Homeಅಂತರಾಷ್ಟ್ರೀಯಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

- Advertisement -
- Advertisement -

ಪ್ಯಾಲೆಸ್ತೀನ್ ನಿರಾಶ್ರಿತರ ರಕ್ಷಣೆಗೆ ಕಾರ್ಯಚರಿಸುತ್ತಿರುವ UNRWA ಸಿಬ್ಬಂದಿಗಳು, ಇಸ್ರೇಲ್ ದಾಳಿಯ ಮಧ್ಯೆ ಗಾಝಾದಲ್ಲಿ ಸೃಷ್ಟಿಯಾದ ವಿಪತ್ತಿನ ಪರಿಸ್ಥಿತಿಯಿಂದ ಜನರನ್ನು ರಕ್ಷಿಸಿ ಎಂದು ಮನವಿ ಮಾಡಿದ್ದು, UNRWA ಆಶ್ರಯದಲ್ಲಿರುವ ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರಿಗೆ ಆಹಾರ, ನೀರು ಮತ್ತು ಔಷಧಿಗಳನ್ನು ತಕ್ಷಣದಲ್ಲಿ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಯುಎನ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಪ್ಯೂಜೀಸ್ ನಿಯರ್ ಈಸ್ಟ್ (ಯುಎನ್‌ಆರ್‌ಡಬ್ಲ್ಯುಎ) ಗಾಝಾದಲ್ಲಿನ ಪ್ಯಾಲೆಸ್ತೀನ್ ನಿರಾಶ್ರಿತರನ್ನು ರಕ್ಷಿಸಲು ತುರ್ತು ಮನವಿಯನ್ನು ಮಾಡಿದೆ. ಗಾಝಾ ಪಟ್ಟಿಯಲ್ಲಿ ಪ್ಯಾಲೆಸ್ತೀನ್ ನಿರಾಶ್ರಿತರು ಹಿಂಸಾಚಾರದ ತೀವ್ರತೆಯ ಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದೆ.

ದಯವಿಟ್ಟು ಗಾಝಾವನ್ನು ಉಳಿಸಿ, ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಗಾಝಾವನ್ನು ಉಳಿಸಿ. ಅದು ನಾಶವಾಗುತ್ತಿದೆ ಎಂದು ಯುಎನ್‌ಆರ್‌ಡಬ್ಲ್ಯುಎ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ವಿಡಿಯೋದಲ್ಲಿ ಯುಎನ್‌ಆರ್‌ಡಬ್ಲ್ಯುಎ ಆಶ್ರಯ ತಾಣಗಳ ಮುಖ್ಯಸ್ಥ ಹೇಳುತ್ತಿರುವುದು ಕಂಡು ಬಂದಿದೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ, ಇಸ್ರೇಲಿ ಮಿಲಿಟರಿ ಉತ್ತರ ಗಾಜಾದಲ್ಲಿ ವಾಸಿಸುವ 1.1 ಮಿಲಿಯನ್ ಪ್ಯಾಲೆಸ್ತೀನಿಯನ್ನರನ್ನು ದಕ್ಷಿಣಕ್ಕೆ ಸ್ಥಳಾಂತರಕ್ಕೆ ಸೂಚಿಸಿತ್ತು. ಇದರ ಬಳಿಕ ಸಾವಿರಾರು ಕುಟುಂಬಗಳು ವಾಹನಗಳಲ್ಲಿ ಮತ್ತು ಕಾಲ್ನಡಿಗೆಯಲ್ಲಿ ಮನೆಬಿಟ್ಟು ತೆರಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ UNRWA ಆಶ್ರಯ ತಾಣಗಳ ಮುಖ್ಯಸ್ಥರು, ಮಕ್ಕಳು, ವೃದ್ಧರು ಮತ್ತು ವಯಸ್ಕರಿಗೆ ನಾವು ಎಲ್ಲವನ್ನೂ ಒದಗಿಸಲು ಸಾಧ್ಯವಾಗುತ್ತಿಲ್ಲ. ನಾನು UNRWA ಆಶ್ರಯದ ಮುಖ್ಯಸ್ಥನಾಗಿದ್ದೇನೆ ಆಹಾರ, ನೀರನ್ನು ಕೂಡ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ವೀಡಿಯೊವೊಂದರಲ್ಲಿ UNRWA ಆಶ್ರಯ ತಾಣದ ಹಲಾಸ್ ಸಹಾಯಕ್ಕಾಗಿ ಭಾವನಾತ್ಮಕ ಮನವಿಯನ್ನು ಮಾಡಿದ್ದಾರೆ. ನನ್ನ ಆಶ್ರಯದಲ್ಲಿರುವ ನಿರಾಶ್ರಿತರಿಗೆ ಅಗತ್ಯ ಔಷಧಗಳು ಮತ್ತು ಆಹಾರವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಅವರ ಧ್ವನಿಯಲ್ಲಿ ಹತಾಶೆ ಮತ್ತು ದುಃಖ ವ್ಯಕ್ತವಾಗಿತ್ತು.

ನಾವು ಈಗ ಇರುವ ಪರಿಸ್ಥಿತಿಯನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ ಎಂದು ಹಲಾಸ್ ವೀಡಿಯೊದಲ್ಲಿ ಹೇಳಿದ್ದು, 15,000 ಪ್ಯಾಲೇಸ್ತೀನ್‌ ನಿರಾಶ್ರಿತರು ಆಶ್ರಯದಲ್ಲಿದ್ದಾರೆ ಎಂದು ಹೇಳಿದರು. ಅವರು ಆಹಾರ, ನೀರಿಲ್ಲದೆ ತಮ್ಮ ಮನೆಗಳನ್ನು ತೊರೆದರು. ನಿರಾಶ್ರಿತರಲ್ಲಿ ಸಕ್ಕರೆ ಕಾಯಿಲೆ ಇರುವವರು, ಅಂಗವಿಕಲ ಶಿಶುಗಳು ಹಾಗೂ ಈಗ ಸಿಡುಬು ರೋಗಕ್ಕೆ ತುತ್ತಾಗಿರುವ ಮಕ್ಕಳು ಇದ್ದಾರೆ ಎಂದು ಹೇಳಿದ್ದಾರೆ

ಆಹಾರ, ಸ್ನಾನಗೃಹಗಳು, ನೀರು, ವಿದ್ಯುಚ್ಛಕ್ತಿಯ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತಿಲ್ಲ. ಸದ್ಯದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ. ಅವರ ಅಗತ್ಯಗಳನ್ನು ಹೇಗೆ ಪೂರೈಸುವುದು ಎಂದು ನಮಗೆ ತಿಳಿದಿಲ್ಲ. ಇಲ್ಲಿ ಏನೂ ಇಲ್ಲ ಎಂದು ಹಲಾಸ್ ಹೇಳಿದ್ದಾರೆ.

ನಾವು ಅವರಿಗೆ ಆಹಾರ ಮತ್ತು ನೀರು ನೀಡುವಂತೆ ಸಹಾಯ ಹುಡುಕುತ್ತಿದ್ದೇವೆ. ಅವರು ಏನೂ ಇಲ್ಲದೆ ಬಂದಿದ್ದಾರೆ. ಆದರೆ ಅವರು ಭಿಕ್ಷುಕರಲ್ಲ. ಅವರಲ್ಲಿ ಹಣ ಇದೆ. ಆದರೆ ನಾವು ಬೇಕಿದ್ದ ನೀರು ಆಹಾರ ಎಲ್ಲಿ ಖರೀದಿಸಬಹುದು? ನಮಗೆ ಇನ್ಸುಲಿನ್ ಬೇಕು, ಜನರು ಸಾಯುತ್ತಿದ್ದಾರೆ. ನಾವು ಅವರಿಗೆ ಏನನ್ನೂ ನೀಡಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿಯು ದುರಂತ ಪರಿಸ್ಥಿತಿಯಾಗಿದೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿನ ಮತ್ತೊಂದು ಪೋಸ್ಟ್‌ನಲ್ಲಿ UNRWA ಸಿಬ್ಬಂದಿ ಅಜ್ಜಮ್ ಅವರು ಈ ದಿನಗಳಲ್ಲಿ ಗಾಜಾದಲ್ಲಿ  ಬದುಕುವುದು ಮಾತ್ರವಲ್ಲ, ಸ್ನಾನಕ್ಕೆ ಸ್ವಲ್ಪ ನೀರು ಹೊಂದುವುದು ಪಂಚತಾರಾ ಹೋಟೆಲ್‌ನಲ್ಲಿ ಇದ್ದಂತೆ ಮತ್ತು ಫೋನ್‌ನ್ನು ಸಂಪೂರ್ಣವಾಗಿ ಚಾರ್ಜ್ ಮಾಡುವುದು ಒಂದು ಕನಸಾಗಿದೆ ಎಂದು ಹೇಳಿದ್ದಾರೆ.

ಕಳೆದ ಶನಿವಾರ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭಯಾನಕ ದಾಳಿಯಲ್ಲಿ 1,200 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 2,300 ಜನರು ಮೃತಪಟ್ಟಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ.

ಅ.7 ರಿಂದ 4,23,000ಕ್ಕೂ ಹೆಚ್ಚು ಜನರು ಈಗಾಗಲೇ ಸ್ಥಳಾಂತರಗೊಂಡಿದ್ದಾರೆ ಎಂದು UNRWA ಹೇಳಿದೆ. ಅವರಲ್ಲಿ 2,70,000ಕ್ಕೂ ಹೆಚ್ಚು ಜನರು UNRWA ಆಶ್ರಯದಲ್ಲಿ ಆಶ್ರಯ ಪಡೆದಿದ್ದಾರೆ. ಅವರಲ್ಲಿ 50,000 ಗರ್ಭಿಣಿಯರಿದ್ದಾರೆ. ಈ ಪೈಕಿ ಸುಮಾರು 5,500 ಮಹಿಳೆಯರು ತುಂಬು ಗರ್ಭಿಣಿಯರಾಗಿದ್ದಾರೆ ಎಂದು ಹೇಳಿದೆ.

ಇಲ್ಲಿ ಇಂಟರ್‌ನೆಟ್‌ ಲಭ್ಯತೆ ಕನಸಾಗಿದೆ. ಇವು ಅಕ್ಷರಶಃ ನಿದ್ದೆಯಿಲ್ಲದ ರಾತ್ರಿಗಳು, ಸೂರ್ಯೋದಯಕ್ಕೆ ಮೊದಲೇ ಬೃಹತ್ ಬಾಂಬ್ ಸ್ಫೋಟವು ಪ್ರಾರಂಭವಾಗುತ್ತದೆ. ಪ್ರತಿ 10 ಅಥವಾ 15 ನಿಮಿಷಗಳಿಗೊಮ್ಮೆ ಶಬ್ಧಗಳು ಕೇಳಿಸುತ್ತಿದೆ. ಹಗಲು ಹೊತ್ತಿನಲ್ಲಿ ಬಾಂಬ್ ಸ್ಫೋಟವು ನಿಲ್ಲುವುದಿಲ್ಲ ಆದರೆ ಅದು ಕಡಿಮೆ ಪ್ರಮಾಣದ್ದಾಗಿದೆ ಆದರೆ ಕತ್ತಲೆಯ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಬಾಂಬ್‌ ದಾಳಿ ಶಬ್ಧಗಳು ಕೇಳುತ್ತಿದೆ ಎಂದು ಅಜ್ಜಮ್ ಹೇಳಿದ್ದಾರೆ.

ಯುಎನ್ ಎಮರ್ಜೆನ್ಸಿ ರಿಲೀಫ್ ಕೋ ಆರ್ಡಿನೇಟರ್ ಮಾರ್ಟಿನ್ ಗ್ರಿಫಿತ್ಸ್ ಕೂಡ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಭೀಕರತೆಯ ಎಚ್ಚರಿಕೆ ನೀಡಿದ್ದಾರೆ. ನೀರು, ವಿದ್ಯುತ್, ಆಹಾರ ಮತ್ತು ಔಷಧವಿಲ್ಲದೆ ಸಾವಿರಾರು ಮಂದಿ ಸಾಯುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಟಾಟಾ ಕನ್ಸಲ್ಟೆನ್ಸಿ ನೇಮಕಾತಿ ಹಗರಣ: 16 ಉದ್ಯೋಗಿಗಳ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...