Homeಮುಖಪುಟರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

ರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

- Advertisement -
- Advertisement -

ರಂಗಭೂಮಿ ಕಲಿಕೆ ವಿವಿಧ ಪಾತ್ರಗಳ ಮೂಲಕ ತಮ್ಮನ್ನು ತಾವು ಕಂಡುಕೊಳ್ಳಲು ಉತ್ತಮವಾದಂತಹ ಕಲೆಯಾಗಿದೆ. ಇದು ಬಾಲ್ಯದಿಂದಲೇ ಮಕ್ಕಳಿಗೆ ರಂಗಭೂಮಿಯನ್ನು ಕಲಿಸುವುದರಿಂದ ಅವರಿಗೆ ಮುಂದೆ ಜೀವನದಲ್ಲಿ ಸಮಾಜದಲ್ಲಿ ಧೈರ್ಯವಾಗಿ ಬದುಕುವುದನ್ನು ಕಲಿಸುತ್ತದೆ. ಹಾಗಾಗಿ ಮಕ್ಕಳ ರಂಗಭೂಮಿಯ ಅವಶ್ಯಕತೆ ಇಂದೆಂದಿಗಿಂತಲೂ ಹೆಚ್ಚಿದೆ. ಕಲುಷಿತ ಗೊಂಡ ಮನಸ್ಸುಗಳನ್ನು ಪ್ರೀತಿ, ವಿಶ್ವಾಸ, ನಂಬಿಕೆಯ ಮೂಲಕ ಸರಿಪಡಿಸುವ ಚಿಕಿತ್ಸಕ ಗುಣವನ್ನು ರಂಗಭೂಮಿ ಹೊಂದಿದೆ. ಸಾಕಷ್ಟು ಜನ ರಂಗಕರ್ಮಿಗಳು ಮಕ್ಕಳ ರಂಗಭೂಮಿಯನ್ನು ವಿಶೇಷವಾಗಿ ಕೆಲಸ ಮಾಡುತ್ತಿದ್ದಾರೆ ತುಮಕೂರಿನಲ್ಲೂ ಇಂತಹ ಪ್ರಯೋಗವೊಂದು ನಡೆಯುತ್ತಿದೆ.
ಈ ಸೆಲೆಬ್ರೆಟಿ ಯುಗದಲ್ಲಿ ತಮ್ಮ ಮಕ್ಕಳು ಕಲೆಯ ಮೂಲಕ ಸಮಾಜದಲ್ಲಿ ಹೆಚ್ಚು ಗುರ್ತಿಸಿಕೊಳ್ಳಬೇಕೆಂಬ ಆಸೆ ಪೋಷಕರಲ್ಲಿ ಹೆಚ್ಚುತ್ತಿದೆ. ಇದಕ್ಕೆ ಪ್ರೇರಕವಾಗಿ ರಿಯಾಲಿಟಿ ಶೋಗಳು ಪೋಷಕರನ್ನು ಪ್ರೇರೇಪಿಸುತ್ತಿವೆ. ಅದಕ್ಕಾಗಿ ಸಾಕಷ್ಟು ಜನ ನಾಯಿಕೊಡೆಗಳಂತೆ ಹೆಚ್ಚುತ್ತಿರುವ ಹವ್ಯಾಸಿ ರಂಗಶಿಬಿರಗಳು, ಅಭಿನಯ ಶಿಬಿರಗಳಿಗೆ ಸಾಕಷ್ಟು ವ್ಯಯ ಮಾಡುತ್ತಿದ್ದಾರೆ. ಇದು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಸಂಧರ್ಭದಲ್ಲಿ ವಿಶೇಷವಾಗಿ ಮಕ್ಕಳ ಜೊತೆ ಕೆಲಸಮಾಡುವ ಮತ್ತು ರಂಗಭೂಮಿಯನ್ನು ಒಂದು ಕೋರ್ಸ್ ಆಗಿ ಕಲಿತು ಅಧ್ಯಯನ ಮಾಡಿದ ಮತ್ತು ಸಾಕಷ್ಟು ಶಿಬಿರಗಳನ್ನು ಮಾಡಿ ನೈಜರಂಗಭೂಮಿಯ ಪಾಠಗಳನ್ನು ಕಲಿಸುವ ಶಿಬಿರಗಳು ಕಡಿಮೆಯಾಗಿವೆ. ಇದೇ ವೇಳೆ ಕೆಲವು ಕಡೆ ಮಾತ್ರ ನಿಜವಾಗಲೂ ರಂಗಭೂಮಿ ಮತ್ತು ನಟನೆಯನ್ನು ಕಲಿಸುವಂತಹ ಪ್ರಯತ್ನಗಳು ನಡೆಯುತ್ತಿವೆ. ಅಂತಹದ್ದೆ ಪ್ರಯತ್ನವನ್ನು ತುಮಕೂರಿನ ಸಮ್ಮತ ರಂಗ ಸಂಸ್ಥೆ ಪ್ರಯತ್ನಪಡುತ್ತಿದೆ. ತುಮಕೂರಿನಲ್ಲಿ ಸಾಕಷ್ಟು ರಂಗಭೂಮಿಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಮಕ್ಕಳ ರಂಗಭೂಮಿಯ ಬಗ್ಗೆ ಬೇಸಿಗೆ ಶಿಬಿರವಲ್ಲದೇ ಈ ರೀತಿ ಅದಿಕ್ಕೆ ವಿಶೇಷ ಶಾಲೆಯ ರೀತಿಯ ಪ್ರಯತ್ನ ನಡೆದಿಲ್ಲ . ಸಮ್ಮತ ಸಂಸ್ಥೆ ಈಗ ಮಕ್ಕಳಿಗಾಗಿ ವಾರಾಂತ್ಯ ರಂಗ ಶಾಲೆಯನ್ನು ತೆರೆದಿದ್ದಾರೆ.
ಶಾಲಾ ರಜೆಯ ಸಂಧರ್ಭದಲ್ಲಿ ಶಿಬಿರಗಳನ್ನು ನಡೆಸುತ್ತಾ, ರಂಗ ಚಟುವಟಿಕೆಗಳನ್ನು ನಡೆಸುತ್ತಾ ಬಂದಿರುವ ರಂಗಭೂಮಿ ಹಿನ್ನಲೆಯ ಚೇತನ್ ಮತ್ತು ಸುನೀಲ ಯುವದಂಪತಿಗಳು ತಮ್ಮ ಕ್ರಿಯಾಶೀಲ ಯುವತಂಡದೊಂದಿಗೆ ವಾರಂತ್ಯದ ರಜೆಯ ಸಮಯದಲ್ಲಿ ರಂಗಭೂಮಿಯ ಬಗ್ಗೆ ಮಕ್ಕಳಿಗೆ ಕಲಿಸುವ ಒಂದು ವಿಶೇಷ ಪ್ರಯತ್ನವನ್ನು ಪ್ರಾರಂಭಿಸಿದೆ. ನಟನೆ, ನಿರ್ಧೇಶನ, ಮೇಕಪ್ ಮುಂತಾದ ವಿಭಾಗಗಳನ್ನು ಮಕ್ಕಳಿಗೆ ಪರಿಚಯಿಸಲಿದೆ. ಮಗುವಿನ ಕಲ್ಪನಾಶಕ್ತಿ, ದೇಹಭಾಷೆ, ವಾಚಿಕದ ಮೇಲೆ ನಿರಂತರವಾಗಿ ಅಭ್ಯಾಸ ಮಾಡಿಸಲಿದ್ದಾರೆ. ಮಕ್ಕಳಿಗೆ ಆಸಕ್ತಿಯಿಂದ ಕಲಿಯಲು ರಂಗಾಟಗಳ ಮುಖೇನ ಕಲಿಸಲಿದ್ದಾರೆ. ಮಕ್ಕಳ ಸಿನೆಮಾ ತೋರಿಸುವುದು, ಜನಪದ ಕಲೆಗಳ ಕಲಿಕೆಯ ಮೂಲಕ ಸ್ಥಳೀಯ ಕಲೆಗಳ ಪರಿಚಯ ಈ ರೀತಿಯ ಯೋಜನೆಗಳನ್ನು ಸಂಸ್ಥೆಯ ನಿರ್ದೇಶಕರಾದ ಚೇತನ್ ಮತ್ತು ಸುನೀಲ ಅವರು ರೂಪಿಸಿದ್ದಾರೆ. ಈ ತರಗತಿಗಳು ಪ್ರತಿ ಭಾನುವಾರ ನಡೆಯಲಿವೆ. ಕೇವಲ 25 ರಿಂದ 30 ಮಕ್ಕಳಿಗೆ ಮಾತ್ರ ಅವಕಾಶವಿದೆ. ಬೆಳಿಗ್ಗೆ 9 ರಿಂದ 12ರವೆರೆಗೆ ತರಗತಿಗಳು ನಡೆಯಲಿವೆ.
ಈ ಸಮ್ಮತ ರಂಗಸಂಸ್ಥೆಯ ಆ ವಾರಂತ್ಯಾ ಶಾಲೆಯ ಹೊಸ ಪ್ರಯತ್ನಕ್ಕೆ ಹರಿಕಥಾ ವಿದ್ವಾನ್ ಹಾಗೂ ಕಲಾವಿದರಾದ ಲಕ್ಷ್ಮಣ್‍ದಾಸ್, ಕ.ಸಾ.ಪ ಜಿಲ್ಲಾಧ್ಯಕ್ಷರಾದ ಬಾ.ಹಾ.ರಮಾಕುಮಾರಿ, ರಂಗಸಂಘಟಕರಾದ ಉಗಮಶ್ರೀನಿವಾಸ್, ರಂಗಕರ್ಮಿಗಳಾದ ಎಚ್.ಎಂ.ರಂಗಯ್ಯ, ಸಿಧ್ದಾರ್ಥ ಕಾಲೇಜಿನ ಪ್ರಾಂಶುಪಾ¯ರಾದ ಕೆ.ಸಿ.ಕುಮಾರ್ ಬೆಂಬಲನೀಡಿ ಉದ್ಘಾಟಿಸಿದ್ದಾರೆ. ರಂಗಕರ್ಮಿಗಳಾದ ನಟರಾಜ್ ಹೊನ್ನವಳ್ಳಿ, ಮಂಜು ಬಡಿಗೇರ್, ನೀನಾಸಂ ಚಂದ್ರು, ರವಿಶಂಕರ್, ಶೋಧನ್ ಬಸ್ರೂರು, ಸಂಧ್ಯಾ ಅಲ್ಲದೇ ಹಲವು ಮಕ್ಕಳ ರಂಗಭೂಮಿಯ ಪರಿಣಿತರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಹೆಚ್ಚಿನಮಾಹಿತಿಗಾಗಿ 9901848170, 8105515256 ಸಂಖ್ಯೆಗೆ ಕರೆಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...