Homeಅಂತರಾಷ್ಟ್ರೀಯಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

- Advertisement -
- Advertisement -

ಪ್ಯಾಲೆಸ್ತೀನ್ ನಿರಾಶ್ರಿತರ ರಕ್ಷಣೆಗೆ ಕಾರ್ಯಚರಿಸುತ್ತಿರುವ UNRWA ಸಿಬ್ಬಂದಿಗಳು, ಇಸ್ರೇಲ್ ದಾಳಿಯ ಮಧ್ಯೆ ಗಾಝಾದಲ್ಲಿ ಸೃಷ್ಟಿಯಾದ ವಿಪತ್ತಿನ ಪರಿಸ್ಥಿತಿಯಿಂದ ಜನರನ್ನು ರಕ್ಷಿಸಿ ಎಂದು ಮನವಿ ಮಾಡಿದ್ದು, UNRWA ಆಶ್ರಯದಲ್ಲಿರುವ ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರಿಗೆ ಆಹಾರ, ನೀರು ಮತ್ತು ಔಷಧಿಗಳನ್ನು ತಕ್ಷಣದಲ್ಲಿ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಯುಎನ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಪ್ಯೂಜೀಸ್ ನಿಯರ್ ಈಸ್ಟ್ (ಯುಎನ್‌ಆರ್‌ಡಬ್ಲ್ಯುಎ) ಗಾಝಾದಲ್ಲಿನ ಪ್ಯಾಲೆಸ್ತೀನ್ ನಿರಾಶ್ರಿತರನ್ನು ರಕ್ಷಿಸಲು ತುರ್ತು ಮನವಿಯನ್ನು ಮಾಡಿದೆ. ಗಾಝಾ ಪಟ್ಟಿಯಲ್ಲಿ ಪ್ಯಾಲೆಸ್ತೀನ್ ನಿರಾಶ್ರಿತರು ಹಿಂಸಾಚಾರದ ತೀವ್ರತೆಯ ಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದೆ.

ದಯವಿಟ್ಟು ಗಾಝಾವನ್ನು ಉಳಿಸಿ, ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಗಾಝಾವನ್ನು ಉಳಿಸಿ. ಅದು ನಾಶವಾಗುತ್ತಿದೆ ಎಂದು ಯುಎನ್‌ಆರ್‌ಡಬ್ಲ್ಯುಎ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ವಿಡಿಯೋದಲ್ಲಿ ಯುಎನ್‌ಆರ್‌ಡಬ್ಲ್ಯುಎ ಆಶ್ರಯ ತಾಣಗಳ ಮುಖ್ಯಸ್ಥ ಹೇಳುತ್ತಿರುವುದು ಕಂಡು ಬಂದಿದೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ, ಇಸ್ರೇಲಿ ಮಿಲಿಟರಿ ಉತ್ತರ ಗಾಜಾದಲ್ಲಿ ವಾಸಿಸುವ 1.1 ಮಿಲಿಯನ್ ಪ್ಯಾಲೆಸ್ತೀನಿಯನ್ನರನ್ನು ದಕ್ಷಿಣಕ್ಕೆ ಸ್ಥಳಾಂತರಕ್ಕೆ ಸೂಚಿಸಿತ್ತು. ಇದರ ಬಳಿಕ ಸಾವಿರಾರು ಕುಟುಂಬಗಳು ವಾಹನಗಳಲ್ಲಿ ಮತ್ತು ಕಾಲ್ನಡಿಗೆಯಲ್ಲಿ ಮನೆಬಿಟ್ಟು ತೆರಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ UNRWA ಆಶ್ರಯ ತಾಣಗಳ ಮುಖ್ಯಸ್ಥರು, ಮಕ್ಕಳು, ವೃದ್ಧರು ಮತ್ತು ವಯಸ್ಕರಿಗೆ ನಾವು ಎಲ್ಲವನ್ನೂ ಒದಗಿಸಲು ಸಾಧ್ಯವಾಗುತ್ತಿಲ್ಲ. ನಾನು UNRWA ಆಶ್ರಯದ ಮುಖ್ಯಸ್ಥನಾಗಿದ್ದೇನೆ ಆಹಾರ, ನೀರನ್ನು ಕೂಡ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ವೀಡಿಯೊವೊಂದರಲ್ಲಿ UNRWA ಆಶ್ರಯ ತಾಣದ ಹಲಾಸ್ ಸಹಾಯಕ್ಕಾಗಿ ಭಾವನಾತ್ಮಕ ಮನವಿಯನ್ನು ಮಾಡಿದ್ದಾರೆ. ನನ್ನ ಆಶ್ರಯದಲ್ಲಿರುವ ನಿರಾಶ್ರಿತರಿಗೆ ಅಗತ್ಯ ಔಷಧಗಳು ಮತ್ತು ಆಹಾರವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಅವರ ಧ್ವನಿಯಲ್ಲಿ ಹತಾಶೆ ಮತ್ತು ದುಃಖ ವ್ಯಕ್ತವಾಗಿತ್ತು.

ನಾವು ಈಗ ಇರುವ ಪರಿಸ್ಥಿತಿಯನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ ಎಂದು ಹಲಾಸ್ ವೀಡಿಯೊದಲ್ಲಿ ಹೇಳಿದ್ದು, 15,000 ಪ್ಯಾಲೇಸ್ತೀನ್‌ ನಿರಾಶ್ರಿತರು ಆಶ್ರಯದಲ್ಲಿದ್ದಾರೆ ಎಂದು ಹೇಳಿದರು. ಅವರು ಆಹಾರ, ನೀರಿಲ್ಲದೆ ತಮ್ಮ ಮನೆಗಳನ್ನು ತೊರೆದರು. ನಿರಾಶ್ರಿತರಲ್ಲಿ ಸಕ್ಕರೆ ಕಾಯಿಲೆ ಇರುವವರು, ಅಂಗವಿಕಲ ಶಿಶುಗಳು ಹಾಗೂ ಈಗ ಸಿಡುಬು ರೋಗಕ್ಕೆ ತುತ್ತಾಗಿರುವ ಮಕ್ಕಳು ಇದ್ದಾರೆ ಎಂದು ಹೇಳಿದ್ದಾರೆ

ಆಹಾರ, ಸ್ನಾನಗೃಹಗಳು, ನೀರು, ವಿದ್ಯುಚ್ಛಕ್ತಿಯ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತಿಲ್ಲ. ಸದ್ಯದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ. ಅವರ ಅಗತ್ಯಗಳನ್ನು ಹೇಗೆ ಪೂರೈಸುವುದು ಎಂದು ನಮಗೆ ತಿಳಿದಿಲ್ಲ. ಇಲ್ಲಿ ಏನೂ ಇಲ್ಲ ಎಂದು ಹಲಾಸ್ ಹೇಳಿದ್ದಾರೆ.

ನಾವು ಅವರಿಗೆ ಆಹಾರ ಮತ್ತು ನೀರು ನೀಡುವಂತೆ ಸಹಾಯ ಹುಡುಕುತ್ತಿದ್ದೇವೆ. ಅವರು ಏನೂ ಇಲ್ಲದೆ ಬಂದಿದ್ದಾರೆ. ಆದರೆ ಅವರು ಭಿಕ್ಷುಕರಲ್ಲ. ಅವರಲ್ಲಿ ಹಣ ಇದೆ. ಆದರೆ ನಾವು ಬೇಕಿದ್ದ ನೀರು ಆಹಾರ ಎಲ್ಲಿ ಖರೀದಿಸಬಹುದು? ನಮಗೆ ಇನ್ಸುಲಿನ್ ಬೇಕು, ಜನರು ಸಾಯುತ್ತಿದ್ದಾರೆ. ನಾವು ಅವರಿಗೆ ಏನನ್ನೂ ನೀಡಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿಯು ದುರಂತ ಪರಿಸ್ಥಿತಿಯಾಗಿದೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿನ ಮತ್ತೊಂದು ಪೋಸ್ಟ್‌ನಲ್ಲಿ UNRWA ಸಿಬ್ಬಂದಿ ಅಜ್ಜಮ್ ಅವರು ಈ ದಿನಗಳಲ್ಲಿ ಗಾಜಾದಲ್ಲಿ  ಬದುಕುವುದು ಮಾತ್ರವಲ್ಲ, ಸ್ನಾನಕ್ಕೆ ಸ್ವಲ್ಪ ನೀರು ಹೊಂದುವುದು ಪಂಚತಾರಾ ಹೋಟೆಲ್‌ನಲ್ಲಿ ಇದ್ದಂತೆ ಮತ್ತು ಫೋನ್‌ನ್ನು ಸಂಪೂರ್ಣವಾಗಿ ಚಾರ್ಜ್ ಮಾಡುವುದು ಒಂದು ಕನಸಾಗಿದೆ ಎಂದು ಹೇಳಿದ್ದಾರೆ.

ಕಳೆದ ಶನಿವಾರ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭಯಾನಕ ದಾಳಿಯಲ್ಲಿ 1,200 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 2,300 ಜನರು ಮೃತಪಟ್ಟಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ.

ಅ.7 ರಿಂದ 4,23,000ಕ್ಕೂ ಹೆಚ್ಚು ಜನರು ಈಗಾಗಲೇ ಸ್ಥಳಾಂತರಗೊಂಡಿದ್ದಾರೆ ಎಂದು UNRWA ಹೇಳಿದೆ. ಅವರಲ್ಲಿ 2,70,000ಕ್ಕೂ ಹೆಚ್ಚು ಜನರು UNRWA ಆಶ್ರಯದಲ್ಲಿ ಆಶ್ರಯ ಪಡೆದಿದ್ದಾರೆ. ಅವರಲ್ಲಿ 50,000 ಗರ್ಭಿಣಿಯರಿದ್ದಾರೆ. ಈ ಪೈಕಿ ಸುಮಾರು 5,500 ಮಹಿಳೆಯರು ತುಂಬು ಗರ್ಭಿಣಿಯರಾಗಿದ್ದಾರೆ ಎಂದು ಹೇಳಿದೆ.

ಇಲ್ಲಿ ಇಂಟರ್‌ನೆಟ್‌ ಲಭ್ಯತೆ ಕನಸಾಗಿದೆ. ಇವು ಅಕ್ಷರಶಃ ನಿದ್ದೆಯಿಲ್ಲದ ರಾತ್ರಿಗಳು, ಸೂರ್ಯೋದಯಕ್ಕೆ ಮೊದಲೇ ಬೃಹತ್ ಬಾಂಬ್ ಸ್ಫೋಟವು ಪ್ರಾರಂಭವಾಗುತ್ತದೆ. ಪ್ರತಿ 10 ಅಥವಾ 15 ನಿಮಿಷಗಳಿಗೊಮ್ಮೆ ಶಬ್ಧಗಳು ಕೇಳಿಸುತ್ತಿದೆ. ಹಗಲು ಹೊತ್ತಿನಲ್ಲಿ ಬಾಂಬ್ ಸ್ಫೋಟವು ನಿಲ್ಲುವುದಿಲ್ಲ ಆದರೆ ಅದು ಕಡಿಮೆ ಪ್ರಮಾಣದ್ದಾಗಿದೆ ಆದರೆ ಕತ್ತಲೆಯ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಬಾಂಬ್‌ ದಾಳಿ ಶಬ್ಧಗಳು ಕೇಳುತ್ತಿದೆ ಎಂದು ಅಜ್ಜಮ್ ಹೇಳಿದ್ದಾರೆ.

ಯುಎನ್ ಎಮರ್ಜೆನ್ಸಿ ರಿಲೀಫ್ ಕೋ ಆರ್ಡಿನೇಟರ್ ಮಾರ್ಟಿನ್ ಗ್ರಿಫಿತ್ಸ್ ಕೂಡ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಭೀಕರತೆಯ ಎಚ್ಚರಿಕೆ ನೀಡಿದ್ದಾರೆ. ನೀರು, ವಿದ್ಯುತ್, ಆಹಾರ ಮತ್ತು ಔಷಧವಿಲ್ಲದೆ ಸಾವಿರಾರು ಮಂದಿ ಸಾಯುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಟಾಟಾ ಕನ್ಸಲ್ಟೆನ್ಸಿ ನೇಮಕಾತಿ ಹಗರಣ: 16 ಉದ್ಯೋಗಿಗಳ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....