Homeಅಂಕಣಗಳುಹಾಸನ ಪ್ರಥಮ ಸ್ಥಾನಕ್ಕೆ ಭವಾನಿ ಕಾರಣ ಕಂಡ್ರೀ

ಹಾಸನ ಪ್ರಥಮ ಸ್ಥಾನಕ್ಕೆ ಭವಾನಿ ಕಾರಣ ಕಂಡ್ರೀ

- Advertisement -
- Advertisement -

ಯಾಹೂ |

ಅದೊಂದು ಕಾಲದಲ್ಲಿ ಎಸ್ಸೆಸೆಲ್ಸಿಯಲ್ಲಿ ಪೇಲಾಗುವುದು ಅವಮಾನವೇ ಅಲ್ಲ. ಆದರು ಪಾಸದವರು ಸರಸ್ವತಿ ಪುತ್ರನಂತೆ ಬೀಗುತ್ತಿದ್ದರು. ಕಾಲ ಮಾಗಿದ ಬದಲಾವಣೆಯಲ್ಲಿ ಬದುಕೇ ಮುಖ್ಯವಾಗಿ, ಡಿಗ್ರಿಗಳು ಸರ್ಟಿಪಿಕೇಟುಗಳಾಗುತ್ತಿರುವ ಸಮಯದಲ್ಲಿ ಫಲಿತಾಂಶಗಳೂ ಮಹತ್ವ ಕಳೆದುಕೊಂಡಿರುವಾಗ ಮಾನ್ಯ ರೇವಣ್ಣನವರ ಜಿಲ್ಲೆ ಎಸ್ಸೆಸ್ಸೆಲ್ಸಿಯಲ್ಲಿ ಟಾಪ್ ಒನ್ ನಂಬರಿಗೆ ಬಂದಿದೆಯಂತಲ್ಲಾ. ಈ ಅಚ್ಚರಿ ಸುದ್ದಿಯನ್ನು ರೇವಣ್ಣನವರ ಜೊತೆಯಲ್ಲದೆ ಇನ್ನಾರ ಜೊತೆ ಹಂಚಿಕೊಳ್ಳಬೇಕು ಅನ್ನಿಸಿ ಫೋನ್ ಮಾಡಿದಾಗ ರಿಂಗಾಯ್ತು.
ರಿಂಗ್‍ಠೋನ್: ಶಾರದೆ ದಯತೋರು ನೀ………. ಶಾರದೆ “ಹಲೋ ಯಾರ್ರೀ”
“ನಾನು ಸರ್ ಯಾಹು”
“ಯಾವೂ ಅಂದ್ರ್ಯಾರ್ರೀ”
“ಪತ್ರಕರ್ತ ಸರ್”
“ಏನಾಗಬೇಕು”
“ಏನೂ ಆಗಬೇಕಾಗಿಲ್ಲ ಸಾರ್, ಅಭಿನಂದನೆ ಹೇಳನ ಅಂತ ಮಾಡಿದೆ”
“ರಿಜಲ್ಟು ಬಂದ ಮ್ಯಾಲೆ ಹೇಳಿ”
“ಯಲಕ್ಷನ್ ವಿಷಯ ಅಲ್ಲ ಸಾ, ಹಾಸನ ಜಿಲ್ಲೇಲಿ ಈಸಾರಿ ಎಸೆಸೆಲ್ಸಿ ಎಕ್ಸಾಮಲ್ಲಿ ಮಕ್ಕಳು ಪ್ರಥಮ ಸ್ಥಾನಗಳಿಸಿವೆ”
“ಅದ್ಕೆ ಭವಾನಿಗೆ ಅಭಿನಂದನೆ ಹೇಳ್ರಿ”
“ಭವಾನಿ ಏನು ಮಾಡಿದ್ರು ಸಾರ್”
“ಇದೇನ್ರಿ ಹಿಂಕೇಳ್ತಿರಿ, ಭವಾನಿ ಏನು ವಸಿ ಕಷ್ಟ ಪಟ್ಳೇನ್ರಿ, ಅವುಳು ಕಷ್ಟಪಡದ ನಾನೇ ನೋಡಕ್ಕಾಗಲಿಲ್ಲ”
“ಆಶ್ಚರ್ಯ ಸಾರ್, ನಮಿಗೆ ಗೊತ್ತೇ ಇರಲಿಲ್ಲ.”
“ಅವುಳು ನನ್ನ ಮದುವೆಯಾದಾಗ ನನಿಗೇನು ಗೊತ್ತಿತ್ರಿ ಪ್ರತಿಯೊಂದನ್ನು ಕಲಿಸಿದ್ಲು.”
“ಪ್ರತಿಯೊಂದನ್ನು ಅಂದ್ರೆ ಸಾ”
“ಪೇಪರ್ ಓದದ ಕಲಿಸಿದ್ಲು, ಯಾರತ್ರ ಯಂಗೆ ಮಾತಾಡಬೇಕು ಅನ್ನದ್ರಿಂದ ಹಿಡುದು ಏನುತ್ತರ ಕೊಡಬೇಕು ಅನ್ನೋವರಿಗು ಪ್ರತಿಯೊಂದನ್ನು ಕಲಿಸಿದ್ಲು ಕಂಡ್ರಿ”
“ರಿಯಲಿ ದೇವೇಗೌಡ್ರು ಗ್ರೇಟ್ ಸಾರ್.”
“ಯಾಕ್ರೀ.”
“ತಮ್ಮ ಮಗನನ್ನ ಗ್ರಹಿಸಿ, ಅವನನ್ನ ತಿದ್ದಿ ವಿದ್ಯೆ ಬುದ್ದಿ ಕಲಸೊ ಹೆಣ್ಣು ತಂದು ಮದುವೆ ಮಾಡಿದ್ರಲ್ಲ ಅದ್ಕೆ.”
“ನಿಜವಾಗ್ಲು ಭವಾನಿ ನನ್ನ ಭಾಗಕ್ಕೆ ಕಾಳಿಕಂಡ್ರಿ.”
“ಅಷ್ಟು ವಳ್ಳೆ ಹೆಣ್ಣುಮಗಳ ಕಾಳಿ ಅಂತೀರಲಾ ಸಾರ್.”
“ನಾನೇಳದ ಸಲುಪ ತಿಳಕಳ್ರಿ, ಕವಿರತ್ನ ಸುಮ್ಮಸುಮ್ಮನೆ ಆದನೇನ್ರಿ, ಕಾಳಿ ಅವುನಿಗೆ ವಿದ್ಯೆ ಬುದ್ದಿ ಕೊಟ್ಟಮ್ಯಾಲವುನು ಕತೆ ಕವನ ಬರದ ಅಲವೇನ್ರಿ.”
“ರಿಯಲಿ ಗ್ರೇಟ್ ಸಾರ್, ಭವಾನಿ ನಿಮ್ಮ ಭಾಗದ ಸರಸ್ವತಿ; ರೇವಣ್ಣನಿಗೆ ವಿದ್ಯಾಬುದ್ದಿ ಕಲಿಸಿ, ಎಮ್ಮೆಲ್ಲೆ ಮಾಡಿ, ಮಂತ್ರಿ ಮಾಡಿ, ಇವತ್ತು ಕರ್ನಾಟಕಕ್ಕೆ ಒಬ್ಬ ಸಮರ್ಥ ಮಂತ್ರಿ ಕೊಟ್ಟಿರೋದ್ರ ಕ್ರೆಡಿಟ್ಟು ಭವಾನಿಗೇ ಸೇರಬೇಕು ಸಾ. ಅಂಥ ರೇವಣ್ಣನಿಗೇ ವಿದ್ಯೆ ಹೇಳಿದ್ಕೆ ಇಡೀ ಹಾಸನಕ್ಕೆ ಹೇಳೊ ಶಕ್ತಿ ಬಂತು.”
“ಅದೇ ಕಂಡ್ರಿ ನಾನೇಳದು. ಭವಾನಿ ಬರಿ ಜಿಲ್ಲಾ ಪಂಚಾಯ್ತಿ ಮೆಂಬ್ರಾಗಿ ಕುಂತಿರಲಿಲ್ಲ. ಜಿಲ್ಲೆ ಪ್ರತಿ ಶಾಲೆಗೂ ಹೋಗಿ ದಡ್ಡುಡುಗುರನ್ನೆಲ್ಲ ಪತ್ತೆ ಮಾಡೀ, ಕಡೆಗೆ ಅವುರಪ್ಪ ಅವ್ವನ್ನು ಭೇಟಿ ಮಾಡಿ ನಿಮ್ಮುಡಗರಿಗೆ ಯಂಗೆ ಪಾಠ ಮಾಡಬೇಕು ಯಂಗೆ ಪಾಸಾಗಂಗೆ ಮಾಡಬೇಕು ಅನ್ನದ ಹೇಳತಿದ್ಲು. ಅದ ನಾನೇ ನೋಡಿದೀನಿ.”
“ಮತ್ತೆ ಪ್ರಥಮ ಸ್ಥಾನಕ್ಕೆ ಜಿಲ್ಲಾಧಿಕಾರಿ ರೋಹಿಣಿ ಕಾರಣ ಅಂತರಲ್ಲ ಸಾ.”
“ನನಿಗೆಲ್ಲಿ ನಗಬೇಕೊ ಗೊತ್ತಾಯ್ತಾಯಿಲ್ಲ ಕಂಡ್ರಿ, ಈ ಮಾತ ಕೇಳಿ. ಅಲ್ರೀ ರೋಹಿಣಿ ಏನು ಜಿಲ್ಲೆ ಇಸುಗೂಲಿಗೆಲ್ಲಾ ಹೆಡ್ಮೇಷ್ಟ್ರಾಗಿದ್ಲ, ಹೋಗ್ಲಿ ಪ್ರಿನ್ಸಿಪಾಲಾಗಿದ್ಲಾ? ಪಾಪ ಅವುಳಿಗೆ ಜಿಲ್ಲಾಧಿಕಾರಿ ಕ್ಯಲಸನೆ ರಾಶಿ ಬಿದ್ದಿತ್ತು. ಆ ಕ್ಯಲಸನೆ ಒಂದು ಖಂಡಗ ಇದ್ದಾಗ ಇನ್ನ ಮಕ್ಕಳ ಮಾತಾಡಿಸೋದಕ್ಕೆ ಪುರುಸೊತ್ತೆಲ್ಲೀ?””
“ಅದು ನಿಜವೆ, ಆದ್ರು ಆ ಹೆಣಮಗಳು ತಾನು ಹ್ಯಾಂಗೆ ಓದಿ ಮುಂದಕ್ಕೆ ಬಂದೆ ಅನ್ನೋ ಮೆತಡ್ಡ ಇಡೀ ಜಿಲ್ಲೆ ಮೇಷ್ಟ್ರಿಗೆ ಹೇಳಿದ್ದರಂತೆ. ಅವುರು ವಿದ್ಯಾರ್ಥಿಗಳಿಗೆ ಹೇಳಿದ್ರಂತೆ, ಅಂಗಾಗಿ ಎಸ್ಸೆಲ್ಸಿ ರಿಜಲ್ಟಲ್ಲಿ ಜಿಲ್ಲೆ ಪ್ರಥಮ ಬಂದದೆ ಅಂತ ಪತ್ರಕರ್ತರೆ ಬರದವುರೆ ಸಾ.”
“ನೀವು, ಪತ್ರಕರ್ತರಿಗೇನು ಬರೀತೀರಿ ಕಂಡ್ರಿ, ಈಗ ಅಂಗ್ಯಲ್ಲ ಬರಿಯೋರು ಈಟು ದಿನ ಎಲ್ಲೋಗಿದ್ರಪ್ಪ, ರೋಹಿಣಿ ಎಲ್ಲೆಲ್ಲಿ ಪಾಠ ಮಾಡಿದ್ರು ಅಂತ ಆಗ್ಲೇ ಬರೀಬೇಕಾಗಿತ್ತು. ಅವುರೇನೋ ಮಾಡಿದ್ರು ಅಂತ ಬರೀತಾ ಇರೊ ಈ ಪತ್ರಕರ್ತರು. ಅದೇ ಭವಾನಿ ಬಗ್ಗೆ ಒಂದು ಮಾತ ಬರೀಲಿಲ್ಲ. ನಾನೇ ಹೇಳಬೇಕಾಯ್ತು.”
“ಪತ್ರಕರ್ತರು ಬುಡಿ ಸಾ ನಿಮ್ಮ ಪ್ಯಾಮಿಲಿ ಕಂಡ್ರೆಸಾಕು ಏನೇನೊ ಬರೀತಾರೆ, ಆದ್ರು ಬಹಳ ಹಿಂದೆನೆ ನೀವು ನಿಮ್ಮ ಭವಾನಿ ಮೇಡಂನ ಸರಿಯಾಗಿ ಬಳಸಿಕಂಡಿದ್ದ್ರೆ, ಯಲ್ರೂ ಎಸ್ಸೆಲ್ಸೀಲಿ ಪಸ್ಟ್ ಕ್ಲಾಸಲ್ಲಿ ಪಾಸಾಗಬಹುದಿತ್ತು.”
“ಅಂಗಾಗದಿಲ್ಲ ಕಂಡ್ರೀ, ನಮ್ಮ ಮನೆ ಹುಡುಗರಿಗೆ ನಾವು ಪಾಠ ಹೇಳಕ್ಕಾಗತ್ತೇ, ವಡದುಬುಡ್ತಿವಿ ಕಂಡ್ರಿ, ಅದ್ಕೆ ಅಲವ ಬ್ಯಾರೆ ಮೇಸ್ಟ್ರುತಕ್ಕೆ ಕಳಸದು. ಆಗ ಭವಾನಿ ನನಿಗೊಬ್ಬನಿಗೆ ವಿದ್ಯೆ ಬುದ್ದಿ ಕಲಸಕ್ಕೆ ಸಾಕಾಗೋಯ್ತಿತ್ತು. ಇನ್ನ ಉಳದೋರಿಗೆ ಎಲ್ಲಿಂದ ಹೇಳಿಕೊಡದ್ರಿ.”
“ಆಗದಿಲ್ಲ ಸಾ, ನಿಜಕ್ಕೂ ನಿಮ್ಮ ಕಥೆ ಕೇಳಿದ್ರೆ ಮಲ್ಲಮ್ಮನ ಪವಾಡ ಸಿನುಮ ಕತೆ ಕೇಳಿದಂಗಾಯ್ತು ಸಾ.”
“ನಾನು ಕವಿರತ್ನ ಕಾಳಿದಾಸ ಅಂದ್ರೆ, ನೀವು ಮಲ್ಲಮ್ಮನ ಪವಾಡ ಅಂತೀರಲ್ರೀ.”
“ಸಾರಿ ಸಾ. ಸರಿಯಾದ ಹೋಲಿಕೆನೂ ಬರಲ್ಲ ನಂಗೆ. ಆದ್ರು ಒಂದು ಡವುಟು ಸಾ.”
“ಏನ್ರಿ ಡವುಟು”
“2016-17ನೇ ಸಾಲಲ್ಲಿ 7ನೇ ಸ್ಥಾನದಲ್ಲಿದ್ದ ಜಿಲ್ಲೆ, 2019ಕ್ಕೆ ಪ್ರಥಮ ಸ್ಥಾನಕ್ಕೆ ಯಂಗೆ ಬಂತು ಅಂತ”
“ಅದೆ ಹೇಳ್ಳಿಲ್ಲವೇನ್ರಿ, ಭವಾನಿ ಮನಸು ಮಾಡಿದ್ಕೆ ಅಂತ”
“ನನಗಿರೊ ಡವುಟು ಪ್ರಕಾರ, ಇಂತ ಪವಾಡ ನ್ಯಡಿಬೇಕಾದ್ರೆ ಸಾಮೂಹಿಕ ಕಾಫಿ ನ್ಯಡಿದಿರಬೇಕು ಸಾ”
“ಅದ್ಯಂಗ್ರಿ ಇಡೀ ಜಿಲ್ಲೇನೆ ಕಾಫಿ ಮಾಡ್ತದೆ”
“ಒಂದು ಸತಿ ಪೋಲೀಸ್‍ನೋರ್ಯಲ್ಲ ಅಕೌಂಟ್ ಹೈಯರ್, ಲೋಯರ್, ಜನರಲ್ ಲಾ, ಎಕ್ಸಾಂ ತಗಂಡಿದ್ರು ಸಾ, ಎಸ್ಸಿ ಕೆಂಪಯ್ಯನೋರು ಮನಸು ಮಾಡಿದ್ರಿಂದ ಯಲ್ಲ ಪೋಲೀಸ್ರು ಕಾಫಿ ಮಾಡಿ ಯಲ್ಲ ಪಾಸಾಗಿದ್ರು. ಅಂಗೇನಾರ ಭವಾನಿ ಮಾಡಿದ್ರ ಅಂತ”
“ಯಾವನ್ರಿ ನಿಮಗೇಳಿದೋನು? ಹೊಟ್ಟಿಗೆ ಅನ್ನ ತಿಂತಿರೊ ಇಲ್ಲ ಮಣ್ಣು ತಿಂತಿರೊ”
“ಬರಿ ಮುದ್ದೆ ಸಾ”
“ಅದ್ಕೆ ಹಿಂಗೆ ಮಾತಾಡದು ನೀವು”
“ದೇವೇಗೌಡ್ರು ಅದ್ನೆ ಅಲವ ಸಾ ತಿನ್ನದು”
“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...