Homeಅಂತರಾಷ್ಟ್ರೀಯಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

- Advertisement -
- Advertisement -

ಪ್ಯಾಲೆಸ್ತೀನ್ ನಿರಾಶ್ರಿತರ ರಕ್ಷಣೆಗೆ ಕಾರ್ಯಚರಿಸುತ್ತಿರುವ UNRWA ಸಿಬ್ಬಂದಿಗಳು, ಇಸ್ರೇಲ್ ದಾಳಿಯ ಮಧ್ಯೆ ಗಾಝಾದಲ್ಲಿ ಸೃಷ್ಟಿಯಾದ ವಿಪತ್ತಿನ ಪರಿಸ್ಥಿತಿಯಿಂದ ಜನರನ್ನು ರಕ್ಷಿಸಿ ಎಂದು ಮನವಿ ಮಾಡಿದ್ದು, UNRWA ಆಶ್ರಯದಲ್ಲಿರುವ ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರಿಗೆ ಆಹಾರ, ನೀರು ಮತ್ತು ಔಷಧಿಗಳನ್ನು ತಕ್ಷಣದಲ್ಲಿ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಯುಎನ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಪ್ಯೂಜೀಸ್ ನಿಯರ್ ಈಸ್ಟ್ (ಯುಎನ್‌ಆರ್‌ಡಬ್ಲ್ಯುಎ) ಗಾಝಾದಲ್ಲಿನ ಪ್ಯಾಲೆಸ್ತೀನ್ ನಿರಾಶ್ರಿತರನ್ನು ರಕ್ಷಿಸಲು ತುರ್ತು ಮನವಿಯನ್ನು ಮಾಡಿದೆ. ಗಾಝಾ ಪಟ್ಟಿಯಲ್ಲಿ ಪ್ಯಾಲೆಸ್ತೀನ್ ನಿರಾಶ್ರಿತರು ಹಿಂಸಾಚಾರದ ತೀವ್ರತೆಯ ಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದೆ.

ದಯವಿಟ್ಟು ಗಾಝಾವನ್ನು ಉಳಿಸಿ, ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಗಾಝಾವನ್ನು ಉಳಿಸಿ. ಅದು ನಾಶವಾಗುತ್ತಿದೆ ಎಂದು ಯುಎನ್‌ಆರ್‌ಡಬ್ಲ್ಯುಎ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ವಿಡಿಯೋದಲ್ಲಿ ಯುಎನ್‌ಆರ್‌ಡಬ್ಲ್ಯುಎ ಆಶ್ರಯ ತಾಣಗಳ ಮುಖ್ಯಸ್ಥ ಹೇಳುತ್ತಿರುವುದು ಕಂಡು ಬಂದಿದೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ, ಇಸ್ರೇಲಿ ಮಿಲಿಟರಿ ಉತ್ತರ ಗಾಜಾದಲ್ಲಿ ವಾಸಿಸುವ 1.1 ಮಿಲಿಯನ್ ಪ್ಯಾಲೆಸ್ತೀನಿಯನ್ನರನ್ನು ದಕ್ಷಿಣಕ್ಕೆ ಸ್ಥಳಾಂತರಕ್ಕೆ ಸೂಚಿಸಿತ್ತು. ಇದರ ಬಳಿಕ ಸಾವಿರಾರು ಕುಟುಂಬಗಳು ವಾಹನಗಳಲ್ಲಿ ಮತ್ತು ಕಾಲ್ನಡಿಗೆಯಲ್ಲಿ ಮನೆಬಿಟ್ಟು ತೆರಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ UNRWA ಆಶ್ರಯ ತಾಣಗಳ ಮುಖ್ಯಸ್ಥರು, ಮಕ್ಕಳು, ವೃದ್ಧರು ಮತ್ತು ವಯಸ್ಕರಿಗೆ ನಾವು ಎಲ್ಲವನ್ನೂ ಒದಗಿಸಲು ಸಾಧ್ಯವಾಗುತ್ತಿಲ್ಲ. ನಾನು UNRWA ಆಶ್ರಯದ ಮುಖ್ಯಸ್ಥನಾಗಿದ್ದೇನೆ ಆಹಾರ, ನೀರನ್ನು ಕೂಡ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ವೀಡಿಯೊವೊಂದರಲ್ಲಿ UNRWA ಆಶ್ರಯ ತಾಣದ ಹಲಾಸ್ ಸಹಾಯಕ್ಕಾಗಿ ಭಾವನಾತ್ಮಕ ಮನವಿಯನ್ನು ಮಾಡಿದ್ದಾರೆ. ನನ್ನ ಆಶ್ರಯದಲ್ಲಿರುವ ನಿರಾಶ್ರಿತರಿಗೆ ಅಗತ್ಯ ಔಷಧಗಳು ಮತ್ತು ಆಹಾರವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಅವರ ಧ್ವನಿಯಲ್ಲಿ ಹತಾಶೆ ಮತ್ತು ದುಃಖ ವ್ಯಕ್ತವಾಗಿತ್ತು.

ನಾವು ಈಗ ಇರುವ ಪರಿಸ್ಥಿತಿಯನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ ಎಂದು ಹಲಾಸ್ ವೀಡಿಯೊದಲ್ಲಿ ಹೇಳಿದ್ದು, 15,000 ಪ್ಯಾಲೇಸ್ತೀನ್‌ ನಿರಾಶ್ರಿತರು ಆಶ್ರಯದಲ್ಲಿದ್ದಾರೆ ಎಂದು ಹೇಳಿದರು. ಅವರು ಆಹಾರ, ನೀರಿಲ್ಲದೆ ತಮ್ಮ ಮನೆಗಳನ್ನು ತೊರೆದರು. ನಿರಾಶ್ರಿತರಲ್ಲಿ ಸಕ್ಕರೆ ಕಾಯಿಲೆ ಇರುವವರು, ಅಂಗವಿಕಲ ಶಿಶುಗಳು ಹಾಗೂ ಈಗ ಸಿಡುಬು ರೋಗಕ್ಕೆ ತುತ್ತಾಗಿರುವ ಮಕ್ಕಳು ಇದ್ದಾರೆ ಎಂದು ಹೇಳಿದ್ದಾರೆ

ಆಹಾರ, ಸ್ನಾನಗೃಹಗಳು, ನೀರು, ವಿದ್ಯುಚ್ಛಕ್ತಿಯ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತಿಲ್ಲ. ಸದ್ಯದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ. ಅವರ ಅಗತ್ಯಗಳನ್ನು ಹೇಗೆ ಪೂರೈಸುವುದು ಎಂದು ನಮಗೆ ತಿಳಿದಿಲ್ಲ. ಇಲ್ಲಿ ಏನೂ ಇಲ್ಲ ಎಂದು ಹಲಾಸ್ ಹೇಳಿದ್ದಾರೆ.

ನಾವು ಅವರಿಗೆ ಆಹಾರ ಮತ್ತು ನೀರು ನೀಡುವಂತೆ ಸಹಾಯ ಹುಡುಕುತ್ತಿದ್ದೇವೆ. ಅವರು ಏನೂ ಇಲ್ಲದೆ ಬಂದಿದ್ದಾರೆ. ಆದರೆ ಅವರು ಭಿಕ್ಷುಕರಲ್ಲ. ಅವರಲ್ಲಿ ಹಣ ಇದೆ. ಆದರೆ ನಾವು ಬೇಕಿದ್ದ ನೀರು ಆಹಾರ ಎಲ್ಲಿ ಖರೀದಿಸಬಹುದು? ನಮಗೆ ಇನ್ಸುಲಿನ್ ಬೇಕು, ಜನರು ಸಾಯುತ್ತಿದ್ದಾರೆ. ನಾವು ಅವರಿಗೆ ಏನನ್ನೂ ನೀಡಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿಯು ದುರಂತ ಪರಿಸ್ಥಿತಿಯಾಗಿದೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿನ ಮತ್ತೊಂದು ಪೋಸ್ಟ್‌ನಲ್ಲಿ UNRWA ಸಿಬ್ಬಂದಿ ಅಜ್ಜಮ್ ಅವರು ಈ ದಿನಗಳಲ್ಲಿ ಗಾಜಾದಲ್ಲಿ  ಬದುಕುವುದು ಮಾತ್ರವಲ್ಲ, ಸ್ನಾನಕ್ಕೆ ಸ್ವಲ್ಪ ನೀರು ಹೊಂದುವುದು ಪಂಚತಾರಾ ಹೋಟೆಲ್‌ನಲ್ಲಿ ಇದ್ದಂತೆ ಮತ್ತು ಫೋನ್‌ನ್ನು ಸಂಪೂರ್ಣವಾಗಿ ಚಾರ್ಜ್ ಮಾಡುವುದು ಒಂದು ಕನಸಾಗಿದೆ ಎಂದು ಹೇಳಿದ್ದಾರೆ.

ಕಳೆದ ಶನಿವಾರ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭಯಾನಕ ದಾಳಿಯಲ್ಲಿ 1,200 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 2,300 ಜನರು ಮೃತಪಟ್ಟಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ.

ಅ.7 ರಿಂದ 4,23,000ಕ್ಕೂ ಹೆಚ್ಚು ಜನರು ಈಗಾಗಲೇ ಸ್ಥಳಾಂತರಗೊಂಡಿದ್ದಾರೆ ಎಂದು UNRWA ಹೇಳಿದೆ. ಅವರಲ್ಲಿ 2,70,000ಕ್ಕೂ ಹೆಚ್ಚು ಜನರು UNRWA ಆಶ್ರಯದಲ್ಲಿ ಆಶ್ರಯ ಪಡೆದಿದ್ದಾರೆ. ಅವರಲ್ಲಿ 50,000 ಗರ್ಭಿಣಿಯರಿದ್ದಾರೆ. ಈ ಪೈಕಿ ಸುಮಾರು 5,500 ಮಹಿಳೆಯರು ತುಂಬು ಗರ್ಭಿಣಿಯರಾಗಿದ್ದಾರೆ ಎಂದು ಹೇಳಿದೆ.

ಇಲ್ಲಿ ಇಂಟರ್‌ನೆಟ್‌ ಲಭ್ಯತೆ ಕನಸಾಗಿದೆ. ಇವು ಅಕ್ಷರಶಃ ನಿದ್ದೆಯಿಲ್ಲದ ರಾತ್ರಿಗಳು, ಸೂರ್ಯೋದಯಕ್ಕೆ ಮೊದಲೇ ಬೃಹತ್ ಬಾಂಬ್ ಸ್ಫೋಟವು ಪ್ರಾರಂಭವಾಗುತ್ತದೆ. ಪ್ರತಿ 10 ಅಥವಾ 15 ನಿಮಿಷಗಳಿಗೊಮ್ಮೆ ಶಬ್ಧಗಳು ಕೇಳಿಸುತ್ತಿದೆ. ಹಗಲು ಹೊತ್ತಿನಲ್ಲಿ ಬಾಂಬ್ ಸ್ಫೋಟವು ನಿಲ್ಲುವುದಿಲ್ಲ ಆದರೆ ಅದು ಕಡಿಮೆ ಪ್ರಮಾಣದ್ದಾಗಿದೆ ಆದರೆ ಕತ್ತಲೆಯ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಬಾಂಬ್‌ ದಾಳಿ ಶಬ್ಧಗಳು ಕೇಳುತ್ತಿದೆ ಎಂದು ಅಜ್ಜಮ್ ಹೇಳಿದ್ದಾರೆ.

ಯುಎನ್ ಎಮರ್ಜೆನ್ಸಿ ರಿಲೀಫ್ ಕೋ ಆರ್ಡಿನೇಟರ್ ಮಾರ್ಟಿನ್ ಗ್ರಿಫಿತ್ಸ್ ಕೂಡ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಭೀಕರತೆಯ ಎಚ್ಚರಿಕೆ ನೀಡಿದ್ದಾರೆ. ನೀರು, ವಿದ್ಯುತ್, ಆಹಾರ ಮತ್ತು ಔಷಧವಿಲ್ಲದೆ ಸಾವಿರಾರು ಮಂದಿ ಸಾಯುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಟಾಟಾ ಕನ್ಸಲ್ಟೆನ್ಸಿ ನೇಮಕಾತಿ ಹಗರಣ: 16 ಉದ್ಯೋಗಿಗಳ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...