Homeಮುಖಪುಟರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

ರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

- Advertisement -
- Advertisement -

ರಂಗಭೂಮಿ ಕಲಿಕೆ ವಿವಿಧ ಪಾತ್ರಗಳ ಮೂಲಕ ತಮ್ಮನ್ನು ತಾವು ಕಂಡುಕೊಳ್ಳಲು ಉತ್ತಮವಾದಂತಹ ಕಲೆಯಾಗಿದೆ. ಇದು ಬಾಲ್ಯದಿಂದಲೇ ಮಕ್ಕಳಿಗೆ ರಂಗಭೂಮಿಯನ್ನು ಕಲಿಸುವುದರಿಂದ ಅವರಿಗೆ ಮುಂದೆ ಜೀವನದಲ್ಲಿ ಸಮಾಜದಲ್ಲಿ ಧೈರ್ಯವಾಗಿ ಬದುಕುವುದನ್ನು ಕಲಿಸುತ್ತದೆ. ಹಾಗಾಗಿ ಮಕ್ಕಳ ರಂಗಭೂಮಿಯ ಅವಶ್ಯಕತೆ ಇಂದೆಂದಿಗಿಂತಲೂ ಹೆಚ್ಚಿದೆ. ಕಲುಷಿತ ಗೊಂಡ ಮನಸ್ಸುಗಳನ್ನು ಪ್ರೀತಿ, ವಿಶ್ವಾಸ, ನಂಬಿಕೆಯ ಮೂಲಕ ಸರಿಪಡಿಸುವ ಚಿಕಿತ್ಸಕ ಗುಣವನ್ನು ರಂಗಭೂಮಿ ಹೊಂದಿದೆ. ಸಾಕಷ್ಟು ಜನ ರಂಗಕರ್ಮಿಗಳು ಮಕ್ಕಳ ರಂಗಭೂಮಿಯನ್ನು ವಿಶೇಷವಾಗಿ ಕೆಲಸ ಮಾಡುತ್ತಿದ್ದಾರೆ ತುಮಕೂರಿನಲ್ಲೂ ಇಂತಹ ಪ್ರಯೋಗವೊಂದು ನಡೆಯುತ್ತಿದೆ.
ಈ ಸೆಲೆಬ್ರೆಟಿ ಯುಗದಲ್ಲಿ ತಮ್ಮ ಮಕ್ಕಳು ಕಲೆಯ ಮೂಲಕ ಸಮಾಜದಲ್ಲಿ ಹೆಚ್ಚು ಗುರ್ತಿಸಿಕೊಳ್ಳಬೇಕೆಂಬ ಆಸೆ ಪೋಷಕರಲ್ಲಿ ಹೆಚ್ಚುತ್ತಿದೆ. ಇದಕ್ಕೆ ಪ್ರೇರಕವಾಗಿ ರಿಯಾಲಿಟಿ ಶೋಗಳು ಪೋಷಕರನ್ನು ಪ್ರೇರೇಪಿಸುತ್ತಿವೆ. ಅದಕ್ಕಾಗಿ ಸಾಕಷ್ಟು ಜನ ನಾಯಿಕೊಡೆಗಳಂತೆ ಹೆಚ್ಚುತ್ತಿರುವ ಹವ್ಯಾಸಿ ರಂಗಶಿಬಿರಗಳು, ಅಭಿನಯ ಶಿಬಿರಗಳಿಗೆ ಸಾಕಷ್ಟು ವ್ಯಯ ಮಾಡುತ್ತಿದ್ದಾರೆ. ಇದು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಸಂಧರ್ಭದಲ್ಲಿ ವಿಶೇಷವಾಗಿ ಮಕ್ಕಳ ಜೊತೆ ಕೆಲಸಮಾಡುವ ಮತ್ತು ರಂಗಭೂಮಿಯನ್ನು ಒಂದು ಕೋರ್ಸ್ ಆಗಿ ಕಲಿತು ಅಧ್ಯಯನ ಮಾಡಿದ ಮತ್ತು ಸಾಕಷ್ಟು ಶಿಬಿರಗಳನ್ನು ಮಾಡಿ ನೈಜರಂಗಭೂಮಿಯ ಪಾಠಗಳನ್ನು ಕಲಿಸುವ ಶಿಬಿರಗಳು ಕಡಿಮೆಯಾಗಿವೆ. ಇದೇ ವೇಳೆ ಕೆಲವು ಕಡೆ ಮಾತ್ರ ನಿಜವಾಗಲೂ ರಂಗಭೂಮಿ ಮತ್ತು ನಟನೆಯನ್ನು ಕಲಿಸುವಂತಹ ಪ್ರಯತ್ನಗಳು ನಡೆಯುತ್ತಿವೆ. ಅಂತಹದ್ದೆ ಪ್ರಯತ್ನವನ್ನು ತುಮಕೂರಿನ ಸಮ್ಮತ ರಂಗ ಸಂಸ್ಥೆ ಪ್ರಯತ್ನಪಡುತ್ತಿದೆ. ತುಮಕೂರಿನಲ್ಲಿ ಸಾಕಷ್ಟು ರಂಗಭೂಮಿಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಮಕ್ಕಳ ರಂಗಭೂಮಿಯ ಬಗ್ಗೆ ಬೇಸಿಗೆ ಶಿಬಿರವಲ್ಲದೇ ಈ ರೀತಿ ಅದಿಕ್ಕೆ ವಿಶೇಷ ಶಾಲೆಯ ರೀತಿಯ ಪ್ರಯತ್ನ ನಡೆದಿಲ್ಲ . ಸಮ್ಮತ ಸಂಸ್ಥೆ ಈಗ ಮಕ್ಕಳಿಗಾಗಿ ವಾರಾಂತ್ಯ ರಂಗ ಶಾಲೆಯನ್ನು ತೆರೆದಿದ್ದಾರೆ.
ಶಾಲಾ ರಜೆಯ ಸಂಧರ್ಭದಲ್ಲಿ ಶಿಬಿರಗಳನ್ನು ನಡೆಸುತ್ತಾ, ರಂಗ ಚಟುವಟಿಕೆಗಳನ್ನು ನಡೆಸುತ್ತಾ ಬಂದಿರುವ ರಂಗಭೂಮಿ ಹಿನ್ನಲೆಯ ಚೇತನ್ ಮತ್ತು ಸುನೀಲ ಯುವದಂಪತಿಗಳು ತಮ್ಮ ಕ್ರಿಯಾಶೀಲ ಯುವತಂಡದೊಂದಿಗೆ ವಾರಂತ್ಯದ ರಜೆಯ ಸಮಯದಲ್ಲಿ ರಂಗಭೂಮಿಯ ಬಗ್ಗೆ ಮಕ್ಕಳಿಗೆ ಕಲಿಸುವ ಒಂದು ವಿಶೇಷ ಪ್ರಯತ್ನವನ್ನು ಪ್ರಾರಂಭಿಸಿದೆ. ನಟನೆ, ನಿರ್ಧೇಶನ, ಮೇಕಪ್ ಮುಂತಾದ ವಿಭಾಗಗಳನ್ನು ಮಕ್ಕಳಿಗೆ ಪರಿಚಯಿಸಲಿದೆ. ಮಗುವಿನ ಕಲ್ಪನಾಶಕ್ತಿ, ದೇಹಭಾಷೆ, ವಾಚಿಕದ ಮೇಲೆ ನಿರಂತರವಾಗಿ ಅಭ್ಯಾಸ ಮಾಡಿಸಲಿದ್ದಾರೆ. ಮಕ್ಕಳಿಗೆ ಆಸಕ್ತಿಯಿಂದ ಕಲಿಯಲು ರಂಗಾಟಗಳ ಮುಖೇನ ಕಲಿಸಲಿದ್ದಾರೆ. ಮಕ್ಕಳ ಸಿನೆಮಾ ತೋರಿಸುವುದು, ಜನಪದ ಕಲೆಗಳ ಕಲಿಕೆಯ ಮೂಲಕ ಸ್ಥಳೀಯ ಕಲೆಗಳ ಪರಿಚಯ ಈ ರೀತಿಯ ಯೋಜನೆಗಳನ್ನು ಸಂಸ್ಥೆಯ ನಿರ್ದೇಶಕರಾದ ಚೇತನ್ ಮತ್ತು ಸುನೀಲ ಅವರು ರೂಪಿಸಿದ್ದಾರೆ. ಈ ತರಗತಿಗಳು ಪ್ರತಿ ಭಾನುವಾರ ನಡೆಯಲಿವೆ. ಕೇವಲ 25 ರಿಂದ 30 ಮಕ್ಕಳಿಗೆ ಮಾತ್ರ ಅವಕಾಶವಿದೆ. ಬೆಳಿಗ್ಗೆ 9 ರಿಂದ 12ರವೆರೆಗೆ ತರಗತಿಗಳು ನಡೆಯಲಿವೆ.
ಈ ಸಮ್ಮತ ರಂಗಸಂಸ್ಥೆಯ ಆ ವಾರಂತ್ಯಾ ಶಾಲೆಯ ಹೊಸ ಪ್ರಯತ್ನಕ್ಕೆ ಹರಿಕಥಾ ವಿದ್ವಾನ್ ಹಾಗೂ ಕಲಾವಿದರಾದ ಲಕ್ಷ್ಮಣ್‍ದಾಸ್, ಕ.ಸಾ.ಪ ಜಿಲ್ಲಾಧ್ಯಕ್ಷರಾದ ಬಾ.ಹಾ.ರಮಾಕುಮಾರಿ, ರಂಗಸಂಘಟಕರಾದ ಉಗಮಶ್ರೀನಿವಾಸ್, ರಂಗಕರ್ಮಿಗಳಾದ ಎಚ್.ಎಂ.ರಂಗಯ್ಯ, ಸಿಧ್ದಾರ್ಥ ಕಾಲೇಜಿನ ಪ್ರಾಂಶುಪಾ¯ರಾದ ಕೆ.ಸಿ.ಕುಮಾರ್ ಬೆಂಬಲನೀಡಿ ಉದ್ಘಾಟಿಸಿದ್ದಾರೆ. ರಂಗಕರ್ಮಿಗಳಾದ ನಟರಾಜ್ ಹೊನ್ನವಳ್ಳಿ, ಮಂಜು ಬಡಿಗೇರ್, ನೀನಾಸಂ ಚಂದ್ರು, ರವಿಶಂಕರ್, ಶೋಧನ್ ಬಸ್ರೂರು, ಸಂಧ್ಯಾ ಅಲ್ಲದೇ ಹಲವು ಮಕ್ಕಳ ರಂಗಭೂಮಿಯ ಪರಿಣಿತರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಹೆಚ್ಚಿನಮಾಹಿತಿಗಾಗಿ 9901848170, 8105515256 ಸಂಖ್ಯೆಗೆ ಕರೆಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...