Homeಅಂಕಣಗಳುಹಾಸನ ಪ್ರಥಮ ಸ್ಥಾನಕ್ಕೆ ಭವಾನಿ ಕಾರಣ ಕಂಡ್ರೀ

ಹಾಸನ ಪ್ರಥಮ ಸ್ಥಾನಕ್ಕೆ ಭವಾನಿ ಕಾರಣ ಕಂಡ್ರೀ

- Advertisement -
- Advertisement -

ಯಾಹೂ |

ಅದೊಂದು ಕಾಲದಲ್ಲಿ ಎಸ್ಸೆಸೆಲ್ಸಿಯಲ್ಲಿ ಪೇಲಾಗುವುದು ಅವಮಾನವೇ ಅಲ್ಲ. ಆದರು ಪಾಸದವರು ಸರಸ್ವತಿ ಪುತ್ರನಂತೆ ಬೀಗುತ್ತಿದ್ದರು. ಕಾಲ ಮಾಗಿದ ಬದಲಾವಣೆಯಲ್ಲಿ ಬದುಕೇ ಮುಖ್ಯವಾಗಿ, ಡಿಗ್ರಿಗಳು ಸರ್ಟಿಪಿಕೇಟುಗಳಾಗುತ್ತಿರುವ ಸಮಯದಲ್ಲಿ ಫಲಿತಾಂಶಗಳೂ ಮಹತ್ವ ಕಳೆದುಕೊಂಡಿರುವಾಗ ಮಾನ್ಯ ರೇವಣ್ಣನವರ ಜಿಲ್ಲೆ ಎಸ್ಸೆಸ್ಸೆಲ್ಸಿಯಲ್ಲಿ ಟಾಪ್ ಒನ್ ನಂಬರಿಗೆ ಬಂದಿದೆಯಂತಲ್ಲಾ. ಈ ಅಚ್ಚರಿ ಸುದ್ದಿಯನ್ನು ರೇವಣ್ಣನವರ ಜೊತೆಯಲ್ಲದೆ ಇನ್ನಾರ ಜೊತೆ ಹಂಚಿಕೊಳ್ಳಬೇಕು ಅನ್ನಿಸಿ ಫೋನ್ ಮಾಡಿದಾಗ ರಿಂಗಾಯ್ತು.
ರಿಂಗ್‍ಠೋನ್: ಶಾರದೆ ದಯತೋರು ನೀ………. ಶಾರದೆ “ಹಲೋ ಯಾರ್ರೀ”
“ನಾನು ಸರ್ ಯಾಹು”
“ಯಾವೂ ಅಂದ್ರ್ಯಾರ್ರೀ”
“ಪತ್ರಕರ್ತ ಸರ್”
“ಏನಾಗಬೇಕು”
“ಏನೂ ಆಗಬೇಕಾಗಿಲ್ಲ ಸಾರ್, ಅಭಿನಂದನೆ ಹೇಳನ ಅಂತ ಮಾಡಿದೆ”
“ರಿಜಲ್ಟು ಬಂದ ಮ್ಯಾಲೆ ಹೇಳಿ”
“ಯಲಕ್ಷನ್ ವಿಷಯ ಅಲ್ಲ ಸಾ, ಹಾಸನ ಜಿಲ್ಲೇಲಿ ಈಸಾರಿ ಎಸೆಸೆಲ್ಸಿ ಎಕ್ಸಾಮಲ್ಲಿ ಮಕ್ಕಳು ಪ್ರಥಮ ಸ್ಥಾನಗಳಿಸಿವೆ”
“ಅದ್ಕೆ ಭವಾನಿಗೆ ಅಭಿನಂದನೆ ಹೇಳ್ರಿ”
“ಭವಾನಿ ಏನು ಮಾಡಿದ್ರು ಸಾರ್”
“ಇದೇನ್ರಿ ಹಿಂಕೇಳ್ತಿರಿ, ಭವಾನಿ ಏನು ವಸಿ ಕಷ್ಟ ಪಟ್ಳೇನ್ರಿ, ಅವುಳು ಕಷ್ಟಪಡದ ನಾನೇ ನೋಡಕ್ಕಾಗಲಿಲ್ಲ”
“ಆಶ್ಚರ್ಯ ಸಾರ್, ನಮಿಗೆ ಗೊತ್ತೇ ಇರಲಿಲ್ಲ.”
“ಅವುಳು ನನ್ನ ಮದುವೆಯಾದಾಗ ನನಿಗೇನು ಗೊತ್ತಿತ್ರಿ ಪ್ರತಿಯೊಂದನ್ನು ಕಲಿಸಿದ್ಲು.”
“ಪ್ರತಿಯೊಂದನ್ನು ಅಂದ್ರೆ ಸಾ”
“ಪೇಪರ್ ಓದದ ಕಲಿಸಿದ್ಲು, ಯಾರತ್ರ ಯಂಗೆ ಮಾತಾಡಬೇಕು ಅನ್ನದ್ರಿಂದ ಹಿಡುದು ಏನುತ್ತರ ಕೊಡಬೇಕು ಅನ್ನೋವರಿಗು ಪ್ರತಿಯೊಂದನ್ನು ಕಲಿಸಿದ್ಲು ಕಂಡ್ರಿ”
“ರಿಯಲಿ ದೇವೇಗೌಡ್ರು ಗ್ರೇಟ್ ಸಾರ್.”
“ಯಾಕ್ರೀ.”
“ತಮ್ಮ ಮಗನನ್ನ ಗ್ರಹಿಸಿ, ಅವನನ್ನ ತಿದ್ದಿ ವಿದ್ಯೆ ಬುದ್ದಿ ಕಲಸೊ ಹೆಣ್ಣು ತಂದು ಮದುವೆ ಮಾಡಿದ್ರಲ್ಲ ಅದ್ಕೆ.”
“ನಿಜವಾಗ್ಲು ಭವಾನಿ ನನ್ನ ಭಾಗಕ್ಕೆ ಕಾಳಿಕಂಡ್ರಿ.”
“ಅಷ್ಟು ವಳ್ಳೆ ಹೆಣ್ಣುಮಗಳ ಕಾಳಿ ಅಂತೀರಲಾ ಸಾರ್.”
“ನಾನೇಳದ ಸಲುಪ ತಿಳಕಳ್ರಿ, ಕವಿರತ್ನ ಸುಮ್ಮಸುಮ್ಮನೆ ಆದನೇನ್ರಿ, ಕಾಳಿ ಅವುನಿಗೆ ವಿದ್ಯೆ ಬುದ್ದಿ ಕೊಟ್ಟಮ್ಯಾಲವುನು ಕತೆ ಕವನ ಬರದ ಅಲವೇನ್ರಿ.”
“ರಿಯಲಿ ಗ್ರೇಟ್ ಸಾರ್, ಭವಾನಿ ನಿಮ್ಮ ಭಾಗದ ಸರಸ್ವತಿ; ರೇವಣ್ಣನಿಗೆ ವಿದ್ಯಾಬುದ್ದಿ ಕಲಿಸಿ, ಎಮ್ಮೆಲ್ಲೆ ಮಾಡಿ, ಮಂತ್ರಿ ಮಾಡಿ, ಇವತ್ತು ಕರ್ನಾಟಕಕ್ಕೆ ಒಬ್ಬ ಸಮರ್ಥ ಮಂತ್ರಿ ಕೊಟ್ಟಿರೋದ್ರ ಕ್ರೆಡಿಟ್ಟು ಭವಾನಿಗೇ ಸೇರಬೇಕು ಸಾ. ಅಂಥ ರೇವಣ್ಣನಿಗೇ ವಿದ್ಯೆ ಹೇಳಿದ್ಕೆ ಇಡೀ ಹಾಸನಕ್ಕೆ ಹೇಳೊ ಶಕ್ತಿ ಬಂತು.”
“ಅದೇ ಕಂಡ್ರಿ ನಾನೇಳದು. ಭವಾನಿ ಬರಿ ಜಿಲ್ಲಾ ಪಂಚಾಯ್ತಿ ಮೆಂಬ್ರಾಗಿ ಕುಂತಿರಲಿಲ್ಲ. ಜಿಲ್ಲೆ ಪ್ರತಿ ಶಾಲೆಗೂ ಹೋಗಿ ದಡ್ಡುಡುಗುರನ್ನೆಲ್ಲ ಪತ್ತೆ ಮಾಡೀ, ಕಡೆಗೆ ಅವುರಪ್ಪ ಅವ್ವನ್ನು ಭೇಟಿ ಮಾಡಿ ನಿಮ್ಮುಡಗರಿಗೆ ಯಂಗೆ ಪಾಠ ಮಾಡಬೇಕು ಯಂಗೆ ಪಾಸಾಗಂಗೆ ಮಾಡಬೇಕು ಅನ್ನದ ಹೇಳತಿದ್ಲು. ಅದ ನಾನೇ ನೋಡಿದೀನಿ.”
“ಮತ್ತೆ ಪ್ರಥಮ ಸ್ಥಾನಕ್ಕೆ ಜಿಲ್ಲಾಧಿಕಾರಿ ರೋಹಿಣಿ ಕಾರಣ ಅಂತರಲ್ಲ ಸಾ.”
“ನನಿಗೆಲ್ಲಿ ನಗಬೇಕೊ ಗೊತ್ತಾಯ್ತಾಯಿಲ್ಲ ಕಂಡ್ರಿ, ಈ ಮಾತ ಕೇಳಿ. ಅಲ್ರೀ ರೋಹಿಣಿ ಏನು ಜಿಲ್ಲೆ ಇಸುಗೂಲಿಗೆಲ್ಲಾ ಹೆಡ್ಮೇಷ್ಟ್ರಾಗಿದ್ಲ, ಹೋಗ್ಲಿ ಪ್ರಿನ್ಸಿಪಾಲಾಗಿದ್ಲಾ? ಪಾಪ ಅವುಳಿಗೆ ಜಿಲ್ಲಾಧಿಕಾರಿ ಕ್ಯಲಸನೆ ರಾಶಿ ಬಿದ್ದಿತ್ತು. ಆ ಕ್ಯಲಸನೆ ಒಂದು ಖಂಡಗ ಇದ್ದಾಗ ಇನ್ನ ಮಕ್ಕಳ ಮಾತಾಡಿಸೋದಕ್ಕೆ ಪುರುಸೊತ್ತೆಲ್ಲೀ?””
“ಅದು ನಿಜವೆ, ಆದ್ರು ಆ ಹೆಣಮಗಳು ತಾನು ಹ್ಯಾಂಗೆ ಓದಿ ಮುಂದಕ್ಕೆ ಬಂದೆ ಅನ್ನೋ ಮೆತಡ್ಡ ಇಡೀ ಜಿಲ್ಲೆ ಮೇಷ್ಟ್ರಿಗೆ ಹೇಳಿದ್ದರಂತೆ. ಅವುರು ವಿದ್ಯಾರ್ಥಿಗಳಿಗೆ ಹೇಳಿದ್ರಂತೆ, ಅಂಗಾಗಿ ಎಸ್ಸೆಲ್ಸಿ ರಿಜಲ್ಟಲ್ಲಿ ಜಿಲ್ಲೆ ಪ್ರಥಮ ಬಂದದೆ ಅಂತ ಪತ್ರಕರ್ತರೆ ಬರದವುರೆ ಸಾ.”
“ನೀವು, ಪತ್ರಕರ್ತರಿಗೇನು ಬರೀತೀರಿ ಕಂಡ್ರಿ, ಈಗ ಅಂಗ್ಯಲ್ಲ ಬರಿಯೋರು ಈಟು ದಿನ ಎಲ್ಲೋಗಿದ್ರಪ್ಪ, ರೋಹಿಣಿ ಎಲ್ಲೆಲ್ಲಿ ಪಾಠ ಮಾಡಿದ್ರು ಅಂತ ಆಗ್ಲೇ ಬರೀಬೇಕಾಗಿತ್ತು. ಅವುರೇನೋ ಮಾಡಿದ್ರು ಅಂತ ಬರೀತಾ ಇರೊ ಈ ಪತ್ರಕರ್ತರು. ಅದೇ ಭವಾನಿ ಬಗ್ಗೆ ಒಂದು ಮಾತ ಬರೀಲಿಲ್ಲ. ನಾನೇ ಹೇಳಬೇಕಾಯ್ತು.”
“ಪತ್ರಕರ್ತರು ಬುಡಿ ಸಾ ನಿಮ್ಮ ಪ್ಯಾಮಿಲಿ ಕಂಡ್ರೆಸಾಕು ಏನೇನೊ ಬರೀತಾರೆ, ಆದ್ರು ಬಹಳ ಹಿಂದೆನೆ ನೀವು ನಿಮ್ಮ ಭವಾನಿ ಮೇಡಂನ ಸರಿಯಾಗಿ ಬಳಸಿಕಂಡಿದ್ದ್ರೆ, ಯಲ್ರೂ ಎಸ್ಸೆಲ್ಸೀಲಿ ಪಸ್ಟ್ ಕ್ಲಾಸಲ್ಲಿ ಪಾಸಾಗಬಹುದಿತ್ತು.”
“ಅಂಗಾಗದಿಲ್ಲ ಕಂಡ್ರೀ, ನಮ್ಮ ಮನೆ ಹುಡುಗರಿಗೆ ನಾವು ಪಾಠ ಹೇಳಕ್ಕಾಗತ್ತೇ, ವಡದುಬುಡ್ತಿವಿ ಕಂಡ್ರಿ, ಅದ್ಕೆ ಅಲವ ಬ್ಯಾರೆ ಮೇಸ್ಟ್ರುತಕ್ಕೆ ಕಳಸದು. ಆಗ ಭವಾನಿ ನನಿಗೊಬ್ಬನಿಗೆ ವಿದ್ಯೆ ಬುದ್ದಿ ಕಲಸಕ್ಕೆ ಸಾಕಾಗೋಯ್ತಿತ್ತು. ಇನ್ನ ಉಳದೋರಿಗೆ ಎಲ್ಲಿಂದ ಹೇಳಿಕೊಡದ್ರಿ.”
“ಆಗದಿಲ್ಲ ಸಾ, ನಿಜಕ್ಕೂ ನಿಮ್ಮ ಕಥೆ ಕೇಳಿದ್ರೆ ಮಲ್ಲಮ್ಮನ ಪವಾಡ ಸಿನುಮ ಕತೆ ಕೇಳಿದಂಗಾಯ್ತು ಸಾ.”
“ನಾನು ಕವಿರತ್ನ ಕಾಳಿದಾಸ ಅಂದ್ರೆ, ನೀವು ಮಲ್ಲಮ್ಮನ ಪವಾಡ ಅಂತೀರಲ್ರೀ.”
“ಸಾರಿ ಸಾ. ಸರಿಯಾದ ಹೋಲಿಕೆನೂ ಬರಲ್ಲ ನಂಗೆ. ಆದ್ರು ಒಂದು ಡವುಟು ಸಾ.”
“ಏನ್ರಿ ಡವುಟು”
“2016-17ನೇ ಸಾಲಲ್ಲಿ 7ನೇ ಸ್ಥಾನದಲ್ಲಿದ್ದ ಜಿಲ್ಲೆ, 2019ಕ್ಕೆ ಪ್ರಥಮ ಸ್ಥಾನಕ್ಕೆ ಯಂಗೆ ಬಂತು ಅಂತ”
“ಅದೆ ಹೇಳ್ಳಿಲ್ಲವೇನ್ರಿ, ಭವಾನಿ ಮನಸು ಮಾಡಿದ್ಕೆ ಅಂತ”
“ನನಗಿರೊ ಡವುಟು ಪ್ರಕಾರ, ಇಂತ ಪವಾಡ ನ್ಯಡಿಬೇಕಾದ್ರೆ ಸಾಮೂಹಿಕ ಕಾಫಿ ನ್ಯಡಿದಿರಬೇಕು ಸಾ”
“ಅದ್ಯಂಗ್ರಿ ಇಡೀ ಜಿಲ್ಲೇನೆ ಕಾಫಿ ಮಾಡ್ತದೆ”
“ಒಂದು ಸತಿ ಪೋಲೀಸ್‍ನೋರ್ಯಲ್ಲ ಅಕೌಂಟ್ ಹೈಯರ್, ಲೋಯರ್, ಜನರಲ್ ಲಾ, ಎಕ್ಸಾಂ ತಗಂಡಿದ್ರು ಸಾ, ಎಸ್ಸಿ ಕೆಂಪಯ್ಯನೋರು ಮನಸು ಮಾಡಿದ್ರಿಂದ ಯಲ್ಲ ಪೋಲೀಸ್ರು ಕಾಫಿ ಮಾಡಿ ಯಲ್ಲ ಪಾಸಾಗಿದ್ರು. ಅಂಗೇನಾರ ಭವಾನಿ ಮಾಡಿದ್ರ ಅಂತ”
“ಯಾವನ್ರಿ ನಿಮಗೇಳಿದೋನು? ಹೊಟ್ಟಿಗೆ ಅನ್ನ ತಿಂತಿರೊ ಇಲ್ಲ ಮಣ್ಣು ತಿಂತಿರೊ”
“ಬರಿ ಮುದ್ದೆ ಸಾ”
“ಅದ್ಕೆ ಹಿಂಗೆ ಮಾತಾಡದು ನೀವು”
“ದೇವೇಗೌಡ್ರು ಅದ್ನೆ ಅಲವ ಸಾ ತಿನ್ನದು”
“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...