Homeಮುಖಪುಟತಮಿಳುನಾಡು| ದೇವಸ್ಥಾನದ ಮಂಟಪ ಪ್ರವೇಶಿಸದಂತೆ ಇಳಯರಾಜ ಅವರನ್ನು ತಡೆದ ಸಿಬ್ಬಂದಿ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ತಮಿಳುನಾಡು| ದೇವಸ್ಥಾನದ ಮಂಟಪ ಪ್ರವೇಶಿಸದಂತೆ ಇಳಯರಾಜ ಅವರನ್ನು ತಡೆದ ಸಿಬ್ಬಂದಿ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

- Advertisement -
- Advertisement -

ದೇಶದ ಖ್ಯಾತ ಸಂಗೀತ ಸಂಯೋಜಕ, ರಾಜ್ಯಸಭಾ ಸಂಸದ ಇಳಯರಾಜ ಅವರು ತಮಿಳುನಾಡಿನ ಶ್ರೀವಿಲ್ಲಿಪುತ್ತೂರು ಆಂಡಾಳ್ ದೇವಸ್ಥಾನದ ಗರ್ಭಗುಡಿಗೆ ಪ್ರವೇಶಿಸಿದಂತೆ ಅವರನ್ನು ಜೀಯರು ಹೊರಗೆ ಕಳುಹಿಸಿದ ಘಟನೆಯ ವಿಡಿಯೊಗಳು ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.

ಶ್ರೀವಿಲ್ಲಿಪುತ್ತೂರಿನ ಪ್ರಸಿದ್ಧ ಆಂಡಾಳ್ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಇಳಯರಾಜ ದೇವರ ದರ್ಶನ ಪಡೆದಿದ್ದರು. ಇಳಯರಾಜ ಅವರನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಪರವಾಗಿ ಸ್ವಾಗತಿಸಲಾಯಿತು. ಇಳಯರಾಜ ಪೆರಿಯ ಪೆರುಮಾಳ್ ದೇಗುಲ, ನಂದವನಂ ಮತ್ತು ಆಂಡಾಳ್ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದರು.

ಆ ವೇಳೆ ಆಂಡಾಳ್ ದೇವಸ್ಥಾನದ ಗರ್ಭಗುಡಿಯ ಮುಂಭಾಗದ ಅರ್ಧ ಮಂಟಪಕ್ಕೆ ಪ್ರವೇಶಿಸಲು ಯತ್ನಿಸಿದಾಗ, ಅಲ್ಲಿದ್ದ ಜೀಯರು ಮತ್ತು ಭಕ್ತರು ಇಳಯರಾಜರನ್ನು ಅಲ್ಲಿ ತಡೆದಿದ್ದಾರೆ. ಈ ಘಟನೆ ಕೋಲಾಹಲಕ್ಕೆ ಕಾರಣವಾಗಿದೆ. ಸ್ವಾಗತ ಸಮಾರಂಭದಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಹೇಳಿ ಇಳಯರಾಜ ಅವರನ್ನು ಅಲ್ಲಿಂದ ಹೊರಗೆ ಕಳುಹಿಸಿದರು. ನಂತರ ಇಳಯರಾಜ ದೇವಸ್ಥಾನದ ಅರ್ಧ ಮಂಟಪದಿಂದ ಹೊರಬಂದು ದೇವರ ದರ್ಶನ ಪಡೆದರು. ಬಳಿಕ ಅಲ್ಲಿನ ಅರ್ಚಕರು ಹೂಮಾಲೆ ಹಾಕಿ ನಮನ ಸಲ್ಲಿಸಿದರು. ಇಳಯರಾಜ ಅವರನ್ನು ಅರ್ಧ ಮಂಟಪದಿಂದ ಹೊರಹಾಕಿದ ಘಟನೆ ಸಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

“ಇಂತಹ ಆಚರಣೆಗಳು ಮೇಲು-ಕೀಳು ಎನ್ನುವುದನ್ನು ಮತ್ತೆ ಜೀವಂತವಾಗಿಡಲು ಕಾರಣವಾಗುತ್ತವೆ, ಜಾತಿ ಪದ್ಧತಿಯನ್ನು ಜೀವಂತವಾಗಿರಿಸುತ್ತವೆ” ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

“ಅಲ್ಲಿನ ಸಂಪ್ರದಾಯ ಇರುವುದೇ ಹಾಗೆ, ಅದನ್ನು ಅಲ್ಲಿನ ಪುರೋಹಿತರು ಪಾಲಿಸುತ್ತಿದ್ದಾರೆ. ತಿಳಿಯದೆ ಇಳಯರಾಜ ಒಳಗೆ ಪ್ರವೇಶ ಮಾಡಿದ್ದಾರೆ, ಅವರಿಗೆ ಅದನ್ನು ತಿಳಿಸಿದ ತಕ್ಷಣ ಹೊರಗೆ ಬಂದಿದ್ದಾರೆ. ವಿಡಿಯೋದಲ್ಲಿ ಯಾರೂ ಯಾರನ್ನೂ ಬಲವಂತಾಗಿ ಆಚೆ ಕಳಿಸಿಲ್ಲ ಅಥವಾ ನಿಂದಿಸಿಲ್ಲ. ಅಲ್ಲಿನ ಸಂಪ್ರದಾಯವನ್ನು ಪಾಲಿಸಲಾಗಿದೆ ಇದನ್ನು ವಿವಾದ ಮಾಡುವ ಅಗತ್ಯವಿಲ್ಲ” ಎಂದು ಕೆಲವರು ಸಮರ್ಥನೆ ಘಟಯನ್ನು ಸಮರ್ಥಿಸಿಕೊಂಡಿದ್ದಾರೆ.

ಭಾನುವಾರ ತಿರುವಣ್ಣಾಮಲೈ ಜಿಲ್ಲಾಧಿಕಾರಿಗೆ ಕೂಡ ದೇವಸ್ಥಾನದೊಳಗೆ ಪ್ರವೇಶಿಸಲು ಬಿಟ್ಟಿರಲಿಲ್ಲ. ಈಗ ಇಳಯರಾಜ ಅವರಿಗೂ ಅರ್ಧಮಂಟಪ ಪ್ರವೇಶಿಸಲು ಬಿಡದೇ ಇರುವುದು ವಿವಾದಕ್ಕೆ ಕಾರಣವಾಗಿದೆ.

ಇಳಯರಾಜ ಅನ್ನಕ್ಕಿಲಿ ಚಿತ್ರದ ಮೂಲಕ ಸಂಗೀತ ಸಂಯೋಜಕರಾಗಿ ಪಾದಾರ್ಪಣೆ ಮಾಡಿದರು. ಅವರು 45 ವರ್ಷಗಳಿಗೂ ಹೆಚ್ಚು ಕಾಲ ತಮ್ಮ ಸಂಗೀತದಿಂದ ತಮಿಳು ಚಿತ್ರರಂಗದ ಅಭಿಮಾನಿಗಳನ್ನು ಸೆಳೆದಿದ್ದಾರೆ. ಇಳಯರಾಜರ ವಯಸ್ಸು 80 ದಾಟಿದ್ದರೂ ಸಂಗೀತ ಸಂಯೋಜಕರಾಗಿಯೇ ಉಳಿದಿದ್ದಾರೆ.

ಇದನ್ನೂ ಓದಿ; ಬಿಜೆಪಿಯ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...