Homeಮುಖಪುಟಜನಗಣತಿ-2027 : 'ಸ್ಥಿರ' ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

- Advertisement -
- Advertisement -

ತಮ್ಮ ಸಂಬಂಧ ‘ಸ್ಥಿರ’ ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ.

ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಲಾಗಿದೆ. ಅಲ್ಲಿ, “ಸಹಜೀವನದಲ್ಲಿರುವ (live-in relationship) ಜೋಡಿಯನ್ನು ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆಯೇ?” ಎಂಬ ಪ್ರಶ್ನೆಗೆ, “ಒಂದು ವೇಳೆ ಆ ಜೋಡಿ ತಮ್ಮ ಸಂಬಂಧವನ್ನು ‘ಸ್ಥಿರ’ ಎಂದು ಹೇಳಿಕೊಳ್ಳುವುದಾದರೆ ಅವರನ್ನು ವಿವಾಹಿತ ದಂಪತಿಯೆಂದು ಪರಿಗಣಿಸಬೇಕು” ಎಂಬುವುದಾಗಿ ಉತ್ತರಿಸಲಾಗಿದೆ ಎಂದು indianexpress.com ವರದಿ ಮಾಡಿದೆ.

2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಮನೆಗಳ ಪಟ್ಟಿ ಮಾಡುವಿಕೆ ಮತ್ತು ವಸತಿ ಗಣತಿ ನಡೆಯಲಿದ್ದು, ಆಯಾ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ನಿರ್ಧಾರದಂತೆ 2026ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ ನಡುವಿನ 30 ದಿನಗಳಲ್ಲಿ ಮನೆ-ಮನೆಗೆ ತೆರಳಿ ಕ್ಷೇತ್ರ ಕಾರ್ಯವನ್ನು ಪೂರ್ಣಗೊಳಿಸಲಾಗುತ್ತದೆ.

ಮೊದಲ ಹಂತದಲ್ಲಿ ಮನೆಗಳ ಸ್ಥಿತಿಗತಿ, ಕುಟುಂಬದ ವಿವರಗಳು, ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಅಡುಗೆಗೆ ಬಳಸುವ ಇಂಧನ ಮತ್ತು ಇಂಟರ್ನೆಟ್‌ನಂತಹ ಸೌಲಭ್ಯಗಳ ಲಭ್ಯತೆಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಇದರೊಂದಿಗೆ ರೇಡಿಯೋ, ಟಿವಿ, ಕಂಪ್ಯೂಟರ್, ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಚಕ್ರದ ವಾಹನಗಳಂತಹ ಆಸ್ತಿಗಳ ವಿವರಗಳನ್ನು ಸಹ ಆಯಾ ಕುಟುಂಬಗಳಿಂದ ಪಡೆಯಲಾಗುತ್ತದೆ.

ಎರಡನೇ ಹಂತದಲ್ಲಿ, ಫೆಬ್ರವರಿ 2027 ರಿಂದ ಭಾರತದಾದ್ಯಂತ ಜನಗಣತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಆದರೆ ಲಡಾಖ್ ಮತ್ತು ಜಮ್ಮು ಕಾಶ್ಮೀರದ ಹಿಮಪಾತ ಪ್ರದೇಶಗಳು ಹಾಗೂ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಇದನ್ನು ಸೆಪ್ಟೆಂಬರ್ 2026ರಲ್ಲೇ ನಡೆಸಲಾಗುತ್ತದೆ.

ಈ ಹಂತದಲ್ಲಿ ವ್ಯಕ್ತಿಗಳ ಹೆಸರು, ವಯಸ್ಸು, ಲಿಂಗ, ವೈವಾಹಿಕ ಸ್ಥಿತಿ, ಜಾತಿ, ಧರ್ಮ, ಶಿಕ್ಷಣ, ಭಾಷೆ, ಅಂಗವೈಕಲ್ಯ, ವಲಸೆ, ಉದ್ಯೋಗ ಮತ್ತು ಸಂತಾನೋತ್ಪತ್ತಿಯ (ವಿವಾಹಿತ ಮಹಿಳೆಯರಿಗೆ ಸಂಬಂಧಿಸಿದಂತೆ) ವಿವರಗಳನ್ನು ಸಂಗ್ರಹಿಸಲಾಗುತ್ತದೆ.

ಈ ಬಾರಿ ವಿಶೇಷವೆಂದರೆ, ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮೊಬೈಲ್ ಆಪ್ ಮೂಲಕ ಮಾಹಿತಿ ಪಡೆಯುವ ಸಾಂಪ್ರದಾಯಿಕ ವಿಧಾನದ ಜೊತೆಗೆ, ನಾಗರಿಕರು ತಾವಾಗಿಯೇ ಮಾಹಿತಿ ದಾಖಲಿಸಲು ‘ಸ್ವಯಂ-ಗಣತಿ’ (self-enumeration) ಆಯ್ಕೆಯನ್ನು ಸಹ ನೀಡಲಾಗಿದೆ.

ಸ್ವಯಂ-ಗಣತಿಯು ನಾಗರಿಕರು ತಮ್ಮ ಅನುಕೂಲಕ್ಕೆ ತಕ್ಕಂತೆ ವೆಬ್ ಪೋರ್ಟಲ್ ಮೂಲಕ ತಮ್ಮ ಮಾಹಿತಿಯನ್ನು ಸ್ವತಃ ಭರ್ತಿ ಮಾಡಲು ಅವಕಾಶ ನೀಡುತ್ತದೆ. ಅಂದರೆ, ವ್ಯಕ್ತಿಯೊಬ್ಬರು ಸ್ವಯಂ-ಗಣತಿ ಪೋರ್ಟಲ್‌ನಲ್ಲಿ ವಿವರಗಳನ್ನು ನೀಡುವ ಮೂಲಕ ಈ ಆಯ್ಕೆಯನ್ನು ಬಳಸಿಕೊಳ್ಳಬಹುದು. ಇದಾದ ನಂತರ, ಗಣತಿದಾರರು ಆ ಮನೆಗೆ ಭೇಟಿ ನೀಡಿ, ಸ್ವಯಂ-ಗಣತಿಯ ಐಡಿ (SE ID) ಪಡೆದುಕೊಂಡು ಮಾಹಿತಿಯನ್ನು ದೃಢೀಕರಿಸುತ್ತಾರೆ.

ಸಾಮಾನ್ಯ, ಸಾಂಸ್ಥಿಕ ಮತ್ತು ವಸತಿರಹಿತ ಸೇರಿದಂತೆ ಎಲ್ಲಾ ಕುಟುಂಬಗಳು ಸ್ವಯಂ ಗಣತಿ ಮಾಡಬಹುದೇ?

2027ರ ಜನಗಣತಿಯ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ರೀತಿಯ ಕುಟುಂಬಗಳಿಗೆ ಸ್ವಯಂ-ಗಣತಿ (Self-enumeration) ಲಭ್ಯವಿಲ್ಲ.

ಕೇವಲ ಸಾಮಾನ್ಯ ಕುಟುಂಬಗಳಿಗೆ ಮಾತ್ರ ಸ್ವಯಂ-ಗಣತಿ ಮಾಡಲು ಅವಕಾಶ ನೀಡಲಾಗಿದೆ. ಈ ಕುಟುಂಬಗಳು ನಿಗದಿತ ವೆಬ್ ಪೋರ್ಟಲ್ ಮೂಲಕ ತಮ್ಮ ವಿವರಗಳನ್ನು ದಾಖಲಿಸಬಹುದು.

2011ರ ಜನಗಣತಿಯ ಪ್ರಕಾರ, ‘ಸಾಮಾನ್ಯ ಕುಟುಂಬ’ ಎಂದರೆ ಸಾಮಾನ್ಯವಾಗಿ ಒಟ್ಟಿಗೆ ವಾಸಿಸುವ ಮತ್ತು ಒಂದೇ ಅಡುಗೆಮನೆಯಲ್ಲಿ ಸಿದ್ಧಪಡಿಸಿದ ಆಹಾರವನ್ನು ಸೇವಿಸುವ ವ್ಯಕ್ತಿಗಳ ಗುಂಪು. ಕೆಲಸದ ಒತ್ತಡ ಅಥವಾ ಅನಿವಾರ್ಯ ಕಾರಣಗಳಿಂದಾಗಿ ಯಾರಾದರೂ ಹೊರಗಡೆ ಊಟ ಮಾಡಬೇಕಾದ ಸಂದರ್ಭಗಳನ್ನು ಹೊರತುಪಡಿಸಿ, ಈ ಗುಂಪು ಒಂದೇ ಅಡುಗೆಮನೆಯನ್ನು ಅವಲಂಬಿಸಿರುತ್ತದೆ. ಅಂತಹ ಕುಟುಂಬದ ಸದಸ್ಯರು ಪರಸ್ಪರ ಸಂಬಂಧಿಕರಾಗಿರಬಹುದು, ಸಂಬಂಧವಿಲ್ಲದವರಾಗಿರಬಹುದು ಅಥವಾ ಎರಡೂ ರೀತಿಯ ವ್ಯಕ್ತಿಗಳ ಮಿಶ್ರಣವಾಗಿರಬಹುದು.

ಆದಾಗ್ಯೂ, ಸಂಬಂಧವಿಲ್ಲದ ವ್ಯಕ್ತಿಗಳ ಗುಂಪು ಒಂದು ಮನೆಯಲ್ಲಿ ವಾಸವಿದ್ದು, ಒಂದೇ ಅಡುಗೆಮನೆಯಿಂದ ಊಟ ಮಾಡದಿದ್ದರೆ, ಅವರನ್ನು ಒಂದೇ ಕುಟುಂಬದ ಭಾಗವೆಂದು ಪರಿಗಣಿಸಲಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಪ್ರತಿಯೊಬ್ಬ ವ್ಯಕ್ತಿಯನ್ನೂ ಪ್ರತ್ಯೇಕ ಕುಟುಂಬವೆಂದು ಪರಿಗಣಿಸಲಾಗುತ್ತದೆ.

ಜನಗಣತಿಯ ಮೊದಲ ಹಂತದಲ್ಲಿ ಸ್ವಯಂ-ಗಣತಿಯನ್ನು ಮಾಡಬಹುದು. ಆಯಾ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ 30 ದಿನಗಳ ಕಾಲ ನಡೆಯುವ ಮನೆಗಳ ಪಟ್ಟಿ ಮಾಡುವ ಪ್ರಕ್ರಿಯೆ (Houselisting Operations) ಆರಂಭವಾಗುವ ಮೊದಲು, ಕೇವಲ 15 ದಿನಗಳ ಕಾಲ ಈ ವೆಬ್ ಪೋರ್ಟಲ್ ಸಾರ್ವಜನಿಕರಿಗೆ ತೆರೆದಿರುತ್ತದೆ.



 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...