Homeಮುಖಪುಟರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

ರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

- Advertisement -
- Advertisement -

ರಂಗಭೂಮಿ ಕಲಿಕೆ ವಿವಿಧ ಪಾತ್ರಗಳ ಮೂಲಕ ತಮ್ಮನ್ನು ತಾವು ಕಂಡುಕೊಳ್ಳಲು ಉತ್ತಮವಾದಂತಹ ಕಲೆಯಾಗಿದೆ. ಇದು ಬಾಲ್ಯದಿಂದಲೇ ಮಕ್ಕಳಿಗೆ ರಂಗಭೂಮಿಯನ್ನು ಕಲಿಸುವುದರಿಂದ ಅವರಿಗೆ ಮುಂದೆ ಜೀವನದಲ್ಲಿ ಸಮಾಜದಲ್ಲಿ ಧೈರ್ಯವಾಗಿ ಬದುಕುವುದನ್ನು ಕಲಿಸುತ್ತದೆ. ಹಾಗಾಗಿ ಮಕ್ಕಳ ರಂಗಭೂಮಿಯ ಅವಶ್ಯಕತೆ ಇಂದೆಂದಿಗಿಂತಲೂ ಹೆಚ್ಚಿದೆ. ಕಲುಷಿತ ಗೊಂಡ ಮನಸ್ಸುಗಳನ್ನು ಪ್ರೀತಿ, ವಿಶ್ವಾಸ, ನಂಬಿಕೆಯ ಮೂಲಕ ಸರಿಪಡಿಸುವ ಚಿಕಿತ್ಸಕ ಗುಣವನ್ನು ರಂಗಭೂಮಿ ಹೊಂದಿದೆ. ಸಾಕಷ್ಟು ಜನ ರಂಗಕರ್ಮಿಗಳು ಮಕ್ಕಳ ರಂಗಭೂಮಿಯನ್ನು ವಿಶೇಷವಾಗಿ ಕೆಲಸ ಮಾಡುತ್ತಿದ್ದಾರೆ ತುಮಕೂರಿನಲ್ಲೂ ಇಂತಹ ಪ್ರಯೋಗವೊಂದು ನಡೆಯುತ್ತಿದೆ.
ಈ ಸೆಲೆಬ್ರೆಟಿ ಯುಗದಲ್ಲಿ ತಮ್ಮ ಮಕ್ಕಳು ಕಲೆಯ ಮೂಲಕ ಸಮಾಜದಲ್ಲಿ ಹೆಚ್ಚು ಗುರ್ತಿಸಿಕೊಳ್ಳಬೇಕೆಂಬ ಆಸೆ ಪೋಷಕರಲ್ಲಿ ಹೆಚ್ಚುತ್ತಿದೆ. ಇದಕ್ಕೆ ಪ್ರೇರಕವಾಗಿ ರಿಯಾಲಿಟಿ ಶೋಗಳು ಪೋಷಕರನ್ನು ಪ್ರೇರೇಪಿಸುತ್ತಿವೆ. ಅದಕ್ಕಾಗಿ ಸಾಕಷ್ಟು ಜನ ನಾಯಿಕೊಡೆಗಳಂತೆ ಹೆಚ್ಚುತ್ತಿರುವ ಹವ್ಯಾಸಿ ರಂಗಶಿಬಿರಗಳು, ಅಭಿನಯ ಶಿಬಿರಗಳಿಗೆ ಸಾಕಷ್ಟು ವ್ಯಯ ಮಾಡುತ್ತಿದ್ದಾರೆ. ಇದು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಸಂಧರ್ಭದಲ್ಲಿ ವಿಶೇಷವಾಗಿ ಮಕ್ಕಳ ಜೊತೆ ಕೆಲಸಮಾಡುವ ಮತ್ತು ರಂಗಭೂಮಿಯನ್ನು ಒಂದು ಕೋರ್ಸ್ ಆಗಿ ಕಲಿತು ಅಧ್ಯಯನ ಮಾಡಿದ ಮತ್ತು ಸಾಕಷ್ಟು ಶಿಬಿರಗಳನ್ನು ಮಾಡಿ ನೈಜರಂಗಭೂಮಿಯ ಪಾಠಗಳನ್ನು ಕಲಿಸುವ ಶಿಬಿರಗಳು ಕಡಿಮೆಯಾಗಿವೆ. ಇದೇ ವೇಳೆ ಕೆಲವು ಕಡೆ ಮಾತ್ರ ನಿಜವಾಗಲೂ ರಂಗಭೂಮಿ ಮತ್ತು ನಟನೆಯನ್ನು ಕಲಿಸುವಂತಹ ಪ್ರಯತ್ನಗಳು ನಡೆಯುತ್ತಿವೆ. ಅಂತಹದ್ದೆ ಪ್ರಯತ್ನವನ್ನು ತುಮಕೂರಿನ ಸಮ್ಮತ ರಂಗ ಸಂಸ್ಥೆ ಪ್ರಯತ್ನಪಡುತ್ತಿದೆ. ತುಮಕೂರಿನಲ್ಲಿ ಸಾಕಷ್ಟು ರಂಗಭೂಮಿಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಮಕ್ಕಳ ರಂಗಭೂಮಿಯ ಬಗ್ಗೆ ಬೇಸಿಗೆ ಶಿಬಿರವಲ್ಲದೇ ಈ ರೀತಿ ಅದಿಕ್ಕೆ ವಿಶೇಷ ಶಾಲೆಯ ರೀತಿಯ ಪ್ರಯತ್ನ ನಡೆದಿಲ್ಲ . ಸಮ್ಮತ ಸಂಸ್ಥೆ ಈಗ ಮಕ್ಕಳಿಗಾಗಿ ವಾರಾಂತ್ಯ ರಂಗ ಶಾಲೆಯನ್ನು ತೆರೆದಿದ್ದಾರೆ.
ಶಾಲಾ ರಜೆಯ ಸಂಧರ್ಭದಲ್ಲಿ ಶಿಬಿರಗಳನ್ನು ನಡೆಸುತ್ತಾ, ರಂಗ ಚಟುವಟಿಕೆಗಳನ್ನು ನಡೆಸುತ್ತಾ ಬಂದಿರುವ ರಂಗಭೂಮಿ ಹಿನ್ನಲೆಯ ಚೇತನ್ ಮತ್ತು ಸುನೀಲ ಯುವದಂಪತಿಗಳು ತಮ್ಮ ಕ್ರಿಯಾಶೀಲ ಯುವತಂಡದೊಂದಿಗೆ ವಾರಂತ್ಯದ ರಜೆಯ ಸಮಯದಲ್ಲಿ ರಂಗಭೂಮಿಯ ಬಗ್ಗೆ ಮಕ್ಕಳಿಗೆ ಕಲಿಸುವ ಒಂದು ವಿಶೇಷ ಪ್ರಯತ್ನವನ್ನು ಪ್ರಾರಂಭಿಸಿದೆ. ನಟನೆ, ನಿರ್ಧೇಶನ, ಮೇಕಪ್ ಮುಂತಾದ ವಿಭಾಗಗಳನ್ನು ಮಕ್ಕಳಿಗೆ ಪರಿಚಯಿಸಲಿದೆ. ಮಗುವಿನ ಕಲ್ಪನಾಶಕ್ತಿ, ದೇಹಭಾಷೆ, ವಾಚಿಕದ ಮೇಲೆ ನಿರಂತರವಾಗಿ ಅಭ್ಯಾಸ ಮಾಡಿಸಲಿದ್ದಾರೆ. ಮಕ್ಕಳಿಗೆ ಆಸಕ್ತಿಯಿಂದ ಕಲಿಯಲು ರಂಗಾಟಗಳ ಮುಖೇನ ಕಲಿಸಲಿದ್ದಾರೆ. ಮಕ್ಕಳ ಸಿನೆಮಾ ತೋರಿಸುವುದು, ಜನಪದ ಕಲೆಗಳ ಕಲಿಕೆಯ ಮೂಲಕ ಸ್ಥಳೀಯ ಕಲೆಗಳ ಪರಿಚಯ ಈ ರೀತಿಯ ಯೋಜನೆಗಳನ್ನು ಸಂಸ್ಥೆಯ ನಿರ್ದೇಶಕರಾದ ಚೇತನ್ ಮತ್ತು ಸುನೀಲ ಅವರು ರೂಪಿಸಿದ್ದಾರೆ. ಈ ತರಗತಿಗಳು ಪ್ರತಿ ಭಾನುವಾರ ನಡೆಯಲಿವೆ. ಕೇವಲ 25 ರಿಂದ 30 ಮಕ್ಕಳಿಗೆ ಮಾತ್ರ ಅವಕಾಶವಿದೆ. ಬೆಳಿಗ್ಗೆ 9 ರಿಂದ 12ರವೆರೆಗೆ ತರಗತಿಗಳು ನಡೆಯಲಿವೆ.
ಈ ಸಮ್ಮತ ರಂಗಸಂಸ್ಥೆಯ ಆ ವಾರಂತ್ಯಾ ಶಾಲೆಯ ಹೊಸ ಪ್ರಯತ್ನಕ್ಕೆ ಹರಿಕಥಾ ವಿದ್ವಾನ್ ಹಾಗೂ ಕಲಾವಿದರಾದ ಲಕ್ಷ್ಮಣ್‍ದಾಸ್, ಕ.ಸಾ.ಪ ಜಿಲ್ಲಾಧ್ಯಕ್ಷರಾದ ಬಾ.ಹಾ.ರಮಾಕುಮಾರಿ, ರಂಗಸಂಘಟಕರಾದ ಉಗಮಶ್ರೀನಿವಾಸ್, ರಂಗಕರ್ಮಿಗಳಾದ ಎಚ್.ಎಂ.ರಂಗಯ್ಯ, ಸಿಧ್ದಾರ್ಥ ಕಾಲೇಜಿನ ಪ್ರಾಂಶುಪಾ¯ರಾದ ಕೆ.ಸಿ.ಕುಮಾರ್ ಬೆಂಬಲನೀಡಿ ಉದ್ಘಾಟಿಸಿದ್ದಾರೆ. ರಂಗಕರ್ಮಿಗಳಾದ ನಟರಾಜ್ ಹೊನ್ನವಳ್ಳಿ, ಮಂಜು ಬಡಿಗೇರ್, ನೀನಾಸಂ ಚಂದ್ರು, ರವಿಶಂಕರ್, ಶೋಧನ್ ಬಸ್ರೂರು, ಸಂಧ್ಯಾ ಅಲ್ಲದೇ ಹಲವು ಮಕ್ಕಳ ರಂಗಭೂಮಿಯ ಪರಿಣಿತರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಹೆಚ್ಚಿನಮಾಹಿತಿಗಾಗಿ 9901848170, 8105515256 ಸಂಖ್ಯೆಗೆ ಕರೆಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...