Homeಮುಖಪುಟರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

ರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

- Advertisement -
- Advertisement -

ರಂಗಭೂಮಿ ಕಲಿಕೆ ವಿವಿಧ ಪಾತ್ರಗಳ ಮೂಲಕ ತಮ್ಮನ್ನು ತಾವು ಕಂಡುಕೊಳ್ಳಲು ಉತ್ತಮವಾದಂತಹ ಕಲೆಯಾಗಿದೆ. ಇದು ಬಾಲ್ಯದಿಂದಲೇ ಮಕ್ಕಳಿಗೆ ರಂಗಭೂಮಿಯನ್ನು ಕಲಿಸುವುದರಿಂದ ಅವರಿಗೆ ಮುಂದೆ ಜೀವನದಲ್ಲಿ ಸಮಾಜದಲ್ಲಿ ಧೈರ್ಯವಾಗಿ ಬದುಕುವುದನ್ನು ಕಲಿಸುತ್ತದೆ. ಹಾಗಾಗಿ ಮಕ್ಕಳ ರಂಗಭೂಮಿಯ ಅವಶ್ಯಕತೆ ಇಂದೆಂದಿಗಿಂತಲೂ ಹೆಚ್ಚಿದೆ. ಕಲುಷಿತ ಗೊಂಡ ಮನಸ್ಸುಗಳನ್ನು ಪ್ರೀತಿ, ವಿಶ್ವಾಸ, ನಂಬಿಕೆಯ ಮೂಲಕ ಸರಿಪಡಿಸುವ ಚಿಕಿತ್ಸಕ ಗುಣವನ್ನು ರಂಗಭೂಮಿ ಹೊಂದಿದೆ. ಸಾಕಷ್ಟು ಜನ ರಂಗಕರ್ಮಿಗಳು ಮಕ್ಕಳ ರಂಗಭೂಮಿಯನ್ನು ವಿಶೇಷವಾಗಿ ಕೆಲಸ ಮಾಡುತ್ತಿದ್ದಾರೆ ತುಮಕೂರಿನಲ್ಲೂ ಇಂತಹ ಪ್ರಯೋಗವೊಂದು ನಡೆಯುತ್ತಿದೆ.
ಈ ಸೆಲೆಬ್ರೆಟಿ ಯುಗದಲ್ಲಿ ತಮ್ಮ ಮಕ್ಕಳು ಕಲೆಯ ಮೂಲಕ ಸಮಾಜದಲ್ಲಿ ಹೆಚ್ಚು ಗುರ್ತಿಸಿಕೊಳ್ಳಬೇಕೆಂಬ ಆಸೆ ಪೋಷಕರಲ್ಲಿ ಹೆಚ್ಚುತ್ತಿದೆ. ಇದಕ್ಕೆ ಪ್ರೇರಕವಾಗಿ ರಿಯಾಲಿಟಿ ಶೋಗಳು ಪೋಷಕರನ್ನು ಪ್ರೇರೇಪಿಸುತ್ತಿವೆ. ಅದಕ್ಕಾಗಿ ಸಾಕಷ್ಟು ಜನ ನಾಯಿಕೊಡೆಗಳಂತೆ ಹೆಚ್ಚುತ್ತಿರುವ ಹವ್ಯಾಸಿ ರಂಗಶಿಬಿರಗಳು, ಅಭಿನಯ ಶಿಬಿರಗಳಿಗೆ ಸಾಕಷ್ಟು ವ್ಯಯ ಮಾಡುತ್ತಿದ್ದಾರೆ. ಇದು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಸಂಧರ್ಭದಲ್ಲಿ ವಿಶೇಷವಾಗಿ ಮಕ್ಕಳ ಜೊತೆ ಕೆಲಸಮಾಡುವ ಮತ್ತು ರಂಗಭೂಮಿಯನ್ನು ಒಂದು ಕೋರ್ಸ್ ಆಗಿ ಕಲಿತು ಅಧ್ಯಯನ ಮಾಡಿದ ಮತ್ತು ಸಾಕಷ್ಟು ಶಿಬಿರಗಳನ್ನು ಮಾಡಿ ನೈಜರಂಗಭೂಮಿಯ ಪಾಠಗಳನ್ನು ಕಲಿಸುವ ಶಿಬಿರಗಳು ಕಡಿಮೆಯಾಗಿವೆ. ಇದೇ ವೇಳೆ ಕೆಲವು ಕಡೆ ಮಾತ್ರ ನಿಜವಾಗಲೂ ರಂಗಭೂಮಿ ಮತ್ತು ನಟನೆಯನ್ನು ಕಲಿಸುವಂತಹ ಪ್ರಯತ್ನಗಳು ನಡೆಯುತ್ತಿವೆ. ಅಂತಹದ್ದೆ ಪ್ರಯತ್ನವನ್ನು ತುಮಕೂರಿನ ಸಮ್ಮತ ರಂಗ ಸಂಸ್ಥೆ ಪ್ರಯತ್ನಪಡುತ್ತಿದೆ. ತುಮಕೂರಿನಲ್ಲಿ ಸಾಕಷ್ಟು ರಂಗಭೂಮಿಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಮಕ್ಕಳ ರಂಗಭೂಮಿಯ ಬಗ್ಗೆ ಬೇಸಿಗೆ ಶಿಬಿರವಲ್ಲದೇ ಈ ರೀತಿ ಅದಿಕ್ಕೆ ವಿಶೇಷ ಶಾಲೆಯ ರೀತಿಯ ಪ್ರಯತ್ನ ನಡೆದಿಲ್ಲ . ಸಮ್ಮತ ಸಂಸ್ಥೆ ಈಗ ಮಕ್ಕಳಿಗಾಗಿ ವಾರಾಂತ್ಯ ರಂಗ ಶಾಲೆಯನ್ನು ತೆರೆದಿದ್ದಾರೆ.
ಶಾಲಾ ರಜೆಯ ಸಂಧರ್ಭದಲ್ಲಿ ಶಿಬಿರಗಳನ್ನು ನಡೆಸುತ್ತಾ, ರಂಗ ಚಟುವಟಿಕೆಗಳನ್ನು ನಡೆಸುತ್ತಾ ಬಂದಿರುವ ರಂಗಭೂಮಿ ಹಿನ್ನಲೆಯ ಚೇತನ್ ಮತ್ತು ಸುನೀಲ ಯುವದಂಪತಿಗಳು ತಮ್ಮ ಕ್ರಿಯಾಶೀಲ ಯುವತಂಡದೊಂದಿಗೆ ವಾರಂತ್ಯದ ರಜೆಯ ಸಮಯದಲ್ಲಿ ರಂಗಭೂಮಿಯ ಬಗ್ಗೆ ಮಕ್ಕಳಿಗೆ ಕಲಿಸುವ ಒಂದು ವಿಶೇಷ ಪ್ರಯತ್ನವನ್ನು ಪ್ರಾರಂಭಿಸಿದೆ. ನಟನೆ, ನಿರ್ಧೇಶನ, ಮೇಕಪ್ ಮುಂತಾದ ವಿಭಾಗಗಳನ್ನು ಮಕ್ಕಳಿಗೆ ಪರಿಚಯಿಸಲಿದೆ. ಮಗುವಿನ ಕಲ್ಪನಾಶಕ್ತಿ, ದೇಹಭಾಷೆ, ವಾಚಿಕದ ಮೇಲೆ ನಿರಂತರವಾಗಿ ಅಭ್ಯಾಸ ಮಾಡಿಸಲಿದ್ದಾರೆ. ಮಕ್ಕಳಿಗೆ ಆಸಕ್ತಿಯಿಂದ ಕಲಿಯಲು ರಂಗಾಟಗಳ ಮುಖೇನ ಕಲಿಸಲಿದ್ದಾರೆ. ಮಕ್ಕಳ ಸಿನೆಮಾ ತೋರಿಸುವುದು, ಜನಪದ ಕಲೆಗಳ ಕಲಿಕೆಯ ಮೂಲಕ ಸ್ಥಳೀಯ ಕಲೆಗಳ ಪರಿಚಯ ಈ ರೀತಿಯ ಯೋಜನೆಗಳನ್ನು ಸಂಸ್ಥೆಯ ನಿರ್ದೇಶಕರಾದ ಚೇತನ್ ಮತ್ತು ಸುನೀಲ ಅವರು ರೂಪಿಸಿದ್ದಾರೆ. ಈ ತರಗತಿಗಳು ಪ್ರತಿ ಭಾನುವಾರ ನಡೆಯಲಿವೆ. ಕೇವಲ 25 ರಿಂದ 30 ಮಕ್ಕಳಿಗೆ ಮಾತ್ರ ಅವಕಾಶವಿದೆ. ಬೆಳಿಗ್ಗೆ 9 ರಿಂದ 12ರವೆರೆಗೆ ತರಗತಿಗಳು ನಡೆಯಲಿವೆ.
ಈ ಸಮ್ಮತ ರಂಗಸಂಸ್ಥೆಯ ಆ ವಾರಂತ್ಯಾ ಶಾಲೆಯ ಹೊಸ ಪ್ರಯತ್ನಕ್ಕೆ ಹರಿಕಥಾ ವಿದ್ವಾನ್ ಹಾಗೂ ಕಲಾವಿದರಾದ ಲಕ್ಷ್ಮಣ್‍ದಾಸ್, ಕ.ಸಾ.ಪ ಜಿಲ್ಲಾಧ್ಯಕ್ಷರಾದ ಬಾ.ಹಾ.ರಮಾಕುಮಾರಿ, ರಂಗಸಂಘಟಕರಾದ ಉಗಮಶ್ರೀನಿವಾಸ್, ರಂಗಕರ್ಮಿಗಳಾದ ಎಚ್.ಎಂ.ರಂಗಯ್ಯ, ಸಿಧ್ದಾರ್ಥ ಕಾಲೇಜಿನ ಪ್ರಾಂಶುಪಾ¯ರಾದ ಕೆ.ಸಿ.ಕುಮಾರ್ ಬೆಂಬಲನೀಡಿ ಉದ್ಘಾಟಿಸಿದ್ದಾರೆ. ರಂಗಕರ್ಮಿಗಳಾದ ನಟರಾಜ್ ಹೊನ್ನವಳ್ಳಿ, ಮಂಜು ಬಡಿಗೇರ್, ನೀನಾಸಂ ಚಂದ್ರು, ರವಿಶಂಕರ್, ಶೋಧನ್ ಬಸ್ರೂರು, ಸಂಧ್ಯಾ ಅಲ್ಲದೇ ಹಲವು ಮಕ್ಕಳ ರಂಗಭೂಮಿಯ ಪರಿಣಿತರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಹೆಚ್ಚಿನಮಾಹಿತಿಗಾಗಿ 9901848170, 8105515256 ಸಂಖ್ಯೆಗೆ ಕರೆಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...