Homeಮುಖಪುಟರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

ರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

- Advertisement -
- Advertisement -

ರಂಗಭೂಮಿ ಕಲಿಕೆ ವಿವಿಧ ಪಾತ್ರಗಳ ಮೂಲಕ ತಮ್ಮನ್ನು ತಾವು ಕಂಡುಕೊಳ್ಳಲು ಉತ್ತಮವಾದಂತಹ ಕಲೆಯಾಗಿದೆ. ಇದು ಬಾಲ್ಯದಿಂದಲೇ ಮಕ್ಕಳಿಗೆ ರಂಗಭೂಮಿಯನ್ನು ಕಲಿಸುವುದರಿಂದ ಅವರಿಗೆ ಮುಂದೆ ಜೀವನದಲ್ಲಿ ಸಮಾಜದಲ್ಲಿ ಧೈರ್ಯವಾಗಿ ಬದುಕುವುದನ್ನು ಕಲಿಸುತ್ತದೆ. ಹಾಗಾಗಿ ಮಕ್ಕಳ ರಂಗಭೂಮಿಯ ಅವಶ್ಯಕತೆ ಇಂದೆಂದಿಗಿಂತಲೂ ಹೆಚ್ಚಿದೆ. ಕಲುಷಿತ ಗೊಂಡ ಮನಸ್ಸುಗಳನ್ನು ಪ್ರೀತಿ, ವಿಶ್ವಾಸ, ನಂಬಿಕೆಯ ಮೂಲಕ ಸರಿಪಡಿಸುವ ಚಿಕಿತ್ಸಕ ಗುಣವನ್ನು ರಂಗಭೂಮಿ ಹೊಂದಿದೆ. ಸಾಕಷ್ಟು ಜನ ರಂಗಕರ್ಮಿಗಳು ಮಕ್ಕಳ ರಂಗಭೂಮಿಯನ್ನು ವಿಶೇಷವಾಗಿ ಕೆಲಸ ಮಾಡುತ್ತಿದ್ದಾರೆ ತುಮಕೂರಿನಲ್ಲೂ ಇಂತಹ ಪ್ರಯೋಗವೊಂದು ನಡೆಯುತ್ತಿದೆ.
ಈ ಸೆಲೆಬ್ರೆಟಿ ಯುಗದಲ್ಲಿ ತಮ್ಮ ಮಕ್ಕಳು ಕಲೆಯ ಮೂಲಕ ಸಮಾಜದಲ್ಲಿ ಹೆಚ್ಚು ಗುರ್ತಿಸಿಕೊಳ್ಳಬೇಕೆಂಬ ಆಸೆ ಪೋಷಕರಲ್ಲಿ ಹೆಚ್ಚುತ್ತಿದೆ. ಇದಕ್ಕೆ ಪ್ರೇರಕವಾಗಿ ರಿಯಾಲಿಟಿ ಶೋಗಳು ಪೋಷಕರನ್ನು ಪ್ರೇರೇಪಿಸುತ್ತಿವೆ. ಅದಕ್ಕಾಗಿ ಸಾಕಷ್ಟು ಜನ ನಾಯಿಕೊಡೆಗಳಂತೆ ಹೆಚ್ಚುತ್ತಿರುವ ಹವ್ಯಾಸಿ ರಂಗಶಿಬಿರಗಳು, ಅಭಿನಯ ಶಿಬಿರಗಳಿಗೆ ಸಾಕಷ್ಟು ವ್ಯಯ ಮಾಡುತ್ತಿದ್ದಾರೆ. ಇದು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಸಂಧರ್ಭದಲ್ಲಿ ವಿಶೇಷವಾಗಿ ಮಕ್ಕಳ ಜೊತೆ ಕೆಲಸಮಾಡುವ ಮತ್ತು ರಂಗಭೂಮಿಯನ್ನು ಒಂದು ಕೋರ್ಸ್ ಆಗಿ ಕಲಿತು ಅಧ್ಯಯನ ಮಾಡಿದ ಮತ್ತು ಸಾಕಷ್ಟು ಶಿಬಿರಗಳನ್ನು ಮಾಡಿ ನೈಜರಂಗಭೂಮಿಯ ಪಾಠಗಳನ್ನು ಕಲಿಸುವ ಶಿಬಿರಗಳು ಕಡಿಮೆಯಾಗಿವೆ. ಇದೇ ವೇಳೆ ಕೆಲವು ಕಡೆ ಮಾತ್ರ ನಿಜವಾಗಲೂ ರಂಗಭೂಮಿ ಮತ್ತು ನಟನೆಯನ್ನು ಕಲಿಸುವಂತಹ ಪ್ರಯತ್ನಗಳು ನಡೆಯುತ್ತಿವೆ. ಅಂತಹದ್ದೆ ಪ್ರಯತ್ನವನ್ನು ತುಮಕೂರಿನ ಸಮ್ಮತ ರಂಗ ಸಂಸ್ಥೆ ಪ್ರಯತ್ನಪಡುತ್ತಿದೆ. ತುಮಕೂರಿನಲ್ಲಿ ಸಾಕಷ್ಟು ರಂಗಭೂಮಿಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಮಕ್ಕಳ ರಂಗಭೂಮಿಯ ಬಗ್ಗೆ ಬೇಸಿಗೆ ಶಿಬಿರವಲ್ಲದೇ ಈ ರೀತಿ ಅದಿಕ್ಕೆ ವಿಶೇಷ ಶಾಲೆಯ ರೀತಿಯ ಪ್ರಯತ್ನ ನಡೆದಿಲ್ಲ . ಸಮ್ಮತ ಸಂಸ್ಥೆ ಈಗ ಮಕ್ಕಳಿಗಾಗಿ ವಾರಾಂತ್ಯ ರಂಗ ಶಾಲೆಯನ್ನು ತೆರೆದಿದ್ದಾರೆ.
ಶಾಲಾ ರಜೆಯ ಸಂಧರ್ಭದಲ್ಲಿ ಶಿಬಿರಗಳನ್ನು ನಡೆಸುತ್ತಾ, ರಂಗ ಚಟುವಟಿಕೆಗಳನ್ನು ನಡೆಸುತ್ತಾ ಬಂದಿರುವ ರಂಗಭೂಮಿ ಹಿನ್ನಲೆಯ ಚೇತನ್ ಮತ್ತು ಸುನೀಲ ಯುವದಂಪತಿಗಳು ತಮ್ಮ ಕ್ರಿಯಾಶೀಲ ಯುವತಂಡದೊಂದಿಗೆ ವಾರಂತ್ಯದ ರಜೆಯ ಸಮಯದಲ್ಲಿ ರಂಗಭೂಮಿಯ ಬಗ್ಗೆ ಮಕ್ಕಳಿಗೆ ಕಲಿಸುವ ಒಂದು ವಿಶೇಷ ಪ್ರಯತ್ನವನ್ನು ಪ್ರಾರಂಭಿಸಿದೆ. ನಟನೆ, ನಿರ್ಧೇಶನ, ಮೇಕಪ್ ಮುಂತಾದ ವಿಭಾಗಗಳನ್ನು ಮಕ್ಕಳಿಗೆ ಪರಿಚಯಿಸಲಿದೆ. ಮಗುವಿನ ಕಲ್ಪನಾಶಕ್ತಿ, ದೇಹಭಾಷೆ, ವಾಚಿಕದ ಮೇಲೆ ನಿರಂತರವಾಗಿ ಅಭ್ಯಾಸ ಮಾಡಿಸಲಿದ್ದಾರೆ. ಮಕ್ಕಳಿಗೆ ಆಸಕ್ತಿಯಿಂದ ಕಲಿಯಲು ರಂಗಾಟಗಳ ಮುಖೇನ ಕಲಿಸಲಿದ್ದಾರೆ. ಮಕ್ಕಳ ಸಿನೆಮಾ ತೋರಿಸುವುದು, ಜನಪದ ಕಲೆಗಳ ಕಲಿಕೆಯ ಮೂಲಕ ಸ್ಥಳೀಯ ಕಲೆಗಳ ಪರಿಚಯ ಈ ರೀತಿಯ ಯೋಜನೆಗಳನ್ನು ಸಂಸ್ಥೆಯ ನಿರ್ದೇಶಕರಾದ ಚೇತನ್ ಮತ್ತು ಸುನೀಲ ಅವರು ರೂಪಿಸಿದ್ದಾರೆ. ಈ ತರಗತಿಗಳು ಪ್ರತಿ ಭಾನುವಾರ ನಡೆಯಲಿವೆ. ಕೇವಲ 25 ರಿಂದ 30 ಮಕ್ಕಳಿಗೆ ಮಾತ್ರ ಅವಕಾಶವಿದೆ. ಬೆಳಿಗ್ಗೆ 9 ರಿಂದ 12ರವೆರೆಗೆ ತರಗತಿಗಳು ನಡೆಯಲಿವೆ.
ಈ ಸಮ್ಮತ ರಂಗಸಂಸ್ಥೆಯ ಆ ವಾರಂತ್ಯಾ ಶಾಲೆಯ ಹೊಸ ಪ್ರಯತ್ನಕ್ಕೆ ಹರಿಕಥಾ ವಿದ್ವಾನ್ ಹಾಗೂ ಕಲಾವಿದರಾದ ಲಕ್ಷ್ಮಣ್‍ದಾಸ್, ಕ.ಸಾ.ಪ ಜಿಲ್ಲಾಧ್ಯಕ್ಷರಾದ ಬಾ.ಹಾ.ರಮಾಕುಮಾರಿ, ರಂಗಸಂಘಟಕರಾದ ಉಗಮಶ್ರೀನಿವಾಸ್, ರಂಗಕರ್ಮಿಗಳಾದ ಎಚ್.ಎಂ.ರಂಗಯ್ಯ, ಸಿಧ್ದಾರ್ಥ ಕಾಲೇಜಿನ ಪ್ರಾಂಶುಪಾ¯ರಾದ ಕೆ.ಸಿ.ಕುಮಾರ್ ಬೆಂಬಲನೀಡಿ ಉದ್ಘಾಟಿಸಿದ್ದಾರೆ. ರಂಗಕರ್ಮಿಗಳಾದ ನಟರಾಜ್ ಹೊನ್ನವಳ್ಳಿ, ಮಂಜು ಬಡಿಗೇರ್, ನೀನಾಸಂ ಚಂದ್ರು, ರವಿಶಂಕರ್, ಶೋಧನ್ ಬಸ್ರೂರು, ಸಂಧ್ಯಾ ಅಲ್ಲದೇ ಹಲವು ಮಕ್ಕಳ ರಂಗಭೂಮಿಯ ಪರಿಣಿತರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಹೆಚ್ಚಿನಮಾಹಿತಿಗಾಗಿ 9901848170, 8105515256 ಸಂಖ್ಯೆಗೆ ಕರೆಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...