Homeಕರ್ನಾಟಕಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ...

ಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ…

- Advertisement -
- Advertisement -

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿತ್ಯವೂ ಸೈಬರ್ ಸೆಂಟರ್ ಮತ್ತು ಶಾಲೆಗಳಿಗೆ ತಿರುಗುತ್ತಲೇ ಇದ್ದರು.. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕೂಡ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸುವಂತೆ ಸಮಯವನ್ನೂ ನೀಡಿತ್ತು. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಪ್ರತಿದಿನ ಎರಡ್ಮೂರು ಬಾರಿಯಾದರೂ ಸೈಬರ್ ಸೆಂಟರ್ ಮತ್ತು ಶಾಲೆಗಳಲ್ಲಿ ವಿಚಾರಿಸುತ್ತಲೇ ಇದ್ದರು. ಕೊನೆ ಗಳಿಗೆಯಲ್ಲಿ ಮೆಟ್ರಿಕ್ ಪೂರ್ವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನೇ ಬಿಜೆಪಿ ಸರ್ಕಾರ ನಿಲ್ಲಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಪಿ.ವಸಂತಕುಮಾರ್ ವಿದ್ಯಾರ್ಥಿ ವೇತನ ರದ್ದುಗೊಳಿಸಲಾಗಿದೆ ಎಂಬ ಆದೇಶ ನೀಡಿರುವುದು ಪೋಷಕರನ್ನು ಕೆರಳುವಂತೆ ಮಾಡಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಲೇ ಬರುತ್ತಿದೆ. ನೆರೆ ಪರಿಹಾರ ಹಣ ಬಿಡುಗಡೆ ಮಾಡಿ ನೆರವು ನೀಡಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡುತ್ತಿಲ್ಲ. ಈಗ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವೇತನಕ್ಕೂ ಕತ್ತರಿ ಹಾಕಿದೆ. ತಮ್ಮ ಮಗ/ಳ ಭವಿಷ್ಯಕ್ಕೆ ಸ್ವಲ್ಪ ಮಟ್ಟಿನ ದಾರಿಯಾಗಬಹುದು ಎಂಬ ಪೋಷಕರ ಕನಸಿಗೆ ರಾಜ್ಯ ಸರ್ಕಾರ ತಣ್ಣೀರು ಎರಚಿದೆ. ಆರಂಭದಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31ರವರೆಗೆ ಅವಧಿ ನೀಡಿ ಈಗ ದಿಢೀರ್ ರದ್ದುಪಡಿಸಿದ್ದೇಕೆ ಎಂಬ ಪ್ರಶ್ನೆ ಎದುರಾಗಿದೆ.

ವಿದ್ಯಾರ್ಥಿಗಳ ಪೋಷಕರು ಸೈಬರ್ ಸೆಂಟರ್‌ನಲ್ಲಿ ಅರ್ಜಿ ಭರ್ತಿ ಮಾಡಲು ಹೋದರೆ ಅಥವಾ ಭರ್ತಿ ಮಾಡಿಸಲು ಹೋದರೆ ಎಸ್.ಎಸ್.ಪಿ ಕರ್ನಾಟಕ ಡಾಟ್ ಕಾಮ್ ಪೋರ್ಟಲ್ ತೆರೆದುಕೊಳ್ಳುತ್ತಿತ್ತು. ವಿದ್ಯಾರ್ಥಿ ಲಾಗಿನ್ ಇಲ್ಲವೆ ಖಾತೆಯನ್ನು ಸೃಜಿಸಿ ಖಾತೆ ಓಪನ್ ಮಾಡಲು ಹೋದರೆ ವಿದ್ಯಾರ್ಥಿಗಳ ಮಾಹಿತಿಯೇ ಸ್ಕ್ರೀನ್ ಮೇಲೆ ಬರುತ್ತಿರಲಿಲ್ಲ. ಯಾಕೆಂದರೆ ಅರ್ಜಿಯನ್ನು ಬಿಟ್ಟಿದ್ದರೆ ತಾನೆ ಅದು ಸ್ಕ್ರೀನ್ ಮೇಲೆ ವಿದ್ಯಾರ್ಥಿಯ ಮಾಹಿತಿ ಬರುವುದು.. ಅದು ಮಾಹಿತಿ ಬರುತ್ತಿರಲಿಲ್ಲ. ಆದರೆ 2018-19ನೇ ಸಾಲಿನ ವಿದ್ಯಾರ್ಥಿ ವೇತನ ಪಡೆದಿರುವುದನ್ನು ಮಾತ್ರ ತೋರಿಸುತ್ತಿತ್ತು.

ಎಸ್.ಎಸ್.ಪಿಯಡಿಯಲ್ಲಿ ಮೆಟ್ರಿಕ್ ಪೂರ್ವ ಅಂದರೆ 1 ರಿಂದ 10ನೇ ತರಗತಿ ಒಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು. ಈಗ ಅದಕ್ಕೂ ಕುತ್ತು ಬಂದಿದೆ.

ಅಷ್ಟೇ ಅಲ್ಲ ವಿದ್ಯಾರ್ಥಿ ಮುಂದಿನ ತರಗತಿಗೆ ಹೋಗಿರುವ ವಿಷಯವನ್ನೇ ಅಪ್ ಡೇಟ್ ಮಾಡಿರಲಿಲ್ಲ. ಯಾವುದೇ ವಿದ್ಯಾರ್ಥಿಯ ಮಾಹಿತಿ ಹುಡುಕಿದರೆ ವಿದ್ಯಾರ್ಥಿಯ ಹಿಂದಿನ ವರ್ಷದ ಮಾಹಿತಿ ಮತ್ತು ಪಡೆದಿರುವ ಹಣ ಮಾತ್ರ ತೋರಿಸುತ್ತಿತ್ತು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕಾಗಿ ವಿದ್ಯಾರ್ಥಿಗಳ ಮಾಹಿತಿ ಅಪ್ ಡೇಟ್ ಮಾಡಬೇಕಾಗಿದ್ದ ಇಲಾಖೆ ಮೌನವಹಿಸಿತ್ತು. ಇಲಾಖೆಗೆ ಮೊದಲೇ ಈ ಬಾರಿ ವಿದ್ಯಾರ್ಥಿ ವೇತನ ಬಿಡುಗಡೆಯಾಗುವುದಿಲ್ಲ ಎಂಬುದು ಗೊತ್ತಿತ್ತು. ಹೀಗಾಗಿ ವಿಷಯವನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಮುಚ್ಚಿಟ್ಟು ಅರ್ಜಿ ಮಾತ್ರ ಆಹ್ವಾನಿಸುವ ನಾಟಕ ಮಾಡಿತು ಇಲಾಖೆ. ಇಲಾಖೆಯ ನಾಟಕದ ಪಾತ್ರಧಾರಿಗಳು ಕೊನೆಯವರೆಗೂ ರಂಗಕ್ಕೆ ಬರಲೇ ಇಲ್ಲ. ಆದರೆ ನಾಟಕ ಮಾತ್ರ ಮುಕ್ತಾಯವಾಗಿತ್ತು. ಹಣ ಬರುತ್ತದೆ. ವಿದ್ಯಾರ್ಥಿಗೆ ಯಾವುದಾದರೂ ಉಪಯೋಗಕ್ಕೆ ಬರುತ್ತದೆ ಎಂದು ಕಾಯುತ್ತಿದ್ದವರಿಗೆ ನಿರಾಸೆ ಉಂಟು ಮಾಡಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರನ್ನು ವಾರದ ಹಿಂದೆಯೇ ಸಂಪರ್ಕಿಸಲಾಗಿತ್ತು. ವಿದ್ಯಾರ್ಥಿಯ ಮಾಹಿತಿ ಅಪ್ ಡೇಟ್ ಆಗಿಲ್ಲ, ವಿದ್ಯಾರ್ಥಿಯ ಹೊಸ ಖಾತೆಯೂ ಸೃಜನೆಯಾಗುತ್ತಿಲ್ಲ. ವಿದ್ಯಾರ್ಥಿಯ ಲಾಗಿನ್ ಕೂಡ ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರೆ ಅವರಿಂದ ಬಂದ ಉತ್ತರ ‘ಇನ್ನು ಎರಡು ಮೂರು ದಿನ ಕಾಯಿರಿ. ಅರ್ಜಿಯನ್ನು ಅಪ್ ಲೋಡ್ ಮಾಡಿಲ್ಲ’ ಎಂದು ಭರವಸೆಯನ್ನೂ ನೀಡಿದ್ದರು. ಆದರೆ ಆ ಅಧಿಕಾರಿ ಸುಳ್ಳು ಹೇಳಿದ್ದಾರೆ ಎಂಬುದು ಎರಡು ವಾರದ ನಂತರ ಈಗ ಗೊತ್ತಾಗಿದೆ. ಅಧಿಕಾರಿಗಳು ಹೀಗೆ ಮಾಹಿತಿ ಮುಚ್ಚಿಡುವ ಮೂಲಕ ವಿದ್ಯಾರ್ಥಿ ಮತ್ತು ಪೋಷಕರಿಗೆ ವಂಚನೆ ಮಾಡಿದ್ದಾರೆ. ಮೊದಲೇ ಮಾಹಿತಿ ನೀಡಿದ್ದರೆ ವಿದ್ಯಾರ್ಥಿ ಪೋಷಕರು ಶಾಲೆ, ಸೈಬರ್ ಸೆಂಟರ್ ಅಲೆಯುವುದು ತಪ್ಪುತ್ತಿತ್ತು. ಹೀಗೆ ದಿಢೀರ್ ವಿದ್ಯಾರ್ಥಿ ವೇತನ ರದ್ದುಪಡಿಸಲಾಗಿದೆ ಎಂದರೆ ಹೇಗೆ ಎಂದು ಪೋಷಕರು ಪ್ರಶ್ನಿಸಿದ್ದಾರೆ.

ನೂರು ದಿನಗಳನ್ನು ಪೂರೈಸಿರುವ ಬಿ.ಎಸ್.ಯಡಿಯೂರಪ್ಪ ಸರ್ಕಾರ ಹಿಂದುಳಿದ ವಿದ್ಯಾರ್ಥಿಗಳಿಗೆ  ದ್ರೋಹ ಎಸಗಿದೆ. ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸಿದೆ. ವಿದ್ಯಾರ್ಥಿಗಳಿಗೆ ಮೊದಲೇ ಮಾಹಿತಿ ನೀಡಿದರೆ ಪ್ರತಿಭಟನೆ ನಡೆಸಬಹುದು ಎಂಬ ಕಾರಣಕ್ಕೆ ಈ ರೀತಿ ಮಾಡಲಾಗಿದೆ. 1 ರಿಂದ 10 ತರಗತಿಯವರೆಗಿನ ಲಕ್ಷಾಂತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುವುದರಿಂದ ವಂಚಿತರಾಗುತ್ತಾರೆ. ಬಹುಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತು ಇಲಾಖೆ ದ್ರೋಹ ಬಗೆದಿದೆ. ಇದು ವಿದ್ಯಾರ್ಥಿಗಳ ವಿರೋಧಿ ನೀತಿಯಾಗಿದೆ. ವಿದ್ಯಾರ್ಥಿ ವೇತನ ನಿಲ್ಲಿಸುವ ಮೂಲಕ ಸರ್ಕಾರ ಅವರ ಭವಿಷ್ಯಕ್ಕೆ ಕೊಡಲಿ ಪೆಟ್ಟು ನೀಡಿದಂತಾಗಿದೆ. ವಿದ್ಯಾರ್ಥಿ ವೇತನ ನೀಡದಿದ್ದರೆ ಹೋರಾಟ ಸಂಘಟಿಸುತ್ತೇವೆ. ಸೋಮವಾರ ಇಲ್ಲವೇ ಮಂಗಳವಾರ ರಾಜ್ಯಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿ ಹೋರಾಡುತ್ತೇವೆ ಎನ್ನುತ್ತಾರೆ ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯಾಧ್ಯಕ್ಷ ಗುರುರಾಜ್ ದೇಸಾಯಿ.

ಹಿಂದುಳಿದ ವರ್ಗಗಳ ಅದೆಷ್ಟೋ ಬಡ ಕುಟುಂಬಗಳು ತಮ್ಮ ಮಕ್ಕಳಿಗೆ ವಿದ್ಯಾರ್ಥಿ ವೇತನದ ಹಣದಿಂದ ಪುಸ್ತಕ, ಬಟ್ಟೆ ಮೊದಲಾದ ಸಾಮಗ್ರಿ ಗಳನ್ನು ಕೊಡಿಸುತ್ತಿದ್ದವು. ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿ ವೇತನ ಅನುಕೂಲವಾಗುತ್ತಿತ್ತು. ಆದರೆ ಈಗ ಸರ್ಕಾರ ಕುಂಟು ನೆಪ ಹೇಳಿಕೊಂಡು ವಿದ್ಯಾರ್ಥಿ ವೇತನ ನಿಲ್ಲಿಸಿರುವುದು ನಾಚಿಕೆಗೇಡಿನ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...