Homeಕರ್ನಾಟಕರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ‘ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ’ ನಡೆಯಲಿದೆ.

- Advertisement -
- Advertisement -

ರೈತ ಆಂದೋಲನದ ಮುಂದೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಯೂರಿದ ಬೆನ್ನಿಗೆ ಪ್ರಬಲ ಕಾರ್ಮಿಕ ಆಂದೋಲನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಕಾರ್ಮಿಕ ಸಂಘಟನೆಗಳ ಒಕ್ಕೂಟವಾದ, “ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ(MASA)” ಅಡಿಯಲ್ಲಿ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ “ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ” ನಡೆಯಲಿದೆ.

“ಕ್ರೌರ್ಯಕ್ಕೆ ಕರುಣೆ ಎಂದು, ಸುಲಿಗೆಗೆ ಸುಧಾರಣೆ ಎಂದು, ದಮನ ದಬ್ಬಾಳಿಕೆಗಳಿಗೆ ದಯಾ ದಾಕ್ಷಿಣ್ಯವೆಂದು, ದೇಶ ಮಾರಾಟವನ್ನು ಅಪ್ಪಟ ದೇಶ ಪ್ರೇಮವೆಂದು ಬಿಂಬಿಸುವ ಮೋದಿ ಆಳ್ವಿಕೆಯಡಿ ನಾವಿದ್ದೇವೆ” ಎಂದು MASA ಹೇಳಿದ್ದು, ವಂಚಕ ಮತ್ತು ಕ್ರೂರ ಆಳುವ ವಿಧಾನ ಈ ದೇಶದ ಜನಸಾಮಾನ್ಯರನ್ನು ವಿಶೇಷವಾಗಿ ದುಡಿವ ಜನರ ಬದುಕನ್ನು ಅವನತಿಯ ಅಂಚಿಗೆ ತಂದು ನಿಲ್ಲಿಸಿದೆ ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

“ಕೃಷಿರಂಗ ಮತ್ತು ರೈತಾಪಿ ವರ್ಗವನ್ನು ಕಾರ್ಪೊರೇಟ್‌ ಕೃಷಿ ಕಂಪನಿಗಳಿಗೆ ಬಲಿಕೊಡುವ ಉದ್ದೇಶದಿ೦ದ ತರಲಾಗಿದ್ದ ಮೂರು ಕೃಷಿ ಕಾಯಿದೆಗಳನ್ನು ಮೋದಿ ಸರ್ಕಾರ ಮಹಾನ್‌ ಕ್ರಾಂತಿ ತರಲಿರುವ ಕಲ್ಯಾಣ ಕಾಯಿದೆಗಳೆಂದು ಬಣಿಸಿತ್ತು. ಆದರೆ ದೇಶದ ರೈತರು ತಮ್ಮ ಅಚಲವಾದ ಧೀರ್ಫಕಾಲಿನ ಸಾಮೂಹಿಕ ಹೋರಾಟದಿಂದ ಈ ಕಾಯಿದೆಗಳ ಬಣ್ಣ ಬಯಲು ಮಾಡಿ ವಿಜಯಿಗಳಾಗಿದ್ದಾರೆ. ಈಗ ಅಂತಹದ್ದೆ ಅತೀ ದೊಡ್ಡ ಸವಾಲು ಭಾರತದ ಕಾರ್ಮಿಕ ವರ್ಗದ ಮುಂದಿದೆ” ಎಂದು MASA ಹೇಳಿದೆ.

“ಶತಮಾನದ ಹೋರಾಟಗಳ ಫಲವಾಗಿ ಬಂದಿದ್ದ 44 ಕೇಂದ್ರ ಕಾರ್ಮಿಕ ಕಾಯಿದೆಗಳನ್ನು ಕಿತ್ತುಹಾಕಿ 4 ಕಾರ್ಮಿಕ ಸಂಹಿತೆಗಳನ್ನು ಒಕ್ಕೂಟ ಸರಕಾರ ಜಾರಿಗೆ ತಂದಿದೆ. ಇಲ್ಲಿಯು ಕಾರ್ಮಿಕ ಕಲ್ಯಾಣದ ಘೋಷಣೆ ಮೊಳಗಿಸಲಾಗುತ್ತಿದೆ. ವಾಸ್ತವದಲ್ಲಿ ಕಾರ್ಮಿಕರಿಗಿದ್ದ ಸಂವಿಧಾನಿಕ ಹಕ್ಕುಗಳನ್ನೆಲ್ಲಾ ಕಸಿದುಕೊಳ್ಳುವ, ಕಾರ್ಮಿಕರು ಖಾಯಂ ಕೆಲಸದ ಬಗ್ಗೆ ವಿಚಾರ ಮಾಡುವುದೇ ಪ್ರಗತಿ ವಿರೋಧಿಯೆಂದು ಸಾರಿ, ‘ಉದ್ಯೋಗಿ-ಉದ್ಯೋಗದಾತ-ಸರ್ಕಾರ’ ಎಂಬ ತ್ರಿಪಕ್ಷೀಯ ಸಂಭಂದದಿಂದ ಸರ್ಕಾರ ನುಣುಚಿಕೊಂಡಿದೆ” ಎಂದು MASA ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

“ಒಟ್ಟಾರೆ ದೇಶದ 50 ಕೋಟಿ ಕಾರ್ಮಿಕರಿಗೆ ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರ ದುಡಿಮೆಗೆ ಇದ್ದ ಕನಿಷ್ಠ ಕಾನೂನಿನ ಸಂರಕ್ಷಣೆಯನ್ನು ತೆಗೆದು ಹಾಕುವ ದುರುದ್ದೇಶ ಈ ಕಾರ್ಮಿಕ ಸಂಹಿತೆಗಳ ಹಿಂದೆ ಅಡಗಿದೆ. ಆದ್ದರಿಂದ ಕೃಷಿ ಕಾಯಿದೆಗಳನ್ನು ಹಿಂಪಡೆದಂತೆ 4 ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲು ಒತ್ತಾಯಿಸಿ ದೇಶವ್ಯಾಪಿ ಪ್ರಬಲ ಕಾರ್ಮಿಕ ಆಂದೋಲನವನ್ನು ಕಟ್ಟಲು ‘ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ’ (Mazoor Adhikar Sangharsha Abhiyan – MASA) ಮುಂದಾಗಿದೆ” ಎಂದು MASA ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಂಗೈ ತುಂಬದ ಅರ್ಧ ಕೂಲಿ ಹಾಗೂ ಮುಂಗೈಗೆ ನಿಲುಕದ ಜೀವನಾಗತ್ಯ ಪದಾರ್ಥಗಳ ಬೆಲೆ ಏರಿಕೆಯ ನಡುವೆ ಕಾರ್ಮಿಕರು ನಜ್ಜುಗುಜ್ಜಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ MASA, “ಕಾರ್ಮಿಕ ಕುಟುಂಬವೊಂದು ಬದುಕುಳಿಯಬೇಕಾದರೆ ಮಾಸಿಕ 25,000 ರೂ. ಕನಿಷ್ಠ ಕೂಲಿ ಬೇಕು. ಕಾಯಂ ಸ್ವರೂಪದ ಕೆಲಸವಿದ್ದಕಡೆ ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ರದ್ದಗೋಳಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ:ಪತ್ರಕರ್ತೆ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಂಬುಲೆನ್ಸ್ ಸೇವೆ

ಕಟ್ಟಡ, ಪೌರಸೇವೆ, ಪ್ಲಾಂಟೇಶನ್‌, ಗಣಿ, ಮನೆಗೆಲಸ ಸೇರಿದಂತೆ ಹಾಗೂ ಅತ್ಯಧಿಕ ಲಾಭ ತಂದುಕೊಡುವ ಸಾರ್ವಜನಿಕ ಉದ್ದಿಮೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ದಿನಗೂಲಿ ಹಾಗೂ ಶಾಸನಬದ್ಧ ಹಕ್ಕುಗಳಾದ ಭವಿಷ್ಯನಿಧಿ, ನೌಕರರ ಸಾಮಾಜಿಕ ವಿಮೆ ಹಾಗೂ ಸಂರಕ್ಷಣೆ ನೀಡಬೇಕು ಎಂದು MASA ಆಗ್ರಹಿಸಿದೆ. ಜೊತೆಗೆ ವಲಸೆ ಕಾರ್ಮಿಕರು ಮತ್ತು ನೇಕಾರ ಕಾರ್ಮಿಕರಿಗೆ ಕಲ್ಯಾಣ ಮಂಡಳಿಗಳನ್ನು ರಚಿಸಬೇಕೆಂದು ಅದು ಒತ್ತಾಯಿಸಿದೆ.

ಭಾರತದ ಸಂವಿಧಾನದ ಅನ್ವಯ ಕೊಡಮಾಡಲಾದ ಕಾರ್ಮಿಕ ಹಕ್ಕುಗಳ ರಕ್ಷಣೆ ಹಾಗೂ ಅವುಗಳ ಅನುಷ್ಠಾನಕ್ಕೆ ಒತ್ತಾಯಿಸಿ ದೇಶದ ವಿವಿಧ ಕಡೆ ನಿರಂತರವಾದ ಹಾಗೂ ಹೋರಾಟವನ್ನು ಮುಂದುವರಿಸುವುದರ ಭಾಗವಾಗಿ ಡಿಸೆಂಬರ್‌ 19,2021 ರಂದು ಬೆಂಗಳೂರಿನಲ್ಲಿ ಸಮಾವೇಶವನ್ನು ಸಂಘಟಸಲಾಗುತ್ತಿದೆ ಎಂದು MASA ಹೇಳಿದೆ.

ಇದನ್ನೂ ಓದಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

ಅಂದು ಬೆಳಿಗ್ಗೆ 1 ಘಂಟೆಗೆ ಬೆಂಗಳೂರು ರೈಲು ನಿಲ್ದಾಣದಿಂದ ಕಾರ್ಮಿಕರು ಮೆರವಣಿಗೆ ಮೂಲಕ ಸಾಗಿ ಫ್ರೀಡಂ ಪಾರ್ಕಿನಲ್ಲಿ ಅಧಿವೇಶನ ನಡೆಸಲಿದ್ದಾರೆ. ಈ ಬಹಿರಂಗ ಸಮಾವೇಶದಲ್ಲಿ ಪೌರ ಕಾರ್ಮಿಕರು, ನೀರು ಸರಬರಾಜು ಕಾರ್ಮಿಕರು, ಅನ್ನಭಾಗ್ಯ ಜಾರಿ ಮಾಡುವ ಹಮಾಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಗಣಿ ಕಾರ್ಮಿಕರು, ನೇಕಾರ ಕಾರ್ಮಿಕರು, ಮನೆಗೆಲಸ ಸೇರಿದಂತೆ ಇನ್ನು ಹಲವಾರು ಕ್ಷೇತ್ರಗಳ ಶ್ರಮಜೀವಿಗಳು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು MASA ಹೇಳಿದೆ.

ಹಿರಿಯ ಹೈಕೋರ್ಟ್‌ ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಎಸ್‌ ಬಾಲನ್‌, ಟಯುಸಿಐನ ರಾಜ್ಯಾಧ್ಯಕ್ಷರಾಗಿರುವ ಆರ್‌. ಮಾನಸಯ್ಯ, ಶ್ರಮಿಕ ಶಕ್ತಿಯ ವರದರಾಜೇಂದ್ರ ಸೇರಿದಂತೆ ಹಲವು ಕಾರ್ಮಿಕ ಮುಖಂಡರು ಭಾಗವಹಿಸಲಿದ್ದು, ಪಶ್ಚಿಮ ಬಂಗಾಳದ ಕಾರ್ಮಿಕ ನೇತಾರರಾದ ಅಮಿತಾಬ್‌ ಬಟ್ಟಾಚಾರ್ಯ, ಮುಂಬೈಯ ಸಂಜಯ ಸಿಂಗ್ವಿ, ತೆಲಂಗಾಣದ ವೆಂಕಟೇಶ್ವರ ರಾವ್‌ ಸೇರಿದಂತೆ ಇನ್ನೂ ಹಲವು ಗಣ್ಯರು ಅಂದು ಸಮಾವೇಶವನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಇದನ್ನೂ ಓದಿ:ಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....