Homeಕರ್ನಾಟಕರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ‘ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ’ ನಡೆಯಲಿದೆ.

- Advertisement -
- Advertisement -

ರೈತ ಆಂದೋಲನದ ಮುಂದೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಯೂರಿದ ಬೆನ್ನಿಗೆ ಪ್ರಬಲ ಕಾರ್ಮಿಕ ಆಂದೋಲನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಕಾರ್ಮಿಕ ಸಂಘಟನೆಗಳ ಒಕ್ಕೂಟವಾದ, “ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ(MASA)” ಅಡಿಯಲ್ಲಿ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ “ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ” ನಡೆಯಲಿದೆ.

“ಕ್ರೌರ್ಯಕ್ಕೆ ಕರುಣೆ ಎಂದು, ಸುಲಿಗೆಗೆ ಸುಧಾರಣೆ ಎಂದು, ದಮನ ದಬ್ಬಾಳಿಕೆಗಳಿಗೆ ದಯಾ ದಾಕ್ಷಿಣ್ಯವೆಂದು, ದೇಶ ಮಾರಾಟವನ್ನು ಅಪ್ಪಟ ದೇಶ ಪ್ರೇಮವೆಂದು ಬಿಂಬಿಸುವ ಮೋದಿ ಆಳ್ವಿಕೆಯಡಿ ನಾವಿದ್ದೇವೆ” ಎಂದು MASA ಹೇಳಿದ್ದು, ವಂಚಕ ಮತ್ತು ಕ್ರೂರ ಆಳುವ ವಿಧಾನ ಈ ದೇಶದ ಜನಸಾಮಾನ್ಯರನ್ನು ವಿಶೇಷವಾಗಿ ದುಡಿವ ಜನರ ಬದುಕನ್ನು ಅವನತಿಯ ಅಂಚಿಗೆ ತಂದು ನಿಲ್ಲಿಸಿದೆ ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

“ಕೃಷಿರಂಗ ಮತ್ತು ರೈತಾಪಿ ವರ್ಗವನ್ನು ಕಾರ್ಪೊರೇಟ್‌ ಕೃಷಿ ಕಂಪನಿಗಳಿಗೆ ಬಲಿಕೊಡುವ ಉದ್ದೇಶದಿ೦ದ ತರಲಾಗಿದ್ದ ಮೂರು ಕೃಷಿ ಕಾಯಿದೆಗಳನ್ನು ಮೋದಿ ಸರ್ಕಾರ ಮಹಾನ್‌ ಕ್ರಾಂತಿ ತರಲಿರುವ ಕಲ್ಯಾಣ ಕಾಯಿದೆಗಳೆಂದು ಬಣಿಸಿತ್ತು. ಆದರೆ ದೇಶದ ರೈತರು ತಮ್ಮ ಅಚಲವಾದ ಧೀರ್ಫಕಾಲಿನ ಸಾಮೂಹಿಕ ಹೋರಾಟದಿಂದ ಈ ಕಾಯಿದೆಗಳ ಬಣ್ಣ ಬಯಲು ಮಾಡಿ ವಿಜಯಿಗಳಾಗಿದ್ದಾರೆ. ಈಗ ಅಂತಹದ್ದೆ ಅತೀ ದೊಡ್ಡ ಸವಾಲು ಭಾರತದ ಕಾರ್ಮಿಕ ವರ್ಗದ ಮುಂದಿದೆ” ಎಂದು MASA ಹೇಳಿದೆ.

“ಶತಮಾನದ ಹೋರಾಟಗಳ ಫಲವಾಗಿ ಬಂದಿದ್ದ 44 ಕೇಂದ್ರ ಕಾರ್ಮಿಕ ಕಾಯಿದೆಗಳನ್ನು ಕಿತ್ತುಹಾಕಿ 4 ಕಾರ್ಮಿಕ ಸಂಹಿತೆಗಳನ್ನು ಒಕ್ಕೂಟ ಸರಕಾರ ಜಾರಿಗೆ ತಂದಿದೆ. ಇಲ್ಲಿಯು ಕಾರ್ಮಿಕ ಕಲ್ಯಾಣದ ಘೋಷಣೆ ಮೊಳಗಿಸಲಾಗುತ್ತಿದೆ. ವಾಸ್ತವದಲ್ಲಿ ಕಾರ್ಮಿಕರಿಗಿದ್ದ ಸಂವಿಧಾನಿಕ ಹಕ್ಕುಗಳನ್ನೆಲ್ಲಾ ಕಸಿದುಕೊಳ್ಳುವ, ಕಾರ್ಮಿಕರು ಖಾಯಂ ಕೆಲಸದ ಬಗ್ಗೆ ವಿಚಾರ ಮಾಡುವುದೇ ಪ್ರಗತಿ ವಿರೋಧಿಯೆಂದು ಸಾರಿ, ‘ಉದ್ಯೋಗಿ-ಉದ್ಯೋಗದಾತ-ಸರ್ಕಾರ’ ಎಂಬ ತ್ರಿಪಕ್ಷೀಯ ಸಂಭಂದದಿಂದ ಸರ್ಕಾರ ನುಣುಚಿಕೊಂಡಿದೆ” ಎಂದು MASA ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

“ಒಟ್ಟಾರೆ ದೇಶದ 50 ಕೋಟಿ ಕಾರ್ಮಿಕರಿಗೆ ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರ ದುಡಿಮೆಗೆ ಇದ್ದ ಕನಿಷ್ಠ ಕಾನೂನಿನ ಸಂರಕ್ಷಣೆಯನ್ನು ತೆಗೆದು ಹಾಕುವ ದುರುದ್ದೇಶ ಈ ಕಾರ್ಮಿಕ ಸಂಹಿತೆಗಳ ಹಿಂದೆ ಅಡಗಿದೆ. ಆದ್ದರಿಂದ ಕೃಷಿ ಕಾಯಿದೆಗಳನ್ನು ಹಿಂಪಡೆದಂತೆ 4 ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲು ಒತ್ತಾಯಿಸಿ ದೇಶವ್ಯಾಪಿ ಪ್ರಬಲ ಕಾರ್ಮಿಕ ಆಂದೋಲನವನ್ನು ಕಟ್ಟಲು ‘ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ’ (Mazoor Adhikar Sangharsha Abhiyan – MASA) ಮುಂದಾಗಿದೆ” ಎಂದು MASA ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಂಗೈ ತುಂಬದ ಅರ್ಧ ಕೂಲಿ ಹಾಗೂ ಮುಂಗೈಗೆ ನಿಲುಕದ ಜೀವನಾಗತ್ಯ ಪದಾರ್ಥಗಳ ಬೆಲೆ ಏರಿಕೆಯ ನಡುವೆ ಕಾರ್ಮಿಕರು ನಜ್ಜುಗುಜ್ಜಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ MASA, “ಕಾರ್ಮಿಕ ಕುಟುಂಬವೊಂದು ಬದುಕುಳಿಯಬೇಕಾದರೆ ಮಾಸಿಕ 25,000 ರೂ. ಕನಿಷ್ಠ ಕೂಲಿ ಬೇಕು. ಕಾಯಂ ಸ್ವರೂಪದ ಕೆಲಸವಿದ್ದಕಡೆ ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ರದ್ದಗೋಳಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ:ಪತ್ರಕರ್ತೆ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಂಬುಲೆನ್ಸ್ ಸೇವೆ

ಕಟ್ಟಡ, ಪೌರಸೇವೆ, ಪ್ಲಾಂಟೇಶನ್‌, ಗಣಿ, ಮನೆಗೆಲಸ ಸೇರಿದಂತೆ ಹಾಗೂ ಅತ್ಯಧಿಕ ಲಾಭ ತಂದುಕೊಡುವ ಸಾರ್ವಜನಿಕ ಉದ್ದಿಮೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ದಿನಗೂಲಿ ಹಾಗೂ ಶಾಸನಬದ್ಧ ಹಕ್ಕುಗಳಾದ ಭವಿಷ್ಯನಿಧಿ, ನೌಕರರ ಸಾಮಾಜಿಕ ವಿಮೆ ಹಾಗೂ ಸಂರಕ್ಷಣೆ ನೀಡಬೇಕು ಎಂದು MASA ಆಗ್ರಹಿಸಿದೆ. ಜೊತೆಗೆ ವಲಸೆ ಕಾರ್ಮಿಕರು ಮತ್ತು ನೇಕಾರ ಕಾರ್ಮಿಕರಿಗೆ ಕಲ್ಯಾಣ ಮಂಡಳಿಗಳನ್ನು ರಚಿಸಬೇಕೆಂದು ಅದು ಒತ್ತಾಯಿಸಿದೆ.

ಭಾರತದ ಸಂವಿಧಾನದ ಅನ್ವಯ ಕೊಡಮಾಡಲಾದ ಕಾರ್ಮಿಕ ಹಕ್ಕುಗಳ ರಕ್ಷಣೆ ಹಾಗೂ ಅವುಗಳ ಅನುಷ್ಠಾನಕ್ಕೆ ಒತ್ತಾಯಿಸಿ ದೇಶದ ವಿವಿಧ ಕಡೆ ನಿರಂತರವಾದ ಹಾಗೂ ಹೋರಾಟವನ್ನು ಮುಂದುವರಿಸುವುದರ ಭಾಗವಾಗಿ ಡಿಸೆಂಬರ್‌ 19,2021 ರಂದು ಬೆಂಗಳೂರಿನಲ್ಲಿ ಸಮಾವೇಶವನ್ನು ಸಂಘಟಸಲಾಗುತ್ತಿದೆ ಎಂದು MASA ಹೇಳಿದೆ.

ಇದನ್ನೂ ಓದಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

ಅಂದು ಬೆಳಿಗ್ಗೆ 1 ಘಂಟೆಗೆ ಬೆಂಗಳೂರು ರೈಲು ನಿಲ್ದಾಣದಿಂದ ಕಾರ್ಮಿಕರು ಮೆರವಣಿಗೆ ಮೂಲಕ ಸಾಗಿ ಫ್ರೀಡಂ ಪಾರ್ಕಿನಲ್ಲಿ ಅಧಿವೇಶನ ನಡೆಸಲಿದ್ದಾರೆ. ಈ ಬಹಿರಂಗ ಸಮಾವೇಶದಲ್ಲಿ ಪೌರ ಕಾರ್ಮಿಕರು, ನೀರು ಸರಬರಾಜು ಕಾರ್ಮಿಕರು, ಅನ್ನಭಾಗ್ಯ ಜಾರಿ ಮಾಡುವ ಹಮಾಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಗಣಿ ಕಾರ್ಮಿಕರು, ನೇಕಾರ ಕಾರ್ಮಿಕರು, ಮನೆಗೆಲಸ ಸೇರಿದಂತೆ ಇನ್ನು ಹಲವಾರು ಕ್ಷೇತ್ರಗಳ ಶ್ರಮಜೀವಿಗಳು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು MASA ಹೇಳಿದೆ.

ಹಿರಿಯ ಹೈಕೋರ್ಟ್‌ ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಎಸ್‌ ಬಾಲನ್‌, ಟಯುಸಿಐನ ರಾಜ್ಯಾಧ್ಯಕ್ಷರಾಗಿರುವ ಆರ್‌. ಮಾನಸಯ್ಯ, ಶ್ರಮಿಕ ಶಕ್ತಿಯ ವರದರಾಜೇಂದ್ರ ಸೇರಿದಂತೆ ಹಲವು ಕಾರ್ಮಿಕ ಮುಖಂಡರು ಭಾಗವಹಿಸಲಿದ್ದು, ಪಶ್ಚಿಮ ಬಂಗಾಳದ ಕಾರ್ಮಿಕ ನೇತಾರರಾದ ಅಮಿತಾಬ್‌ ಬಟ್ಟಾಚಾರ್ಯ, ಮುಂಬೈಯ ಸಂಜಯ ಸಿಂಗ್ವಿ, ತೆಲಂಗಾಣದ ವೆಂಕಟೇಶ್ವರ ರಾವ್‌ ಸೇರಿದಂತೆ ಇನ್ನೂ ಹಲವು ಗಣ್ಯರು ಅಂದು ಸಮಾವೇಶವನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಇದನ್ನೂ ಓದಿ:ಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...