Homeಕರ್ನಾಟಕರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ‘ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ’ ನಡೆಯಲಿದೆ.

- Advertisement -
- Advertisement -

ರೈತ ಆಂದೋಲನದ ಮುಂದೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಯೂರಿದ ಬೆನ್ನಿಗೆ ಪ್ರಬಲ ಕಾರ್ಮಿಕ ಆಂದೋಲನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಕಾರ್ಮಿಕ ಸಂಘಟನೆಗಳ ಒಕ್ಕೂಟವಾದ, “ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ(MASA)” ಅಡಿಯಲ್ಲಿ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ “ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ” ನಡೆಯಲಿದೆ.

“ಕ್ರೌರ್ಯಕ್ಕೆ ಕರುಣೆ ಎಂದು, ಸುಲಿಗೆಗೆ ಸುಧಾರಣೆ ಎಂದು, ದಮನ ದಬ್ಬಾಳಿಕೆಗಳಿಗೆ ದಯಾ ದಾಕ್ಷಿಣ್ಯವೆಂದು, ದೇಶ ಮಾರಾಟವನ್ನು ಅಪ್ಪಟ ದೇಶ ಪ್ರೇಮವೆಂದು ಬಿಂಬಿಸುವ ಮೋದಿ ಆಳ್ವಿಕೆಯಡಿ ನಾವಿದ್ದೇವೆ” ಎಂದು MASA ಹೇಳಿದ್ದು, ವಂಚಕ ಮತ್ತು ಕ್ರೂರ ಆಳುವ ವಿಧಾನ ಈ ದೇಶದ ಜನಸಾಮಾನ್ಯರನ್ನು ವಿಶೇಷವಾಗಿ ದುಡಿವ ಜನರ ಬದುಕನ್ನು ಅವನತಿಯ ಅಂಚಿಗೆ ತಂದು ನಿಲ್ಲಿಸಿದೆ ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

“ಕೃಷಿರಂಗ ಮತ್ತು ರೈತಾಪಿ ವರ್ಗವನ್ನು ಕಾರ್ಪೊರೇಟ್‌ ಕೃಷಿ ಕಂಪನಿಗಳಿಗೆ ಬಲಿಕೊಡುವ ಉದ್ದೇಶದಿ೦ದ ತರಲಾಗಿದ್ದ ಮೂರು ಕೃಷಿ ಕಾಯಿದೆಗಳನ್ನು ಮೋದಿ ಸರ್ಕಾರ ಮಹಾನ್‌ ಕ್ರಾಂತಿ ತರಲಿರುವ ಕಲ್ಯಾಣ ಕಾಯಿದೆಗಳೆಂದು ಬಣಿಸಿತ್ತು. ಆದರೆ ದೇಶದ ರೈತರು ತಮ್ಮ ಅಚಲವಾದ ಧೀರ್ಫಕಾಲಿನ ಸಾಮೂಹಿಕ ಹೋರಾಟದಿಂದ ಈ ಕಾಯಿದೆಗಳ ಬಣ್ಣ ಬಯಲು ಮಾಡಿ ವಿಜಯಿಗಳಾಗಿದ್ದಾರೆ. ಈಗ ಅಂತಹದ್ದೆ ಅತೀ ದೊಡ್ಡ ಸವಾಲು ಭಾರತದ ಕಾರ್ಮಿಕ ವರ್ಗದ ಮುಂದಿದೆ” ಎಂದು MASA ಹೇಳಿದೆ.

“ಶತಮಾನದ ಹೋರಾಟಗಳ ಫಲವಾಗಿ ಬಂದಿದ್ದ 44 ಕೇಂದ್ರ ಕಾರ್ಮಿಕ ಕಾಯಿದೆಗಳನ್ನು ಕಿತ್ತುಹಾಕಿ 4 ಕಾರ್ಮಿಕ ಸಂಹಿತೆಗಳನ್ನು ಒಕ್ಕೂಟ ಸರಕಾರ ಜಾರಿಗೆ ತಂದಿದೆ. ಇಲ್ಲಿಯು ಕಾರ್ಮಿಕ ಕಲ್ಯಾಣದ ಘೋಷಣೆ ಮೊಳಗಿಸಲಾಗುತ್ತಿದೆ. ವಾಸ್ತವದಲ್ಲಿ ಕಾರ್ಮಿಕರಿಗಿದ್ದ ಸಂವಿಧಾನಿಕ ಹಕ್ಕುಗಳನ್ನೆಲ್ಲಾ ಕಸಿದುಕೊಳ್ಳುವ, ಕಾರ್ಮಿಕರು ಖಾಯಂ ಕೆಲಸದ ಬಗ್ಗೆ ವಿಚಾರ ಮಾಡುವುದೇ ಪ್ರಗತಿ ವಿರೋಧಿಯೆಂದು ಸಾರಿ, ‘ಉದ್ಯೋಗಿ-ಉದ್ಯೋಗದಾತ-ಸರ್ಕಾರ’ ಎಂಬ ತ್ರಿಪಕ್ಷೀಯ ಸಂಭಂದದಿಂದ ಸರ್ಕಾರ ನುಣುಚಿಕೊಂಡಿದೆ” ಎಂದು MASA ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

“ಒಟ್ಟಾರೆ ದೇಶದ 50 ಕೋಟಿ ಕಾರ್ಮಿಕರಿಗೆ ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರ ದುಡಿಮೆಗೆ ಇದ್ದ ಕನಿಷ್ಠ ಕಾನೂನಿನ ಸಂರಕ್ಷಣೆಯನ್ನು ತೆಗೆದು ಹಾಕುವ ದುರುದ್ದೇಶ ಈ ಕಾರ್ಮಿಕ ಸಂಹಿತೆಗಳ ಹಿಂದೆ ಅಡಗಿದೆ. ಆದ್ದರಿಂದ ಕೃಷಿ ಕಾಯಿದೆಗಳನ್ನು ಹಿಂಪಡೆದಂತೆ 4 ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲು ಒತ್ತಾಯಿಸಿ ದೇಶವ್ಯಾಪಿ ಪ್ರಬಲ ಕಾರ್ಮಿಕ ಆಂದೋಲನವನ್ನು ಕಟ್ಟಲು ‘ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ’ (Mazoor Adhikar Sangharsha Abhiyan – MASA) ಮುಂದಾಗಿದೆ” ಎಂದು MASA ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಂಗೈ ತುಂಬದ ಅರ್ಧ ಕೂಲಿ ಹಾಗೂ ಮುಂಗೈಗೆ ನಿಲುಕದ ಜೀವನಾಗತ್ಯ ಪದಾರ್ಥಗಳ ಬೆಲೆ ಏರಿಕೆಯ ನಡುವೆ ಕಾರ್ಮಿಕರು ನಜ್ಜುಗುಜ್ಜಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ MASA, “ಕಾರ್ಮಿಕ ಕುಟುಂಬವೊಂದು ಬದುಕುಳಿಯಬೇಕಾದರೆ ಮಾಸಿಕ 25,000 ರೂ. ಕನಿಷ್ಠ ಕೂಲಿ ಬೇಕು. ಕಾಯಂ ಸ್ವರೂಪದ ಕೆಲಸವಿದ್ದಕಡೆ ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ರದ್ದಗೋಳಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ:ಪತ್ರಕರ್ತೆ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಂಬುಲೆನ್ಸ್ ಸೇವೆ

ಕಟ್ಟಡ, ಪೌರಸೇವೆ, ಪ್ಲಾಂಟೇಶನ್‌, ಗಣಿ, ಮನೆಗೆಲಸ ಸೇರಿದಂತೆ ಹಾಗೂ ಅತ್ಯಧಿಕ ಲಾಭ ತಂದುಕೊಡುವ ಸಾರ್ವಜನಿಕ ಉದ್ದಿಮೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ದಿನಗೂಲಿ ಹಾಗೂ ಶಾಸನಬದ್ಧ ಹಕ್ಕುಗಳಾದ ಭವಿಷ್ಯನಿಧಿ, ನೌಕರರ ಸಾಮಾಜಿಕ ವಿಮೆ ಹಾಗೂ ಸಂರಕ್ಷಣೆ ನೀಡಬೇಕು ಎಂದು MASA ಆಗ್ರಹಿಸಿದೆ. ಜೊತೆಗೆ ವಲಸೆ ಕಾರ್ಮಿಕರು ಮತ್ತು ನೇಕಾರ ಕಾರ್ಮಿಕರಿಗೆ ಕಲ್ಯಾಣ ಮಂಡಳಿಗಳನ್ನು ರಚಿಸಬೇಕೆಂದು ಅದು ಒತ್ತಾಯಿಸಿದೆ.

ಭಾರತದ ಸಂವಿಧಾನದ ಅನ್ವಯ ಕೊಡಮಾಡಲಾದ ಕಾರ್ಮಿಕ ಹಕ್ಕುಗಳ ರಕ್ಷಣೆ ಹಾಗೂ ಅವುಗಳ ಅನುಷ್ಠಾನಕ್ಕೆ ಒತ್ತಾಯಿಸಿ ದೇಶದ ವಿವಿಧ ಕಡೆ ನಿರಂತರವಾದ ಹಾಗೂ ಹೋರಾಟವನ್ನು ಮುಂದುವರಿಸುವುದರ ಭಾಗವಾಗಿ ಡಿಸೆಂಬರ್‌ 19,2021 ರಂದು ಬೆಂಗಳೂರಿನಲ್ಲಿ ಸಮಾವೇಶವನ್ನು ಸಂಘಟಸಲಾಗುತ್ತಿದೆ ಎಂದು MASA ಹೇಳಿದೆ.

ಇದನ್ನೂ ಓದಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

ಅಂದು ಬೆಳಿಗ್ಗೆ 1 ಘಂಟೆಗೆ ಬೆಂಗಳೂರು ರೈಲು ನಿಲ್ದಾಣದಿಂದ ಕಾರ್ಮಿಕರು ಮೆರವಣಿಗೆ ಮೂಲಕ ಸಾಗಿ ಫ್ರೀಡಂ ಪಾರ್ಕಿನಲ್ಲಿ ಅಧಿವೇಶನ ನಡೆಸಲಿದ್ದಾರೆ. ಈ ಬಹಿರಂಗ ಸಮಾವೇಶದಲ್ಲಿ ಪೌರ ಕಾರ್ಮಿಕರು, ನೀರು ಸರಬರಾಜು ಕಾರ್ಮಿಕರು, ಅನ್ನಭಾಗ್ಯ ಜಾರಿ ಮಾಡುವ ಹಮಾಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಗಣಿ ಕಾರ್ಮಿಕರು, ನೇಕಾರ ಕಾರ್ಮಿಕರು, ಮನೆಗೆಲಸ ಸೇರಿದಂತೆ ಇನ್ನು ಹಲವಾರು ಕ್ಷೇತ್ರಗಳ ಶ್ರಮಜೀವಿಗಳು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು MASA ಹೇಳಿದೆ.

ಹಿರಿಯ ಹೈಕೋರ್ಟ್‌ ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಎಸ್‌ ಬಾಲನ್‌, ಟಯುಸಿಐನ ರಾಜ್ಯಾಧ್ಯಕ್ಷರಾಗಿರುವ ಆರ್‌. ಮಾನಸಯ್ಯ, ಶ್ರಮಿಕ ಶಕ್ತಿಯ ವರದರಾಜೇಂದ್ರ ಸೇರಿದಂತೆ ಹಲವು ಕಾರ್ಮಿಕ ಮುಖಂಡರು ಭಾಗವಹಿಸಲಿದ್ದು, ಪಶ್ಚಿಮ ಬಂಗಾಳದ ಕಾರ್ಮಿಕ ನೇತಾರರಾದ ಅಮಿತಾಬ್‌ ಬಟ್ಟಾಚಾರ್ಯ, ಮುಂಬೈಯ ಸಂಜಯ ಸಿಂಗ್ವಿ, ತೆಲಂಗಾಣದ ವೆಂಕಟೇಶ್ವರ ರಾವ್‌ ಸೇರಿದಂತೆ ಇನ್ನೂ ಹಲವು ಗಣ್ಯರು ಅಂದು ಸಮಾವೇಶವನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಇದನ್ನೂ ಓದಿ:ಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...