Homeಮುಖಪುಟರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

ರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

- Advertisement -
- Advertisement -

ರಂಗಭೂಮಿ ಕಲಿಕೆ ವಿವಿಧ ಪಾತ್ರಗಳ ಮೂಲಕ ತಮ್ಮನ್ನು ತಾವು ಕಂಡುಕೊಳ್ಳಲು ಉತ್ತಮವಾದಂತಹ ಕಲೆಯಾಗಿದೆ. ಇದು ಬಾಲ್ಯದಿಂದಲೇ ಮಕ್ಕಳಿಗೆ ರಂಗಭೂಮಿಯನ್ನು ಕಲಿಸುವುದರಿಂದ ಅವರಿಗೆ ಮುಂದೆ ಜೀವನದಲ್ಲಿ ಸಮಾಜದಲ್ಲಿ ಧೈರ್ಯವಾಗಿ ಬದುಕುವುದನ್ನು ಕಲಿಸುತ್ತದೆ. ಹಾಗಾಗಿ ಮಕ್ಕಳ ರಂಗಭೂಮಿಯ ಅವಶ್ಯಕತೆ ಇಂದೆಂದಿಗಿಂತಲೂ ಹೆಚ್ಚಿದೆ. ಕಲುಷಿತ ಗೊಂಡ ಮನಸ್ಸುಗಳನ್ನು ಪ್ರೀತಿ, ವಿಶ್ವಾಸ, ನಂಬಿಕೆಯ ಮೂಲಕ ಸರಿಪಡಿಸುವ ಚಿಕಿತ್ಸಕ ಗುಣವನ್ನು ರಂಗಭೂಮಿ ಹೊಂದಿದೆ. ಸಾಕಷ್ಟು ಜನ ರಂಗಕರ್ಮಿಗಳು ಮಕ್ಕಳ ರಂಗಭೂಮಿಯನ್ನು ವಿಶೇಷವಾಗಿ ಕೆಲಸ ಮಾಡುತ್ತಿದ್ದಾರೆ ತುಮಕೂರಿನಲ್ಲೂ ಇಂತಹ ಪ್ರಯೋಗವೊಂದು ನಡೆಯುತ್ತಿದೆ.
ಈ ಸೆಲೆಬ್ರೆಟಿ ಯುಗದಲ್ಲಿ ತಮ್ಮ ಮಕ್ಕಳು ಕಲೆಯ ಮೂಲಕ ಸಮಾಜದಲ್ಲಿ ಹೆಚ್ಚು ಗುರ್ತಿಸಿಕೊಳ್ಳಬೇಕೆಂಬ ಆಸೆ ಪೋಷಕರಲ್ಲಿ ಹೆಚ್ಚುತ್ತಿದೆ. ಇದಕ್ಕೆ ಪ್ರೇರಕವಾಗಿ ರಿಯಾಲಿಟಿ ಶೋಗಳು ಪೋಷಕರನ್ನು ಪ್ರೇರೇಪಿಸುತ್ತಿವೆ. ಅದಕ್ಕಾಗಿ ಸಾಕಷ್ಟು ಜನ ನಾಯಿಕೊಡೆಗಳಂತೆ ಹೆಚ್ಚುತ್ತಿರುವ ಹವ್ಯಾಸಿ ರಂಗಶಿಬಿರಗಳು, ಅಭಿನಯ ಶಿಬಿರಗಳಿಗೆ ಸಾಕಷ್ಟು ವ್ಯಯ ಮಾಡುತ್ತಿದ್ದಾರೆ. ಇದು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಸಂಧರ್ಭದಲ್ಲಿ ವಿಶೇಷವಾಗಿ ಮಕ್ಕಳ ಜೊತೆ ಕೆಲಸಮಾಡುವ ಮತ್ತು ರಂಗಭೂಮಿಯನ್ನು ಒಂದು ಕೋರ್ಸ್ ಆಗಿ ಕಲಿತು ಅಧ್ಯಯನ ಮಾಡಿದ ಮತ್ತು ಸಾಕಷ್ಟು ಶಿಬಿರಗಳನ್ನು ಮಾಡಿ ನೈಜರಂಗಭೂಮಿಯ ಪಾಠಗಳನ್ನು ಕಲಿಸುವ ಶಿಬಿರಗಳು ಕಡಿಮೆಯಾಗಿವೆ. ಇದೇ ವೇಳೆ ಕೆಲವು ಕಡೆ ಮಾತ್ರ ನಿಜವಾಗಲೂ ರಂಗಭೂಮಿ ಮತ್ತು ನಟನೆಯನ್ನು ಕಲಿಸುವಂತಹ ಪ್ರಯತ್ನಗಳು ನಡೆಯುತ್ತಿವೆ. ಅಂತಹದ್ದೆ ಪ್ರಯತ್ನವನ್ನು ತುಮಕೂರಿನ ಸಮ್ಮತ ರಂಗ ಸಂಸ್ಥೆ ಪ್ರಯತ್ನಪಡುತ್ತಿದೆ. ತುಮಕೂರಿನಲ್ಲಿ ಸಾಕಷ್ಟು ರಂಗಭೂಮಿಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಮಕ್ಕಳ ರಂಗಭೂಮಿಯ ಬಗ್ಗೆ ಬೇಸಿಗೆ ಶಿಬಿರವಲ್ಲದೇ ಈ ರೀತಿ ಅದಿಕ್ಕೆ ವಿಶೇಷ ಶಾಲೆಯ ರೀತಿಯ ಪ್ರಯತ್ನ ನಡೆದಿಲ್ಲ . ಸಮ್ಮತ ಸಂಸ್ಥೆ ಈಗ ಮಕ್ಕಳಿಗಾಗಿ ವಾರಾಂತ್ಯ ರಂಗ ಶಾಲೆಯನ್ನು ತೆರೆದಿದ್ದಾರೆ.
ಶಾಲಾ ರಜೆಯ ಸಂಧರ್ಭದಲ್ಲಿ ಶಿಬಿರಗಳನ್ನು ನಡೆಸುತ್ತಾ, ರಂಗ ಚಟುವಟಿಕೆಗಳನ್ನು ನಡೆಸುತ್ತಾ ಬಂದಿರುವ ರಂಗಭೂಮಿ ಹಿನ್ನಲೆಯ ಚೇತನ್ ಮತ್ತು ಸುನೀಲ ಯುವದಂಪತಿಗಳು ತಮ್ಮ ಕ್ರಿಯಾಶೀಲ ಯುವತಂಡದೊಂದಿಗೆ ವಾರಂತ್ಯದ ರಜೆಯ ಸಮಯದಲ್ಲಿ ರಂಗಭೂಮಿಯ ಬಗ್ಗೆ ಮಕ್ಕಳಿಗೆ ಕಲಿಸುವ ಒಂದು ವಿಶೇಷ ಪ್ರಯತ್ನವನ್ನು ಪ್ರಾರಂಭಿಸಿದೆ. ನಟನೆ, ನಿರ್ಧೇಶನ, ಮೇಕಪ್ ಮುಂತಾದ ವಿಭಾಗಗಳನ್ನು ಮಕ್ಕಳಿಗೆ ಪರಿಚಯಿಸಲಿದೆ. ಮಗುವಿನ ಕಲ್ಪನಾಶಕ್ತಿ, ದೇಹಭಾಷೆ, ವಾಚಿಕದ ಮೇಲೆ ನಿರಂತರವಾಗಿ ಅಭ್ಯಾಸ ಮಾಡಿಸಲಿದ್ದಾರೆ. ಮಕ್ಕಳಿಗೆ ಆಸಕ್ತಿಯಿಂದ ಕಲಿಯಲು ರಂಗಾಟಗಳ ಮುಖೇನ ಕಲಿಸಲಿದ್ದಾರೆ. ಮಕ್ಕಳ ಸಿನೆಮಾ ತೋರಿಸುವುದು, ಜನಪದ ಕಲೆಗಳ ಕಲಿಕೆಯ ಮೂಲಕ ಸ್ಥಳೀಯ ಕಲೆಗಳ ಪರಿಚಯ ಈ ರೀತಿಯ ಯೋಜನೆಗಳನ್ನು ಸಂಸ್ಥೆಯ ನಿರ್ದೇಶಕರಾದ ಚೇತನ್ ಮತ್ತು ಸುನೀಲ ಅವರು ರೂಪಿಸಿದ್ದಾರೆ. ಈ ತರಗತಿಗಳು ಪ್ರತಿ ಭಾನುವಾರ ನಡೆಯಲಿವೆ. ಕೇವಲ 25 ರಿಂದ 30 ಮಕ್ಕಳಿಗೆ ಮಾತ್ರ ಅವಕಾಶವಿದೆ. ಬೆಳಿಗ್ಗೆ 9 ರಿಂದ 12ರವೆರೆಗೆ ತರಗತಿಗಳು ನಡೆಯಲಿವೆ.
ಈ ಸಮ್ಮತ ರಂಗಸಂಸ್ಥೆಯ ಆ ವಾರಂತ್ಯಾ ಶಾಲೆಯ ಹೊಸ ಪ್ರಯತ್ನಕ್ಕೆ ಹರಿಕಥಾ ವಿದ್ವಾನ್ ಹಾಗೂ ಕಲಾವಿದರಾದ ಲಕ್ಷ್ಮಣ್‍ದಾಸ್, ಕ.ಸಾ.ಪ ಜಿಲ್ಲಾಧ್ಯಕ್ಷರಾದ ಬಾ.ಹಾ.ರಮಾಕುಮಾರಿ, ರಂಗಸಂಘಟಕರಾದ ಉಗಮಶ್ರೀನಿವಾಸ್, ರಂಗಕರ್ಮಿಗಳಾದ ಎಚ್.ಎಂ.ರಂಗಯ್ಯ, ಸಿಧ್ದಾರ್ಥ ಕಾಲೇಜಿನ ಪ್ರಾಂಶುಪಾ¯ರಾದ ಕೆ.ಸಿ.ಕುಮಾರ್ ಬೆಂಬಲನೀಡಿ ಉದ್ಘಾಟಿಸಿದ್ದಾರೆ. ರಂಗಕರ್ಮಿಗಳಾದ ನಟರಾಜ್ ಹೊನ್ನವಳ್ಳಿ, ಮಂಜು ಬಡಿಗೇರ್, ನೀನಾಸಂ ಚಂದ್ರು, ರವಿಶಂಕರ್, ಶೋಧನ್ ಬಸ್ರೂರು, ಸಂಧ್ಯಾ ಅಲ್ಲದೇ ಹಲವು ಮಕ್ಕಳ ರಂಗಭೂಮಿಯ ಪರಿಣಿತರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಹೆಚ್ಚಿನಮಾಹಿತಿಗಾಗಿ 9901848170, 8105515256 ಸಂಖ್ಯೆಗೆ ಕರೆಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...