Homeಕರ್ನಾಟಕಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ...

ಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ…

- Advertisement -
- Advertisement -

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿತ್ಯವೂ ಸೈಬರ್ ಸೆಂಟರ್ ಮತ್ತು ಶಾಲೆಗಳಿಗೆ ತಿರುಗುತ್ತಲೇ ಇದ್ದರು.. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕೂಡ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸುವಂತೆ ಸಮಯವನ್ನೂ ನೀಡಿತ್ತು. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಪ್ರತಿದಿನ ಎರಡ್ಮೂರು ಬಾರಿಯಾದರೂ ಸೈಬರ್ ಸೆಂಟರ್ ಮತ್ತು ಶಾಲೆಗಳಲ್ಲಿ ವಿಚಾರಿಸುತ್ತಲೇ ಇದ್ದರು. ಕೊನೆ ಗಳಿಗೆಯಲ್ಲಿ ಮೆಟ್ರಿಕ್ ಪೂರ್ವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನೇ ಬಿಜೆಪಿ ಸರ್ಕಾರ ನಿಲ್ಲಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಪಿ.ವಸಂತಕುಮಾರ್ ವಿದ್ಯಾರ್ಥಿ ವೇತನ ರದ್ದುಗೊಳಿಸಲಾಗಿದೆ ಎಂಬ ಆದೇಶ ನೀಡಿರುವುದು ಪೋಷಕರನ್ನು ಕೆರಳುವಂತೆ ಮಾಡಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಲೇ ಬರುತ್ತಿದೆ. ನೆರೆ ಪರಿಹಾರ ಹಣ ಬಿಡುಗಡೆ ಮಾಡಿ ನೆರವು ನೀಡಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡುತ್ತಿಲ್ಲ. ಈಗ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವೇತನಕ್ಕೂ ಕತ್ತರಿ ಹಾಕಿದೆ. ತಮ್ಮ ಮಗ/ಳ ಭವಿಷ್ಯಕ್ಕೆ ಸ್ವಲ್ಪ ಮಟ್ಟಿನ ದಾರಿಯಾಗಬಹುದು ಎಂಬ ಪೋಷಕರ ಕನಸಿಗೆ ರಾಜ್ಯ ಸರ್ಕಾರ ತಣ್ಣೀರು ಎರಚಿದೆ. ಆರಂಭದಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31ರವರೆಗೆ ಅವಧಿ ನೀಡಿ ಈಗ ದಿಢೀರ್ ರದ್ದುಪಡಿಸಿದ್ದೇಕೆ ಎಂಬ ಪ್ರಶ್ನೆ ಎದುರಾಗಿದೆ.

ವಿದ್ಯಾರ್ಥಿಗಳ ಪೋಷಕರು ಸೈಬರ್ ಸೆಂಟರ್‌ನಲ್ಲಿ ಅರ್ಜಿ ಭರ್ತಿ ಮಾಡಲು ಹೋದರೆ ಅಥವಾ ಭರ್ತಿ ಮಾಡಿಸಲು ಹೋದರೆ ಎಸ್.ಎಸ್.ಪಿ ಕರ್ನಾಟಕ ಡಾಟ್ ಕಾಮ್ ಪೋರ್ಟಲ್ ತೆರೆದುಕೊಳ್ಳುತ್ತಿತ್ತು. ವಿದ್ಯಾರ್ಥಿ ಲಾಗಿನ್ ಇಲ್ಲವೆ ಖಾತೆಯನ್ನು ಸೃಜಿಸಿ ಖಾತೆ ಓಪನ್ ಮಾಡಲು ಹೋದರೆ ವಿದ್ಯಾರ್ಥಿಗಳ ಮಾಹಿತಿಯೇ ಸ್ಕ್ರೀನ್ ಮೇಲೆ ಬರುತ್ತಿರಲಿಲ್ಲ. ಯಾಕೆಂದರೆ ಅರ್ಜಿಯನ್ನು ಬಿಟ್ಟಿದ್ದರೆ ತಾನೆ ಅದು ಸ್ಕ್ರೀನ್ ಮೇಲೆ ವಿದ್ಯಾರ್ಥಿಯ ಮಾಹಿತಿ ಬರುವುದು.. ಅದು ಮಾಹಿತಿ ಬರುತ್ತಿರಲಿಲ್ಲ. ಆದರೆ 2018-19ನೇ ಸಾಲಿನ ವಿದ್ಯಾರ್ಥಿ ವೇತನ ಪಡೆದಿರುವುದನ್ನು ಮಾತ್ರ ತೋರಿಸುತ್ತಿತ್ತು.

ಎಸ್.ಎಸ್.ಪಿಯಡಿಯಲ್ಲಿ ಮೆಟ್ರಿಕ್ ಪೂರ್ವ ಅಂದರೆ 1 ರಿಂದ 10ನೇ ತರಗತಿ ಒಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು. ಈಗ ಅದಕ್ಕೂ ಕುತ್ತು ಬಂದಿದೆ.

ಅಷ್ಟೇ ಅಲ್ಲ ವಿದ್ಯಾರ್ಥಿ ಮುಂದಿನ ತರಗತಿಗೆ ಹೋಗಿರುವ ವಿಷಯವನ್ನೇ ಅಪ್ ಡೇಟ್ ಮಾಡಿರಲಿಲ್ಲ. ಯಾವುದೇ ವಿದ್ಯಾರ್ಥಿಯ ಮಾಹಿತಿ ಹುಡುಕಿದರೆ ವಿದ್ಯಾರ್ಥಿಯ ಹಿಂದಿನ ವರ್ಷದ ಮಾಹಿತಿ ಮತ್ತು ಪಡೆದಿರುವ ಹಣ ಮಾತ್ರ ತೋರಿಸುತ್ತಿತ್ತು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕಾಗಿ ವಿದ್ಯಾರ್ಥಿಗಳ ಮಾಹಿತಿ ಅಪ್ ಡೇಟ್ ಮಾಡಬೇಕಾಗಿದ್ದ ಇಲಾಖೆ ಮೌನವಹಿಸಿತ್ತು. ಇಲಾಖೆಗೆ ಮೊದಲೇ ಈ ಬಾರಿ ವಿದ್ಯಾರ್ಥಿ ವೇತನ ಬಿಡುಗಡೆಯಾಗುವುದಿಲ್ಲ ಎಂಬುದು ಗೊತ್ತಿತ್ತು. ಹೀಗಾಗಿ ವಿಷಯವನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಮುಚ್ಚಿಟ್ಟು ಅರ್ಜಿ ಮಾತ್ರ ಆಹ್ವಾನಿಸುವ ನಾಟಕ ಮಾಡಿತು ಇಲಾಖೆ. ಇಲಾಖೆಯ ನಾಟಕದ ಪಾತ್ರಧಾರಿಗಳು ಕೊನೆಯವರೆಗೂ ರಂಗಕ್ಕೆ ಬರಲೇ ಇಲ್ಲ. ಆದರೆ ನಾಟಕ ಮಾತ್ರ ಮುಕ್ತಾಯವಾಗಿತ್ತು. ಹಣ ಬರುತ್ತದೆ. ವಿದ್ಯಾರ್ಥಿಗೆ ಯಾವುದಾದರೂ ಉಪಯೋಗಕ್ಕೆ ಬರುತ್ತದೆ ಎಂದು ಕಾಯುತ್ತಿದ್ದವರಿಗೆ ನಿರಾಸೆ ಉಂಟು ಮಾಡಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರನ್ನು ವಾರದ ಹಿಂದೆಯೇ ಸಂಪರ್ಕಿಸಲಾಗಿತ್ತು. ವಿದ್ಯಾರ್ಥಿಯ ಮಾಹಿತಿ ಅಪ್ ಡೇಟ್ ಆಗಿಲ್ಲ, ವಿದ್ಯಾರ್ಥಿಯ ಹೊಸ ಖಾತೆಯೂ ಸೃಜನೆಯಾಗುತ್ತಿಲ್ಲ. ವಿದ್ಯಾರ್ಥಿಯ ಲಾಗಿನ್ ಕೂಡ ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರೆ ಅವರಿಂದ ಬಂದ ಉತ್ತರ ‘ಇನ್ನು ಎರಡು ಮೂರು ದಿನ ಕಾಯಿರಿ. ಅರ್ಜಿಯನ್ನು ಅಪ್ ಲೋಡ್ ಮಾಡಿಲ್ಲ’ ಎಂದು ಭರವಸೆಯನ್ನೂ ನೀಡಿದ್ದರು. ಆದರೆ ಆ ಅಧಿಕಾರಿ ಸುಳ್ಳು ಹೇಳಿದ್ದಾರೆ ಎಂಬುದು ಎರಡು ವಾರದ ನಂತರ ಈಗ ಗೊತ್ತಾಗಿದೆ. ಅಧಿಕಾರಿಗಳು ಹೀಗೆ ಮಾಹಿತಿ ಮುಚ್ಚಿಡುವ ಮೂಲಕ ವಿದ್ಯಾರ್ಥಿ ಮತ್ತು ಪೋಷಕರಿಗೆ ವಂಚನೆ ಮಾಡಿದ್ದಾರೆ. ಮೊದಲೇ ಮಾಹಿತಿ ನೀಡಿದ್ದರೆ ವಿದ್ಯಾರ್ಥಿ ಪೋಷಕರು ಶಾಲೆ, ಸೈಬರ್ ಸೆಂಟರ್ ಅಲೆಯುವುದು ತಪ್ಪುತ್ತಿತ್ತು. ಹೀಗೆ ದಿಢೀರ್ ವಿದ್ಯಾರ್ಥಿ ವೇತನ ರದ್ದುಪಡಿಸಲಾಗಿದೆ ಎಂದರೆ ಹೇಗೆ ಎಂದು ಪೋಷಕರು ಪ್ರಶ್ನಿಸಿದ್ದಾರೆ.

ನೂರು ದಿನಗಳನ್ನು ಪೂರೈಸಿರುವ ಬಿ.ಎಸ್.ಯಡಿಯೂರಪ್ಪ ಸರ್ಕಾರ ಹಿಂದುಳಿದ ವಿದ್ಯಾರ್ಥಿಗಳಿಗೆ  ದ್ರೋಹ ಎಸಗಿದೆ. ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸಿದೆ. ವಿದ್ಯಾರ್ಥಿಗಳಿಗೆ ಮೊದಲೇ ಮಾಹಿತಿ ನೀಡಿದರೆ ಪ್ರತಿಭಟನೆ ನಡೆಸಬಹುದು ಎಂಬ ಕಾರಣಕ್ಕೆ ಈ ರೀತಿ ಮಾಡಲಾಗಿದೆ. 1 ರಿಂದ 10 ತರಗತಿಯವರೆಗಿನ ಲಕ್ಷಾಂತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುವುದರಿಂದ ವಂಚಿತರಾಗುತ್ತಾರೆ. ಬಹುಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತು ಇಲಾಖೆ ದ್ರೋಹ ಬಗೆದಿದೆ. ಇದು ವಿದ್ಯಾರ್ಥಿಗಳ ವಿರೋಧಿ ನೀತಿಯಾಗಿದೆ. ವಿದ್ಯಾರ್ಥಿ ವೇತನ ನಿಲ್ಲಿಸುವ ಮೂಲಕ ಸರ್ಕಾರ ಅವರ ಭವಿಷ್ಯಕ್ಕೆ ಕೊಡಲಿ ಪೆಟ್ಟು ನೀಡಿದಂತಾಗಿದೆ. ವಿದ್ಯಾರ್ಥಿ ವೇತನ ನೀಡದಿದ್ದರೆ ಹೋರಾಟ ಸಂಘಟಿಸುತ್ತೇವೆ. ಸೋಮವಾರ ಇಲ್ಲವೇ ಮಂಗಳವಾರ ರಾಜ್ಯಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿ ಹೋರಾಡುತ್ತೇವೆ ಎನ್ನುತ್ತಾರೆ ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯಾಧ್ಯಕ್ಷ ಗುರುರಾಜ್ ದೇಸಾಯಿ.

ಹಿಂದುಳಿದ ವರ್ಗಗಳ ಅದೆಷ್ಟೋ ಬಡ ಕುಟುಂಬಗಳು ತಮ್ಮ ಮಕ್ಕಳಿಗೆ ವಿದ್ಯಾರ್ಥಿ ವೇತನದ ಹಣದಿಂದ ಪುಸ್ತಕ, ಬಟ್ಟೆ ಮೊದಲಾದ ಸಾಮಗ್ರಿ ಗಳನ್ನು ಕೊಡಿಸುತ್ತಿದ್ದವು. ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿ ವೇತನ ಅನುಕೂಲವಾಗುತ್ತಿತ್ತು. ಆದರೆ ಈಗ ಸರ್ಕಾರ ಕುಂಟು ನೆಪ ಹೇಳಿಕೊಂಡು ವಿದ್ಯಾರ್ಥಿ ವೇತನ ನಿಲ್ಲಿಸಿರುವುದು ನಾಚಿಕೆಗೇಡಿನ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...