Homeಕರ್ನಾಟಕಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ...

ಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ…

- Advertisement -
- Advertisement -

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿತ್ಯವೂ ಸೈಬರ್ ಸೆಂಟರ್ ಮತ್ತು ಶಾಲೆಗಳಿಗೆ ತಿರುಗುತ್ತಲೇ ಇದ್ದರು.. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕೂಡ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸುವಂತೆ ಸಮಯವನ್ನೂ ನೀಡಿತ್ತು. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಪ್ರತಿದಿನ ಎರಡ್ಮೂರು ಬಾರಿಯಾದರೂ ಸೈಬರ್ ಸೆಂಟರ್ ಮತ್ತು ಶಾಲೆಗಳಲ್ಲಿ ವಿಚಾರಿಸುತ್ತಲೇ ಇದ್ದರು. ಕೊನೆ ಗಳಿಗೆಯಲ್ಲಿ ಮೆಟ್ರಿಕ್ ಪೂರ್ವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನೇ ಬಿಜೆಪಿ ಸರ್ಕಾರ ನಿಲ್ಲಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಪಿ.ವಸಂತಕುಮಾರ್ ವಿದ್ಯಾರ್ಥಿ ವೇತನ ರದ್ದುಗೊಳಿಸಲಾಗಿದೆ ಎಂಬ ಆದೇಶ ನೀಡಿರುವುದು ಪೋಷಕರನ್ನು ಕೆರಳುವಂತೆ ಮಾಡಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಲೇ ಬರುತ್ತಿದೆ. ನೆರೆ ಪರಿಹಾರ ಹಣ ಬಿಡುಗಡೆ ಮಾಡಿ ನೆರವು ನೀಡಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡುತ್ತಿಲ್ಲ. ಈಗ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವೇತನಕ್ಕೂ ಕತ್ತರಿ ಹಾಕಿದೆ. ತಮ್ಮ ಮಗ/ಳ ಭವಿಷ್ಯಕ್ಕೆ ಸ್ವಲ್ಪ ಮಟ್ಟಿನ ದಾರಿಯಾಗಬಹುದು ಎಂಬ ಪೋಷಕರ ಕನಸಿಗೆ ರಾಜ್ಯ ಸರ್ಕಾರ ತಣ್ಣೀರು ಎರಚಿದೆ. ಆರಂಭದಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31ರವರೆಗೆ ಅವಧಿ ನೀಡಿ ಈಗ ದಿಢೀರ್ ರದ್ದುಪಡಿಸಿದ್ದೇಕೆ ಎಂಬ ಪ್ರಶ್ನೆ ಎದುರಾಗಿದೆ.

ವಿದ್ಯಾರ್ಥಿಗಳ ಪೋಷಕರು ಸೈಬರ್ ಸೆಂಟರ್‌ನಲ್ಲಿ ಅರ್ಜಿ ಭರ್ತಿ ಮಾಡಲು ಹೋದರೆ ಅಥವಾ ಭರ್ತಿ ಮಾಡಿಸಲು ಹೋದರೆ ಎಸ್.ಎಸ್.ಪಿ ಕರ್ನಾಟಕ ಡಾಟ್ ಕಾಮ್ ಪೋರ್ಟಲ್ ತೆರೆದುಕೊಳ್ಳುತ್ತಿತ್ತು. ವಿದ್ಯಾರ್ಥಿ ಲಾಗಿನ್ ಇಲ್ಲವೆ ಖಾತೆಯನ್ನು ಸೃಜಿಸಿ ಖಾತೆ ಓಪನ್ ಮಾಡಲು ಹೋದರೆ ವಿದ್ಯಾರ್ಥಿಗಳ ಮಾಹಿತಿಯೇ ಸ್ಕ್ರೀನ್ ಮೇಲೆ ಬರುತ್ತಿರಲಿಲ್ಲ. ಯಾಕೆಂದರೆ ಅರ್ಜಿಯನ್ನು ಬಿಟ್ಟಿದ್ದರೆ ತಾನೆ ಅದು ಸ್ಕ್ರೀನ್ ಮೇಲೆ ವಿದ್ಯಾರ್ಥಿಯ ಮಾಹಿತಿ ಬರುವುದು.. ಅದು ಮಾಹಿತಿ ಬರುತ್ತಿರಲಿಲ್ಲ. ಆದರೆ 2018-19ನೇ ಸಾಲಿನ ವಿದ್ಯಾರ್ಥಿ ವೇತನ ಪಡೆದಿರುವುದನ್ನು ಮಾತ್ರ ತೋರಿಸುತ್ತಿತ್ತು.

ಎಸ್.ಎಸ್.ಪಿಯಡಿಯಲ್ಲಿ ಮೆಟ್ರಿಕ್ ಪೂರ್ವ ಅಂದರೆ 1 ರಿಂದ 10ನೇ ತರಗತಿ ಒಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು. ಈಗ ಅದಕ್ಕೂ ಕುತ್ತು ಬಂದಿದೆ.

ಅಷ್ಟೇ ಅಲ್ಲ ವಿದ್ಯಾರ್ಥಿ ಮುಂದಿನ ತರಗತಿಗೆ ಹೋಗಿರುವ ವಿಷಯವನ್ನೇ ಅಪ್ ಡೇಟ್ ಮಾಡಿರಲಿಲ್ಲ. ಯಾವುದೇ ವಿದ್ಯಾರ್ಥಿಯ ಮಾಹಿತಿ ಹುಡುಕಿದರೆ ವಿದ್ಯಾರ್ಥಿಯ ಹಿಂದಿನ ವರ್ಷದ ಮಾಹಿತಿ ಮತ್ತು ಪಡೆದಿರುವ ಹಣ ಮಾತ್ರ ತೋರಿಸುತ್ತಿತ್ತು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕಾಗಿ ವಿದ್ಯಾರ್ಥಿಗಳ ಮಾಹಿತಿ ಅಪ್ ಡೇಟ್ ಮಾಡಬೇಕಾಗಿದ್ದ ಇಲಾಖೆ ಮೌನವಹಿಸಿತ್ತು. ಇಲಾಖೆಗೆ ಮೊದಲೇ ಈ ಬಾರಿ ವಿದ್ಯಾರ್ಥಿ ವೇತನ ಬಿಡುಗಡೆಯಾಗುವುದಿಲ್ಲ ಎಂಬುದು ಗೊತ್ತಿತ್ತು. ಹೀಗಾಗಿ ವಿಷಯವನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಮುಚ್ಚಿಟ್ಟು ಅರ್ಜಿ ಮಾತ್ರ ಆಹ್ವಾನಿಸುವ ನಾಟಕ ಮಾಡಿತು ಇಲಾಖೆ. ಇಲಾಖೆಯ ನಾಟಕದ ಪಾತ್ರಧಾರಿಗಳು ಕೊನೆಯವರೆಗೂ ರಂಗಕ್ಕೆ ಬರಲೇ ಇಲ್ಲ. ಆದರೆ ನಾಟಕ ಮಾತ್ರ ಮುಕ್ತಾಯವಾಗಿತ್ತು. ಹಣ ಬರುತ್ತದೆ. ವಿದ್ಯಾರ್ಥಿಗೆ ಯಾವುದಾದರೂ ಉಪಯೋಗಕ್ಕೆ ಬರುತ್ತದೆ ಎಂದು ಕಾಯುತ್ತಿದ್ದವರಿಗೆ ನಿರಾಸೆ ಉಂಟು ಮಾಡಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರನ್ನು ವಾರದ ಹಿಂದೆಯೇ ಸಂಪರ್ಕಿಸಲಾಗಿತ್ತು. ವಿದ್ಯಾರ್ಥಿಯ ಮಾಹಿತಿ ಅಪ್ ಡೇಟ್ ಆಗಿಲ್ಲ, ವಿದ್ಯಾರ್ಥಿಯ ಹೊಸ ಖಾತೆಯೂ ಸೃಜನೆಯಾಗುತ್ತಿಲ್ಲ. ವಿದ್ಯಾರ್ಥಿಯ ಲಾಗಿನ್ ಕೂಡ ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರೆ ಅವರಿಂದ ಬಂದ ಉತ್ತರ ‘ಇನ್ನು ಎರಡು ಮೂರು ದಿನ ಕಾಯಿರಿ. ಅರ್ಜಿಯನ್ನು ಅಪ್ ಲೋಡ್ ಮಾಡಿಲ್ಲ’ ಎಂದು ಭರವಸೆಯನ್ನೂ ನೀಡಿದ್ದರು. ಆದರೆ ಆ ಅಧಿಕಾರಿ ಸುಳ್ಳು ಹೇಳಿದ್ದಾರೆ ಎಂಬುದು ಎರಡು ವಾರದ ನಂತರ ಈಗ ಗೊತ್ತಾಗಿದೆ. ಅಧಿಕಾರಿಗಳು ಹೀಗೆ ಮಾಹಿತಿ ಮುಚ್ಚಿಡುವ ಮೂಲಕ ವಿದ್ಯಾರ್ಥಿ ಮತ್ತು ಪೋಷಕರಿಗೆ ವಂಚನೆ ಮಾಡಿದ್ದಾರೆ. ಮೊದಲೇ ಮಾಹಿತಿ ನೀಡಿದ್ದರೆ ವಿದ್ಯಾರ್ಥಿ ಪೋಷಕರು ಶಾಲೆ, ಸೈಬರ್ ಸೆಂಟರ್ ಅಲೆಯುವುದು ತಪ್ಪುತ್ತಿತ್ತು. ಹೀಗೆ ದಿಢೀರ್ ವಿದ್ಯಾರ್ಥಿ ವೇತನ ರದ್ದುಪಡಿಸಲಾಗಿದೆ ಎಂದರೆ ಹೇಗೆ ಎಂದು ಪೋಷಕರು ಪ್ರಶ್ನಿಸಿದ್ದಾರೆ.

ನೂರು ದಿನಗಳನ್ನು ಪೂರೈಸಿರುವ ಬಿ.ಎಸ್.ಯಡಿಯೂರಪ್ಪ ಸರ್ಕಾರ ಹಿಂದುಳಿದ ವಿದ್ಯಾರ್ಥಿಗಳಿಗೆ  ದ್ರೋಹ ಎಸಗಿದೆ. ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸಿದೆ. ವಿದ್ಯಾರ್ಥಿಗಳಿಗೆ ಮೊದಲೇ ಮಾಹಿತಿ ನೀಡಿದರೆ ಪ್ರತಿಭಟನೆ ನಡೆಸಬಹುದು ಎಂಬ ಕಾರಣಕ್ಕೆ ಈ ರೀತಿ ಮಾಡಲಾಗಿದೆ. 1 ರಿಂದ 10 ತರಗತಿಯವರೆಗಿನ ಲಕ್ಷಾಂತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುವುದರಿಂದ ವಂಚಿತರಾಗುತ್ತಾರೆ. ಬಹುಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತು ಇಲಾಖೆ ದ್ರೋಹ ಬಗೆದಿದೆ. ಇದು ವಿದ್ಯಾರ್ಥಿಗಳ ವಿರೋಧಿ ನೀತಿಯಾಗಿದೆ. ವಿದ್ಯಾರ್ಥಿ ವೇತನ ನಿಲ್ಲಿಸುವ ಮೂಲಕ ಸರ್ಕಾರ ಅವರ ಭವಿಷ್ಯಕ್ಕೆ ಕೊಡಲಿ ಪೆಟ್ಟು ನೀಡಿದಂತಾಗಿದೆ. ವಿದ್ಯಾರ್ಥಿ ವೇತನ ನೀಡದಿದ್ದರೆ ಹೋರಾಟ ಸಂಘಟಿಸುತ್ತೇವೆ. ಸೋಮವಾರ ಇಲ್ಲವೇ ಮಂಗಳವಾರ ರಾಜ್ಯಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿ ಹೋರಾಡುತ್ತೇವೆ ಎನ್ನುತ್ತಾರೆ ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯಾಧ್ಯಕ್ಷ ಗುರುರಾಜ್ ದೇಸಾಯಿ.

ಹಿಂದುಳಿದ ವರ್ಗಗಳ ಅದೆಷ್ಟೋ ಬಡ ಕುಟುಂಬಗಳು ತಮ್ಮ ಮಕ್ಕಳಿಗೆ ವಿದ್ಯಾರ್ಥಿ ವೇತನದ ಹಣದಿಂದ ಪುಸ್ತಕ, ಬಟ್ಟೆ ಮೊದಲಾದ ಸಾಮಗ್ರಿ ಗಳನ್ನು ಕೊಡಿಸುತ್ತಿದ್ದವು. ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿ ವೇತನ ಅನುಕೂಲವಾಗುತ್ತಿತ್ತು. ಆದರೆ ಈಗ ಸರ್ಕಾರ ಕುಂಟು ನೆಪ ಹೇಳಿಕೊಂಡು ವಿದ್ಯಾರ್ಥಿ ವೇತನ ನಿಲ್ಲಿಸಿರುವುದು ನಾಚಿಕೆಗೇಡಿನ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...