ಅಧಿಕ ಫಲಿತಾಂಶ ಪಡೆಯಬೇಕು. ಜಿಲ್ಲಾವಾರು ಫಲಿತಾಂಶದ ಪಟ್ಟಿಯಲ್ಲಿ ಮೇಲುಸ್ತರದಲ್ಲಿ ಇರಬೇಕು ಎಂದು ಪ್ರತಿ ಬಾರಿಯೂ ಗುರಿ ನಿಗದಿ ಮಾಡಲಾಗುತ್ತಿದೆ. ಕಡಿಮೆ ಫಲಿತಾಂಶ ಬಂದ ಶಾಲೆಗಳ ಶಿಕ್ಷಕರು, ಮುಖ್ಯ ಶಿಕ್ಷಕರ ವಿರುದ್ಧ ತೆಗೆದುಕೊಳ್ಳುತ್ತಿದ್ದ ಕ್ರಮಗಳೂ ನಕಲು ಹೆಚ್ಚಲು ಕಾರಣ ಎನ್ನುವುದು ವರದಿಯಲ್ಲಿ ಬಹಿರಂಗವಾಗಿದೆ. ಹಾಗಾಗಿ, ಫಲಿತಾಂಶ ವೃದಿಗೆ ಒತ್ತಡ ಹಾಕದೇ ಉತ್ತಮ ಫಲಿತಾಂಶ ಪಡೆಯಲು ಅಗತ್ಯವಾದ ಯೋಜನೆಗಳನ್ನು ಅಳವಡಿಸಿಕೊಳ್ಳಲು ಹಾಗೂ ಪೋಷಕರು, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವತ್ತ ಗಮನ ಹರಿಸಲು ಸೂಚಿಸಲಾಗಿದೆ.

ನಕಲು ತಡೆಯಲು ಡ್ರೋನ್ ಬಳಕೆ:

ಈವರೆಗೂ ಪರೀಕ್ಷಾ ಕೊಠಡಿಗಳಲ್ಲಿ ನಕಲು ತಡೆಯಲು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುತ್ತಿತ್ತು. ಬಹುತೇಕ ಶಾಲೆಗಳಲ್ಲಿ ವಿದ್ಯುತ್ ವ್ಯತ್ತಾಯ ತಾಂತ್ರಿಕ ಸಮಸ್ಯೆಗಳಿಂದ ಅವುಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಸಬೂಬು ನೀಡಲಾಗುತ್ತಿತ್ತು. ಇದು ನಕಲು ಕಾರ್ಯಕ ದಾರಿ ಮಾಡಿಕೊಟ್ಟಿತ್ತು. ಸಿಸಿಟಿವಿ ಕ್ಯಾಮರಾಗಳನ್ನು ಸುಸ್ಥಿತಿಯಲ್ಲಿಡುವ ಹೊಣೆಗಾರಿಕೆಯನ್ನು ಆಯಾ ಜಿಲ್ಲೆಯ ಉಪ ನಿರ್ದೇಶಕರು (ಡಿಡಿಪಿಐ) ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ನಿರ್ವಹಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳ ಮೇಲೆ ಡ್ರೋನ್ ಕಾಣ್ಗಾವಲು ಇಡಬೇಕು. ಪರೀಕ್ಷೆ ಆರಂಭವಾದ ದಿನದಿಂದ ಮುಗಿಯವವರೆಗೆ ಸ್ಥಳೀಯವಾಗಿ ಬಾಡಿಗೆಗೆ ಪಡೆಯಬೇಕು ಎಂದು ನಿಯಮ ರೂಪಿಸಲಾಗಿದೆ.

ಇದನ್ನೂ ಓದಿ: ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಪ್ರಸ್ತಾಪ ಇಲ್ಲ: ಸಚಿವ ಮುನಿಯಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...