Homeಕರ್ನಾಟಕರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ರೈತ ಹೋರಾಟ ಮಾದರಿಯಲ್ಲೇ ಕಾರ್ಮಿಕ ಹೋರಾಟಕ್ಕೆ ವೇದಿಕೆ ಸಜ್ಜು!

ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ‘ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ’ ನಡೆಯಲಿದೆ.

- Advertisement -
- Advertisement -

ರೈತ ಆಂದೋಲನದ ಮುಂದೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಂಡಿಯೂರಿದ ಬೆನ್ನಿಗೆ ಪ್ರಬಲ ಕಾರ್ಮಿಕ ಆಂದೋಲನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಕಾರ್ಮಿಕ ಸಂಘಟನೆಗಳ ಒಕ್ಕೂಟವಾದ, “ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ(MASA)” ಅಡಿಯಲ್ಲಿ ಡಿಸೆಂಬರ್‌ 19ರ ಭಾನುವಾರದಂದು ಬೆಂಗಳೂರಿನ ಕೇಂದ್ರ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ “ಕಾರ್ಮಿಕರ ಬೃಹತ್‌ ಹಕ್ಕೊತ್ತಾಯ ರ್‍ಯಾಲಿ” ನಡೆಯಲಿದೆ.

“ಕ್ರೌರ್ಯಕ್ಕೆ ಕರುಣೆ ಎಂದು, ಸುಲಿಗೆಗೆ ಸುಧಾರಣೆ ಎಂದು, ದಮನ ದಬ್ಬಾಳಿಕೆಗಳಿಗೆ ದಯಾ ದಾಕ್ಷಿಣ್ಯವೆಂದು, ದೇಶ ಮಾರಾಟವನ್ನು ಅಪ್ಪಟ ದೇಶ ಪ್ರೇಮವೆಂದು ಬಿಂಬಿಸುವ ಮೋದಿ ಆಳ್ವಿಕೆಯಡಿ ನಾವಿದ್ದೇವೆ” ಎಂದು MASA ಹೇಳಿದ್ದು, ವಂಚಕ ಮತ್ತು ಕ್ರೂರ ಆಳುವ ವಿಧಾನ ಈ ದೇಶದ ಜನಸಾಮಾನ್ಯರನ್ನು ವಿಶೇಷವಾಗಿ ದುಡಿವ ಜನರ ಬದುಕನ್ನು ಅವನತಿಯ ಅಂಚಿಗೆ ತಂದು ನಿಲ್ಲಿಸಿದೆ ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

“ಕೃಷಿರಂಗ ಮತ್ತು ರೈತಾಪಿ ವರ್ಗವನ್ನು ಕಾರ್ಪೊರೇಟ್‌ ಕೃಷಿ ಕಂಪನಿಗಳಿಗೆ ಬಲಿಕೊಡುವ ಉದ್ದೇಶದಿ೦ದ ತರಲಾಗಿದ್ದ ಮೂರು ಕೃಷಿ ಕಾಯಿದೆಗಳನ್ನು ಮೋದಿ ಸರ್ಕಾರ ಮಹಾನ್‌ ಕ್ರಾಂತಿ ತರಲಿರುವ ಕಲ್ಯಾಣ ಕಾಯಿದೆಗಳೆಂದು ಬಣಿಸಿತ್ತು. ಆದರೆ ದೇಶದ ರೈತರು ತಮ್ಮ ಅಚಲವಾದ ಧೀರ್ಫಕಾಲಿನ ಸಾಮೂಹಿಕ ಹೋರಾಟದಿಂದ ಈ ಕಾಯಿದೆಗಳ ಬಣ್ಣ ಬಯಲು ಮಾಡಿ ವಿಜಯಿಗಳಾಗಿದ್ದಾರೆ. ಈಗ ಅಂತಹದ್ದೆ ಅತೀ ದೊಡ್ಡ ಸವಾಲು ಭಾರತದ ಕಾರ್ಮಿಕ ವರ್ಗದ ಮುಂದಿದೆ” ಎಂದು MASA ಹೇಳಿದೆ.

“ಶತಮಾನದ ಹೋರಾಟಗಳ ಫಲವಾಗಿ ಬಂದಿದ್ದ 44 ಕೇಂದ್ರ ಕಾರ್ಮಿಕ ಕಾಯಿದೆಗಳನ್ನು ಕಿತ್ತುಹಾಕಿ 4 ಕಾರ್ಮಿಕ ಸಂಹಿತೆಗಳನ್ನು ಒಕ್ಕೂಟ ಸರಕಾರ ಜಾರಿಗೆ ತಂದಿದೆ. ಇಲ್ಲಿಯು ಕಾರ್ಮಿಕ ಕಲ್ಯಾಣದ ಘೋಷಣೆ ಮೊಳಗಿಸಲಾಗುತ್ತಿದೆ. ವಾಸ್ತವದಲ್ಲಿ ಕಾರ್ಮಿಕರಿಗಿದ್ದ ಸಂವಿಧಾನಿಕ ಹಕ್ಕುಗಳನ್ನೆಲ್ಲಾ ಕಸಿದುಕೊಳ್ಳುವ, ಕಾರ್ಮಿಕರು ಖಾಯಂ ಕೆಲಸದ ಬಗ್ಗೆ ವಿಚಾರ ಮಾಡುವುದೇ ಪ್ರಗತಿ ವಿರೋಧಿಯೆಂದು ಸಾರಿ, ‘ಉದ್ಯೋಗಿ-ಉದ್ಯೋಗದಾತ-ಸರ್ಕಾರ’ ಎಂಬ ತ್ರಿಪಕ್ಷೀಯ ಸಂಭಂದದಿಂದ ಸರ್ಕಾರ ನುಣುಚಿಕೊಂಡಿದೆ” ಎಂದು MASA ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

“ಒಟ್ಟಾರೆ ದೇಶದ 50 ಕೋಟಿ ಕಾರ್ಮಿಕರಿಗೆ ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರ ದುಡಿಮೆಗೆ ಇದ್ದ ಕನಿಷ್ಠ ಕಾನೂನಿನ ಸಂರಕ್ಷಣೆಯನ್ನು ತೆಗೆದು ಹಾಕುವ ದುರುದ್ದೇಶ ಈ ಕಾರ್ಮಿಕ ಸಂಹಿತೆಗಳ ಹಿಂದೆ ಅಡಗಿದೆ. ಆದ್ದರಿಂದ ಕೃಷಿ ಕಾಯಿದೆಗಳನ್ನು ಹಿಂಪಡೆದಂತೆ 4 ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲು ಒತ್ತಾಯಿಸಿ ದೇಶವ್ಯಾಪಿ ಪ್ರಬಲ ಕಾರ್ಮಿಕ ಆಂದೋಲನವನ್ನು ಕಟ್ಟಲು ‘ಕಾರ್ಮಿಕ ಹಕ್ಕುಗಳ ಹೋರಾಟ ಸಮಿತಿ’ (Mazoor Adhikar Sangharsha Abhiyan – MASA) ಮುಂದಾಗಿದೆ” ಎಂದು MASA ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಂಗೈ ತುಂಬದ ಅರ್ಧ ಕೂಲಿ ಹಾಗೂ ಮುಂಗೈಗೆ ನಿಲುಕದ ಜೀವನಾಗತ್ಯ ಪದಾರ್ಥಗಳ ಬೆಲೆ ಏರಿಕೆಯ ನಡುವೆ ಕಾರ್ಮಿಕರು ನಜ್ಜುಗುಜ್ಜಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ MASA, “ಕಾರ್ಮಿಕ ಕುಟುಂಬವೊಂದು ಬದುಕುಳಿಯಬೇಕಾದರೆ ಮಾಸಿಕ 25,000 ರೂ. ಕನಿಷ್ಠ ಕೂಲಿ ಬೇಕು. ಕಾಯಂ ಸ್ವರೂಪದ ಕೆಲಸವಿದ್ದಕಡೆ ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ರದ್ದಗೋಳಿಸಬೇಕು” ಎಂದು ಒತ್ತಾಯಿಸಿದೆ.

ಇದನ್ನೂ ಓದಿ:ಪತ್ರಕರ್ತೆ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಂಬುಲೆನ್ಸ್ ಸೇವೆ

ಕಟ್ಟಡ, ಪೌರಸೇವೆ, ಪ್ಲಾಂಟೇಶನ್‌, ಗಣಿ, ಮನೆಗೆಲಸ ಸೇರಿದಂತೆ ಹಾಗೂ ಅತ್ಯಧಿಕ ಲಾಭ ತಂದುಕೊಡುವ ಸಾರ್ವಜನಿಕ ಉದ್ದಿಮೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ದಿನಗೂಲಿ ಹಾಗೂ ಶಾಸನಬದ್ಧ ಹಕ್ಕುಗಳಾದ ಭವಿಷ್ಯನಿಧಿ, ನೌಕರರ ಸಾಮಾಜಿಕ ವಿಮೆ ಹಾಗೂ ಸಂರಕ್ಷಣೆ ನೀಡಬೇಕು ಎಂದು MASA ಆಗ್ರಹಿಸಿದೆ. ಜೊತೆಗೆ ವಲಸೆ ಕಾರ್ಮಿಕರು ಮತ್ತು ನೇಕಾರ ಕಾರ್ಮಿಕರಿಗೆ ಕಲ್ಯಾಣ ಮಂಡಳಿಗಳನ್ನು ರಚಿಸಬೇಕೆಂದು ಅದು ಒತ್ತಾಯಿಸಿದೆ.

ಭಾರತದ ಸಂವಿಧಾನದ ಅನ್ವಯ ಕೊಡಮಾಡಲಾದ ಕಾರ್ಮಿಕ ಹಕ್ಕುಗಳ ರಕ್ಷಣೆ ಹಾಗೂ ಅವುಗಳ ಅನುಷ್ಠಾನಕ್ಕೆ ಒತ್ತಾಯಿಸಿ ದೇಶದ ವಿವಿಧ ಕಡೆ ನಿರಂತರವಾದ ಹಾಗೂ ಹೋರಾಟವನ್ನು ಮುಂದುವರಿಸುವುದರ ಭಾಗವಾಗಿ ಡಿಸೆಂಬರ್‌ 19,2021 ರಂದು ಬೆಂಗಳೂರಿನಲ್ಲಿ ಸಮಾವೇಶವನ್ನು ಸಂಘಟಸಲಾಗುತ್ತಿದೆ ಎಂದು MASA ಹೇಳಿದೆ.

ಇದನ್ನೂ ಓದಿ: 2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

ಅಂದು ಬೆಳಿಗ್ಗೆ 1 ಘಂಟೆಗೆ ಬೆಂಗಳೂರು ರೈಲು ನಿಲ್ದಾಣದಿಂದ ಕಾರ್ಮಿಕರು ಮೆರವಣಿಗೆ ಮೂಲಕ ಸಾಗಿ ಫ್ರೀಡಂ ಪಾರ್ಕಿನಲ್ಲಿ ಅಧಿವೇಶನ ನಡೆಸಲಿದ್ದಾರೆ. ಈ ಬಹಿರಂಗ ಸಮಾವೇಶದಲ್ಲಿ ಪೌರ ಕಾರ್ಮಿಕರು, ನೀರು ಸರಬರಾಜು ಕಾರ್ಮಿಕರು, ಅನ್ನಭಾಗ್ಯ ಜಾರಿ ಮಾಡುವ ಹಮಾಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಗಣಿ ಕಾರ್ಮಿಕರು, ನೇಕಾರ ಕಾರ್ಮಿಕರು, ಮನೆಗೆಲಸ ಸೇರಿದಂತೆ ಇನ್ನು ಹಲವಾರು ಕ್ಷೇತ್ರಗಳ ಶ್ರಮಜೀವಿಗಳು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು MASA ಹೇಳಿದೆ.

ಹಿರಿಯ ಹೈಕೋರ್ಟ್‌ ವಕೀಲರು ಹಾಗೂ ಕಾರ್ಮಿಕ ಮುಖಂಡರಾದ ಎಸ್‌ ಬಾಲನ್‌, ಟಯುಸಿಐನ ರಾಜ್ಯಾಧ್ಯಕ್ಷರಾಗಿರುವ ಆರ್‌. ಮಾನಸಯ್ಯ, ಶ್ರಮಿಕ ಶಕ್ತಿಯ ವರದರಾಜೇಂದ್ರ ಸೇರಿದಂತೆ ಹಲವು ಕಾರ್ಮಿಕ ಮುಖಂಡರು ಭಾಗವಹಿಸಲಿದ್ದು, ಪಶ್ಚಿಮ ಬಂಗಾಳದ ಕಾರ್ಮಿಕ ನೇತಾರರಾದ ಅಮಿತಾಬ್‌ ಬಟ್ಟಾಚಾರ್ಯ, ಮುಂಬೈಯ ಸಂಜಯ ಸಿಂಗ್ವಿ, ತೆಲಂಗಾಣದ ವೆಂಕಟೇಶ್ವರ ರಾವ್‌ ಸೇರಿದಂತೆ ಇನ್ನೂ ಹಲವು ಗಣ್ಯರು ಅಂದು ಸಮಾವೇಶವನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಇದನ್ನೂ ಓದಿ:ಹೈದರಾಬಾದ್: ಪಿಯುಸಿಯಲ್ಲಿ 80% ಗಳಿಸಿದರೂ ಕಾಲೇಜು ಶುಲ್ಕ ಕಟ್ಟಲಾಗದೇ ಕೂಲಿ ಕಾರ್ಮಿಕಳಾದ ವಿದ್ಯಾರ್ಥಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...