Homeಕರ್ನಾಟಕರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ‘ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ’ ನಡೆಯಲಿದೆ.

- Advertisement -
- Advertisement -

ರೈತ ಆಂದೋಲನದ ಮುಂದೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಯೂರಿದ ಬೆನ್ನಿಗೆ ಪ್ರಬಲ ಕಾರ್ಮಿಕ ಆಂದೋಲನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಕಾರ್ಮಿಕ ಸಂಘಟನೆಗಳ ಒಕ್ಕೂಟವಾದ, “ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ(MASA)” ಅಡಿಯಲ್ಲಿ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ “ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ” ನಡೆಯಲಿದೆ.

“ಕ್ರೌರ್ಯಕ್ಕೆ ಕರುಣೆ ಎಂದು, ಸುಲಿಗೆಗೆ ಸುಧಾರಣೆ ಎಂದು, ದಮನ ದಬ್ಬಾಳಿಕೆಗಳಿಗೆ ದಯಾ ದಾಕ್ಷಿಣ್ಯವೆಂದು, ದೇಶ ಮಾರಾಟವನ್ನು ಅಪ್ಪಟ ದೇಶ ಪ್ರೇಮವೆಂದು ಬಿಂಬಿಸುವ ಮೋದಿ ಆಳ್ವಿಕೆಯಡಿ ನಾವಿದ್ದೇವೆ” ಎಂದು MASA ಹೇಳಿದ್ದು, ವಂಚಕ ಮತ್ತು ಕ್ರೂರ ಆಳುವ ವಿಧಾನ ಈ ದೇಶದ ಜನಸಾಮಾನ್ಯರನ್ನು ವಿಶೇಷವಾಗಿ ದುಡಿವ ಜನರ ಬದುಕನ್ನು ಅವನತಿಯ ಅಂಚಿಗೆ ತಂದು ನಿಲ್ಲಿಸಿದೆ ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

“ಕೃಷಿರಂಗ ಮತ್ತು ರೈತಾಪಿ ವರ್ಗವನ್ನು ಕಾರ್ಪೊರೇಟ್‌ ಕೃಷಿ ಕಂಪನಿಗಳಿಗೆ ಬಲಿಕೊಡುವ ಉದ್ದೇಶದಿ೦ದ ತರಲಾಗಿದ್ದ ಮೂರು ಕೃಷಿ ಕಾಯಿದೆಗಳನ್ನು ಮೋದಿ ಸರ್ಕಾರ ಮಹಾನ್‌ ಕ್ರಾಂತಿ ತರಲಿರುವ ಕಲ್ಯಾಣ ಕಾಯಿದೆಗಳೆಂದು ಬಣಿಸಿತ್ತು. ಆದರೆ ದೇಶದ ರೈತರು ತಮ್ಮ ಅಚಲವಾದ ಧೀರ್ಫಕಾಲಿನ ಸಾಮೂಹಿಕ ಹೋರಾಟದಿಂದ ಈ ಕಾಯಿದೆಗಳ ಬಣ್ಣ ಬಯಲು ಮಾಡಿ ವಿಜಯಿಗಳಾಗಿದ್ದಾರೆ. ಈಗ ಅಂತಹದ್ದೆ ಅತೀ ದೊಡ್ಡ ಸವಾಲು ಭಾರತದ ಕಾರ್ಮಿಕ ವರ್ಗದ ಮುಂದಿದೆ” ಎಂದು MASA ಹೇಳಿದೆ.

“ಶತಮಾನದ ಹೋರಾಟಗಳ ಫಲವಾಗಿ ಬಂದಿದ್ದ 44 ಕೇಂದ್ರ ಕಾರ್ಮಿಕ ಕಾಯಿದೆಗಳನ್ನು ಕಿತ್ತುಹಾಕಿ 4 ಕಾರ್ಮಿಕ ಸಂಹಿತೆಗಳನ್ನು ಒಕ್ಕೂಟ ಸರಕಾರ ಜಾರಿಗೆ ತಂದಿದೆ. ಇಲ್ಲಿಯು ಕಾರ್ಮಿಕ ಕಲ್ಯಾಣದ ಘೋಷಣೆ ಮೊಳಗಿಸಲಾಗುತ್ತಿದೆ. ವಾಸ್ತವದಲ್ಲಿ ಕಾರ್ಮಿಕರಿಗಿದ್ದ ಸಂವಿಧಾನಿಕ ಹಕ್ಕುಗಳನ್ನೆಲ್ಲಾ ಕಸಿದುಕೊಳ್ಳುವ, ಕಾರ್ಮಿಕರು ಖಾಯಂ ಕೆಲಸದ ಬಗ್ಗೆ ವಿಚಾರ ಮಾಡುವುದೇ ಪ್ರಗತಿ ವಿರೋಧಿಯೆಂದು ಸಾರಿ, ‘ಉದ್ಯೋಗಿ-ಉದ್ಯೋಗದಾತ-ಸರ್ಕಾರ’ ಎಂಬ ತ್ರಿಪಕ್ಷೀಯ ಸಂಭಂದದಿಂದ ಸರ್ಕಾರ ನುಣುಚಿಕೊಂಡಿದೆ” ಎಂದು MASA ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

“ಒಟ್ಟಾರೆ ದೇಶದ 50 ಕೋಟಿ ಕಾರ್ಮಿಕರಿಗೆ ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರ ದುಡಿಮೆಗೆ ಇದ್ದ ಕನಿಷ್ಠ ಕಾನೂನಿನ ಸಂರಕ್ಷಣೆಯನ್ನು ತೆಗೆದು ಹಾಕುವ ದುರುದ್ದೇಶ ಈ ಕಾರ್ಮಿಕ ಸಂಹಿತೆಗಳ ಹಿಂದೆ ಅಡಗಿದೆ. ಆದ್ದರಿಂದ ಕೃಷಿ ಕಾಯಿದೆಗಳನ್ನು ಹಿಂಪಡೆದಂತೆ 4 ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲು ಒತ್ತಾಯಿಸಿ ದೇಶವ್ಯಾಪಿ ಪ್ರಬಲ ಕಾರ್ಮಿಕ ಆಂದೋಲನವನ್ನು ಕಟ್ಟಲು ‘ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ’ (Mazoor Adhikar Sangharsha Abhiyan – MASA) ಮುಂದಾಗಿದೆ” ಎಂದು MASA ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಂಗೈ ತುಂಬದ ಅರ್ಧ ಕೂಲಿ ಹಾಗೂ ಮುಂಗೈಗೆ ನಿಲುಕದ ಜೀವನಾಗತ್ಯ ಪದಾರ್ಥಗಳ ಬೆಲೆ ಏರಿಕೆಯ ನಡುವೆ ಕಾರ್ಮಿಕರು ನಜ್ಜುಗುಜ್ಜಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ MASA, “ಕಾರ್ಮಿಕ ಕುಟುಂಬವೊಂದು ಬದುಕುಳಿಯಬೇಕಾದರೆ ಮಾಸಿಕ 25,000 ರೂ. ಕನಿಷ್ಠ ಕೂಲಿ ಬೇಕು. ಕಾಯಂ ಸ್ವರೂಪದ ಕೆಲಸವಿದ್ದಕಡೆ ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ರದ್ದಗೋಳಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ:ಪತ್ರಕರ್ತೆ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಂಬುಲೆನ್ಸ್ ಸೇವೆ

ಕಟ್ಟಡ, ಪೌರಸೇವೆ, ಪ್ಲಾಂಟೇಶನ್‌, ಗಣಿ, ಮನೆಗೆಲಸ ಸೇರಿದಂತೆ ಹಾಗೂ ಅತ್ಯಧಿಕ ಲಾಭ ತಂದುಕೊಡುವ ಸಾರ್ವಜನಿಕ ಉದ್ದಿಮೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ದಿನಗೂಲಿ ಹಾಗೂ ಶಾಸನಬದ್ಧ ಹಕ್ಕುಗಳಾದ ಭವಿಷ್ಯನಿಧಿ, ನೌಕರರ ಸಾಮಾಜಿಕ ವಿಮೆ ಹಾಗೂ ಸಂರಕ್ಷಣೆ ನೀಡಬೇಕು ಎಂದು MASA ಆಗ್ರಹಿಸಿದೆ. ಜೊತೆಗೆ ವಲಸೆ ಕಾರ್ಮಿಕರು ಮತ್ತು ನೇಕಾರ ಕಾರ್ಮಿಕರಿಗೆ ಕಲ್ಯಾಣ ಮಂಡಳಿಗಳನ್ನು ರಚಿಸಬೇಕೆಂದು ಅದು ಒತ್ತಾಯಿಸಿದೆ.

ಭಾರತದ ಸಂವಿಧಾನದ ಅನ್ವಯ ಕೊಡಮಾಡಲಾದ ಕಾರ್ಮಿಕ ಹಕ್ಕುಗಳ ರಕ್ಷಣೆ ಹಾಗೂ ಅವುಗಳ ಅನುಷ್ಠಾನಕ್ಕೆ ಒತ್ತಾಯಿಸಿ ದೇಶದ ವಿವಿಧ ಕಡೆ ನಿರಂತರವಾದ ಹಾಗೂ ಹೋರಾಟವನ್ನು ಮುಂದುವರಿಸುವುದರ ಭಾಗವಾಗಿ ಡಿಸೆಂಬರ್‌ 19,2021 ರಂದು ಬೆಂಗಳೂರಿನಲ್ಲಿ ಸಮಾವೇಶವನ್ನು ಸಂಘಟಸಲಾಗುತ್ತಿದೆ ಎಂದು MASA ಹೇಳಿದೆ.

ಇದನ್ನೂ ಓದಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

ಅಂದು ಬೆಳಿಗ್ಗೆ 1 ಘಂಟೆಗೆ ಬೆಂಗಳೂರು ರೈಲು ನಿಲ್ದಾಣದಿಂದ ಕಾರ್ಮಿಕರು ಮೆರವಣಿಗೆ ಮೂಲಕ ಸಾಗಿ ಫ್ರೀಡಂ ಪಾರ್ಕಿನಲ್ಲಿ ಅಧಿವೇಶನ ನಡೆಸಲಿದ್ದಾರೆ. ಈ ಬಹಿರಂಗ ಸಮಾವೇಶದಲ್ಲಿ ಪೌರ ಕಾರ್ಮಿಕರು, ನೀರು ಸರಬರಾಜು ಕಾರ್ಮಿಕರು, ಅನ್ನಭಾಗ್ಯ ಜಾರಿ ಮಾಡುವ ಹಮಾಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಗಣಿ ಕಾರ್ಮಿಕರು, ನೇಕಾರ ಕಾರ್ಮಿಕರು, ಮನೆಗೆಲಸ ಸೇರಿದಂತೆ ಇನ್ನು ಹಲವಾರು ಕ್ಷೇತ್ರಗಳ ಶ್ರಮಜೀವಿಗಳು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು MASA ಹೇಳಿದೆ.

ಹಿರಿಯ ಹೈಕೋರ್ಟ್‌ ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಎಸ್‌ ಬಾಲನ್‌, ಟಯುಸಿಐನ ರಾಜ್ಯಾಧ್ಯಕ್ಷರಾಗಿರುವ ಆರ್‌. ಮಾನಸಯ್ಯ, ಶ್ರಮಿಕ ಶಕ್ತಿಯ ವರದರಾಜೇಂದ್ರ ಸೇರಿದಂತೆ ಹಲವು ಕಾರ್ಮಿಕ ಮುಖಂಡರು ಭಾಗವಹಿಸಲಿದ್ದು, ಪಶ್ಚಿಮ ಬಂಗಾಳದ ಕಾರ್ಮಿಕ ನೇತಾರರಾದ ಅಮಿತಾಬ್‌ ಬಟ್ಟಾಚಾರ್ಯ, ಮುಂಬೈಯ ಸಂಜಯ ಸಿಂಗ್ವಿ, ತೆಲಂಗಾಣದ ವೆಂಕಟೇಶ್ವರ ರಾವ್‌ ಸೇರಿದಂತೆ ಇನ್ನೂ ಹಲವು ಗಣ್ಯರು ಅಂದು ಸಮಾವೇಶವನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಇದನ್ನೂ ಓದಿ:ಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...