Homeಅಂಕಣಗಳುಹಾಸನ ಪ್ರಥಮ ಸ್ಥಾನಕ್ಕೆ ಭವಾನಿ ಕಾರಣ ಕಂಡ್ರೀ

ಹಾಸನ ಪ್ರಥಮ ಸ್ಥಾನಕ್ಕೆ ಭವಾನಿ ಕಾರಣ ಕಂಡ್ರೀ

- Advertisement -
- Advertisement -

ಯಾಹೂ |

ಅದೊಂದು ಕಾಲದಲ್ಲಿ ಎಸ್ಸೆಸೆಲ್ಸಿಯಲ್ಲಿ ಪೇಲಾಗುವುದು ಅವಮಾನವೇ ಅಲ್ಲ. ಆದರು ಪಾಸದವರು ಸರಸ್ವತಿ ಪುತ್ರನಂತೆ ಬೀಗುತ್ತಿದ್ದರು. ಕಾಲ ಮಾಗಿದ ಬದಲಾವಣೆಯಲ್ಲಿ ಬದುಕೇ ಮುಖ್ಯವಾಗಿ, ಡಿಗ್ರಿಗಳು ಸರ್ಟಿಪಿಕೇಟುಗಳಾಗುತ್ತಿರುವ ಸಮಯದಲ್ಲಿ ಫಲಿತಾಂಶಗಳೂ ಮಹತ್ವ ಕಳೆದುಕೊಂಡಿರುವಾಗ ಮಾನ್ಯ ರೇವಣ್ಣನವರ ಜಿಲ್ಲೆ ಎಸ್ಸೆಸ್ಸೆಲ್ಸಿಯಲ್ಲಿ ಟಾಪ್ ಒನ್ ನಂಬರಿಗೆ ಬಂದಿದೆಯಂತಲ್ಲಾ. ಈ ಅಚ್ಚರಿ ಸುದ್ದಿಯನ್ನು ರೇವಣ್ಣನವರ ಜೊತೆಯಲ್ಲದೆ ಇನ್ನಾರ ಜೊತೆ ಹಂಚಿಕೊಳ್ಳಬೇಕು ಅನ್ನಿಸಿ ಫೋನ್ ಮಾಡಿದಾಗ ರಿಂಗಾಯ್ತು.
ರಿಂಗ್‍ಠೋನ್: ಶಾರದೆ ದಯತೋರು ನೀ………. ಶಾರದೆ “ಹಲೋ ಯಾರ್ರೀ”
“ನಾನು ಸರ್ ಯಾಹು”
“ಯಾವೂ ಅಂದ್ರ್ಯಾರ್ರೀ”
“ಪತ್ರಕರ್ತ ಸರ್”
“ಏನಾಗಬೇಕು”
“ಏನೂ ಆಗಬೇಕಾಗಿಲ್ಲ ಸಾರ್, ಅಭಿನಂದನೆ ಹೇಳನ ಅಂತ ಮಾಡಿದೆ”
“ರಿಜಲ್ಟು ಬಂದ ಮ್ಯಾಲೆ ಹೇಳಿ”
“ಯಲಕ್ಷನ್ ವಿಷಯ ಅಲ್ಲ ಸಾ, ಹಾಸನ ಜಿಲ್ಲೇಲಿ ಈಸಾರಿ ಎಸೆಸೆಲ್ಸಿ ಎಕ್ಸಾಮಲ್ಲಿ ಮಕ್ಕಳು ಪ್ರಥಮ ಸ್ಥಾನಗಳಿಸಿವೆ”
“ಅದ್ಕೆ ಭವಾನಿಗೆ ಅಭಿನಂದನೆ ಹೇಳ್ರಿ”
“ಭವಾನಿ ಏನು ಮಾಡಿದ್ರು ಸಾರ್”
“ಇದೇನ್ರಿ ಹಿಂಕೇಳ್ತಿರಿ, ಭವಾನಿ ಏನು ವಸಿ ಕಷ್ಟ ಪಟ್ಳೇನ್ರಿ, ಅವುಳು ಕಷ್ಟಪಡದ ನಾನೇ ನೋಡಕ್ಕಾಗಲಿಲ್ಲ”
“ಆಶ್ಚರ್ಯ ಸಾರ್, ನಮಿಗೆ ಗೊತ್ತೇ ಇರಲಿಲ್ಲ.”
“ಅವುಳು ನನ್ನ ಮದುವೆಯಾದಾಗ ನನಿಗೇನು ಗೊತ್ತಿತ್ರಿ ಪ್ರತಿಯೊಂದನ್ನು ಕಲಿಸಿದ್ಲು.”
“ಪ್ರತಿಯೊಂದನ್ನು ಅಂದ್ರೆ ಸಾ”
“ಪೇಪರ್ ಓದದ ಕಲಿಸಿದ್ಲು, ಯಾರತ್ರ ಯಂಗೆ ಮಾತಾಡಬೇಕು ಅನ್ನದ್ರಿಂದ ಹಿಡುದು ಏನುತ್ತರ ಕೊಡಬೇಕು ಅನ್ನೋವರಿಗು ಪ್ರತಿಯೊಂದನ್ನು ಕಲಿಸಿದ್ಲು ಕಂಡ್ರಿ”
“ರಿಯಲಿ ದೇವೇಗೌಡ್ರು ಗ್ರೇಟ್ ಸಾರ್.”
“ಯಾಕ್ರೀ.”
“ತಮ್ಮ ಮಗನನ್ನ ಗ್ರಹಿಸಿ, ಅವನನ್ನ ತಿದ್ದಿ ವಿದ್ಯೆ ಬುದ್ದಿ ಕಲಸೊ ಹೆಣ್ಣು ತಂದು ಮದುವೆ ಮಾಡಿದ್ರಲ್ಲ ಅದ್ಕೆ.”
“ನಿಜವಾಗ್ಲು ಭವಾನಿ ನನ್ನ ಭಾಗಕ್ಕೆ ಕಾಳಿಕಂಡ್ರಿ.”
“ಅಷ್ಟು ವಳ್ಳೆ ಹೆಣ್ಣುಮಗಳ ಕಾಳಿ ಅಂತೀರಲಾ ಸಾರ್.”
“ನಾನೇಳದ ಸಲುಪ ತಿಳಕಳ್ರಿ, ಕವಿರತ್ನ ಸುಮ್ಮಸುಮ್ಮನೆ ಆದನೇನ್ರಿ, ಕಾಳಿ ಅವುನಿಗೆ ವಿದ್ಯೆ ಬುದ್ದಿ ಕೊಟ್ಟಮ್ಯಾಲವುನು ಕತೆ ಕವನ ಬರದ ಅಲವೇನ್ರಿ.”
“ರಿಯಲಿ ಗ್ರೇಟ್ ಸಾರ್, ಭವಾನಿ ನಿಮ್ಮ ಭಾಗದ ಸರಸ್ವತಿ; ರೇವಣ್ಣನಿಗೆ ವಿದ್ಯಾಬುದ್ದಿ ಕಲಿಸಿ, ಎಮ್ಮೆಲ್ಲೆ ಮಾಡಿ, ಮಂತ್ರಿ ಮಾಡಿ, ಇವತ್ತು ಕರ್ನಾಟಕಕ್ಕೆ ಒಬ್ಬ ಸಮರ್ಥ ಮಂತ್ರಿ ಕೊಟ್ಟಿರೋದ್ರ ಕ್ರೆಡಿಟ್ಟು ಭವಾನಿಗೇ ಸೇರಬೇಕು ಸಾ. ಅಂಥ ರೇವಣ್ಣನಿಗೇ ವಿದ್ಯೆ ಹೇಳಿದ್ಕೆ ಇಡೀ ಹಾಸನಕ್ಕೆ ಹೇಳೊ ಶಕ್ತಿ ಬಂತು.”
“ಅದೇ ಕಂಡ್ರಿ ನಾನೇಳದು. ಭವಾನಿ ಬರಿ ಜಿಲ್ಲಾ ಪಂಚಾಯ್ತಿ ಮೆಂಬ್ರಾಗಿ ಕುಂತಿರಲಿಲ್ಲ. ಜಿಲ್ಲೆ ಪ್ರತಿ ಶಾಲೆಗೂ ಹೋಗಿ ದಡ್ಡುಡುಗುರನ್ನೆಲ್ಲ ಪತ್ತೆ ಮಾಡೀ, ಕಡೆಗೆ ಅವುರಪ್ಪ ಅವ್ವನ್ನು ಭೇಟಿ ಮಾಡಿ ನಿಮ್ಮುಡಗರಿಗೆ ಯಂಗೆ ಪಾಠ ಮಾಡಬೇಕು ಯಂಗೆ ಪಾಸಾಗಂಗೆ ಮಾಡಬೇಕು ಅನ್ನದ ಹೇಳತಿದ್ಲು. ಅದ ನಾನೇ ನೋಡಿದೀನಿ.”
“ಮತ್ತೆ ಪ್ರಥಮ ಸ್ಥಾನಕ್ಕೆ ಜಿಲ್ಲಾಧಿಕಾರಿ ರೋಹಿಣಿ ಕಾರಣ ಅಂತರಲ್ಲ ಸಾ.”
“ನನಿಗೆಲ್ಲಿ ನಗಬೇಕೊ ಗೊತ್ತಾಯ್ತಾಯಿಲ್ಲ ಕಂಡ್ರಿ, ಈ ಮಾತ ಕೇಳಿ. ಅಲ್ರೀ ರೋಹಿಣಿ ಏನು ಜಿಲ್ಲೆ ಇಸುಗೂಲಿಗೆಲ್ಲಾ ಹೆಡ್ಮೇಷ್ಟ್ರಾಗಿದ್ಲ, ಹೋಗ್ಲಿ ಪ್ರಿನ್ಸಿಪಾಲಾಗಿದ್ಲಾ? ಪಾಪ ಅವುಳಿಗೆ ಜಿಲ್ಲಾಧಿಕಾರಿ ಕ್ಯಲಸನೆ ರಾಶಿ ಬಿದ್ದಿತ್ತು. ಆ ಕ್ಯಲಸನೆ ಒಂದು ಖಂಡಗ ಇದ್ದಾಗ ಇನ್ನ ಮಕ್ಕಳ ಮಾತಾಡಿಸೋದಕ್ಕೆ ಪುರುಸೊತ್ತೆಲ್ಲೀ?””
“ಅದು ನಿಜವೆ, ಆದ್ರು ಆ ಹೆಣಮಗಳು ತಾನು ಹ್ಯಾಂಗೆ ಓದಿ ಮುಂದಕ್ಕೆ ಬಂದೆ ಅನ್ನೋ ಮೆತಡ್ಡ ಇಡೀ ಜಿಲ್ಲೆ ಮೇಷ್ಟ್ರಿಗೆ ಹೇಳಿದ್ದರಂತೆ. ಅವುರು ವಿದ್ಯಾರ್ಥಿಗಳಿಗೆ ಹೇಳಿದ್ರಂತೆ, ಅಂಗಾಗಿ ಎಸ್ಸೆಲ್ಸಿ ರಿಜಲ್ಟಲ್ಲಿ ಜಿಲ್ಲೆ ಪ್ರಥಮ ಬಂದದೆ ಅಂತ ಪತ್ರಕರ್ತರೆ ಬರದವುರೆ ಸಾ.”
“ನೀವು, ಪತ್ರಕರ್ತರಿಗೇನು ಬರೀತೀರಿ ಕಂಡ್ರಿ, ಈಗ ಅಂಗ್ಯಲ್ಲ ಬರಿಯೋರು ಈಟು ದಿನ ಎಲ್ಲೋಗಿದ್ರಪ್ಪ, ರೋಹಿಣಿ ಎಲ್ಲೆಲ್ಲಿ ಪಾಠ ಮಾಡಿದ್ರು ಅಂತ ಆಗ್ಲೇ ಬರೀಬೇಕಾಗಿತ್ತು. ಅವುರೇನೋ ಮಾಡಿದ್ರು ಅಂತ ಬರೀತಾ ಇರೊ ಈ ಪತ್ರಕರ್ತರು. ಅದೇ ಭವಾನಿ ಬಗ್ಗೆ ಒಂದು ಮಾತ ಬರೀಲಿಲ್ಲ. ನಾನೇ ಹೇಳಬೇಕಾಯ್ತು.”
“ಪತ್ರಕರ್ತರು ಬುಡಿ ಸಾ ನಿಮ್ಮ ಪ್ಯಾಮಿಲಿ ಕಂಡ್ರೆಸಾಕು ಏನೇನೊ ಬರೀತಾರೆ, ಆದ್ರು ಬಹಳ ಹಿಂದೆನೆ ನೀವು ನಿಮ್ಮ ಭವಾನಿ ಮೇಡಂನ ಸರಿಯಾಗಿ ಬಳಸಿಕಂಡಿದ್ದ್ರೆ, ಯಲ್ರೂ ಎಸ್ಸೆಲ್ಸೀಲಿ ಪಸ್ಟ್ ಕ್ಲಾಸಲ್ಲಿ ಪಾಸಾಗಬಹುದಿತ್ತು.”
“ಅಂಗಾಗದಿಲ್ಲ ಕಂಡ್ರೀ, ನಮ್ಮ ಮನೆ ಹುಡುಗರಿಗೆ ನಾವು ಪಾಠ ಹೇಳಕ್ಕಾಗತ್ತೇ, ವಡದುಬುಡ್ತಿವಿ ಕಂಡ್ರಿ, ಅದ್ಕೆ ಅಲವ ಬ್ಯಾರೆ ಮೇಸ್ಟ್ರುತಕ್ಕೆ ಕಳಸದು. ಆಗ ಭವಾನಿ ನನಿಗೊಬ್ಬನಿಗೆ ವಿದ್ಯೆ ಬುದ್ದಿ ಕಲಸಕ್ಕೆ ಸಾಕಾಗೋಯ್ತಿತ್ತು. ಇನ್ನ ಉಳದೋರಿಗೆ ಎಲ್ಲಿಂದ ಹೇಳಿಕೊಡದ್ರಿ.”
“ಆಗದಿಲ್ಲ ಸಾ, ನಿಜಕ್ಕೂ ನಿಮ್ಮ ಕಥೆ ಕೇಳಿದ್ರೆ ಮಲ್ಲಮ್ಮನ ಪವಾಡ ಸಿನುಮ ಕತೆ ಕೇಳಿದಂಗಾಯ್ತು ಸಾ.”
“ನಾನು ಕವಿರತ್ನ ಕಾಳಿದಾಸ ಅಂದ್ರೆ, ನೀವು ಮಲ್ಲಮ್ಮನ ಪವಾಡ ಅಂತೀರಲ್ರೀ.”
“ಸಾರಿ ಸಾ. ಸರಿಯಾದ ಹೋಲಿಕೆನೂ ಬರಲ್ಲ ನಂಗೆ. ಆದ್ರು ಒಂದು ಡವುಟು ಸಾ.”
“ಏನ್ರಿ ಡವುಟು”
“2016-17ನೇ ಸಾಲಲ್ಲಿ 7ನೇ ಸ್ಥಾನದಲ್ಲಿದ್ದ ಜಿಲ್ಲೆ, 2019ಕ್ಕೆ ಪ್ರಥಮ ಸ್ಥಾನಕ್ಕೆ ಯಂಗೆ ಬಂತು ಅಂತ”
“ಅದೆ ಹೇಳ್ಳಿಲ್ಲವೇನ್ರಿ, ಭವಾನಿ ಮನಸು ಮಾಡಿದ್ಕೆ ಅಂತ”
“ನನಗಿರೊ ಡವುಟು ಪ್ರಕಾರ, ಇಂತ ಪವಾಡ ನ್ಯಡಿಬೇಕಾದ್ರೆ ಸಾಮೂಹಿಕ ಕಾಫಿ ನ್ಯಡಿದಿರಬೇಕು ಸಾ”
“ಅದ್ಯಂಗ್ರಿ ಇಡೀ ಜಿಲ್ಲೇನೆ ಕಾಫಿ ಮಾಡ್ತದೆ”
“ಒಂದು ಸತಿ ಪೋಲೀಸ್‍ನೋರ್ಯಲ್ಲ ಅಕೌಂಟ್ ಹೈಯರ್, ಲೋಯರ್, ಜನರಲ್ ಲಾ, ಎಕ್ಸಾಂ ತಗಂಡಿದ್ರು ಸಾ, ಎಸ್ಸಿ ಕೆಂಪಯ್ಯನೋರು ಮನಸು ಮಾಡಿದ್ರಿಂದ ಯಲ್ಲ ಪೋಲೀಸ್ರು ಕಾಫಿ ಮಾಡಿ ಯಲ್ಲ ಪಾಸಾಗಿದ್ರು. ಅಂಗೇನಾರ ಭವಾನಿ ಮಾಡಿದ್ರ ಅಂತ”
“ಯಾವನ್ರಿ ನಿಮಗೇಳಿದೋನು? ಹೊಟ್ಟಿಗೆ ಅನ್ನ ತಿಂತಿರೊ ಇಲ್ಲ ಮಣ್ಣು ತಿಂತಿರೊ”
“ಬರಿ ಮುದ್ದೆ ಸಾ”
“ಅದ್ಕೆ ಹಿಂಗೆ ಮಾತಾಡದು ನೀವು”
“ದೇವೇಗೌಡ್ರು ಅದ್ನೆ ಅಲವ ಸಾ ತಿನ್ನದು”
“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...