Homeಕರ್ನಾಟಕರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ‘ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ’ ನಡೆಯಲಿದೆ.

- Advertisement -
- Advertisement -

ರೈತ ಆಂದೋಲನದ ಮುಂದೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಯೂರಿದ ಬೆನ್ನಿಗೆ ಪ್ರಬಲ ಕಾರ್ಮಿಕ ಆಂದೋಲನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಕಾರ್ಮಿಕ ಸಂಘಟನೆಗಳ ಒಕ್ಕೂಟವಾದ, “ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ(MASA)” ಅಡಿಯಲ್ಲಿ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ “ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ” ನಡೆಯಲಿದೆ.

“ಕ್ರೌರ್ಯಕ್ಕೆ ಕರುಣೆ ಎಂದು, ಸುಲಿಗೆಗೆ ಸುಧಾರಣೆ ಎಂದು, ದಮನ ದಬ್ಬಾಳಿಕೆಗಳಿಗೆ ದಯಾ ದಾಕ್ಷಿಣ್ಯವೆಂದು, ದೇಶ ಮಾರಾಟವನ್ನು ಅಪ್ಪಟ ದೇಶ ಪ್ರೇಮವೆಂದು ಬಿಂಬಿಸುವ ಮೋದಿ ಆಳ್ವಿಕೆಯಡಿ ನಾವಿದ್ದೇವೆ” ಎಂದು MASA ಹೇಳಿದ್ದು, ವಂಚಕ ಮತ್ತು ಕ್ರೂರ ಆಳುವ ವಿಧಾನ ಈ ದೇಶದ ಜನಸಾಮಾನ್ಯರನ್ನು ವಿಶೇಷವಾಗಿ ದುಡಿವ ಜನರ ಬದುಕನ್ನು ಅವನತಿಯ ಅಂಚಿಗೆ ತಂದು ನಿಲ್ಲಿಸಿದೆ ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

“ಕೃಷಿರಂಗ ಮತ್ತು ರೈತಾಪಿ ವರ್ಗವನ್ನು ಕಾರ್ಪೊರೇಟ್‌ ಕೃಷಿ ಕಂಪನಿಗಳಿಗೆ ಬಲಿಕೊಡುವ ಉದ್ದೇಶದಿ೦ದ ತರಲಾಗಿದ್ದ ಮೂರು ಕೃಷಿ ಕಾಯಿದೆಗಳನ್ನು ಮೋದಿ ಸರ್ಕಾರ ಮಹಾನ್‌ ಕ್ರಾಂತಿ ತರಲಿರುವ ಕಲ್ಯಾಣ ಕಾಯಿದೆಗಳೆಂದು ಬಣಿಸಿತ್ತು. ಆದರೆ ದೇಶದ ರೈತರು ತಮ್ಮ ಅಚಲವಾದ ಧೀರ್ಫಕಾಲಿನ ಸಾಮೂಹಿಕ ಹೋರಾಟದಿಂದ ಈ ಕಾಯಿದೆಗಳ ಬಣ್ಣ ಬಯಲು ಮಾಡಿ ವಿಜಯಿಗಳಾಗಿದ್ದಾರೆ. ಈಗ ಅಂತಹದ್ದೆ ಅತೀ ದೊಡ್ಡ ಸವಾಲು ಭಾರತದ ಕಾರ್ಮಿಕ ವರ್ಗದ ಮುಂದಿದೆ” ಎಂದು MASA ಹೇಳಿದೆ.

“ಶತಮಾನದ ಹೋರಾಟಗಳ ಫಲವಾಗಿ ಬಂದಿದ್ದ 44 ಕೇಂದ್ರ ಕಾರ್ಮಿಕ ಕಾಯಿದೆಗಳನ್ನು ಕಿತ್ತುಹಾಕಿ 4 ಕಾರ್ಮಿಕ ಸಂಹಿತೆಗಳನ್ನು ಒಕ್ಕೂಟ ಸರಕಾರ ಜಾರಿಗೆ ತಂದಿದೆ. ಇಲ್ಲಿಯು ಕಾರ್ಮಿಕ ಕಲ್ಯಾಣದ ಘೋಷಣೆ ಮೊಳಗಿಸಲಾಗುತ್ತಿದೆ. ವಾಸ್ತವದಲ್ಲಿ ಕಾರ್ಮಿಕರಿಗಿದ್ದ ಸಂವಿಧಾನಿಕ ಹಕ್ಕುಗಳನ್ನೆಲ್ಲಾ ಕಸಿದುಕೊಳ್ಳುವ, ಕಾರ್ಮಿಕರು ಖಾಯಂ ಕೆಲಸದ ಬಗ್ಗೆ ವಿಚಾರ ಮಾಡುವುದೇ ಪ್ರಗತಿ ವಿರೋಧಿಯೆಂದು ಸಾರಿ, ‘ಉದ್ಯೋಗಿ-ಉದ್ಯೋಗದಾತ-ಸರ್ಕಾರ’ ಎಂಬ ತ್ರಿಪಕ್ಷೀಯ ಸಂಭಂದದಿಂದ ಸರ್ಕಾರ ನುಣುಚಿಕೊಂಡಿದೆ” ಎಂದು MASA ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

“ಒಟ್ಟಾರೆ ದೇಶದ 50 ಕೋಟಿ ಕಾರ್ಮಿಕರಿಗೆ ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರ ದುಡಿಮೆಗೆ ಇದ್ದ ಕನಿಷ್ಠ ಕಾನೂನಿನ ಸಂರಕ್ಷಣೆಯನ್ನು ತೆಗೆದು ಹಾಕುವ ದುರುದ್ದೇಶ ಈ ಕಾರ್ಮಿಕ ಸಂಹಿತೆಗಳ ಹಿಂದೆ ಅಡಗಿದೆ. ಆದ್ದರಿಂದ ಕೃಷಿ ಕಾಯಿದೆಗಳನ್ನು ಹಿಂಪಡೆದಂತೆ 4 ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲು ಒತ್ತಾಯಿಸಿ ದೇಶವ್ಯಾಪಿ ಪ್ರಬಲ ಕಾರ್ಮಿಕ ಆಂದೋಲನವನ್ನು ಕಟ್ಟಲು ‘ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ’ (Mazoor Adhikar Sangharsha Abhiyan – MASA) ಮುಂದಾಗಿದೆ” ಎಂದು MASA ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಂಗೈ ತುಂಬದ ಅರ್ಧ ಕೂಲಿ ಹಾಗೂ ಮುಂಗೈಗೆ ನಿಲುಕದ ಜೀವನಾಗತ್ಯ ಪದಾರ್ಥಗಳ ಬೆಲೆ ಏರಿಕೆಯ ನಡುವೆ ಕಾರ್ಮಿಕರು ನಜ್ಜುಗುಜ್ಜಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ MASA, “ಕಾರ್ಮಿಕ ಕುಟುಂಬವೊಂದು ಬದುಕುಳಿಯಬೇಕಾದರೆ ಮಾಸಿಕ 25,000 ರೂ. ಕನಿಷ್ಠ ಕೂಲಿ ಬೇಕು. ಕಾಯಂ ಸ್ವರೂಪದ ಕೆಲಸವಿದ್ದಕಡೆ ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ರದ್ದಗೋಳಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ:ಪತ್ರಕರ್ತೆ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಂಬುಲೆನ್ಸ್ ಸೇವೆ

ಕಟ್ಟಡ, ಪೌರಸೇವೆ, ಪ್ಲಾಂಟೇಶನ್‌, ಗಣಿ, ಮನೆಗೆಲಸ ಸೇರಿದಂತೆ ಹಾಗೂ ಅತ್ಯಧಿಕ ಲಾಭ ತಂದುಕೊಡುವ ಸಾರ್ವಜನಿಕ ಉದ್ದಿಮೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ದಿನಗೂಲಿ ಹಾಗೂ ಶಾಸನಬದ್ಧ ಹಕ್ಕುಗಳಾದ ಭವಿಷ್ಯನಿಧಿ, ನೌಕರರ ಸಾಮಾಜಿಕ ವಿಮೆ ಹಾಗೂ ಸಂರಕ್ಷಣೆ ನೀಡಬೇಕು ಎಂದು MASA ಆಗ್ರಹಿಸಿದೆ. ಜೊತೆಗೆ ವಲಸೆ ಕಾರ್ಮಿಕರು ಮತ್ತು ನೇಕಾರ ಕಾರ್ಮಿಕರಿಗೆ ಕಲ್ಯಾಣ ಮಂಡಳಿಗಳನ್ನು ರಚಿಸಬೇಕೆಂದು ಅದು ಒತ್ತಾಯಿಸಿದೆ.

ಭಾರತದ ಸಂವಿಧಾನದ ಅನ್ವಯ ಕೊಡಮಾಡಲಾದ ಕಾರ್ಮಿಕ ಹಕ್ಕುಗಳ ರಕ್ಷಣೆ ಹಾಗೂ ಅವುಗಳ ಅನುಷ್ಠಾನಕ್ಕೆ ಒತ್ತಾಯಿಸಿ ದೇಶದ ವಿವಿಧ ಕಡೆ ನಿರಂತರವಾದ ಹಾಗೂ ಹೋರಾಟವನ್ನು ಮುಂದುವರಿಸುವುದರ ಭಾಗವಾಗಿ ಡಿಸೆಂಬರ್‌ 19,2021 ರಂದು ಬೆಂಗಳೂರಿನಲ್ಲಿ ಸಮಾವೇಶವನ್ನು ಸಂಘಟಸಲಾಗುತ್ತಿದೆ ಎಂದು MASA ಹೇಳಿದೆ.

ಇದನ್ನೂ ಓದಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

ಅಂದು ಬೆಳಿಗ್ಗೆ 1 ಘಂಟೆಗೆ ಬೆಂಗಳೂರು ರೈಲು ನಿಲ್ದಾಣದಿಂದ ಕಾರ್ಮಿಕರು ಮೆರವಣಿಗೆ ಮೂಲಕ ಸಾಗಿ ಫ್ರೀಡಂ ಪಾರ್ಕಿನಲ್ಲಿ ಅಧಿವೇಶನ ನಡೆಸಲಿದ್ದಾರೆ. ಈ ಬಹಿರಂಗ ಸಮಾವೇಶದಲ್ಲಿ ಪೌರ ಕಾರ್ಮಿಕರು, ನೀರು ಸರಬರಾಜು ಕಾರ್ಮಿಕರು, ಅನ್ನಭಾಗ್ಯ ಜಾರಿ ಮಾಡುವ ಹಮಾಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಗಣಿ ಕಾರ್ಮಿಕರು, ನೇಕಾರ ಕಾರ್ಮಿಕರು, ಮನೆಗೆಲಸ ಸೇರಿದಂತೆ ಇನ್ನು ಹಲವಾರು ಕ್ಷೇತ್ರಗಳ ಶ್ರಮಜೀವಿಗಳು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು MASA ಹೇಳಿದೆ.

ಹಿರಿಯ ಹೈಕೋರ್ಟ್‌ ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಎಸ್‌ ಬಾಲನ್‌, ಟಯುಸಿಐನ ರಾಜ್ಯಾಧ್ಯಕ್ಷರಾಗಿರುವ ಆರ್‌. ಮಾನಸಯ್ಯ, ಶ್ರಮಿಕ ಶಕ್ತಿಯ ವರದರಾಜೇಂದ್ರ ಸೇರಿದಂತೆ ಹಲವು ಕಾರ್ಮಿಕ ಮುಖಂಡರು ಭಾಗವಹಿಸಲಿದ್ದು, ಪಶ್ಚಿಮ ಬಂಗಾಳದ ಕಾರ್ಮಿಕ ನೇತಾರರಾದ ಅಮಿತಾಬ್‌ ಬಟ್ಟಾಚಾರ್ಯ, ಮುಂಬೈಯ ಸಂಜಯ ಸಿಂಗ್ವಿ, ತೆಲಂಗಾಣದ ವೆಂಕಟೇಶ್ವರ ರಾವ್‌ ಸೇರಿದಂತೆ ಇನ್ನೂ ಹಲವು ಗಣ್ಯರು ಅಂದು ಸಮಾವೇಶವನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಇದನ್ನೂ ಓದಿ:ಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...