Homeಅಂಕಣಗಳುಹಾಸನ ಪ್ರಥಮ ಸ್ಥಾನಕ್ಕೆ ಭವಾನಿ ಕಾರಣ ಕಂಡ್ರೀ

ಹಾಸನ ಪ್ರಥಮ ಸ್ಥಾನಕ್ಕೆ ಭವಾನಿ ಕಾರಣ ಕಂಡ್ರೀ

- Advertisement -
- Advertisement -

ಯಾಹೂ |

ಅದೊಂದು ಕಾಲದಲ್ಲಿ ಎಸ್ಸೆಸೆಲ್ಸಿಯಲ್ಲಿ ಪೇಲಾಗುವುದು ಅವಮಾನವೇ ಅಲ್ಲ. ಆದರು ಪಾಸದವರು ಸರಸ್ವತಿ ಪುತ್ರನಂತೆ ಬೀಗುತ್ತಿದ್ದರು. ಕಾಲ ಮಾಗಿದ ಬದಲಾವಣೆಯಲ್ಲಿ ಬದುಕೇ ಮುಖ್ಯವಾಗಿ, ಡಿಗ್ರಿಗಳು ಸರ್ಟಿಪಿಕೇಟುಗಳಾಗುತ್ತಿರುವ ಸಮಯದಲ್ಲಿ ಫಲಿತಾಂಶಗಳೂ ಮಹತ್ವ ಕಳೆದುಕೊಂಡಿರುವಾಗ ಮಾನ್ಯ ರೇವಣ್ಣನವರ ಜಿಲ್ಲೆ ಎಸ್ಸೆಸ್ಸೆಲ್ಸಿಯಲ್ಲಿ ಟಾಪ್ ಒನ್ ನಂಬರಿಗೆ ಬಂದಿದೆಯಂತಲ್ಲಾ. ಈ ಅಚ್ಚರಿ ಸುದ್ದಿಯನ್ನು ರೇವಣ್ಣನವರ ಜೊತೆಯಲ್ಲದೆ ಇನ್ನಾರ ಜೊತೆ ಹಂಚಿಕೊಳ್ಳಬೇಕು ಅನ್ನಿಸಿ ಫೋನ್ ಮಾಡಿದಾಗ ರಿಂಗಾಯ್ತು.
ರಿಂಗ್‍ಠೋನ್: ಶಾರದೆ ದಯತೋರು ನೀ………. ಶಾರದೆ “ಹಲೋ ಯಾರ್ರೀ”
“ನಾನು ಸರ್ ಯಾಹು”
“ಯಾವೂ ಅಂದ್ರ್ಯಾರ್ರೀ”
“ಪತ್ರಕರ್ತ ಸರ್”
“ಏನಾಗಬೇಕು”
“ಏನೂ ಆಗಬೇಕಾಗಿಲ್ಲ ಸಾರ್, ಅಭಿನಂದನೆ ಹೇಳನ ಅಂತ ಮಾಡಿದೆ”
“ರಿಜಲ್ಟು ಬಂದ ಮ್ಯಾಲೆ ಹೇಳಿ”
“ಯಲಕ್ಷನ್ ವಿಷಯ ಅಲ್ಲ ಸಾ, ಹಾಸನ ಜಿಲ್ಲೇಲಿ ಈಸಾರಿ ಎಸೆಸೆಲ್ಸಿ ಎಕ್ಸಾಮಲ್ಲಿ ಮಕ್ಕಳು ಪ್ರಥಮ ಸ್ಥಾನಗಳಿಸಿವೆ”
“ಅದ್ಕೆ ಭವಾನಿಗೆ ಅಭಿನಂದನೆ ಹೇಳ್ರಿ”
“ಭವಾನಿ ಏನು ಮಾಡಿದ್ರು ಸಾರ್”
“ಇದೇನ್ರಿ ಹಿಂಕೇಳ್ತಿರಿ, ಭವಾನಿ ಏನು ವಸಿ ಕಷ್ಟ ಪಟ್ಳೇನ್ರಿ, ಅವುಳು ಕಷ್ಟಪಡದ ನಾನೇ ನೋಡಕ್ಕಾಗಲಿಲ್ಲ”
“ಆಶ್ಚರ್ಯ ಸಾರ್, ನಮಿಗೆ ಗೊತ್ತೇ ಇರಲಿಲ್ಲ.”
“ಅವುಳು ನನ್ನ ಮದುವೆಯಾದಾಗ ನನಿಗೇನು ಗೊತ್ತಿತ್ರಿ ಪ್ರತಿಯೊಂದನ್ನು ಕಲಿಸಿದ್ಲು.”
“ಪ್ರತಿಯೊಂದನ್ನು ಅಂದ್ರೆ ಸಾ”
“ಪೇಪರ್ ಓದದ ಕಲಿಸಿದ್ಲು, ಯಾರತ್ರ ಯಂಗೆ ಮಾತಾಡಬೇಕು ಅನ್ನದ್ರಿಂದ ಹಿಡುದು ಏನುತ್ತರ ಕೊಡಬೇಕು ಅನ್ನೋವರಿಗು ಪ್ರತಿಯೊಂದನ್ನು ಕಲಿಸಿದ್ಲು ಕಂಡ್ರಿ”
“ರಿಯಲಿ ದೇವೇಗೌಡ್ರು ಗ್ರೇಟ್ ಸಾರ್.”
“ಯಾಕ್ರೀ.”
“ತಮ್ಮ ಮಗನನ್ನ ಗ್ರಹಿಸಿ, ಅವನನ್ನ ತಿದ್ದಿ ವಿದ್ಯೆ ಬುದ್ದಿ ಕಲಸೊ ಹೆಣ್ಣು ತಂದು ಮದುವೆ ಮಾಡಿದ್ರಲ್ಲ ಅದ್ಕೆ.”
“ನಿಜವಾಗ್ಲು ಭವಾನಿ ನನ್ನ ಭಾಗಕ್ಕೆ ಕಾಳಿಕಂಡ್ರಿ.”
“ಅಷ್ಟು ವಳ್ಳೆ ಹೆಣ್ಣುಮಗಳ ಕಾಳಿ ಅಂತೀರಲಾ ಸಾರ್.”
“ನಾನೇಳದ ಸಲುಪ ತಿಳಕಳ್ರಿ, ಕವಿರತ್ನ ಸುಮ್ಮಸುಮ್ಮನೆ ಆದನೇನ್ರಿ, ಕಾಳಿ ಅವುನಿಗೆ ವಿದ್ಯೆ ಬುದ್ದಿ ಕೊಟ್ಟಮ್ಯಾಲವುನು ಕತೆ ಕವನ ಬರದ ಅಲವೇನ್ರಿ.”
“ರಿಯಲಿ ಗ್ರೇಟ್ ಸಾರ್, ಭವಾನಿ ನಿಮ್ಮ ಭಾಗದ ಸರಸ್ವತಿ; ರೇವಣ್ಣನಿಗೆ ವಿದ್ಯಾಬುದ್ದಿ ಕಲಿಸಿ, ಎಮ್ಮೆಲ್ಲೆ ಮಾಡಿ, ಮಂತ್ರಿ ಮಾಡಿ, ಇವತ್ತು ಕರ್ನಾಟಕಕ್ಕೆ ಒಬ್ಬ ಸಮರ್ಥ ಮಂತ್ರಿ ಕೊಟ್ಟಿರೋದ್ರ ಕ್ರೆಡಿಟ್ಟು ಭವಾನಿಗೇ ಸೇರಬೇಕು ಸಾ. ಅಂಥ ರೇವಣ್ಣನಿಗೇ ವಿದ್ಯೆ ಹೇಳಿದ್ಕೆ ಇಡೀ ಹಾಸನಕ್ಕೆ ಹೇಳೊ ಶಕ್ತಿ ಬಂತು.”
“ಅದೇ ಕಂಡ್ರಿ ನಾನೇಳದು. ಭವಾನಿ ಬರಿ ಜಿಲ್ಲಾ ಪಂಚಾಯ್ತಿ ಮೆಂಬ್ರಾಗಿ ಕುಂತಿರಲಿಲ್ಲ. ಜಿಲ್ಲೆ ಪ್ರತಿ ಶಾಲೆಗೂ ಹೋಗಿ ದಡ್ಡುಡುಗುರನ್ನೆಲ್ಲ ಪತ್ತೆ ಮಾಡೀ, ಕಡೆಗೆ ಅವುರಪ್ಪ ಅವ್ವನ್ನು ಭೇಟಿ ಮಾಡಿ ನಿಮ್ಮುಡಗರಿಗೆ ಯಂಗೆ ಪಾಠ ಮಾಡಬೇಕು ಯಂಗೆ ಪಾಸಾಗಂಗೆ ಮಾಡಬೇಕು ಅನ್ನದ ಹೇಳತಿದ್ಲು. ಅದ ನಾನೇ ನೋಡಿದೀನಿ.”
“ಮತ್ತೆ ಪ್ರಥಮ ಸ್ಥಾನಕ್ಕೆ ಜಿಲ್ಲಾಧಿಕಾರಿ ರೋಹಿಣಿ ಕಾರಣ ಅಂತರಲ್ಲ ಸಾ.”
“ನನಿಗೆಲ್ಲಿ ನಗಬೇಕೊ ಗೊತ್ತಾಯ್ತಾಯಿಲ್ಲ ಕಂಡ್ರಿ, ಈ ಮಾತ ಕೇಳಿ. ಅಲ್ರೀ ರೋಹಿಣಿ ಏನು ಜಿಲ್ಲೆ ಇಸುಗೂಲಿಗೆಲ್ಲಾ ಹೆಡ್ಮೇಷ್ಟ್ರಾಗಿದ್ಲ, ಹೋಗ್ಲಿ ಪ್ರಿನ್ಸಿಪಾಲಾಗಿದ್ಲಾ? ಪಾಪ ಅವುಳಿಗೆ ಜಿಲ್ಲಾಧಿಕಾರಿ ಕ್ಯಲಸನೆ ರಾಶಿ ಬಿದ್ದಿತ್ತು. ಆ ಕ್ಯಲಸನೆ ಒಂದು ಖಂಡಗ ಇದ್ದಾಗ ಇನ್ನ ಮಕ್ಕಳ ಮಾತಾಡಿಸೋದಕ್ಕೆ ಪುರುಸೊತ್ತೆಲ್ಲೀ?””
“ಅದು ನಿಜವೆ, ಆದ್ರು ಆ ಹೆಣಮಗಳು ತಾನು ಹ್ಯಾಂಗೆ ಓದಿ ಮುಂದಕ್ಕೆ ಬಂದೆ ಅನ್ನೋ ಮೆತಡ್ಡ ಇಡೀ ಜಿಲ್ಲೆ ಮೇಷ್ಟ್ರಿಗೆ ಹೇಳಿದ್ದರಂತೆ. ಅವುರು ವಿದ್ಯಾರ್ಥಿಗಳಿಗೆ ಹೇಳಿದ್ರಂತೆ, ಅಂಗಾಗಿ ಎಸ್ಸೆಲ್ಸಿ ರಿಜಲ್ಟಲ್ಲಿ ಜಿಲ್ಲೆ ಪ್ರಥಮ ಬಂದದೆ ಅಂತ ಪತ್ರಕರ್ತರೆ ಬರದವುರೆ ಸಾ.”
“ನೀವು, ಪತ್ರಕರ್ತರಿಗೇನು ಬರೀತೀರಿ ಕಂಡ್ರಿ, ಈಗ ಅಂಗ್ಯಲ್ಲ ಬರಿಯೋರು ಈಟು ದಿನ ಎಲ್ಲೋಗಿದ್ರಪ್ಪ, ರೋಹಿಣಿ ಎಲ್ಲೆಲ್ಲಿ ಪಾಠ ಮಾಡಿದ್ರು ಅಂತ ಆಗ್ಲೇ ಬರೀಬೇಕಾಗಿತ್ತು. ಅವುರೇನೋ ಮಾಡಿದ್ರು ಅಂತ ಬರೀತಾ ಇರೊ ಈ ಪತ್ರಕರ್ತರು. ಅದೇ ಭವಾನಿ ಬಗ್ಗೆ ಒಂದು ಮಾತ ಬರೀಲಿಲ್ಲ. ನಾನೇ ಹೇಳಬೇಕಾಯ್ತು.”
“ಪತ್ರಕರ್ತರು ಬುಡಿ ಸಾ ನಿಮ್ಮ ಪ್ಯಾಮಿಲಿ ಕಂಡ್ರೆಸಾಕು ಏನೇನೊ ಬರೀತಾರೆ, ಆದ್ರು ಬಹಳ ಹಿಂದೆನೆ ನೀವು ನಿಮ್ಮ ಭವಾನಿ ಮೇಡಂನ ಸರಿಯಾಗಿ ಬಳಸಿಕಂಡಿದ್ದ್ರೆ, ಯಲ್ರೂ ಎಸ್ಸೆಲ್ಸೀಲಿ ಪಸ್ಟ್ ಕ್ಲಾಸಲ್ಲಿ ಪಾಸಾಗಬಹುದಿತ್ತು.”
“ಅಂಗಾಗದಿಲ್ಲ ಕಂಡ್ರೀ, ನಮ್ಮ ಮನೆ ಹುಡುಗರಿಗೆ ನಾವು ಪಾಠ ಹೇಳಕ್ಕಾಗತ್ತೇ, ವಡದುಬುಡ್ತಿವಿ ಕಂಡ್ರಿ, ಅದ್ಕೆ ಅಲವ ಬ್ಯಾರೆ ಮೇಸ್ಟ್ರುತಕ್ಕೆ ಕಳಸದು. ಆಗ ಭವಾನಿ ನನಿಗೊಬ್ಬನಿಗೆ ವಿದ್ಯೆ ಬುದ್ದಿ ಕಲಸಕ್ಕೆ ಸಾಕಾಗೋಯ್ತಿತ್ತು. ಇನ್ನ ಉಳದೋರಿಗೆ ಎಲ್ಲಿಂದ ಹೇಳಿಕೊಡದ್ರಿ.”
“ಆಗದಿಲ್ಲ ಸಾ, ನಿಜಕ್ಕೂ ನಿಮ್ಮ ಕಥೆ ಕೇಳಿದ್ರೆ ಮಲ್ಲಮ್ಮನ ಪವಾಡ ಸಿನುಮ ಕತೆ ಕೇಳಿದಂಗಾಯ್ತು ಸಾ.”
“ನಾನು ಕವಿರತ್ನ ಕಾಳಿದಾಸ ಅಂದ್ರೆ, ನೀವು ಮಲ್ಲಮ್ಮನ ಪವಾಡ ಅಂತೀರಲ್ರೀ.”
“ಸಾರಿ ಸಾ. ಸರಿಯಾದ ಹೋಲಿಕೆನೂ ಬರಲ್ಲ ನಂಗೆ. ಆದ್ರು ಒಂದು ಡವುಟು ಸಾ.”
“ಏನ್ರಿ ಡವುಟು”
“2016-17ನೇ ಸಾಲಲ್ಲಿ 7ನೇ ಸ್ಥಾನದಲ್ಲಿದ್ದ ಜಿಲ್ಲೆ, 2019ಕ್ಕೆ ಪ್ರಥಮ ಸ್ಥಾನಕ್ಕೆ ಯಂಗೆ ಬಂತು ಅಂತ”
“ಅದೆ ಹೇಳ್ಳಿಲ್ಲವೇನ್ರಿ, ಭವಾನಿ ಮನಸು ಮಾಡಿದ್ಕೆ ಅಂತ”
“ನನಗಿರೊ ಡವುಟು ಪ್ರಕಾರ, ಇಂತ ಪವಾಡ ನ್ಯಡಿಬೇಕಾದ್ರೆ ಸಾಮೂಹಿಕ ಕಾಫಿ ನ್ಯಡಿದಿರಬೇಕು ಸಾ”
“ಅದ್ಯಂಗ್ರಿ ಇಡೀ ಜಿಲ್ಲೇನೆ ಕಾಫಿ ಮಾಡ್ತದೆ”
“ಒಂದು ಸತಿ ಪೋಲೀಸ್‍ನೋರ್ಯಲ್ಲ ಅಕೌಂಟ್ ಹೈಯರ್, ಲೋಯರ್, ಜನರಲ್ ಲಾ, ಎಕ್ಸಾಂ ತಗಂಡಿದ್ರು ಸಾ, ಎಸ್ಸಿ ಕೆಂಪಯ್ಯನೋರು ಮನಸು ಮಾಡಿದ್ರಿಂದ ಯಲ್ಲ ಪೋಲೀಸ್ರು ಕಾಫಿ ಮಾಡಿ ಯಲ್ಲ ಪಾಸಾಗಿದ್ರು. ಅಂಗೇನಾರ ಭವಾನಿ ಮಾಡಿದ್ರ ಅಂತ”
“ಯಾವನ್ರಿ ನಿಮಗೇಳಿದೋನು? ಹೊಟ್ಟಿಗೆ ಅನ್ನ ತಿಂತಿರೊ ಇಲ್ಲ ಮಣ್ಣು ತಿಂತಿರೊ”
“ಬರಿ ಮುದ್ದೆ ಸಾ”
“ಅದ್ಕೆ ಹಿಂಗೆ ಮಾತಾಡದು ನೀವು”
“ದೇವೇಗೌಡ್ರು ಅದ್ನೆ ಅಲವ ಸಾ ತಿನ್ನದು”
“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...