Homeಅಂಕಣಗಳುಹಾಸನ ಪ್ರಥಮ ಸ್ಥಾನಕ್ಕೆ ಭವಾನಿ ಕಾರಣ ಕಂಡ್ರೀ

ಹಾಸನ ಪ್ರಥಮ ಸ್ಥಾನಕ್ಕೆ ಭವಾನಿ ಕಾರಣ ಕಂಡ್ರೀ

- Advertisement -
- Advertisement -

ಯಾಹೂ |

ಅದೊಂದು ಕಾಲದಲ್ಲಿ ಎಸ್ಸೆಸೆಲ್ಸಿಯಲ್ಲಿ ಪೇಲಾಗುವುದು ಅವಮಾನವೇ ಅಲ್ಲ. ಆದರು ಪಾಸದವರು ಸರಸ್ವತಿ ಪುತ್ರನಂತೆ ಬೀಗುತ್ತಿದ್ದರು. ಕಾಲ ಮಾಗಿದ ಬದಲಾವಣೆಯಲ್ಲಿ ಬದುಕೇ ಮುಖ್ಯವಾಗಿ, ಡಿಗ್ರಿಗಳು ಸರ್ಟಿಪಿಕೇಟುಗಳಾಗುತ್ತಿರುವ ಸಮಯದಲ್ಲಿ ಫಲಿತಾಂಶಗಳೂ ಮಹತ್ವ ಕಳೆದುಕೊಂಡಿರುವಾಗ ಮಾನ್ಯ ರೇವಣ್ಣನವರ ಜಿಲ್ಲೆ ಎಸ್ಸೆಸ್ಸೆಲ್ಸಿಯಲ್ಲಿ ಟಾಪ್ ಒನ್ ನಂಬರಿಗೆ ಬಂದಿದೆಯಂತಲ್ಲಾ. ಈ ಅಚ್ಚರಿ ಸುದ್ದಿಯನ್ನು ರೇವಣ್ಣನವರ ಜೊತೆಯಲ್ಲದೆ ಇನ್ನಾರ ಜೊತೆ ಹಂಚಿಕೊಳ್ಳಬೇಕು ಅನ್ನಿಸಿ ಫೋನ್ ಮಾಡಿದಾಗ ರಿಂಗಾಯ್ತು.
ರಿಂಗ್‍ಠೋನ್: ಶಾರದೆ ದಯತೋರು ನೀ………. ಶಾರದೆ “ಹಲೋ ಯಾರ್ರೀ”
“ನಾನು ಸರ್ ಯಾಹು”
“ಯಾವೂ ಅಂದ್ರ್ಯಾರ್ರೀ”
“ಪತ್ರಕರ್ತ ಸರ್”
“ಏನಾಗಬೇಕು”
“ಏನೂ ಆಗಬೇಕಾಗಿಲ್ಲ ಸಾರ್, ಅಭಿನಂದನೆ ಹೇಳನ ಅಂತ ಮಾಡಿದೆ”
“ರಿಜಲ್ಟು ಬಂದ ಮ್ಯಾಲೆ ಹೇಳಿ”
“ಯಲಕ್ಷನ್ ವಿಷಯ ಅಲ್ಲ ಸಾ, ಹಾಸನ ಜಿಲ್ಲೇಲಿ ಈಸಾರಿ ಎಸೆಸೆಲ್ಸಿ ಎಕ್ಸಾಮಲ್ಲಿ ಮಕ್ಕಳು ಪ್ರಥಮ ಸ್ಥಾನಗಳಿಸಿವೆ”
“ಅದ್ಕೆ ಭವಾನಿಗೆ ಅಭಿನಂದನೆ ಹೇಳ್ರಿ”
“ಭವಾನಿ ಏನು ಮಾಡಿದ್ರು ಸಾರ್”
“ಇದೇನ್ರಿ ಹಿಂಕೇಳ್ತಿರಿ, ಭವಾನಿ ಏನು ವಸಿ ಕಷ್ಟ ಪಟ್ಳೇನ್ರಿ, ಅವುಳು ಕಷ್ಟಪಡದ ನಾನೇ ನೋಡಕ್ಕಾಗಲಿಲ್ಲ”
“ಆಶ್ಚರ್ಯ ಸಾರ್, ನಮಿಗೆ ಗೊತ್ತೇ ಇರಲಿಲ್ಲ.”
“ಅವುಳು ನನ್ನ ಮದುವೆಯಾದಾಗ ನನಿಗೇನು ಗೊತ್ತಿತ್ರಿ ಪ್ರತಿಯೊಂದನ್ನು ಕಲಿಸಿದ್ಲು.”
“ಪ್ರತಿಯೊಂದನ್ನು ಅಂದ್ರೆ ಸಾ”
“ಪೇಪರ್ ಓದದ ಕಲಿಸಿದ್ಲು, ಯಾರತ್ರ ಯಂಗೆ ಮಾತಾಡಬೇಕು ಅನ್ನದ್ರಿಂದ ಹಿಡುದು ಏನುತ್ತರ ಕೊಡಬೇಕು ಅನ್ನೋವರಿಗು ಪ್ರತಿಯೊಂದನ್ನು ಕಲಿಸಿದ್ಲು ಕಂಡ್ರಿ”
“ರಿಯಲಿ ದೇವೇಗೌಡ್ರು ಗ್ರೇಟ್ ಸಾರ್.”
“ಯಾಕ್ರೀ.”
“ತಮ್ಮ ಮಗನನ್ನ ಗ್ರಹಿಸಿ, ಅವನನ್ನ ತಿದ್ದಿ ವಿದ್ಯೆ ಬುದ್ದಿ ಕಲಸೊ ಹೆಣ್ಣು ತಂದು ಮದುವೆ ಮಾಡಿದ್ರಲ್ಲ ಅದ್ಕೆ.”
“ನಿಜವಾಗ್ಲು ಭವಾನಿ ನನ್ನ ಭಾಗಕ್ಕೆ ಕಾಳಿಕಂಡ್ರಿ.”
“ಅಷ್ಟು ವಳ್ಳೆ ಹೆಣ್ಣುಮಗಳ ಕಾಳಿ ಅಂತೀರಲಾ ಸಾರ್.”
“ನಾನೇಳದ ಸಲುಪ ತಿಳಕಳ್ರಿ, ಕವಿರತ್ನ ಸುಮ್ಮಸುಮ್ಮನೆ ಆದನೇನ್ರಿ, ಕಾಳಿ ಅವುನಿಗೆ ವಿದ್ಯೆ ಬುದ್ದಿ ಕೊಟ್ಟಮ್ಯಾಲವುನು ಕತೆ ಕವನ ಬರದ ಅಲವೇನ್ರಿ.”
“ರಿಯಲಿ ಗ್ರೇಟ್ ಸಾರ್, ಭವಾನಿ ನಿಮ್ಮ ಭಾಗದ ಸರಸ್ವತಿ; ರೇವಣ್ಣನಿಗೆ ವಿದ್ಯಾಬುದ್ದಿ ಕಲಿಸಿ, ಎಮ್ಮೆಲ್ಲೆ ಮಾಡಿ, ಮಂತ್ರಿ ಮಾಡಿ, ಇವತ್ತು ಕರ್ನಾಟಕಕ್ಕೆ ಒಬ್ಬ ಸಮರ್ಥ ಮಂತ್ರಿ ಕೊಟ್ಟಿರೋದ್ರ ಕ್ರೆಡಿಟ್ಟು ಭವಾನಿಗೇ ಸೇರಬೇಕು ಸಾ. ಅಂಥ ರೇವಣ್ಣನಿಗೇ ವಿದ್ಯೆ ಹೇಳಿದ್ಕೆ ಇಡೀ ಹಾಸನಕ್ಕೆ ಹೇಳೊ ಶಕ್ತಿ ಬಂತು.”
“ಅದೇ ಕಂಡ್ರಿ ನಾನೇಳದು. ಭವಾನಿ ಬರಿ ಜಿಲ್ಲಾ ಪಂಚಾಯ್ತಿ ಮೆಂಬ್ರಾಗಿ ಕುಂತಿರಲಿಲ್ಲ. ಜಿಲ್ಲೆ ಪ್ರತಿ ಶಾಲೆಗೂ ಹೋಗಿ ದಡ್ಡುಡುಗುರನ್ನೆಲ್ಲ ಪತ್ತೆ ಮಾಡೀ, ಕಡೆಗೆ ಅವುರಪ್ಪ ಅವ್ವನ್ನು ಭೇಟಿ ಮಾಡಿ ನಿಮ್ಮುಡಗರಿಗೆ ಯಂಗೆ ಪಾಠ ಮಾಡಬೇಕು ಯಂಗೆ ಪಾಸಾಗಂಗೆ ಮಾಡಬೇಕು ಅನ್ನದ ಹೇಳತಿದ್ಲು. ಅದ ನಾನೇ ನೋಡಿದೀನಿ.”
“ಮತ್ತೆ ಪ್ರಥಮ ಸ್ಥಾನಕ್ಕೆ ಜಿಲ್ಲಾಧಿಕಾರಿ ರೋಹಿಣಿ ಕಾರಣ ಅಂತರಲ್ಲ ಸಾ.”
“ನನಿಗೆಲ್ಲಿ ನಗಬೇಕೊ ಗೊತ್ತಾಯ್ತಾಯಿಲ್ಲ ಕಂಡ್ರಿ, ಈ ಮಾತ ಕೇಳಿ. ಅಲ್ರೀ ರೋಹಿಣಿ ಏನು ಜಿಲ್ಲೆ ಇಸುಗೂಲಿಗೆಲ್ಲಾ ಹೆಡ್ಮೇಷ್ಟ್ರಾಗಿದ್ಲ, ಹೋಗ್ಲಿ ಪ್ರಿನ್ಸಿಪಾಲಾಗಿದ್ಲಾ? ಪಾಪ ಅವುಳಿಗೆ ಜಿಲ್ಲಾಧಿಕಾರಿ ಕ್ಯಲಸನೆ ರಾಶಿ ಬಿದ್ದಿತ್ತು. ಆ ಕ್ಯಲಸನೆ ಒಂದು ಖಂಡಗ ಇದ್ದಾಗ ಇನ್ನ ಮಕ್ಕಳ ಮಾತಾಡಿಸೋದಕ್ಕೆ ಪುರುಸೊತ್ತೆಲ್ಲೀ?””
“ಅದು ನಿಜವೆ, ಆದ್ರು ಆ ಹೆಣಮಗಳು ತಾನು ಹ್ಯಾಂಗೆ ಓದಿ ಮುಂದಕ್ಕೆ ಬಂದೆ ಅನ್ನೋ ಮೆತಡ್ಡ ಇಡೀ ಜಿಲ್ಲೆ ಮೇಷ್ಟ್ರಿಗೆ ಹೇಳಿದ್ದರಂತೆ. ಅವುರು ವಿದ್ಯಾರ್ಥಿಗಳಿಗೆ ಹೇಳಿದ್ರಂತೆ, ಅಂಗಾಗಿ ಎಸ್ಸೆಲ್ಸಿ ರಿಜಲ್ಟಲ್ಲಿ ಜಿಲ್ಲೆ ಪ್ರಥಮ ಬಂದದೆ ಅಂತ ಪತ್ರಕರ್ತರೆ ಬರದವುರೆ ಸಾ.”
“ನೀವು, ಪತ್ರಕರ್ತರಿಗೇನು ಬರೀತೀರಿ ಕಂಡ್ರಿ, ಈಗ ಅಂಗ್ಯಲ್ಲ ಬರಿಯೋರು ಈಟು ದಿನ ಎಲ್ಲೋಗಿದ್ರಪ್ಪ, ರೋಹಿಣಿ ಎಲ್ಲೆಲ್ಲಿ ಪಾಠ ಮಾಡಿದ್ರು ಅಂತ ಆಗ್ಲೇ ಬರೀಬೇಕಾಗಿತ್ತು. ಅವುರೇನೋ ಮಾಡಿದ್ರು ಅಂತ ಬರೀತಾ ಇರೊ ಈ ಪತ್ರಕರ್ತರು. ಅದೇ ಭವಾನಿ ಬಗ್ಗೆ ಒಂದು ಮಾತ ಬರೀಲಿಲ್ಲ. ನಾನೇ ಹೇಳಬೇಕಾಯ್ತು.”
“ಪತ್ರಕರ್ತರು ಬುಡಿ ಸಾ ನಿಮ್ಮ ಪ್ಯಾಮಿಲಿ ಕಂಡ್ರೆಸಾಕು ಏನೇನೊ ಬರೀತಾರೆ, ಆದ್ರು ಬಹಳ ಹಿಂದೆನೆ ನೀವು ನಿಮ್ಮ ಭವಾನಿ ಮೇಡಂನ ಸರಿಯಾಗಿ ಬಳಸಿಕಂಡಿದ್ದ್ರೆ, ಯಲ್ರೂ ಎಸ್ಸೆಲ್ಸೀಲಿ ಪಸ್ಟ್ ಕ್ಲಾಸಲ್ಲಿ ಪಾಸಾಗಬಹುದಿತ್ತು.”
“ಅಂಗಾಗದಿಲ್ಲ ಕಂಡ್ರೀ, ನಮ್ಮ ಮನೆ ಹುಡುಗರಿಗೆ ನಾವು ಪಾಠ ಹೇಳಕ್ಕಾಗತ್ತೇ, ವಡದುಬುಡ್ತಿವಿ ಕಂಡ್ರಿ, ಅದ್ಕೆ ಅಲವ ಬ್ಯಾರೆ ಮೇಸ್ಟ್ರುತಕ್ಕೆ ಕಳಸದು. ಆಗ ಭವಾನಿ ನನಿಗೊಬ್ಬನಿಗೆ ವಿದ್ಯೆ ಬುದ್ದಿ ಕಲಸಕ್ಕೆ ಸಾಕಾಗೋಯ್ತಿತ್ತು. ಇನ್ನ ಉಳದೋರಿಗೆ ಎಲ್ಲಿಂದ ಹೇಳಿಕೊಡದ್ರಿ.”
“ಆಗದಿಲ್ಲ ಸಾ, ನಿಜಕ್ಕೂ ನಿಮ್ಮ ಕಥೆ ಕೇಳಿದ್ರೆ ಮಲ್ಲಮ್ಮನ ಪವಾಡ ಸಿನುಮ ಕತೆ ಕೇಳಿದಂಗಾಯ್ತು ಸಾ.”
“ನಾನು ಕವಿರತ್ನ ಕಾಳಿದಾಸ ಅಂದ್ರೆ, ನೀವು ಮಲ್ಲಮ್ಮನ ಪವಾಡ ಅಂತೀರಲ್ರೀ.”
“ಸಾರಿ ಸಾ. ಸರಿಯಾದ ಹೋಲಿಕೆನೂ ಬರಲ್ಲ ನಂಗೆ. ಆದ್ರು ಒಂದು ಡವುಟು ಸಾ.”
“ಏನ್ರಿ ಡವುಟು”
“2016-17ನೇ ಸಾಲಲ್ಲಿ 7ನೇ ಸ್ಥಾನದಲ್ಲಿದ್ದ ಜಿಲ್ಲೆ, 2019ಕ್ಕೆ ಪ್ರಥಮ ಸ್ಥಾನಕ್ಕೆ ಯಂಗೆ ಬಂತು ಅಂತ”
“ಅದೆ ಹೇಳ್ಳಿಲ್ಲವೇನ್ರಿ, ಭವಾನಿ ಮನಸು ಮಾಡಿದ್ಕೆ ಅಂತ”
“ನನಗಿರೊ ಡವುಟು ಪ್ರಕಾರ, ಇಂತ ಪವಾಡ ನ್ಯಡಿಬೇಕಾದ್ರೆ ಸಾಮೂಹಿಕ ಕಾಫಿ ನ್ಯಡಿದಿರಬೇಕು ಸಾ”
“ಅದ್ಯಂಗ್ರಿ ಇಡೀ ಜಿಲ್ಲೇನೆ ಕಾಫಿ ಮಾಡ್ತದೆ”
“ಒಂದು ಸತಿ ಪೋಲೀಸ್‍ನೋರ್ಯಲ್ಲ ಅಕೌಂಟ್ ಹೈಯರ್, ಲೋಯರ್, ಜನರಲ್ ಲಾ, ಎಕ್ಸಾಂ ತಗಂಡಿದ್ರು ಸಾ, ಎಸ್ಸಿ ಕೆಂಪಯ್ಯನೋರು ಮನಸು ಮಾಡಿದ್ರಿಂದ ಯಲ್ಲ ಪೋಲೀಸ್ರು ಕಾಫಿ ಮಾಡಿ ಯಲ್ಲ ಪಾಸಾಗಿದ್ರು. ಅಂಗೇನಾರ ಭವಾನಿ ಮಾಡಿದ್ರ ಅಂತ”
“ಯಾವನ್ರಿ ನಿಮಗೇಳಿದೋನು? ಹೊಟ್ಟಿಗೆ ಅನ್ನ ತಿಂತಿರೊ ಇಲ್ಲ ಮಣ್ಣು ತಿಂತಿರೊ”
“ಬರಿ ಮುದ್ದೆ ಸಾ”
“ಅದ್ಕೆ ಹಿಂಗೆ ಮಾತಾಡದು ನೀವು”
“ದೇವೇಗೌಡ್ರು ಅದ್ನೆ ಅಲವ ಸಾ ತಿನ್ನದು”
“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...