Homeಕರ್ನಾಟಕಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ...

ಹಿಂದುಳಿದ ವರ್ಗಗಳ ಎಸ್.ಎಸ್.ಪಿ ವಿದ್ಯಾರ್ಥಿ ವೇತನ ನಿಲ್ಲಿಸಿದ ರಾಜ್ಯ ಸರ್ಕಾರ…

- Advertisement -
- Advertisement -

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿತ್ಯವೂ ಸೈಬರ್ ಸೆಂಟರ್ ಮತ್ತು ಶಾಲೆಗಳಿಗೆ ತಿರುಗುತ್ತಲೇ ಇದ್ದರು.. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕೂಡ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸುವಂತೆ ಸಮಯವನ್ನೂ ನೀಡಿತ್ತು. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಪ್ರತಿದಿನ ಎರಡ್ಮೂರು ಬಾರಿಯಾದರೂ ಸೈಬರ್ ಸೆಂಟರ್ ಮತ್ತು ಶಾಲೆಗಳಲ್ಲಿ ವಿಚಾರಿಸುತ್ತಲೇ ಇದ್ದರು. ಕೊನೆ ಗಳಿಗೆಯಲ್ಲಿ ಮೆಟ್ರಿಕ್ ಪೂರ್ವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನೇ ಬಿಜೆಪಿ ಸರ್ಕಾರ ನಿಲ್ಲಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಪಿ.ವಸಂತಕುಮಾರ್ ವಿದ್ಯಾರ್ಥಿ ವೇತನ ರದ್ದುಗೊಳಿಸಲಾಗಿದೆ ಎಂಬ ಆದೇಶ ನೀಡಿರುವುದು ಪೋಷಕರನ್ನು ಕೆರಳುವಂತೆ ಮಾಡಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಲೇ ಬರುತ್ತಿದೆ. ನೆರೆ ಪರಿಹಾರ ಹಣ ಬಿಡುಗಡೆ ಮಾಡಿ ನೆರವು ನೀಡಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡುತ್ತಿಲ್ಲ. ಈಗ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವೇತನಕ್ಕೂ ಕತ್ತರಿ ಹಾಕಿದೆ. ತಮ್ಮ ಮಗ/ಳ ಭವಿಷ್ಯಕ್ಕೆ ಸ್ವಲ್ಪ ಮಟ್ಟಿನ ದಾರಿಯಾಗಬಹುದು ಎಂಬ ಪೋಷಕರ ಕನಸಿಗೆ ರಾಜ್ಯ ಸರ್ಕಾರ ತಣ್ಣೀರು ಎರಚಿದೆ. ಆರಂಭದಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31ರವರೆಗೆ ಅವಧಿ ನೀಡಿ ಈಗ ದಿಢೀರ್ ರದ್ದುಪಡಿಸಿದ್ದೇಕೆ ಎಂಬ ಪ್ರಶ್ನೆ ಎದುರಾಗಿದೆ.

ವಿದ್ಯಾರ್ಥಿಗಳ ಪೋಷಕರು ಸೈಬರ್ ಸೆಂಟರ್‌ನಲ್ಲಿ ಅರ್ಜಿ ಭರ್ತಿ ಮಾಡಲು ಹೋದರೆ ಅಥವಾ ಭರ್ತಿ ಮಾಡಿಸಲು ಹೋದರೆ ಎಸ್.ಎಸ್.ಪಿ ಕರ್ನಾಟಕ ಡಾಟ್ ಕಾಮ್ ಪೋರ್ಟಲ್ ತೆರೆದುಕೊಳ್ಳುತ್ತಿತ್ತು. ವಿದ್ಯಾರ್ಥಿ ಲಾಗಿನ್ ಇಲ್ಲವೆ ಖಾತೆಯನ್ನು ಸೃಜಿಸಿ ಖಾತೆ ಓಪನ್ ಮಾಡಲು ಹೋದರೆ ವಿದ್ಯಾರ್ಥಿಗಳ ಮಾಹಿತಿಯೇ ಸ್ಕ್ರೀನ್ ಮೇಲೆ ಬರುತ್ತಿರಲಿಲ್ಲ. ಯಾಕೆಂದರೆ ಅರ್ಜಿಯನ್ನು ಬಿಟ್ಟಿದ್ದರೆ ತಾನೆ ಅದು ಸ್ಕ್ರೀನ್ ಮೇಲೆ ವಿದ್ಯಾರ್ಥಿಯ ಮಾಹಿತಿ ಬರುವುದು.. ಅದು ಮಾಹಿತಿ ಬರುತ್ತಿರಲಿಲ್ಲ. ಆದರೆ 2018-19ನೇ ಸಾಲಿನ ವಿದ್ಯಾರ್ಥಿ ವೇತನ ಪಡೆದಿರುವುದನ್ನು ಮಾತ್ರ ತೋರಿಸುತ್ತಿತ್ತು.

ಎಸ್.ಎಸ್.ಪಿಯಡಿಯಲ್ಲಿ ಮೆಟ್ರಿಕ್ ಪೂರ್ವ ಅಂದರೆ 1 ರಿಂದ 10ನೇ ತರಗತಿ ಒಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು. ಈಗ ಅದಕ್ಕೂ ಕುತ್ತು ಬಂದಿದೆ.

ಅಷ್ಟೇ ಅಲ್ಲ ವಿದ್ಯಾರ್ಥಿ ಮುಂದಿನ ತರಗತಿಗೆ ಹೋಗಿರುವ ವಿಷಯವನ್ನೇ ಅಪ್ ಡೇಟ್ ಮಾಡಿರಲಿಲ್ಲ. ಯಾವುದೇ ವಿದ್ಯಾರ್ಥಿಯ ಮಾಹಿತಿ ಹುಡುಕಿದರೆ ವಿದ್ಯಾರ್ಥಿಯ ಹಿಂದಿನ ವರ್ಷದ ಮಾಹಿತಿ ಮತ್ತು ಪಡೆದಿರುವ ಹಣ ಮಾತ್ರ ತೋರಿಸುತ್ತಿತ್ತು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕಾಗಿ ವಿದ್ಯಾರ್ಥಿಗಳ ಮಾಹಿತಿ ಅಪ್ ಡೇಟ್ ಮಾಡಬೇಕಾಗಿದ್ದ ಇಲಾಖೆ ಮೌನವಹಿಸಿತ್ತು. ಇಲಾಖೆಗೆ ಮೊದಲೇ ಈ ಬಾರಿ ವಿದ್ಯಾರ್ಥಿ ವೇತನ ಬಿಡುಗಡೆಯಾಗುವುದಿಲ್ಲ ಎಂಬುದು ಗೊತ್ತಿತ್ತು. ಹೀಗಾಗಿ ವಿಷಯವನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಮುಚ್ಚಿಟ್ಟು ಅರ್ಜಿ ಮಾತ್ರ ಆಹ್ವಾನಿಸುವ ನಾಟಕ ಮಾಡಿತು ಇಲಾಖೆ. ಇಲಾಖೆಯ ನಾಟಕದ ಪಾತ್ರಧಾರಿಗಳು ಕೊನೆಯವರೆಗೂ ರಂಗಕ್ಕೆ ಬರಲೇ ಇಲ್ಲ. ಆದರೆ ನಾಟಕ ಮಾತ್ರ ಮುಕ್ತಾಯವಾಗಿತ್ತು. ಹಣ ಬರುತ್ತದೆ. ವಿದ್ಯಾರ್ಥಿಗೆ ಯಾವುದಾದರೂ ಉಪಯೋಗಕ್ಕೆ ಬರುತ್ತದೆ ಎಂದು ಕಾಯುತ್ತಿದ್ದವರಿಗೆ ನಿರಾಸೆ ಉಂಟು ಮಾಡಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರನ್ನು ವಾರದ ಹಿಂದೆಯೇ ಸಂಪರ್ಕಿಸಲಾಗಿತ್ತು. ವಿದ್ಯಾರ್ಥಿಯ ಮಾಹಿತಿ ಅಪ್ ಡೇಟ್ ಆಗಿಲ್ಲ, ವಿದ್ಯಾರ್ಥಿಯ ಹೊಸ ಖಾತೆಯೂ ಸೃಜನೆಯಾಗುತ್ತಿಲ್ಲ. ವಿದ್ಯಾರ್ಥಿಯ ಲಾಗಿನ್ ಕೂಡ ಆಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರೆ ಅವರಿಂದ ಬಂದ ಉತ್ತರ ‘ಇನ್ನು ಎರಡು ಮೂರು ದಿನ ಕಾಯಿರಿ. ಅರ್ಜಿಯನ್ನು ಅಪ್ ಲೋಡ್ ಮಾಡಿಲ್ಲ’ ಎಂದು ಭರವಸೆಯನ್ನೂ ನೀಡಿದ್ದರು. ಆದರೆ ಆ ಅಧಿಕಾರಿ ಸುಳ್ಳು ಹೇಳಿದ್ದಾರೆ ಎಂಬುದು ಎರಡು ವಾರದ ನಂತರ ಈಗ ಗೊತ್ತಾಗಿದೆ. ಅಧಿಕಾರಿಗಳು ಹೀಗೆ ಮಾಹಿತಿ ಮುಚ್ಚಿಡುವ ಮೂಲಕ ವಿದ್ಯಾರ್ಥಿ ಮತ್ತು ಪೋಷಕರಿಗೆ ವಂಚನೆ ಮಾಡಿದ್ದಾರೆ. ಮೊದಲೇ ಮಾಹಿತಿ ನೀಡಿದ್ದರೆ ವಿದ್ಯಾರ್ಥಿ ಪೋಷಕರು ಶಾಲೆ, ಸೈಬರ್ ಸೆಂಟರ್ ಅಲೆಯುವುದು ತಪ್ಪುತ್ತಿತ್ತು. ಹೀಗೆ ದಿಢೀರ್ ವಿದ್ಯಾರ್ಥಿ ವೇತನ ರದ್ದುಪಡಿಸಲಾಗಿದೆ ಎಂದರೆ ಹೇಗೆ ಎಂದು ಪೋಷಕರು ಪ್ರಶ್ನಿಸಿದ್ದಾರೆ.

ನೂರು ದಿನಗಳನ್ನು ಪೂರೈಸಿರುವ ಬಿ.ಎಸ್.ಯಡಿಯೂರಪ್ಪ ಸರ್ಕಾರ ಹಿಂದುಳಿದ ವಿದ್ಯಾರ್ಥಿಗಳಿಗೆ  ದ್ರೋಹ ಎಸಗಿದೆ. ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸಿದೆ. ವಿದ್ಯಾರ್ಥಿಗಳಿಗೆ ಮೊದಲೇ ಮಾಹಿತಿ ನೀಡಿದರೆ ಪ್ರತಿಭಟನೆ ನಡೆಸಬಹುದು ಎಂಬ ಕಾರಣಕ್ಕೆ ಈ ರೀತಿ ಮಾಡಲಾಗಿದೆ. 1 ರಿಂದ 10 ತರಗತಿಯವರೆಗಿನ ಲಕ್ಷಾಂತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುವುದರಿಂದ ವಂಚಿತರಾಗುತ್ತಾರೆ. ಬಹುಸಂಖ್ಯಾತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮತ್ತು ಇಲಾಖೆ ದ್ರೋಹ ಬಗೆದಿದೆ. ಇದು ವಿದ್ಯಾರ್ಥಿಗಳ ವಿರೋಧಿ ನೀತಿಯಾಗಿದೆ. ವಿದ್ಯಾರ್ಥಿ ವೇತನ ನಿಲ್ಲಿಸುವ ಮೂಲಕ ಸರ್ಕಾರ ಅವರ ಭವಿಷ್ಯಕ್ಕೆ ಕೊಡಲಿ ಪೆಟ್ಟು ನೀಡಿದಂತಾಗಿದೆ. ವಿದ್ಯಾರ್ಥಿ ವೇತನ ನೀಡದಿದ್ದರೆ ಹೋರಾಟ ಸಂಘಟಿಸುತ್ತೇವೆ. ಸೋಮವಾರ ಇಲ್ಲವೇ ಮಂಗಳವಾರ ರಾಜ್ಯಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿ ಹೋರಾಡುತ್ತೇವೆ ಎನ್ನುತ್ತಾರೆ ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯಾಧ್ಯಕ್ಷ ಗುರುರಾಜ್ ದೇಸಾಯಿ.

ಹಿಂದುಳಿದ ವರ್ಗಗಳ ಅದೆಷ್ಟೋ ಬಡ ಕುಟುಂಬಗಳು ತಮ್ಮ ಮಕ್ಕಳಿಗೆ ವಿದ್ಯಾರ್ಥಿ ವೇತನದ ಹಣದಿಂದ ಪುಸ್ತಕ, ಬಟ್ಟೆ ಮೊದಲಾದ ಸಾಮಗ್ರಿ ಗಳನ್ನು ಕೊಡಿಸುತ್ತಿದ್ದವು. ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿ ವೇತನ ಅನುಕೂಲವಾಗುತ್ತಿತ್ತು. ಆದರೆ ಈಗ ಸರ್ಕಾರ ಕುಂಟು ನೆಪ ಹೇಳಿಕೊಂಡು ವಿದ್ಯಾರ್ಥಿ ವೇತನ ನಿಲ್ಲಿಸಿರುವುದು ನಾಚಿಕೆಗೇಡಿನ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...