Homeಕರ್ನಾಟಕಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ...

ಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ…

- Advertisement -
- Advertisement -

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿತ್ಯವೂ ಸೈಬರ್ ಸೆಂಟರ್ ಮತ್ತು ಶಾಲೆಗಳಿಗೆ ತಿರುಗುತ್ತಲೇ ಇದ್ದರು.. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕೂಡ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸುವಂತೆ ಸಮಯವನ್ನೂ ನೀಡಿತ್ತು. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಪ್ರತಿದಿನ ಎರಡ್ಮೂರು ಬಾರಿಯಾದರೂ ಸೈಬರ್ ಸೆಂಟರ್ ಮತ್ತು ಶಾಲೆಗಳಲ್ಲಿ ವಿಚಾರಿಸುತ್ತಲೇ ಇದ್ದರು. ಕೊನೆ ಗಳಿಗೆಯಲ್ಲಿ ಮೆಟ್ರಿಕ್ ಪೂರ್ವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನೇ ಬಿಜೆಪಿ ಸರ್ಕಾರ ನಿಲ್ಲಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಪಿ.ವಸಂತಕುಮಾರ್ ವಿದ್ಯಾರ್ಥಿ ವೇತನ ರದ್ದುಗೊಳಿಸಲಾಗಿದೆ ಎಂಬ ಆದೇಶ ನೀಡಿರುವುದು ಪೋಷಕರನ್ನು ಕೆರಳುವಂತೆ ಮಾಡಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಲೇ ಬರುತ್ತಿದೆ. ನೆರೆ ಪರಿಹಾರ ಹಣ ಬಿಡುಗಡೆ ಮಾಡಿ ನೆರವು ನೀಡಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡುತ್ತಿಲ್ಲ. ಈಗ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವೇತನಕ್ಕೂ ಕತ್ತರಿ ಹಾಕಿದೆ. ತಮ್ಮ ಮಗ/ಳ ಭವಿಷ್ಯಕ್ಕೆ ಸ್ವಲ್ಪ ಮಟ್ಟಿನ ದಾರಿಯಾಗಬಹುದು ಎಂಬ ಪೋಷಕರ ಕನಸಿಗೆ ರಾಜ್ಯ ಸರ್ಕಾರ ತಣ್ಣೀರು ಎರಚಿದೆ. ಆರಂಭದಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31ರವರೆಗೆ ಅವಧಿ ನೀಡಿ ಈಗ ದಿಢೀರ್ ರದ್ದುಪಡಿಸಿದ್ದೇಕೆ ಎಂಬ ಪ್ರಶ್ನೆ ಎದುರಾಗಿದೆ.

ವಿದ್ಯಾರ್ಥಿಗಳ ಪೋಷಕರು ಸೈಬರ್ ಸೆಂಟರ್‌ನಲ್ಲಿ ಅರ್ಜಿ ಭರ್ತಿ ಮಾಡಲು ಹೋದರೆ ಅಥವಾ ಭರ್ತಿ ಮಾಡಿಸಲು ಹೋದರೆ ಎಸ್.ಎಸ್.ಪಿ ಕರ್ನಾಟಕ ಡಾಟ್ ಕಾಮ್ ಪೋರ್ಟಲ್ ತೆರೆದುಕೊಳ್ಳುತ್ತಿತ್ತು. ವಿದ್ಯಾರ್ಥಿ ಲಾಗಿನ್ ಇಲ್ಲವೆ ಖಾತೆಯನ್ನು ಸೃಜಿಸಿ ಖಾತೆ ಓಪನ್ ಮಾಡಲು ಹೋದರೆ ವಿದ್ಯಾರ್ಥಿಗಳ ಮಾಹಿತಿಯೇ ಸ್ಕ್ರೀನ್ ಮೇಲೆ ಬರುತ್ತಿರಲಿಲ್ಲ. ಯಾಕೆಂದರೆ ಅರ್ಜಿಯನ್ನು ಬಿಟ್ಟಿದ್ದರೆ ತಾನೆ ಅದು ಸ್ಕ್ರೀನ್ ಮೇಲೆ ವಿದ್ಯಾರ್ಥಿಯ ಮಾಹಿತಿ ಬರುವುದು.. ಅದು ಮಾಹಿತಿ ಬರುತ್ತಿರಲಿಲ್ಲ. ಆದರೆ 2018-19ನೇ ಸಾಲಿನ ವಿದ್ಯಾರ್ಥಿ ವೇತನ ಪಡೆದಿರುವುದನ್ನು ಮಾತ್ರ ತೋರಿಸುತ್ತಿತ್ತು.

ಎಸ್.ಎಸ್.ಪಿಯಡಿಯಲ್ಲಿ ಮೆಟ್ರಿಕ್ ಪೂರ್ವ ಅಂದರೆ 1 ರಿಂದ 10ನೇ ತರಗತಿ ಒಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು. ಈಗ ಅದಕ್ಕೂ ಕುತ್ತು ಬಂದಿದೆ.

ಅಷ್ಟೇ ಅಲ್ಲ ವಿದ್ಯಾರ್ಥಿ ಮುಂದಿನ ತರಗತಿಗೆ ಹೋಗಿರುವ ವಿಷಯವನ್ನೇ ಅಪ್ ಡೇಟ್ ಮಾಡಿರಲಿಲ್ಲ. ಯಾವುದೇ ವಿದ್ಯಾರ್ಥಿಯ ಮಾಹಿತಿ ಹುಡುಕಿದರೆ ವಿದ್ಯಾರ್ಥಿಯ ಹಿಂದಿನ ವರ್ಷದ ಮಾಹಿತಿ ಮತ್ತು ಪಡೆದಿರುವ ಹಣ ಮಾತ್ರ ತೋರಿಸುತ್ತಿತ್ತು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕಾಗಿ ವಿದ್ಯಾರ್ಥಿಗಳ ಮಾಹಿತಿ ಅಪ್ ಡೇಟ್ ಮಾಡಬೇಕಾಗಿದ್ದ ಇಲಾಖೆ ಮೌನವಹಿಸಿತ್ತು. ಇಲಾಖೆಗೆ ಮೊದಲೇ ಈ ಬಾರಿ ವಿದ್ಯಾರ್ಥಿ ವೇತನ ಬಿಡುಗಡೆಯಾಗುವುದಿಲ್ಲ ಎಂಬುದು ಗೊತ್ತಿತ್ತು. ಹೀಗಾಗಿ ವಿಷಯವನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಮುಚ್ಚಿಟ್ಟು ಅರ್ಜಿ ಮಾತ್ರ ಆಹ್ವಾನಿಸುವ ನಾಟಕ ಮಾಡಿತು ಇಲಾಖೆ. ಇಲಾಖೆಯ ನಾಟಕದ ಪಾತ್ರಧಾರಿಗಳು ಕೊನೆಯವರೆಗೂ ರಂಗಕ್ಕೆ ಬರಲೇ ಇಲ್ಲ. ಆದರೆ ನಾಟಕ ಮಾತ್ರ ಮುಕ್ತಾಯವಾಗಿತ್ತು. ಹಣ ಬರುತ್ತದೆ. ವಿದ್ಯಾರ್ಥಿಗೆ ಯಾವುದಾದರೂ ಉಪಯೋಗಕ್ಕೆ ಬರುತ್ತದೆ ಎಂದು ಕಾಯುತ್ತಿದ್ದವರಿಗೆ ನಿರಾಸೆ ಉಂಟು ಮಾಡಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರನ್ನು ವಾರದ ಹಿಂದೆಯೇ ಸಂಪರ್ಕಿಸಲಾಗಿತ್ತು. ವಿದ್ಯಾರ್ಥಿಯ ಮಾಹಿತಿ ಅಪ್ ಡೇಟ್ ಆಗಿಲ್ಲ, ವಿದ್ಯಾರ್ಥಿಯ ಹೊಸ ಖಾತೆಯೂ ಸೃಜನೆಯಾಗುತ್ತಿಲ್ಲ. ವಿದ್ಯಾರ್ಥಿಯ ಲಾಗಿನ್ ಕೂಡ ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರೆ ಅವರಿಂದ ಬಂದ ಉತ್ತರ ‘ಇನ್ನು ಎರಡು ಮೂರು ದಿನ ಕಾಯಿರಿ. ಅರ್ಜಿಯನ್ನು ಅಪ್ ಲೋಡ್ ಮಾಡಿಲ್ಲ’ ಎಂದು ಭರವಸೆಯನ್ನೂ ನೀಡಿದ್ದರು. ಆದರೆ ಆ ಅಧಿಕಾರಿ ಸುಳ್ಳು ಹೇಳಿದ್ದಾರೆ ಎಂಬುದು ಎರಡು ವಾರದ ನಂತರ ಈಗ ಗೊತ್ತಾಗಿದೆ. ಅಧಿಕಾರಿಗಳು ಹೀಗೆ ಮಾಹಿತಿ ಮುಚ್ಚಿಡುವ ಮೂಲಕ ವಿದ್ಯಾರ್ಥಿ ಮತ್ತು ಪೋಷಕರಿಗೆ ವಂಚನೆ ಮಾಡಿದ್ದಾರೆ. ಮೊದಲೇ ಮಾಹಿತಿ ನೀಡಿದ್ದರೆ ವಿದ್ಯಾರ್ಥಿ ಪೋಷಕರು ಶಾಲೆ, ಸೈಬರ್ ಸೆಂಟರ್ ಅಲೆಯುವುದು ತಪ್ಪುತ್ತಿತ್ತು. ಹೀಗೆ ದಿಢೀರ್ ವಿದ್ಯಾರ್ಥಿ ವೇತನ ರದ್ದುಪಡಿಸಲಾಗಿದೆ ಎಂದರೆ ಹೇಗೆ ಎಂದು ಪೋಷಕರು ಪ್ರಶ್ನಿಸಿದ್ದಾರೆ.

ನೂರು ದಿನಗಳನ್ನು ಪೂರೈಸಿರುವ ಬಿ.ಎಸ್.ಯಡಿಯೂರಪ್ಪ ಸರ್ಕಾರ ಹಿಂದುಳಿದ ವಿದ್ಯಾರ್ಥಿಗಳಿಗೆ  ದ್ರೋಹ ಎಸಗಿದೆ. ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸಿದೆ. ವಿದ್ಯಾರ್ಥಿಗಳಿಗೆ ಮೊದಲೇ ಮಾಹಿತಿ ನೀಡಿದರೆ ಪ್ರತಿಭಟನೆ ನಡೆಸಬಹುದು ಎಂಬ ಕಾರಣಕ್ಕೆ ಈ ರೀತಿ ಮಾಡಲಾಗಿದೆ. 1 ರಿಂದ 10 ತರಗತಿಯವರೆಗಿನ ಲಕ್ಷಾಂತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುವುದರಿಂದ ವಂಚಿತರಾಗುತ್ತಾರೆ. ಬಹುಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತು ಇಲಾಖೆ ದ್ರೋಹ ಬಗೆದಿದೆ. ಇದು ವಿದ್ಯಾರ್ಥಿಗಳ ವಿರೋಧಿ ನೀತಿಯಾಗಿದೆ. ವಿದ್ಯಾರ್ಥಿ ವೇತನ ನಿಲ್ಲಿಸುವ ಮೂಲಕ ಸರ್ಕಾರ ಅವರ ಭವಿಷ್ಯಕ್ಕೆ ಕೊಡಲಿ ಪೆಟ್ಟು ನೀಡಿದಂತಾಗಿದೆ. ವಿದ್ಯಾರ್ಥಿ ವೇತನ ನೀಡದಿದ್ದರೆ ಹೋರಾಟ ಸಂಘಟಿಸುತ್ತೇವೆ. ಸೋಮವಾರ ಇಲ್ಲವೇ ಮಂಗಳವಾರ ರಾಜ್ಯಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿ ಹೋರಾಡುತ್ತೇವೆ ಎನ್ನುತ್ತಾರೆ ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯಾಧ್ಯಕ್ಷ ಗುರುರಾಜ್ ದೇಸಾಯಿ.

ಹಿಂದುಳಿದ ವರ್ಗಗಳ ಅದೆಷ್ಟೋ ಬಡ ಕುಟುಂಬಗಳು ತಮ್ಮ ಮಕ್ಕಳಿಗೆ ವಿದ್ಯಾರ್ಥಿ ವೇತನದ ಹಣದಿಂದ ಪುಸ್ತಕ, ಬಟ್ಟೆ ಮೊದಲಾದ ಸಾಮಗ್ರಿ ಗಳನ್ನು ಕೊಡಿಸುತ್ತಿದ್ದವು. ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿ ವೇತನ ಅನುಕೂಲವಾಗುತ್ತಿತ್ತು. ಆದರೆ ಈಗ ಸರ್ಕಾರ ಕುಂಟು ನೆಪ ಹೇಳಿಕೊಂಡು ವಿದ್ಯಾರ್ಥಿ ವೇತನ ನಿಲ್ಲಿಸಿರುವುದು ನಾಚಿಕೆಗೇಡಿನ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...