Homeಮುಖಪುಟಜನಗಣತಿ-2027 : 'ಸ್ಥಿರ' ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

- Advertisement -
- Advertisement -

ತಮ್ಮ ಸಂಬಂಧ ‘ಸ್ಥಿರ’ ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ.

ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಲಾಗಿದೆ. ಅಲ್ಲಿ, “ಸಹಜೀವನದಲ್ಲಿರುವ (live-in relationship) ಜೋಡಿಯನ್ನು ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆಯೇ?” ಎಂಬ ಪ್ರಶ್ನೆಗೆ, “ಒಂದು ವೇಳೆ ಆ ಜೋಡಿ ತಮ್ಮ ಸಂಬಂಧವನ್ನು ‘ಸ್ಥಿರ’ ಎಂದು ಹೇಳಿಕೊಳ್ಳುವುದಾದರೆ ಅವರನ್ನು ವಿವಾಹಿತ ದಂಪತಿಯೆಂದು ಪರಿಗಣಿಸಬೇಕು” ಎಂಬುವುದಾಗಿ ಉತ್ತರಿಸಲಾಗಿದೆ ಎಂದು indianexpress.com ವರದಿ ಮಾಡಿದೆ.

2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಮನೆಗಳ ಪಟ್ಟಿ ಮಾಡುವಿಕೆ ಮತ್ತು ವಸತಿ ಗಣತಿ ನಡೆಯಲಿದ್ದು, ಆಯಾ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ನಿರ್ಧಾರದಂತೆ 2026ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ ನಡುವಿನ 30 ದಿನಗಳಲ್ಲಿ ಮನೆ-ಮನೆಗೆ ತೆರಳಿ ಕ್ಷೇತ್ರ ಕಾರ್ಯವನ್ನು ಪೂರ್ಣಗೊಳಿಸಲಾಗುತ್ತದೆ.

ಮೊದಲ ಹಂತದಲ್ಲಿ ಮನೆಗಳ ಸ್ಥಿತಿಗತಿ, ಕುಟುಂಬದ ವಿವರಗಳು, ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಅಡುಗೆಗೆ ಬಳಸುವ ಇಂಧನ ಮತ್ತು ಇಂಟರ್ನೆಟ್‌ನಂತಹ ಸೌಲಭ್ಯಗಳ ಲಭ್ಯತೆಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಇದರೊಂದಿಗೆ ರೇಡಿಯೋ, ಟಿವಿ, ಕಂಪ್ಯೂಟರ್, ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರದ ವಾಹನಗಳಂತಹ ಆಸ್ತಿಗಳ ವಿವರಗಳನ್ನು ಸಹ ಆಯಾ ಕುಟುಂಬಗಳಿಂದ ಪಡೆಯಲಾಗುತ್ತದೆ.

ಎರಡನೇ ಹಂತದಲ್ಲಿ, ಫೆಬ್ರವರಿ 2027 ರಿಂದ ಭಾರತದಾದ್ಯಂತ ಜನಗಣತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಆದರೆ ಲಡಾಖ್ ಮತ್ತು ಜಮ್ಮು ಕಾಶ್ಮೀರದ ಹಿಮಪಾತ ಪ್ರದೇಶಗಳು ಹಾಗೂ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಇದನ್ನು ಸೆಪ್ಟೆಂಬರ್ 2026ರಲ್ಲೇ ನಡೆಸಲಾಗುತ್ತದೆ.

ಈ ಹಂತದಲ್ಲಿ ವ್ಯಕ್ತಿಗಳ ಹೆಸರು, ವಯಸ್ಸು, ಲಿಂಗ, ವೈವಾಹಿಕ ಸ್ಥಿತಿ, ಜಾತಿ, ಧರ್ಮ, ಶಿಕ್ಷಣ, ಭಾಷೆ, ಅಂಗವೈಕಲ್ಯ, ವಲಸೆ, ಉದ್ಯೋಗ ಮತ್ತು ಸಂತಾನೋತ್ಪತ್ತಿಯ (ವಿವಾಹಿತ ಮಹಿಳೆಯರಿಗೆ ಸಂಬಂಧಿಸಿದಂತೆ) ವಿವರಗಳನ್ನು ಸಂಗ್ರಹಿಸಲಾಗುತ್ತದೆ.

ಈ ಬಾರಿ ವಿಶೇಷವೆಂದರೆ, ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮೊಬೈಲ್ ಆಪ್ ಮೂಲಕ ಮಾಹಿತಿ ಪಡೆಯುವ ಸಾಂಪ್ರದಾಯಿಕ ವಿಧಾನದ ಜೊತೆಗೆ, ನಾಗರಿಕರು ತಾವಾಗಿಯೇ ಮಾಹಿತಿ ದಾಖಲಿಸಲು ‘ಸ್ವಯಂ-ಗಣತಿ’ (self-enumeration) ಆಯ್ಕೆಯನ್ನು ಸಹ ನೀಡಲಾಗಿದೆ.

ಸ್ವಯಂ-ಗಣತಿಯು ನಾಗರಿಕರು ತಮ್ಮ ಅನುಕೂಲಕ್ಕೆ ತಕ್ಕಂತೆ ವೆಬ್ ಪೋರ್ಟಲ್ ಮೂಲಕ ತಮ್ಮ ಮಾಹಿತಿಯನ್ನು ಸ್ವತಃ ಭರ್ತಿ ಮಾಡಲು ಅವಕಾಶ ನೀಡುತ್ತದೆ. ಅಂದರೆ, ವ್ಯಕ್ತಿಯೊಬ್ಬರು ಸ್ವಯಂ-ಗಣತಿ ಪೋರ್ಟಲ್‌ನಲ್ಲಿ ವಿವರಗಳನ್ನು ನೀಡುವ ಮೂಲಕ ಈ ಆಯ್ಕೆಯನ್ನು ಬಳಸಿಕೊಳ್ಳಬಹುದು. ಇದಾದ ನಂತರ, ಗಣತಿದಾರರು ಆ ಮನೆಗೆ ಭೇಟಿ ನೀಡಿ, ಸ್ವಯಂ-ಗಣತಿಯ ಐಡಿ (SE ID) ಪಡೆದುಕೊಂಡು ಮಾಹಿತಿಯನ್ನು ದೃಢೀಕರಿಸುತ್ತಾರೆ.

ಸಾಮಾನ್ಯ, ಸಾಂಸ್ಥಿಕ ಮತ್ತು ವಸತಿರಹಿತ ಸೇರಿದಂತೆ ಎಲ್ಲಾ ಕುಟುಂಬಗಳು ಸ್ವಯಂ ಗಣತಿ ಮಾಡಬಹುದೇ?

2027ರ ಜನಗಣತಿಯ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ರೀತಿಯ ಕುಟುಂಬಗಳಿಗೆ ಸ್ವಯಂ-ಗಣತಿ (Self-enumeration) ಲಭ್ಯವಿಲ್ಲ.

ಕೇವಲ ಸಾಮಾನ್ಯ ಕುಟುಂಬಗಳಿಗೆ ಮಾತ್ರ ಸ್ವಯಂ-ಗಣತಿ ಮಾಡಲು ಅವಕಾಶ ನೀಡಲಾಗಿದೆ. ಈ ಕುಟುಂಬಗಳು ನಿಗದಿತ ವೆಬ್ ಪೋರ್ಟಲ್ ಮೂಲಕ ತಮ್ಮ ವಿವರಗಳನ್ನು ದಾಖಲಿಸಬಹುದು.

2011ರ ಜನಗಣತಿಯ ಪ್ರಕಾರ, ‘ಸಾಮಾನ್ಯ ಕುಟುಂಬ’ ಎಂದರೆ ಸಾಮಾನ್ಯವಾಗಿ ಒಟ್ಟಿಗೆ ವಾಸಿಸುವ ಮತ್ತು ಒಂದೇ ಅಡುಗೆಮನೆಯಲ್ಲಿ ಸಿದ್ಧಪಡಿಸಿದ ಆಹಾರವನ್ನು ಸೇವಿಸುವ ವ್ಯಕ್ತಿಗಳ ಗುಂಪು. ಕೆಲಸದ ಒತ್ತಡ ಅಥವಾ ಅನಿವಾರ್ಯ ಕಾರಣಗಳಿಂದಾಗಿ ಯಾರಾದರೂ ಹೊರಗಡೆ ಊಟ ಮಾಡಬೇಕಾದ ಸಂದರ್ಭಗಳನ್ನು ಹೊರತುಪಡಿಸಿ, ಈ ಗುಂಪು ಒಂದೇ ಅಡುಗೆಮನೆಯನ್ನು ಅವಲಂಬಿಸಿರುತ್ತದೆ. ಅಂತಹ ಕುಟುಂಬದ ಸದಸ್ಯರು ಪರಸ್ಪರ ಸಂಬಂಧಿಕರಾಗಿರಬಹುದು, ಸಂಬಂಧವಿಲ್ಲದವರಾಗಿರಬಹುದು ಅಥವಾ ಎರಡೂ ರೀತಿಯ ವ್ಯಕ್ತಿಗಳ ಮಿಶ್ರಣವಾಗಿರಬಹುದು.

ಆದಾಗ್ಯೂ, ಸಂಬಂಧವಿಲ್ಲದ ವ್ಯಕ್ತಿಗಳ ಗುಂಪು ಒಂದು ಮನೆಯಲ್ಲಿ ವಾಸವಿದ್ದು, ಒಂದೇ ಅಡುಗೆಮನೆಯಿಂದ ಊಟ ಮಾಡದಿದ್ದರೆ, ಅವರನ್ನು ಒಂದೇ ಕುಟುಂಬದ ಭಾಗವೆಂದು ಪರಿಗಣಿಸಲಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಪ್ರತಿಯೊಬ್ಬ ವ್ಯಕ್ತಿಯನ್ನೂ ಪ್ರತ್ಯೇಕ ಕುಟುಂಬವೆಂದು ಪರಿಗಣಿಸಲಾಗುತ್ತದೆ.

ಜನಗಣತಿಯ ಮೊದಲ ಹಂತದಲ್ಲಿ ಸ್ವಯಂ-ಗಣತಿಯನ್ನು ಮಾಡಬಹುದು. ಆಯಾ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ 30 ದಿನಗಳ ಕಾಲ ನಡೆಯುವ ಮನೆಗಳ ಪಟ್ಟಿ ಮಾಡುವ ಪ್ರಕ್ರಿಯೆ (Houselisting Operations) ಆರಂಭವಾಗುವ ಮೊದಲು, ಕೇವಲ 15 ದಿನಗಳ ಕಾಲ ಈ ವೆಬ್ ಪೋರ್ಟಲ್ ಸಾರ್ವಜನಿಕರಿಗೆ ತೆರೆದಿರುತ್ತದೆ.



 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...