Homeಅಂತರಾಷ್ಟ್ರೀಯಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

- Advertisement -
- Advertisement -

ಪ್ಯಾಲೆಸ್ತೀನ್ ನಿರಾಶ್ರಿತರ ರಕ್ಷಣೆಗೆ ಕಾರ್ಯಚರಿಸುತ್ತಿರುವ UNRWA ಸಿಬ್ಬಂದಿಗಳು, ಇಸ್ರೇಲ್ ದಾಳಿಯ ಮಧ್ಯೆ ಗಾಝಾದಲ್ಲಿ ಸೃಷ್ಟಿಯಾದ ವಿಪತ್ತಿನ ಪರಿಸ್ಥಿತಿಯಿಂದ ಜನರನ್ನು ರಕ್ಷಿಸಿ ಎಂದು ಮನವಿ ಮಾಡಿದ್ದು, UNRWA ಆಶ್ರಯದಲ್ಲಿರುವ ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರಿಗೆ ಆಹಾರ, ನೀರು ಮತ್ತು ಔಷಧಿಗಳನ್ನು ತಕ್ಷಣದಲ್ಲಿ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಯುಎನ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಪ್ಯೂಜೀಸ್ ನಿಯರ್ ಈಸ್ಟ್ (ಯುಎನ್‌ಆರ್‌ಡಬ್ಲ್ಯುಎ) ಗಾಝಾದಲ್ಲಿನ ಪ್ಯಾಲೆಸ್ತೀನ್ ನಿರಾಶ್ರಿತರನ್ನು ರಕ್ಷಿಸಲು ತುರ್ತು ಮನವಿಯನ್ನು ಮಾಡಿದೆ. ಗಾಝಾ ಪಟ್ಟಿಯಲ್ಲಿ ಪ್ಯಾಲೆಸ್ತೀನ್ ನಿರಾಶ್ರಿತರು ಹಿಂಸಾಚಾರದ ತೀವ್ರತೆಯ ಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದೆ.

ದಯವಿಟ್ಟು ಗಾಝಾವನ್ನು ಉಳಿಸಿ, ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಗಾಝಾವನ್ನು ಉಳಿಸಿ. ಅದು ನಾಶವಾಗುತ್ತಿದೆ ಎಂದು ಯುಎನ್‌ಆರ್‌ಡಬ್ಲ್ಯುಎ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ವಿಡಿಯೋದಲ್ಲಿ ಯುಎನ್‌ಆರ್‌ಡಬ್ಲ್ಯುಎ ಆಶ್ರಯ ತಾಣಗಳ ಮುಖ್ಯಸ್ಥ ಹೇಳುತ್ತಿರುವುದು ಕಂಡು ಬಂದಿದೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ, ಇಸ್ರೇಲಿ ಮಿಲಿಟರಿ ಉತ್ತರ ಗಾಜಾದಲ್ಲಿ ವಾಸಿಸುವ 1.1 ಮಿಲಿಯನ್ ಪ್ಯಾಲೆಸ್ತೀನಿಯನ್ನರನ್ನು ದಕ್ಷಿಣಕ್ಕೆ ಸ್ಥಳಾಂತರಕ್ಕೆ ಸೂಚಿಸಿತ್ತು. ಇದರ ಬಳಿಕ ಸಾವಿರಾರು ಕುಟುಂಬಗಳು ವಾಹನಗಳಲ್ಲಿ ಮತ್ತು ಕಾಲ್ನಡಿಗೆಯಲ್ಲಿ ಮನೆಬಿಟ್ಟು ತೆರಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ UNRWA ಆಶ್ರಯ ತಾಣಗಳ ಮುಖ್ಯಸ್ಥರು, ಮಕ್ಕಳು, ವೃದ್ಧರು ಮತ್ತು ವಯಸ್ಕರಿಗೆ ನಾವು ಎಲ್ಲವನ್ನೂ ಒದಗಿಸಲು ಸಾಧ್ಯವಾಗುತ್ತಿಲ್ಲ. ನಾನು UNRWA ಆಶ್ರಯದ ಮುಖ್ಯಸ್ಥನಾಗಿದ್ದೇನೆ ಆಹಾರ, ನೀರನ್ನು ಕೂಡ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ವೀಡಿಯೊವೊಂದರಲ್ಲಿ UNRWA ಆಶ್ರಯ ತಾಣದ ಹಲಾಸ್ ಸಹಾಯಕ್ಕಾಗಿ ಭಾವನಾತ್ಮಕ ಮನವಿಯನ್ನು ಮಾಡಿದ್ದಾರೆ. ನನ್ನ ಆಶ್ರಯದಲ್ಲಿರುವ ನಿರಾಶ್ರಿತರಿಗೆ ಅಗತ್ಯ ಔಷಧಗಳು ಮತ್ತು ಆಹಾರವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಅವರ ಧ್ವನಿಯಲ್ಲಿ ಹತಾಶೆ ಮತ್ತು ದುಃಖ ವ್ಯಕ್ತವಾಗಿತ್ತು.

ನಾವು ಈಗ ಇರುವ ಪರಿಸ್ಥಿತಿಯನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ ಎಂದು ಹಲಾಸ್ ವೀಡಿಯೊದಲ್ಲಿ ಹೇಳಿದ್ದು, 15,000 ಪ್ಯಾಲೇಸ್ತೀನ್‌ ನಿರಾಶ್ರಿತರು ಆಶ್ರಯದಲ್ಲಿದ್ದಾರೆ ಎಂದು ಹೇಳಿದರು. ಅವರು ಆಹಾರ, ನೀರಿಲ್ಲದೆ ತಮ್ಮ ಮನೆಗಳನ್ನು ತೊರೆದರು. ನಿರಾಶ್ರಿತರಲ್ಲಿ ಸಕ್ಕರೆ ಕಾಯಿಲೆ ಇರುವವರು, ಅಂಗವಿಕಲ ಶಿಶುಗಳು ಹಾಗೂ ಈಗ ಸಿಡುಬು ರೋಗಕ್ಕೆ ತುತ್ತಾಗಿರುವ ಮಕ್ಕಳು ಇದ್ದಾರೆ ಎಂದು ಹೇಳಿದ್ದಾರೆ

ಆಹಾರ, ಸ್ನಾನಗೃಹಗಳು, ನೀರು, ವಿದ್ಯುಚ್ಛಕ್ತಿಯ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತಿಲ್ಲ. ಸದ್ಯದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ. ಅವರ ಅಗತ್ಯಗಳನ್ನು ಹೇಗೆ ಪೂರೈಸುವುದು ಎಂದು ನಮಗೆ ತಿಳಿದಿಲ್ಲ. ಇಲ್ಲಿ ಏನೂ ಇಲ್ಲ ಎಂದು ಹಲಾಸ್ ಹೇಳಿದ್ದಾರೆ.

ನಾವು ಅವರಿಗೆ ಆಹಾರ ಮತ್ತು ನೀರು ನೀಡುವಂತೆ ಸಹಾಯ ಹುಡುಕುತ್ತಿದ್ದೇವೆ. ಅವರು ಏನೂ ಇಲ್ಲದೆ ಬಂದಿದ್ದಾರೆ. ಆದರೆ ಅವರು ಭಿಕ್ಷುಕರಲ್ಲ. ಅವರಲ್ಲಿ ಹಣ ಇದೆ. ಆದರೆ ನಾವು ಬೇಕಿದ್ದ ನೀರು ಆಹಾರ ಎಲ್ಲಿ ಖರೀದಿಸಬಹುದು? ನಮಗೆ ಇನ್ಸುಲಿನ್ ಬೇಕು, ಜನರು ಸಾಯುತ್ತಿದ್ದಾರೆ. ನಾವು ಅವರಿಗೆ ಏನನ್ನೂ ನೀಡಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿಯು ದುರಂತ ಪರಿಸ್ಥಿತಿಯಾಗಿದೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿನ ಮತ್ತೊಂದು ಪೋಸ್ಟ್‌ನಲ್ಲಿ UNRWA ಸಿಬ್ಬಂದಿ ಅಜ್ಜಮ್ ಅವರು ಈ ದಿನಗಳಲ್ಲಿ ಗಾಜಾದಲ್ಲಿ  ಬದುಕುವುದು ಮಾತ್ರವಲ್ಲ, ಸ್ನಾನಕ್ಕೆ ಸ್ವಲ್ಪ ನೀರು ಹೊಂದುವುದು ಪಂಚತಾರಾ ಹೋಟೆಲ್‌ನಲ್ಲಿ ಇದ್ದಂತೆ ಮತ್ತು ಫೋನ್‌ನ್ನು ಸಂಪೂರ್ಣವಾಗಿ ಚಾರ್ಜ್ ಮಾಡುವುದು ಒಂದು ಕನಸಾಗಿದೆ ಎಂದು ಹೇಳಿದ್ದಾರೆ.

ಕಳೆದ ಶನಿವಾರ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭಯಾನಕ ದಾಳಿಯಲ್ಲಿ 1,200 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 2,300 ಜನರು ಮೃತಪಟ್ಟಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ.

ಅ.7 ರಿಂದ 4,23,000ಕ್ಕೂ ಹೆಚ್ಚು ಜನರು ಈಗಾಗಲೇ ಸ್ಥಳಾಂತರಗೊಂಡಿದ್ದಾರೆ ಎಂದು UNRWA ಹೇಳಿದೆ. ಅವರಲ್ಲಿ 2,70,000ಕ್ಕೂ ಹೆಚ್ಚು ಜನರು UNRWA ಆಶ್ರಯದಲ್ಲಿ ಆಶ್ರಯ ಪಡೆದಿದ್ದಾರೆ. ಅವರಲ್ಲಿ 50,000 ಗರ್ಭಿಣಿಯರಿದ್ದಾರೆ. ಈ ಪೈಕಿ ಸುಮಾರು 5,500 ಮಹಿಳೆಯರು ತುಂಬು ಗರ್ಭಿಣಿಯರಾಗಿದ್ದಾರೆ ಎಂದು ಹೇಳಿದೆ.

ಇಲ್ಲಿ ಇಂಟರ್‌ನೆಟ್‌ ಲಭ್ಯತೆ ಕನಸಾಗಿದೆ. ಇವು ಅಕ್ಷರಶಃ ನಿದ್ದೆಯಿಲ್ಲದ ರಾತ್ರಿಗಳು, ಸೂರ್ಯೋದಯಕ್ಕೆ ಮೊದಲೇ ಬೃಹತ್ ಬಾಂಬ್ ಸ್ಫೋಟವು ಪ್ರಾರಂಭವಾಗುತ್ತದೆ. ಪ್ರತಿ 10 ಅಥವಾ 15 ನಿಮಿಷಗಳಿಗೊಮ್ಮೆ ಶಬ್ಧಗಳು ಕೇಳಿಸುತ್ತಿದೆ. ಹಗಲು ಹೊತ್ತಿನಲ್ಲಿ ಬಾಂಬ್ ಸ್ಫೋಟವು ನಿಲ್ಲುವುದಿಲ್ಲ ಆದರೆ ಅದು ಕಡಿಮೆ ಪ್ರಮಾಣದ್ದಾಗಿದೆ ಆದರೆ ಕತ್ತಲೆಯ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಬಾಂಬ್‌ ದಾಳಿ ಶಬ್ಧಗಳು ಕೇಳುತ್ತಿದೆ ಎಂದು ಅಜ್ಜಮ್ ಹೇಳಿದ್ದಾರೆ.

ಯುಎನ್ ಎಮರ್ಜೆನ್ಸಿ ರಿಲೀಫ್ ಕೋ ಆರ್ಡಿನೇಟರ್ ಮಾರ್ಟಿನ್ ಗ್ರಿಫಿತ್ಸ್ ಕೂಡ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಭೀಕರತೆಯ ಎಚ್ಚರಿಕೆ ನೀಡಿದ್ದಾರೆ. ನೀರು, ವಿದ್ಯುತ್, ಆಹಾರ ಮತ್ತು ಔಷಧವಿಲ್ಲದೆ ಸಾವಿರಾರು ಮಂದಿ ಸಾಯುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಟಾಟಾ ಕನ್ಸಲ್ಟೆನ್ಸಿ ನೇಮಕಾತಿ ಹಗರಣ: 16 ಉದ್ಯೋಗಿಗಳ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...