Homeಅಂತರಾಷ್ಟ್ರೀಯಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

ಗಾಝಾವನ್ನು ರಕ್ಷಿಸಿ, ಸಾವಿರಾರು ಮಂದಿ ಸಾಯುತ್ತಾರೆ: ತುರ್ತು ಸಹಾಯಕ್ಕೆ ಮನವಿ ಮಾಡಿದ UNRWA ಸಿಬ್ಬಂದಿಗಳು

- Advertisement -
- Advertisement -

ಪ್ಯಾಲೆಸ್ತೀನ್ ನಿರಾಶ್ರಿತರ ರಕ್ಷಣೆಗೆ ಕಾರ್ಯಚರಿಸುತ್ತಿರುವ UNRWA ಸಿಬ್ಬಂದಿಗಳು, ಇಸ್ರೇಲ್ ದಾಳಿಯ ಮಧ್ಯೆ ಗಾಝಾದಲ್ಲಿ ಸೃಷ್ಟಿಯಾದ ವಿಪತ್ತಿನ ಪರಿಸ್ಥಿತಿಯಿಂದ ಜನರನ್ನು ರಕ್ಷಿಸಿ ಎಂದು ಮನವಿ ಮಾಡಿದ್ದು, UNRWA ಆಶ್ರಯದಲ್ಲಿರುವ ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರಿಗೆ ಆಹಾರ, ನೀರು ಮತ್ತು ಔಷಧಿಗಳನ್ನು ತಕ್ಷಣದಲ್ಲಿ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಯುಎನ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ ಫಾರ್ ಪ್ಯಾಲೆಸ್ಟೈನ್ ರೆಪ್ಯೂಜೀಸ್ ನಿಯರ್ ಈಸ್ಟ್ (ಯುಎನ್‌ಆರ್‌ಡಬ್ಲ್ಯುಎ) ಗಾಝಾದಲ್ಲಿನ ಪ್ಯಾಲೆಸ್ತೀನ್ ನಿರಾಶ್ರಿತರನ್ನು ರಕ್ಷಿಸಲು ತುರ್ತು ಮನವಿಯನ್ನು ಮಾಡಿದೆ. ಗಾಝಾ ಪಟ್ಟಿಯಲ್ಲಿ ಪ್ಯಾಲೆಸ್ತೀನ್ ನಿರಾಶ್ರಿತರು ಹಿಂಸಾಚಾರದ ತೀವ್ರತೆಯ ಪರಿಣಾಮಗಳನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದೆ.

ದಯವಿಟ್ಟು ಗಾಝಾವನ್ನು ಉಳಿಸಿ, ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಗಾಝಾವನ್ನು ಉಳಿಸಿ. ಅದು ನಾಶವಾಗುತ್ತಿದೆ ಎಂದು ಯುಎನ್‌ಆರ್‌ಡಬ್ಲ್ಯುಎ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ವಿಡಿಯೋದಲ್ಲಿ ಯುಎನ್‌ಆರ್‌ಡಬ್ಲ್ಯುಎ ಆಶ್ರಯ ತಾಣಗಳ ಮುಖ್ಯಸ್ಥ ಹೇಳುತ್ತಿರುವುದು ಕಂಡು ಬಂದಿದೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ, ಇಸ್ರೇಲಿ ಮಿಲಿಟರಿ ಉತ್ತರ ಗಾಜಾದಲ್ಲಿ ವಾಸಿಸುವ 1.1 ಮಿಲಿಯನ್ ಪ್ಯಾಲೆಸ್ತೀನಿಯನ್ನರನ್ನು ದಕ್ಷಿಣಕ್ಕೆ ಸ್ಥಳಾಂತರಕ್ಕೆ ಸೂಚಿಸಿತ್ತು. ಇದರ ಬಳಿಕ ಸಾವಿರಾರು ಕುಟುಂಬಗಳು ವಾಹನಗಳಲ್ಲಿ ಮತ್ತು ಕಾಲ್ನಡಿಗೆಯಲ್ಲಿ ಮನೆಬಿಟ್ಟು ತೆರಳುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ UNRWA ಆಶ್ರಯ ತಾಣಗಳ ಮುಖ್ಯಸ್ಥರು, ಮಕ್ಕಳು, ವೃದ್ಧರು ಮತ್ತು ವಯಸ್ಕರಿಗೆ ನಾವು ಎಲ್ಲವನ್ನೂ ಒದಗಿಸಲು ಸಾಧ್ಯವಾಗುತ್ತಿಲ್ಲ. ನಾನು UNRWA ಆಶ್ರಯದ ಮುಖ್ಯಸ್ಥನಾಗಿದ್ದೇನೆ ಆಹಾರ, ನೀರನ್ನು ಕೂಡ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ವೀಡಿಯೊವೊಂದರಲ್ಲಿ UNRWA ಆಶ್ರಯ ತಾಣದ ಹಲಾಸ್ ಸಹಾಯಕ್ಕಾಗಿ ಭಾವನಾತ್ಮಕ ಮನವಿಯನ್ನು ಮಾಡಿದ್ದಾರೆ. ನನ್ನ ಆಶ್ರಯದಲ್ಲಿರುವ ನಿರಾಶ್ರಿತರಿಗೆ ಅಗತ್ಯ ಔಷಧಗಳು ಮತ್ತು ಆಹಾರವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಅವರ ಧ್ವನಿಯಲ್ಲಿ ಹತಾಶೆ ಮತ್ತು ದುಃಖ ವ್ಯಕ್ತವಾಗಿತ್ತು.

ನಾವು ಈಗ ಇರುವ ಪರಿಸ್ಥಿತಿಯನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ ಎಂದು ಹಲಾಸ್ ವೀಡಿಯೊದಲ್ಲಿ ಹೇಳಿದ್ದು, 15,000 ಪ್ಯಾಲೇಸ್ತೀನ್‌ ನಿರಾಶ್ರಿತರು ಆಶ್ರಯದಲ್ಲಿದ್ದಾರೆ ಎಂದು ಹೇಳಿದರು. ಅವರು ಆಹಾರ, ನೀರಿಲ್ಲದೆ ತಮ್ಮ ಮನೆಗಳನ್ನು ತೊರೆದರು. ನಿರಾಶ್ರಿತರಲ್ಲಿ ಸಕ್ಕರೆ ಕಾಯಿಲೆ ಇರುವವರು, ಅಂಗವಿಕಲ ಶಿಶುಗಳು ಹಾಗೂ ಈಗ ಸಿಡುಬು ರೋಗಕ್ಕೆ ತುತ್ತಾಗಿರುವ ಮಕ್ಕಳು ಇದ್ದಾರೆ ಎಂದು ಹೇಳಿದ್ದಾರೆ

ಆಹಾರ, ಸ್ನಾನಗೃಹಗಳು, ನೀರು, ವಿದ್ಯುಚ್ಛಕ್ತಿಯ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತಿಲ್ಲ. ಸದ್ಯದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ. ಅವರ ಅಗತ್ಯಗಳನ್ನು ಹೇಗೆ ಪೂರೈಸುವುದು ಎಂದು ನಮಗೆ ತಿಳಿದಿಲ್ಲ. ಇಲ್ಲಿ ಏನೂ ಇಲ್ಲ ಎಂದು ಹಲಾಸ್ ಹೇಳಿದ್ದಾರೆ.

ನಾವು ಅವರಿಗೆ ಆಹಾರ ಮತ್ತು ನೀರು ನೀಡುವಂತೆ ಸಹಾಯ ಹುಡುಕುತ್ತಿದ್ದೇವೆ. ಅವರು ಏನೂ ಇಲ್ಲದೆ ಬಂದಿದ್ದಾರೆ. ಆದರೆ ಅವರು ಭಿಕ್ಷುಕರಲ್ಲ. ಅವರಲ್ಲಿ ಹಣ ಇದೆ. ಆದರೆ ನಾವು ಬೇಕಿದ್ದ ನೀರು ಆಹಾರ ಎಲ್ಲಿ ಖರೀದಿಸಬಹುದು? ನಮಗೆ ಇನ್ಸುಲಿನ್ ಬೇಕು, ಜನರು ಸಾಯುತ್ತಿದ್ದಾರೆ. ನಾವು ಅವರಿಗೆ ಏನನ್ನೂ ನೀಡಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿಯು ದುರಂತ ಪರಿಸ್ಥಿತಿಯಾಗಿದೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿನ ಮತ್ತೊಂದು ಪೋಸ್ಟ್‌ನಲ್ಲಿ UNRWA ಸಿಬ್ಬಂದಿ ಅಜ್ಜಮ್ ಅವರು ಈ ದಿನಗಳಲ್ಲಿ ಗಾಜಾದಲ್ಲಿ  ಬದುಕುವುದು ಮಾತ್ರವಲ್ಲ, ಸ್ನಾನಕ್ಕೆ ಸ್ವಲ್ಪ ನೀರು ಹೊಂದುವುದು ಪಂಚತಾರಾ ಹೋಟೆಲ್‌ನಲ್ಲಿ ಇದ್ದಂತೆ ಮತ್ತು ಫೋನ್‌ನ್ನು ಸಂಪೂರ್ಣವಾಗಿ ಚಾರ್ಜ್ ಮಾಡುವುದು ಒಂದು ಕನಸಾಗಿದೆ ಎಂದು ಹೇಳಿದ್ದಾರೆ.

ಕಳೆದ ಶನಿವಾರ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭಯಾನಕ ದಾಳಿಯಲ್ಲಿ 1,200 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 2,300 ಜನರು ಮೃತಪಟ್ಟಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ.

ಅ.7 ರಿಂದ 4,23,000ಕ್ಕೂ ಹೆಚ್ಚು ಜನರು ಈಗಾಗಲೇ ಸ್ಥಳಾಂತರಗೊಂಡಿದ್ದಾರೆ ಎಂದು UNRWA ಹೇಳಿದೆ. ಅವರಲ್ಲಿ 2,70,000ಕ್ಕೂ ಹೆಚ್ಚು ಜನರು UNRWA ಆಶ್ರಯದಲ್ಲಿ ಆಶ್ರಯ ಪಡೆದಿದ್ದಾರೆ. ಅವರಲ್ಲಿ 50,000 ಗರ್ಭಿಣಿಯರಿದ್ದಾರೆ. ಈ ಪೈಕಿ ಸುಮಾರು 5,500 ಮಹಿಳೆಯರು ತುಂಬು ಗರ್ಭಿಣಿಯರಾಗಿದ್ದಾರೆ ಎಂದು ಹೇಳಿದೆ.

ಇಲ್ಲಿ ಇಂಟರ್‌ನೆಟ್‌ ಲಭ್ಯತೆ ಕನಸಾಗಿದೆ. ಇವು ಅಕ್ಷರಶಃ ನಿದ್ದೆಯಿಲ್ಲದ ರಾತ್ರಿಗಳು, ಸೂರ್ಯೋದಯಕ್ಕೆ ಮೊದಲೇ ಬೃಹತ್ ಬಾಂಬ್ ಸ್ಫೋಟವು ಪ್ರಾರಂಭವಾಗುತ್ತದೆ. ಪ್ರತಿ 10 ಅಥವಾ 15 ನಿಮಿಷಗಳಿಗೊಮ್ಮೆ ಶಬ್ಧಗಳು ಕೇಳಿಸುತ್ತಿದೆ. ಹಗಲು ಹೊತ್ತಿನಲ್ಲಿ ಬಾಂಬ್ ಸ್ಫೋಟವು ನಿಲ್ಲುವುದಿಲ್ಲ ಆದರೆ ಅದು ಕಡಿಮೆ ಪ್ರಮಾಣದ್ದಾಗಿದೆ ಆದರೆ ಕತ್ತಲೆಯ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಬಾಂಬ್‌ ದಾಳಿ ಶಬ್ಧಗಳು ಕೇಳುತ್ತಿದೆ ಎಂದು ಅಜ್ಜಮ್ ಹೇಳಿದ್ದಾರೆ.

ಯುಎನ್ ಎಮರ್ಜೆನ್ಸಿ ರಿಲೀಫ್ ಕೋ ಆರ್ಡಿನೇಟರ್ ಮಾರ್ಟಿನ್ ಗ್ರಿಫಿತ್ಸ್ ಕೂಡ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಭೀಕರತೆಯ ಎಚ್ಚರಿಕೆ ನೀಡಿದ್ದಾರೆ. ನೀರು, ವಿದ್ಯುತ್, ಆಹಾರ ಮತ್ತು ಔಷಧವಿಲ್ಲದೆ ಸಾವಿರಾರು ಮಂದಿ ಸಾಯುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಟಾಟಾ ಕನ್ಸಲ್ಟೆನ್ಸಿ ನೇಮಕಾತಿ ಹಗರಣ: 16 ಉದ್ಯೋಗಿಗಳ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...